Homeಮುಖಪುಟಕೊನೆಗೂ ರಾಷ್ಟ್ರಧ್ವಜದ ಚಿತ್ರವನ್ನು ಪ್ರೊಫೈಲ್‌ಗೆ ಹಾಕಿಕೊಂಡ ಆರ್‌ಎಸ್‌ಎಸ್‌

ಕೊನೆಗೂ ರಾಷ್ಟ್ರಧ್ವಜದ ಚಿತ್ರವನ್ನು ಪ್ರೊಫೈಲ್‌ಗೆ ಹಾಕಿಕೊಂಡ ಆರ್‌ಎಸ್‌ಎಸ್‌

- Advertisement -
- Advertisement -

ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ತನ್ನ ಸಾಮಾಜಿಕ ಮಾಧ್ಯಮ ಖಾತೆಗಳ ಪ್ರೊಫೈಲ್ ಚಿತ್ರವಾಗಿ ತ್ರಿವರ್ಣ ಧ್ವಜವನ್ನು ಏಕೆ ಹಾಕಿಕೊಂಡಿಲ್ಲ ಎಂಬ ಪ್ರಶ್ನೆಯನ್ನು ಜನರು ಕೇಳುತ್ತಿದ್ದರು. ಈ ಎಲ್ಲ ಬೆಳವಣಿಗೆಗಳ ಬಳಿಕ ಆರ್‌ಎಸ್‌ಎಸ್‌ ತನ್ನ ಸೋಷಿಯಲ್ ಮೀಡಿಯಾ ಖಾತೆಗಳಲ್ಲಿ ತ್ರಿವರ್ಣ ಧ್ವಜದ ಚಿತ್ರವನ್ನು ಅಪ್‌ಲೋಡ್ ಮಾಡಿಕೊಂಡಿದೆ.

ಆರ್‌ಎಸ್‌ಎಸ್ ಸರಸಂಚಾಲಕ ಮೋಹನ್‌ ಭಾಗವತ್‌ ಸೇರಿದಂತೆ ಆರ್‌ಎಸ್‌ಎಸ್‌ನ ಅಧಿಕೃತ ಖಾತೆಗಳಲ್ಲಿ ಭಾವುಟವನ್ನು ಹಾಕಿಕೊಳ್ಳಲಾಗಿದೆ.

ತ್ರಿವರ್ಣ ಧ್ವಜದ ಚಿತ್ರವನ್ನು ಸಾಮಾಜಿಕ ಮಾಧ್ಯಮಗಳ ಪ್ರೊಫೈಲ್‌ನಲ್ಲಿ ಹಾಕಿಕೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿಯವರು ಮನವಿ ಮಾಡಿದ ನಂತರವೂ ಆರ್‌ಎಸ್‌ಎಸ್‌ ಮುಖಂಡರು ತಮ್ಮ ಖಾತೆಗಳಲ್ಲಿ ಏಕೆ ತ್ರಿವರ್ಣ ಧ್ವಜದ ಚಿತ್ರವನ್ನು ಹಾಕಿಕೊಂಡಿಲ್ಲ ಎಂಬ ವಿವಾದ ಮುನ್ನೆಲೆಗೆ ಬಂದಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಆರ್‌ಎಸ್‌ಎಸ್‌ ಎಂದಿಗೂ ಭಗವಾಧ್ವಜವನ್ನು ಒಪ್ಪುತ್ತದೆಯೇ ಹೊರತು, ತ್ರಿವರ್ಣ ಧ್ವಜವನ್ನಲ್ಲ” ಎಂಬ ಟೀಕೆಗಳು ವ್ಯಕ್ತವಾಗುತ್ತಿದ್ದವು. ಆರ್‌ಎಸ್‌ಎಸ್‌ ಸಂಸ್ಥಾಪಕ ಕೇಶವ ಬಲಿರಾಮ ಹೆಡಗೇವಾರ್‌ ಕಾಲದಿಂದಲೂ ಸ್ವಾತಂತ್ರ್ಯ ನಂತರದಲ್ಲೂ ಆರ್‌‌ಎಸ್‌ಎಸ್‌ ತ್ರಿವರ್ಣ ಧ್ವಜವನ್ನು ಒಪ್ಪಿಲ್ಲ. ರಾಜಕೀಯ ಕಾರಣಗಳಿಗಷ್ಟೇ ಇತ್ತೀಚಿನ ವರ್ಷಗಳಲ್ಲಿ ಆರ್‌ಎಸ್‌ಎಸ್‌ ರಾಷ್ಟ್ರಧ್ವಜವನ್ನು ಗೌರವಿಸುತ್ತಿದೆ” ಎಂಬ ಆರೋಪಗಳು ಬಂದಿದ್ದವು.

