Homeಮುಖಪುಟಕೊನೆಗೂ ರಾಷ್ಟ್ರಧ್ವಜದ ಚಿತ್ರವನ್ನು ಪ್ರೊಫೈಲ್‌ಗೆ ಹಾಕಿಕೊಂಡ ಆರ್‌ಎಸ್‌ಎಸ್‌

ಕೊನೆಗೂ ರಾಷ್ಟ್ರಧ್ವಜದ ಚಿತ್ರವನ್ನು ಪ್ರೊಫೈಲ್‌ಗೆ ಹಾಕಿಕೊಂಡ ಆರ್‌ಎಸ್‌ಎಸ್‌

- Advertisement -
- Advertisement -

ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ತನ್ನ ಸಾಮಾಜಿಕ ಮಾಧ್ಯಮ ಖಾತೆಗಳ ಪ್ರೊಫೈಲ್ ಚಿತ್ರವಾಗಿ ತ್ರಿವರ್ಣ ಧ್ವಜವನ್ನು ಏಕೆ ಹಾಕಿಕೊಂಡಿಲ್ಲ ಎಂಬ ಪ್ರಶ್ನೆಯನ್ನು ಜನರು ಕೇಳುತ್ತಿದ್ದರು. ಈ ಎಲ್ಲ ಬೆಳವಣಿಗೆಗಳ ಬಳಿಕ ಆರ್‌ಎಸ್‌ಎಸ್‌ ತನ್ನ ಸೋಷಿಯಲ್ ಮೀಡಿಯಾ ಖಾತೆಗಳಲ್ಲಿ ತ್ರಿವರ್ಣ ಧ್ವಜದ ಚಿತ್ರವನ್ನು ಅಪ್‌ಲೋಡ್ ಮಾಡಿಕೊಂಡಿದೆ.

ಆರ್‌ಎಸ್‌ಎಸ್ ಸರಸಂಚಾಲಕ ಮೋಹನ್‌ ಭಾಗವತ್‌ ಸೇರಿದಂತೆ ಆರ್‌ಎಸ್‌ಎಸ್‌ನ ಅಧಿಕೃತ ಖಾತೆಗಳಲ್ಲಿ ಭಾವುಟವನ್ನು ಹಾಕಿಕೊಳ್ಳಲಾಗಿದೆ.

ತ್ರಿವರ್ಣ ಧ್ವಜದ ಚಿತ್ರವನ್ನು ಸಾಮಾಜಿಕ ಮಾಧ್ಯಮಗಳ ಪ್ರೊಫೈಲ್‌ನಲ್ಲಿ ಹಾಕಿಕೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿಯವರು ಮನವಿ ಮಾಡಿದ ನಂತರವೂ ಆರ್‌ಎಸ್‌ಎಸ್‌ ಮುಖಂಡರು ತಮ್ಮ ಖಾತೆಗಳಲ್ಲಿ ಏಕೆ ತ್ರಿವರ್ಣ ಧ್ವಜದ ಚಿತ್ರವನ್ನು ಹಾಕಿಕೊಂಡಿಲ್ಲ ಎಂಬ ವಿವಾದ ಮುನ್ನೆಲೆಗೆ ಬಂದಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಆರ್‌ಎಸ್‌ಎಸ್‌ ಎಂದಿಗೂ ಭಗವಾಧ್ವಜವನ್ನು ಒಪ್ಪುತ್ತದೆಯೇ ಹೊರತು, ತ್ರಿವರ್ಣ ಧ್ವಜವನ್ನಲ್ಲ” ಎಂಬ ಟೀಕೆಗಳು ವ್ಯಕ್ತವಾಗುತ್ತಿದ್ದವು. ಆರ್‌ಎಸ್‌ಎಸ್‌ ಸಂಸ್ಥಾಪಕ ಕೇಶವ ಬಲಿರಾಮ ಹೆಡಗೇವಾರ್‌ ಕಾಲದಿಂದಲೂ ಸ್ವಾತಂತ್ರ್ಯ ನಂತರದಲ್ಲೂ ಆರ್‌‌ಎಸ್‌ಎಸ್‌ ತ್ರಿವರ್ಣ ಧ್ವಜವನ್ನು ಒಪ್ಪಿಲ್ಲ. ರಾಜಕೀಯ ಕಾರಣಗಳಿಗಷ್ಟೇ ಇತ್ತೀಚಿನ ವರ್ಷಗಳಲ್ಲಿ ಆರ್‌ಎಸ್‌ಎಸ್‌ ರಾಷ್ಟ್ರಧ್ವಜವನ್ನು ಗೌರವಿಸುತ್ತಿದೆ” ಎಂಬ ಆರೋಪಗಳು ಬಂದಿದ್ದವು.

