Homeಮುಖಪುಟಅಧಿಕ ಪಾಲು ಪಡೆದ ಎನ್‌ಸಿಪಿ: ಅಜಿತ್‌ ಪವಾರ್‌ಗೆ ಹಣಕಾಸು, ಆದಿತ್ಯ ಠಾಕ್ರೆಗೆ ಪ್ರವಾಸೋದ್ಯಮ

ಅಧಿಕ ಪಾಲು ಪಡೆದ ಎನ್‌ಸಿಪಿ: ಅಜಿತ್‌ ಪವಾರ್‌ಗೆ ಹಣಕಾಸು, ಆದಿತ್ಯ ಠಾಕ್ರೆಗೆ ಪ್ರವಾಸೋದ್ಯಮ

- Advertisement -
- Advertisement -

ಉದ್ಧವ್ ಠಾಕ್ರೆ ನೇತೃತ್ವದ ಮಹಾರಾಷ್ಟ್ರ ವಿಕಾಸ್ ಅಘಾಡಿ ಒಕ್ಕೂಟದಲ್ಲಿ ಹೊಸ ಮಂತ್ರಿಗಳಿಗೆ ನೀಡಬೇಕಾದ ಖಾತೆ ಹಂಚಿಕೆ ಪಟ್ಟಿಗೆ ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯರಿ ಶನಿವಾರ ಬೆಳಿಗ್ಗೆ ಅನುಮೋದನೆ ನೀಡಿದರು.

ಮೂರು ಪಕ್ಷಗಳ ನಾಯಕರನ್ನು ಒಳಗೊಂಡ 43 ಸದಸ್ಯ ಬಲದ ಕ್ಯಾಬಿನೆಟ್ ಅಂತಿಮವಾಗಿ ಅಧಿಕೃತವಾಗಿದೆ. ಖಾತೆ ಹಂಚಿಕೆಯನ್ನು ಮುಖ್ಯಮಂತ್ರಿ ಶನಿವಾರ ಸಂಜೆ ಅಂತಿಮಗೊಳಿಸಿದರು.

ಎನ್‌ಸಿಪಿ ಪಕ್ಷದ ಅಜಿತ್ ಪವಾರ್ ಹಣಕಾಸು ಖಾತೆಯನ್ನು ಪಡೆದರೆ, ಇನ್ನೊಬ್ಬ ಎನ್‌ಸಿಪಿ ಮುಖಂಡ ಅನಿಲ್ ದೇಶ್‌ಮುಖ್ ಅವರನ್ನು ರಾಜ್ಯ ಗೃಹ ಸಚಿವರನ್ನಾಗಿ ಮಾಡಲಾಯಿತು.

ಈ ವರ್ಷ ಚುನಾವಣೆಗೆ ಪಾದಾರ್ಪಣೆ ಮಾಡಿದ ವರ್ಲಿ ಶಾಸಕ ಆದಿತ್ಯ ಠಾಕ್ರೆ ಅವರಿಗೆ ಪ್ರವಾಸೋದ್ಯಮ ಮತ್ತು ಪರಿಸರ ಸಚಿವಾಲಯ ನೀಡಲಾಗಿದೆ.

ಸಿಎಂ ಉದ್ಧವ್ ಠಾಕ್ರೆ ಅವರು ಸಾಮಾನ್ಯ ಆಡಳಿತ, ಮಾಹಿತಿ ಮತ್ತು ತಂತ್ರಜ್ಞಾನ, ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ, ಕಾನೂನು ಮತ್ತು ನ್ಯಾಯಾಂಗ ಸೇರಿದಂತೆ ಇತರ ಇಲಾಖೆಗಳನ್ನು ಇತರ ಸಚಿವರಿಗೆ ಹಂಚಿಕೆ ಮಾಡದೇ ತಾವೇ ಉಸ್ತುವಾರಿ ವಹಿಸಲಿದ್ದಾರೆ.

ಒಕ್ಕೂಟದಲ್ಲಿ ಕಿರಿಯ ಪಾಲುದಾರರಾಗಿರುವ ಕಾಂಗ್ರೆಸ್ ತನ್ನ ಬಾಲಾಸಾಹೇಬ್ ಥೋರತ್ ಅವರಿಗೆ ಕಂದಾಯ ಸಚಿವಾಲಯದ ಜವಾಬ್ದಾರಿಯನ್ನು ವಹಿಸಿದೆ.

ಖಾತೆ ಹಂಚಿಕೆಯು ಮೂರು ಪಕ್ಷಗಳಿಂದ ಕೂಡಿದ ಮಹಾರಾಷ್ಟ್ರ ವಿಕಾಸ್ ಅಗಾಡಿಯಲ್ಲಿನ ಅಧಿಕಾರದ ಸಮತೋಲನವು ಎನ್‌ಸಿಪಿ ಪರವಾಗಿರುವುದನ್ನು ಸೂಚಿಸುತ್ತದೆ. ಎನ್‌ಸಿಪಿ ಹೆಚ್ಚಿನ ಮಂತ್ರಿ ಹುದ್ದೆಗಳನ್ನು (16) ಪಡೆದುಕೊಂಡಿದ್ದಲ್ಲದೆ, ಗೃಹ, ಹಣಕಾಸು, ನೀರಾವರಿ ಮತ್ತು ವಸತಿಯಂತಹ ಅತ್ಯಂತ ನಿರ್ಣಾಯಕ ಇಲಾಖೆಗಳನ್ನು ಉಳಿಸಿಕೊಂಡಿದೆ. ಸಿಎಂ ಜೊತೆಗೆ ಶಿವಸೇನೆ ಇತರ 14 ಮಂತ್ರಿ ಹುದ್ದೆಗಳನ್ನು ಹೊಂದಿದೆ. ಆದರೆ ಅವರ ಪಾಲಿಗೆ ನಗರ ಅಭಿವೃದ್ಧಿ, ಕೃಷಿ ಮತ್ತು ಕೈಗಾರಿಕೆಗಳಂತಹ ಕಡಿಮೆ ಪ್ರಮುಖ ಖಾತೆಗಳನ್ನು ಉಳಿಸಿಕೊಂಡಿದೆ. ಕಾಂಗ್ರೆಸ್ 10 ಮಂತ್ರಿ ಹುದ್ದೆಗಳನ್ನು ಮತ್ತು ಆದಾಯ ಹಾಗೂ ಪಿಡಬ್ಲ್ಯುಡಿಯಂತಹ ಎರಡು ನಿರ್ಣಾಯಕ ಇಲಾಖೆಗಳನ್ನು ಪಡೆದಿದೆ.

ಮಹಾರಾಷ್ಟ್ರ ವಿಕಾಸ್ ಅಘಾಡಿ ಸರ್ಕಾರವು ಈಗ ಒಂದು ತಿಂಗಳ ಕಾಲ ಅಧಿಕಾರದಲ್ಲಿದ್ದರೂ ಖಾತೆ ಹಂಚಿಕೆ ವಿಳಂಬಕ್ಕೆ ಪ್ರತಿಪಕ್ಷ ಬಿಜೆಪಿಯಿಂದ ಟೀಕೆಗಳನ್ನು ಎದುರಿಸುತ್ತಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...