ಟ್ವಿಟರ್‌ ಖಾತೆಯಲ್ಲಿ ರಾಷ್ಟ್ರಧ್ವಜದ ಚಿತ್ರ
ಫೇಸ್‌ಬುಕ್‌ ಖಾತೆಯಲ್ಲಿ ರಾಷ್ಟ್ರಧ್ವಜದ ಚಿತ್ರ
ಆರ್‌ಎಸ್‌ಎಸ್ ಸರಸಂಚಾಲಕ ಮೋಹನ್‌ ಭಾಗವತ್‌ ಅವರ ಟ್ವಿಟರ್‌ ಖಾತೆ

ಈ ಕುರಿತು ಪ್ರತಿಕ್ರಿಯೆ ನೀಡಿದ್ದ ಆರ್‌ಎಸ್‌ಎಸ್ ಅಖಿಲ ಭಾರತೀಯ ಪ್ರಚಾರ್ ಪ್ರಮುಖ್ ಸುನೀಲ್ ಅಂಬೇಕರ್, “ಇಂತಹ ವಿಷಯಗಳನ್ನು ರಾಜಕೀಯಗೊಳಿಸಬಾರದು. ಆರ್‌ಎಸ್‌ಎಸ್ ಈಗಾಗಲೇ ‘ಹರ್ ಘರ್ ತಿರಂಗ’ ಮತ್ತು ‘ಆಜಾದಿ ಕಾ ಅಮೃತ್ ಮಹೋತ್ಸವ’ ಕಾರ್ಯಕ್ರಮಗಳಿಗೆ ತನ್ನ ಬೆಂಬಲವನ್ನು ನೀಡಿದೆ. ಸರ್ಕಾರ, ಖಾಸಗಿ ಸಂಸ್ಥೆಗಳು ಮತ್ತು ಆರ್‌ಎಸ್‌ಎಸ್ ಅಂಗ ಸಂಸ್ಥೆಗಳು ಆಯೋಜಿಸುವ ಕಾರ್ಯಕ್ರಮಗಳಲ್ಲಿ ಜನ ಮತ್ತು ಸ್ವಯಂಸೇವಕರು ಸಂಪೂರ್ಣವಾಗಿ ಪಾಲ್ಗೊಳ್ಳುವಂತೆ ಆರ್‌ಎಸ್‌ಎಸ್‌ ಜುಲೈನಲ್ಲೇ ಮನವಿ ಮಾಡಿದೆ” ಎಂದು ಸಮರ್ಥಿಸಿಕೊಂಡಿದ್ದರು.

ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ಅವರು ಕೆಲವು ತಿಂಗಳ ಹಿಂದೆ, “ನಾವು ಕೆಂಪುಕೋಟೆಯ ಮೇಲೆ ಭಗವಾಧ್ವಜ ಹಾರಿಸುತ್ತೇವೆ” ಎಂದು ಹೇಳಿಕೆ ನೀಡಿದ್ದು ವಿವಾದ ಉಂಟಾಗಿತ್ತು. ಅಲ್ಲದೆ ‘ಭಗವಾಧ್ವಜ’ದ ಕುರಿತು ಹೆಗಡೇವಾರ್‌ ಮಾತನಾಡಿರುವುದನ್ನು ‘ಧ್ವಜ’ ಎಂದು ತಿರುಚಿ ಕರ್ನಾಟಕ ಸರ್ಕಾರ ಪಠ್ಯಪುಸ್ತಕದಲ್ಲಿ ಸೇರಿಸಿತ್ತು.

ಈ ಬೆಳವಣಿಗೆಗಳ ನಡುವೆ ಪ್ರತಿಕ್ರಿಯೆ ನೀಡಿದ್ದ ಆರ್‌ಎಸ್‌ಎಸ್‌ ಪ್ರಮುಖ್‌ ಸುನೀಲ್‌, “ಇಂತಹ ವಿಷಯಗಳಲ್ಲಿ ರಾಜಕೀಯ ಮಾಡಬಾರದು” ಎಂದು ಅಭಿಪ್ರಾಯಪಟ್ಟಿದ್ದರು.