ಟ್ವಿಟರ್‌ ಖಾತೆಯಲ್ಲಿ ರಾಷ್ಟ್ರಧ್ವಜದ ಚಿತ್ರ
ಫೇಸ್‌ಬುಕ್‌ ಖಾತೆಯಲ್ಲಿ ರಾಷ್ಟ್ರಧ್ವಜದ ಚಿತ್ರ
ಆರ್‌ಎಸ್‌ಎಸ್ ಸರಸಂಚಾಲಕ ಮೋಹನ್‌ ಭಾಗವತ್‌ ಅವರ ಟ್ವಿಟರ್‌ ಖಾತೆ

ಈ ಕುರಿತು ಪ್ರತಿಕ್ರಿಯೆ ನೀಡಿದ್ದ ಆರ್‌ಎಸ್‌ಎಸ್ ಅಖಿಲ ಭಾರತೀಯ ಪ್ರಚಾರ್ ಪ್ರಮುಖ್ ಸುನೀಲ್ ಅಂಬೇಕರ್, “ಇಂತಹ ವಿಷಯಗಳನ್ನು ರಾಜಕೀಯಗೊಳಿಸಬಾರದು. ಆರ್‌ಎಸ್‌ಎಸ್ ಈಗಾಗಲೇ ‘ಹರ್ ಘರ್ ತಿರಂಗ’ ಮತ್ತು ‘ಆಜಾದಿ ಕಾ ಅಮೃತ್ ಮಹೋತ್ಸವ’ ಕಾರ್ಯಕ್ರಮಗಳಿಗೆ ತನ್ನ ಬೆಂಬಲವನ್ನು ನೀಡಿದೆ. ಸರ್ಕಾರ, ಖಾಸಗಿ ಸಂಸ್ಥೆಗಳು ಮತ್ತು ಆರ್‌ಎಸ್‌ಎಸ್ ಅಂಗ ಸಂಸ್ಥೆಗಳು ಆಯೋಜಿಸುವ ಕಾರ್ಯಕ್ರಮಗಳಲ್ಲಿ ಜನ ಮತ್ತು ಸ್ವಯಂಸೇವಕರು ಸಂಪೂರ್ಣವಾಗಿ ಪಾಲ್ಗೊಳ್ಳುವಂತೆ ಆರ್‌ಎಸ್‌ಎಸ್‌ ಜುಲೈನಲ್ಲೇ ಮನವಿ ಮಾಡಿದೆ” ಎಂದು ಸಮರ್ಥಿಸಿಕೊಂಡಿದ್ದರು.

ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ಅವರು ಕೆಲವು ತಿಂಗಳ ಹಿಂದೆ, “ನಾವು ಕೆಂಪುಕೋಟೆಯ ಮೇಲೆ ಭಗವಾಧ್ವಜ ಹಾರಿಸುತ್ತೇವೆ” ಎಂದು ಹೇಳಿಕೆ ನೀಡಿದ್ದು ವಿವಾದ ಉಂಟಾಗಿತ್ತು. ಅಲ್ಲದೆ ‘ಭಗವಾಧ್ವಜ’ದ ಕುರಿತು ಹೆಗಡೇವಾರ್‌ ಮಾತನಾಡಿರುವುದನ್ನು ‘ಧ್ವಜ’ ಎಂದು ತಿರುಚಿ ಕರ್ನಾಟಕ ಸರ್ಕಾರ ಪಠ್ಯಪುಸ್ತಕದಲ್ಲಿ ಸೇರಿಸಿತ್ತು.

ಈ ಬೆಳವಣಿಗೆಗಳ ನಡುವೆ ಪ್ರತಿಕ್ರಿಯೆ ನೀಡಿದ್ದ ಆರ್‌ಎಸ್‌ಎಸ್‌ ಪ್ರಮುಖ್‌ ಸುನೀಲ್‌, “ಇಂತಹ ವಿಷಯಗಳಲ್ಲಿ ರಾಜಕೀಯ ಮಾಡಬಾರದು” ಎಂದು ಅಭಿಪ್ರಾಯಪಟ್ಟಿದ್ದರು.

