Homeಮುಖಪುಟಕೊನೆಗೂ ರಾಷ್ಟ್ರಧ್ವಜದ ಚಿತ್ರವನ್ನು ಪ್ರೊಫೈಲ್‌ಗೆ ಹಾಕಿಕೊಂಡ ಆರ್‌ಎಸ್‌ಎಸ್‌

ಕೊನೆಗೂ ರಾಷ್ಟ್ರಧ್ವಜದ ಚಿತ್ರವನ್ನು ಪ್ರೊಫೈಲ್‌ಗೆ ಹಾಕಿಕೊಂಡ ಆರ್‌ಎಸ್‌ಎಸ್‌

- Advertisement -
- Advertisement -

ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ತನ್ನ ಸಾಮಾಜಿಕ ಮಾಧ್ಯಮ ಖಾತೆಗಳ ಪ್ರೊಫೈಲ್ ಚಿತ್ರವಾಗಿ ತ್ರಿವರ್ಣ ಧ್ವಜವನ್ನು ಏಕೆ ಹಾಕಿಕೊಂಡಿಲ್ಲ ಎಂಬ ಪ್ರಶ್ನೆಯನ್ನು ಜನರು ಕೇಳುತ್ತಿದ್ದರು. ಈ ಎಲ್ಲ ಬೆಳವಣಿಗೆಗಳ ಬಳಿಕ ಆರ್‌ಎಸ್‌ಎಸ್‌ ತನ್ನ ಸೋಷಿಯಲ್ ಮೀಡಿಯಾ ಖಾತೆಗಳಲ್ಲಿ ತ್ರಿವರ್ಣ ಧ್ವಜದ ಚಿತ್ರವನ್ನು ಅಪ್‌ಲೋಡ್ ಮಾಡಿಕೊಂಡಿದೆ.

ಆರ್‌ಎಸ್‌ಎಸ್ ಸರಸಂಚಾಲಕ ಮೋಹನ್‌ ಭಾಗವತ್‌ ಸೇರಿದಂತೆ ಆರ್‌ಎಸ್‌ಎಸ್‌ನ ಅಧಿಕೃತ ಖಾತೆಗಳಲ್ಲಿ ಭಾವುಟವನ್ನು ಹಾಕಿಕೊಳ್ಳಲಾಗಿದೆ.

ತ್ರಿವರ್ಣ ಧ್ವಜದ ಚಿತ್ರವನ್ನು ಸಾಮಾಜಿಕ ಮಾಧ್ಯಮಗಳ ಪ್ರೊಫೈಲ್‌ನಲ್ಲಿ ಹಾಕಿಕೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿಯವರು ಮನವಿ ಮಾಡಿದ ನಂತರವೂ ಆರ್‌ಎಸ್‌ಎಸ್‌ ಮುಖಂಡರು ತಮ್ಮ ಖಾತೆಗಳಲ್ಲಿ ಏಕೆ ತ್ರಿವರ್ಣ ಧ್ವಜದ ಚಿತ್ರವನ್ನು ಹಾಕಿಕೊಂಡಿಲ್ಲ ಎಂಬ ವಿವಾದ ಮುನ್ನೆಲೆಗೆ ಬಂದಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಆರ್‌ಎಸ್‌ಎಸ್‌ ಎಂದಿಗೂ ಭಗವಾಧ್ವಜವನ್ನು ಒಪ್ಪುತ್ತದೆಯೇ ಹೊರತು, ತ್ರಿವರ್ಣ ಧ್ವಜವನ್ನಲ್ಲ” ಎಂಬ ಟೀಕೆಗಳು ವ್ಯಕ್ತವಾಗುತ್ತಿದ್ದವು. ಆರ್‌ಎಸ್‌ಎಸ್‌ ಸಂಸ್ಥಾಪಕ ಕೇಶವ ಬಲಿರಾಮ ಹೆಡಗೇವಾರ್‌ ಕಾಲದಿಂದಲೂ ಸ್ವಾತಂತ್ರ್ಯ ನಂತರದಲ್ಲೂ ಆರ್‌‌ಎಸ್‌ಎಸ್‌ ತ್ರಿವರ್ಣ ಧ್ವಜವನ್ನು ಒಪ್ಪಿಲ್ಲ. ರಾಜಕೀಯ ಕಾರಣಗಳಿಗಷ್ಟೇ ಇತ್ತೀಚಿನ ವರ್ಷಗಳಲ್ಲಿ ಆರ್‌ಎಸ್‌ಎಸ್‌ ರಾಷ್ಟ್ರಧ್ವಜವನ್ನು ಗೌರವಿಸುತ್ತಿದೆ” ಎಂಬ ಆರೋಪಗಳು ಬಂದಿದ್ದವು.