ಸಾಮಾಜಿಕ ಮಾಧ್ಯಮದಲ್ಲಿ ಎದ್ದಿರುವ ಪ್ರಶ್ನೆಗಳ ಬಗ್ಗೆ ಸ್ಪಷ್ಟವಾಗಿ ಉತ್ತರಿಸದ ಅವರು, “ಇದು ಒಂದು ಪ್ರಕ್ರಿಯೆ. ಅದನ್ನು ನಮ್ಮದೇ ರೀತಿಯಲ್ಲಿ ನಿಭಾಯಿಸುತ್ತೇವೆ. ಹೇಗೆ ಆಚರಿಸಬೇಕು ಎಂದು ಯೋಚಿಸುತ್ತಿದ್ದೇವೆ. ಸಂಘವು ಈಗಾಗಲೇ ತನ್ನ ನಿಲುವನ್ನು ಸ್ಪಷ್ಟಪಡಿಸಿದೆ. ಅಮೃತ ಮಹೋತ್ಸವಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಪ್ರಾರಂಭಿಸಿದ ಎಲ್ಲಾ ಕಾರ್ಯಕ್ರಮಗಳನ್ನು ಸಂಘವು ಬೆಂಬಲಿಸಿದೆ” ಎಂದಿದ್ದರು.

‘ಆಜಾದಿ ಕಾ ಅಮೃತ್ ಮಹೋತ್ಸವ’ವನ್ನು ಉತ್ಸಾಹದಿಂದ ಆಚರಿಸಲು ಜನರು ಮತ್ತು ಸ್ವಯಂಸೇವಕರನ್ನು ಆರ್‌ಎಸ್‌ಎಸ್ ಕೇಳಿಕೊಂಡಿದೆ. ಸಿದ್ಧತೆಗಳು ನಡೆಯುತ್ತಿವೆ ಎಂದಿದ್ದರು.

ಇದನ್ನೂ ಓದಿರಿ: ಬೊಮ್ಮಾಯಿ ಆಡಳಿತದ ಒಂದು ವರ್ಷದಲ್ಲಿ ರಾಜ್ಯ ಕಂಡ ಕೋಮುದ್ವೇಷ ಪ್ರಕರಣಗಳಿವು

“ಇದು ಸಂಘದ ನಿಲುವು. ಇದನ್ನು ರಾಜಕೀಯ ವಿಷಯ ಮಾಡುವುದು ತಪ್ಪು. ಈ ರೀತಿಯ ತೀಕ್ಷ್ಣವಾದ ಪ್ರಶ್ನೆಗಳು ಇರಬಾರದು. ಇಂತಹ ಪ್ರಶ್ನೆಗಳನ್ನು ಎತ್ತುತ್ತಿರುವ ಪಕ್ಷವೇ ದೇಶ ವಿಭಜನೆಗೆ ಕಾರಣವಾಗಿತ್ತು” ಎಂದು ಕಾಂಗ್ರೆಸ್‌ ಮೇಲೆ ಆರೋಪ ಹೊರಿಸಿದ್ದರು.

ಪಿಎಂ ಮೋದಿ ಮತ್ತು ಹಲವಾರು ಬಿಜೆಪಿ ನಾಯಕರು ಸಾಮಾಜಿಕ ಮಾಧ್ಯಮದಲ್ಲಿ ತ್ರಿವರ್ಣ ಧ್ವಜವನ್ನು ತಮ್ಮ ಪ್ರೊಫೈಲ್ ಚಿತ್ರವನ್ನಾಗಿ ಅಪ್‌ಲೋಡ್ ಮಾಡಿದ್ದಾರೆ. ಕಾಂಗ್ರೆಸ್ ನಾಯಕರು ಇದಕ್ಕೆ ವಿಭಿನ್ನ ರೀತಿಯಲ್ಲಿ ಪ್ರತಿಕ್ರಿಯೆ ನೀಡಿದ್ದು, ಭಾರತದ ಮೊದಲ ಪ್ರಧಾನಿ ಜವಹರಲಾಲ್‌ ನೆಹರೂ ಅವರು ತ್ರಿವರ್ಣಧ್ವಜವನ್ನು ಹಿಡಿದಿರುವ ಫೋಟೋವನ್ನು ಪ್ರೊಫೈಲ್‌ ಚಿತ್ರವಾಗಿ ಅಪ್‌ಲೋಡ್ ಮಾಡಿದ್ದಾರೆ. ಆ ಮೂಲಕ ತ್ರಿವರ್ಣಧ್ವಜವನ್ನು ಅಂದಿನ ಕಾಂಗ್ರೆಸ್ ಸರ್ಕಾರ ಅಂಗೀಕರಿಸಿತು ಎಂಬ ಸಂದೇಶವನ್ನು ಕಾಂಗ್ರೆಸ್ ನೀಡಿದೆ.

ದೇಶದ ಸ್ವಾತಂತ್ರ್ಯದ 75ನೇ ವಾರ್ಷಿಕೋತ್ಸವದ ಅಂಗವಾಗಿ ಪ್ರಾರಂಭಿಸಲಾದ “ಹರ್ ಘರ್ ತಿರಂಗ” ಅಭಿಯಾನವು ಈಗ ಆರ್‌ಎಸ್‌ಎಸ್‌ ಅಂಗಳದಲ್ಲಿ ಸದ್ದು ಮಾಡುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...