ಸಾಮಾಜಿಕ ಮಾಧ್ಯಮದಲ್ಲಿ ಎದ್ದಿರುವ ಪ್ರಶ್ನೆಗಳ ಬಗ್ಗೆ ಸ್ಪಷ್ಟವಾಗಿ ಉತ್ತರಿಸದ ಅವರು, “ಇದು ಒಂದು ಪ್ರಕ್ರಿಯೆ. ಅದನ್ನು ನಮ್ಮದೇ ರೀತಿಯಲ್ಲಿ ನಿಭಾಯಿಸುತ್ತೇವೆ. ಹೇಗೆ ಆಚರಿಸಬೇಕು ಎಂದು ಯೋಚಿಸುತ್ತಿದ್ದೇವೆ. ಸಂಘವು ಈಗಾಗಲೇ ತನ್ನ ನಿಲುವನ್ನು ಸ್ಪಷ್ಟಪಡಿಸಿದೆ. ಅಮೃತ ಮಹೋತ್ಸವಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಪ್ರಾರಂಭಿಸಿದ ಎಲ್ಲಾ ಕಾರ್ಯಕ್ರಮಗಳನ್ನು ಸಂಘವು ಬೆಂಬಲಿಸಿದೆ” ಎಂದಿದ್ದರು.

‘ಆಜಾದಿ ಕಾ ಅಮೃತ್ ಮಹೋತ್ಸವ’ವನ್ನು ಉತ್ಸಾಹದಿಂದ ಆಚರಿಸಲು ಜನರು ಮತ್ತು ಸ್ವಯಂಸೇವಕರನ್ನು ಆರ್‌ಎಸ್‌ಎಸ್ ಕೇಳಿಕೊಂಡಿದೆ. ಸಿದ್ಧತೆಗಳು ನಡೆಯುತ್ತಿವೆ ಎಂದಿದ್ದರು.

ಇದನ್ನೂ ಓದಿರಿ: ಬೊಮ್ಮಾಯಿ ಆಡಳಿತದ ಒಂದು ವರ್ಷದಲ್ಲಿ ರಾಜ್ಯ ಕಂಡ ಕೋಮುದ್ವೇಷ ಪ್ರಕರಣಗಳಿವು

“ಇದು ಸಂಘದ ನಿಲುವು. ಇದನ್ನು ರಾಜಕೀಯ ವಿಷಯ ಮಾಡುವುದು ತಪ್ಪು. ಈ ರೀತಿಯ ತೀಕ್ಷ್ಣವಾದ ಪ್ರಶ್ನೆಗಳು ಇರಬಾರದು. ಇಂತಹ ಪ್ರಶ್ನೆಗಳನ್ನು ಎತ್ತುತ್ತಿರುವ ಪಕ್ಷವೇ ದೇಶ ವಿಭಜನೆಗೆ ಕಾರಣವಾಗಿತ್ತು” ಎಂದು ಕಾಂಗ್ರೆಸ್‌ ಮೇಲೆ ಆರೋಪ ಹೊರಿಸಿದ್ದರು.

ಪಿಎಂ ಮೋದಿ ಮತ್ತು ಹಲವಾರು ಬಿಜೆಪಿ ನಾಯಕರು ಸಾಮಾಜಿಕ ಮಾಧ್ಯಮದಲ್ಲಿ ತ್ರಿವರ್ಣ ಧ್ವಜವನ್ನು ತಮ್ಮ ಪ್ರೊಫೈಲ್ ಚಿತ್ರವನ್ನಾಗಿ ಅಪ್‌ಲೋಡ್ ಮಾಡಿದ್ದಾರೆ. ಕಾಂಗ್ರೆಸ್ ನಾಯಕರು ಇದಕ್ಕೆ ವಿಭಿನ್ನ ರೀತಿಯಲ್ಲಿ ಪ್ರತಿಕ್ರಿಯೆ ನೀಡಿದ್ದು, ಭಾರತದ ಮೊದಲ ಪ್ರಧಾನಿ ಜವಹರಲಾಲ್‌ ನೆಹರೂ ಅವರು ತ್ರಿವರ್ಣಧ್ವಜವನ್ನು ಹಿಡಿದಿರುವ ಫೋಟೋವನ್ನು ಪ್ರೊಫೈಲ್‌ ಚಿತ್ರವಾಗಿ ಅಪ್‌ಲೋಡ್ ಮಾಡಿದ್ದಾರೆ. ಆ ಮೂಲಕ ತ್ರಿವರ್ಣಧ್ವಜವನ್ನು ಅಂದಿನ ಕಾಂಗ್ರೆಸ್ ಸರ್ಕಾರ ಅಂಗೀಕರಿಸಿತು ಎಂಬ ಸಂದೇಶವನ್ನು ಕಾಂಗ್ರೆಸ್ ನೀಡಿದೆ.

ದೇಶದ ಸ್ವಾತಂತ್ರ್ಯದ 75ನೇ ವಾರ್ಷಿಕೋತ್ಸವದ ಅಂಗವಾಗಿ ಪ್ರಾರಂಭಿಸಲಾದ “ಹರ್ ಘರ್ ತಿರಂಗ” ಅಭಿಯಾನವು ಈಗ ಆರ್‌ಎಸ್‌ಎಸ್‌ ಅಂಗಳದಲ್ಲಿ ಸದ್ದು ಮಾಡುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...