ಟ್ವಿಟರ್‌ ಖಾತೆಯಲ್ಲಿ ರಾಷ್ಟ್ರಧ್ವಜದ ಚಿತ್ರ
ಫೇಸ್‌ಬುಕ್‌ ಖಾತೆಯಲ್ಲಿ ರಾಷ್ಟ್ರಧ್ವಜದ ಚಿತ್ರ
ಆರ್‌ಎಸ್‌ಎಸ್ ಸರಸಂಚಾಲಕ ಮೋಹನ್‌ ಭಾಗವತ್‌ ಅವರ ಟ್ವಿಟರ್‌ ಖಾತೆ

ಈ ಕುರಿತು ಪ್ರತಿಕ್ರಿಯೆ ನೀಡಿದ್ದ ಆರ್‌ಎಸ್‌ಎಸ್ ಅಖಿಲ ಭಾರತೀಯ ಪ್ರಚಾರ್ ಪ್ರಮುಖ್ ಸುನೀಲ್ ಅಂಬೇಕರ್, “ಇಂತಹ ವಿಷಯಗಳನ್ನು ರಾಜಕೀಯಗೊಳಿಸಬಾರದು. ಆರ್‌ಎಸ್‌ಎಸ್ ಈಗಾಗಲೇ ‘ಹರ್ ಘರ್ ತಿರಂಗ’ ಮತ್ತು ‘ಆಜಾದಿ ಕಾ ಅಮೃತ್ ಮಹೋತ್ಸವ’ ಕಾರ್ಯಕ್ರಮಗಳಿಗೆ ತನ್ನ ಬೆಂಬಲವನ್ನು ನೀಡಿದೆ. ಸರ್ಕಾರ, ಖಾಸಗಿ ಸಂಸ್ಥೆಗಳು ಮತ್ತು ಆರ್‌ಎಸ್‌ಎಸ್ ಅಂಗ ಸಂಸ್ಥೆಗಳು ಆಯೋಜಿಸುವ ಕಾರ್ಯಕ್ರಮಗಳಲ್ಲಿ ಜನ ಮತ್ತು ಸ್ವಯಂಸೇವಕರು ಸಂಪೂರ್ಣವಾಗಿ ಪಾಲ್ಗೊಳ್ಳುವಂತೆ ಆರ್‌ಎಸ್‌ಎಸ್‌ ಜುಲೈನಲ್ಲೇ ಮನವಿ ಮಾಡಿದೆ” ಎಂದು ಸಮರ್ಥಿಸಿಕೊಂಡಿದ್ದರು.

ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ಅವರು ಕೆಲವು ತಿಂಗಳ ಹಿಂದೆ, “ನಾವು ಕೆಂಪುಕೋಟೆಯ ಮೇಲೆ ಭಗವಾಧ್ವಜ ಹಾರಿಸುತ್ತೇವೆ” ಎಂದು ಹೇಳಿಕೆ ನೀಡಿದ್ದು ವಿವಾದ ಉಂಟಾಗಿತ್ತು. ಅಲ್ಲದೆ ‘ಭಗವಾಧ್ವಜ’ದ ಕುರಿತು ಹೆಗಡೇವಾರ್‌ ಮಾತನಾಡಿರುವುದನ್ನು ‘ಧ್ವಜ’ ಎಂದು ತಿರುಚಿ ಕರ್ನಾಟಕ ಸರ್ಕಾರ ಪಠ್ಯಪುಸ್ತಕದಲ್ಲಿ ಸೇರಿಸಿತ್ತು.

ಈ ಬೆಳವಣಿಗೆಗಳ ನಡುವೆ ಪ್ರತಿಕ್ರಿಯೆ ನೀಡಿದ್ದ ಆರ್‌ಎಸ್‌ಎಸ್‌ ಪ್ರಮುಖ್‌ ಸುನೀಲ್‌, “ಇಂತಹ ವಿಷಯಗಳಲ್ಲಿ ರಾಜಕೀಯ ಮಾಡಬಾರದು” ಎಂದು ಅಭಿಪ್ರಾಯಪಟ್ಟಿದ್ದರು.

ಸಾಮಾಜಿಕ ಮಾಧ್ಯಮದಲ್ಲಿ ಎದ್ದಿರುವ ಪ್ರಶ್ನೆಗಳ ಬಗ್ಗೆ ಸ್ಪಷ್ಟವಾಗಿ ಉತ್ತರಿಸದ ಅವರು, “ಇದು ಒಂದು ಪ್ರಕ್ರಿಯೆ. ಅದನ್ನು ನಮ್ಮದೇ ರೀತಿಯಲ್ಲಿ ನಿಭಾಯಿಸುತ್ತೇವೆ. ಹೇಗೆ ಆಚರಿಸಬೇಕು ಎಂದು ಯೋಚಿಸುತ್ತಿದ್ದೇವೆ. ಸಂಘವು ಈಗಾಗಲೇ ತನ್ನ ನಿಲುವನ್ನು ಸ್ಪಷ್ಟಪಡಿಸಿದೆ. ಅಮೃತ ಮಹೋತ್ಸವಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಪ್ರಾರಂಭಿಸಿದ ಎಲ್ಲಾ ಕಾರ್ಯಕ್ರಮಗಳನ್ನು ಸಂಘವು ಬೆಂಬಲಿಸಿದೆ” ಎಂದಿದ್ದರು.

‘ಆಜಾದಿ ಕಾ ಅಮೃತ್ ಮಹೋತ್ಸವ’ವನ್ನು ಉತ್ಸಾಹದಿಂದ ಆಚರಿಸಲು ಜನರು ಮತ್ತು ಸ್ವಯಂಸೇವಕರನ್ನು ಆರ್‌ಎಸ್‌ಎಸ್ ಕೇಳಿಕೊಂಡಿದೆ. ಸಿದ್ಧತೆಗಳು ನಡೆಯುತ್ತಿವೆ ಎಂದಿದ್ದರು.

ಇದನ್ನೂ ಓದಿರಿ: ಬೊಮ್ಮಾಯಿ ಆಡಳಿತದ ಒಂದು ವರ್ಷದಲ್ಲಿ ರಾಜ್ಯ ಕಂಡ ಕೋಮುದ್ವೇಷ ಪ್ರಕರಣಗಳಿವು

“ಇದು ಸಂಘದ ನಿಲುವು. ಇದನ್ನು ರಾಜಕೀಯ ವಿಷಯ ಮಾಡುವುದು ತಪ್ಪು. ಈ ರೀತಿಯ ತೀಕ್ಷ್ಣವಾದ ಪ್ರಶ್ನೆಗಳು ಇರಬಾರದು. ಇಂತಹ ಪ್ರಶ್ನೆಗಳನ್ನು ಎತ್ತುತ್ತಿರುವ ಪಕ್ಷವೇ ದೇಶ ವಿಭಜನೆಗೆ ಕಾರಣವಾಗಿತ್ತು” ಎಂದು ಕಾಂಗ್ರೆಸ್‌ ಮೇಲೆ ಆರೋಪ ಹೊರಿಸಿದ್ದರು.

ಪಿಎಂ ಮೋದಿ ಮತ್ತು ಹಲವಾರು ಬಿಜೆಪಿ ನಾಯಕರು ಸಾಮಾಜಿಕ ಮಾಧ್ಯಮದಲ್ಲಿ ತ್ರಿವರ್ಣ ಧ್ವಜವನ್ನು ತಮ್ಮ ಪ್ರೊಫೈಲ್ ಚಿತ್ರವನ್ನಾಗಿ ಅಪ್‌ಲೋಡ್ ಮಾಡಿದ್ದಾರೆ. ಕಾಂಗ್ರೆಸ್ ನಾಯಕರು ಇದಕ್ಕೆ ವಿಭಿನ್ನ ರೀತಿಯಲ್ಲಿ ಪ್ರತಿಕ್ರಿಯೆ ನೀಡಿದ್ದು, ಭಾರತದ ಮೊದಲ ಪ್ರಧಾನಿ ಜವಹರಲಾಲ್‌ ನೆಹರೂ ಅವರು ತ್ರಿವರ್ಣಧ್ವಜವನ್ನು ಹಿಡಿದಿರುವ ಫೋಟೋವನ್ನು ಪ್ರೊಫೈಲ್‌ ಚಿತ್ರವಾಗಿ ಅಪ್‌ಲೋಡ್ ಮಾಡಿದ್ದಾರೆ. ಆ ಮೂಲಕ ತ್ರಿವರ್ಣಧ್ವಜವನ್ನು ಅಂದಿನ ಕಾಂಗ್ರೆಸ್ ಸರ್ಕಾರ ಅಂಗೀಕರಿಸಿತು ಎಂಬ ಸಂದೇಶವನ್ನು ಕಾಂಗ್ರೆಸ್ ನೀಡಿದೆ.

ದೇಶದ ಸ್ವಾತಂತ್ರ್ಯದ 75ನೇ ವಾರ್ಷಿಕೋತ್ಸವದ ಅಂಗವಾಗಿ ಪ್ರಾರಂಭಿಸಲಾದ “ಹರ್ ಘರ್ ತಿರಂಗ” ಅಭಿಯಾನವು ಈಗ ಆರ್‌ಎಸ್‌ಎಸ್‌ ಅಂಗಳದಲ್ಲಿ ಸದ್ದು ಮಾಡುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...