Homeಮುಖಪುಟಸುಪ್ರೀಂ ಕೋರ್ಟ್‌ ತೀರ್ಪಿನ 12 ದಿನಗಳ ಬಳಿಕ ಬಾಂಡ್‌ಗಳ ಮುದ್ರಣ ನಿಲ್ಲಿಸಲು ಎಸ್‌ಬಿಐಗೆ ಸೂಚಿಸಿದ್ದ ಹಣಕಾಸು...

ಸುಪ್ರೀಂ ಕೋರ್ಟ್‌ ತೀರ್ಪಿನ 12 ದಿನಗಳ ಬಳಿಕ ಬಾಂಡ್‌ಗಳ ಮುದ್ರಣ ನಿಲ್ಲಿಸಲು ಎಸ್‌ಬಿಐಗೆ ಸೂಚಿಸಿದ್ದ ಹಣಕಾಸು ಸಚಿವಾಲಯ: ವರದಿ

- Advertisement -
- Advertisement -

ಚುನಾವಣಾ ಬಾಂಡ್‌ಗಳನ್ನು ಅಸಂವಿಧಾನಿಕ ಎಂದು ಸುಪ್ರೀಂಕೋರ್ಟ್ ರದ್ದುಗೊಳಿಸಿದ 12 ದಿನಗಳ ನಂತರ ಹಣಕಾಸು ಸಚಿವಾಲಯವು ಭಾರತೀಯ ಸ್ಟೇಟ್ ಬ್ಯಾಂಕ್ (ಎಸ್‌ಬಿಐ)ಗೆ ಬಾಂಡ್‌ಗಳ ಮುದ್ರಣವನ್ನು ಔಪಚಾರಿಕವಾಗಿ ತಡೆಹಿಡಿಯಲು ಸೂಚನೆ ನೀಡಿದೆ, ಎನ್ನುವುದು ಆರ್‌ಟಿಐ ಮಾಹಿತಿಯಿಂದ ಬಯಲಾಗಿದೆ.

ಹಣಕಾಸು ಸಚಿವಾಲಯ ಮತ್ತು ಎಸ್‌ಬಿಐ ನಡುವಿನ ಪತ್ರ ವ್ಯವಹಾರ ಮತ್ತು ಇಮೇಲ್‌ಗಳ ಟಿಪ್ಪಣಿಗಳ ಪ್ರಕಾರ, ಈ ಕುರಿತು ಫೆಬ್ರವರಿ 28ರಂದು ಸೂಚನೆಗಳು ಬಂದಿರುವುದನ್ನು ಬಹಿರಂಗಪಡಿಸುತ್ತದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಕಳೆದ ವರ್ಷ ನವೆಂಬರ್ 2ರಂದು ಸತತ ವಿಚಾರಣೆಯ ನಂತರ ಸುಪ್ರೀಂ ಕೋರ್ಟ್ ಆರಂಭದಲ್ಲಿ ತನ್ನ ತೀರ್ಪನ್ನು ಕಾಯ್ದಿರಿಸಿತ್ತು. ಮೂರು ತಿಂಗಳ ನಂತರ ಅಂದರೆ ಫೆಬ್ರವರಿ 15ರಂದು ಚುನಾವಣಾ ಬಾಂಡ್‌ಗಳ ಯೋಜನೆಯನ್ನು ಅಸಂವಿಧಾನಿಕ ಎಂದು ಸುಪ್ರೀಂಕೋರ್ಟ್‌ ಘೋಷಿಸಿದೆ ಮತ್ತು ದೇಣಿಗೆಗಳ ವಿವರಗಳನ್ನು ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಲು ಚುನಾವಣಾ ಆಯೋಗಕ್ಕೆ ಆದೇಶಿಸಿತ್ತು.

ಫೆಬ್ರವರಿ 27ರ ಟಿಪ್ಪಣಿಯು 400 ಬುಕ್‌ಲೆಟ್‌ಗಳು ಮತ್ತು 10,000 ಚುನಾವಣಾ ಬಾಂಡ್‌ಗಳನ್ನು ಮುದ್ರಿಸಲು ಆದೇಶಿಸಿರುವುದನ್ನು ತೋರಿಸಿದೆ. ಅಂದರೆ ಎಲೆಕ್ಟೋರಲ್ ಬಾಂಡ್‌ಗಳ ಕುರಿತ ಅಂತಿಮ ತೀರ್ಪಿಗೆ ಮೂರು ದಿನಗಳ ಮೊದಲು ಫೆ. 12ರಂದು ಈ ಆದೇಶವನ್ನು ನೀಡಲಾಗಿದೆ. ಎಲೆಕ್ಟೋರಲ್‌ ಬಾಂಡ್‌ಗಳನ್ನು ಸುಪ್ರೀಂ ಕೋರ್ಟ್‌ ಅಸಂವಿಧಾನಿಕ ಎಂದು ಘೋಷಿಸಿದ ಮೂರು ದಿನಗಳ ಹಿಂದೆ ತಲಾ ರೂ 1 ಕೋಟಿ ಮೌಲ್ಯದ 10,000 ಚುನಾವಣಾ ಬಾಂಡ್‌ಗಳ ಮುದ್ರಣಕ್ಕೆ ಕೇಂದ್ರ ವಿತ್ತ ಸಚಿವಾಲಯವು ಸೆಕ್ಯುರಿಟಿ ಪ್ರಿಂಟಿಂಗ್‌ ಎಂಡ್‌ ಮಿಂಟಿಂಗ್‌ ಕಾರ್ಪೊರೇಷನ್‌ ಆಫ್‌ ಇಂಡಿಯಾಗೆ (ಎಸ್‌ಪಿಎಂಸಿಐಎಲ್)‌ ಅಂತಿಮ ಅನುಮೋದನೆ ನೀಡಿತ್ತು ಎಂದು indianexpress.com ವರದಿ ಮಾಡಿದೆ. ಕೇಂದ್ರ ಸರ್ಕಾರದ ಸೂಚನೆ ದೊರೆಯುವ ಮುಂಚೆ ಎಸ್‌ಪಿಎಂಸಿಐಎಲ್‌ 8,350 ಬಾಂಡ್‌ಗಳನ್ನು ಮುದ್ರಿಸಿ ಎಸ್‌ಬಿಐಗೆ ನೀಡಿತ್ತು.

ಇದಾದ ಒಂದು ದಿನದ ನಂತರ, ಎಸ್‌ಬಿಐನ ಬ್ಯಾಂಕಿಂಗ್ ವಿಭಾಗದ ಸಹಾಯಕ ಜನರಲ್ ಮ್ಯಾನೇಜರ್ ‘ಚುನಾವಣಾ ಬಾಂಡ್‌ಗಳ ಮುದ್ರಣವನ್ನು ತಡೆಹಿಡಿಯಿರಿ – ಎಲೆಕ್ಟೋರಲ್ ಬಾಂಡ್ ಸ್ಕೀಮ್ 2018’ ಎಂಬ ಶೀರ್ಷಿಕೆಯ ಮೇಲ್‌ನಲ್ಲಿ ಮುದ್ರಣವನ್ನು ನಿಲ್ಲಿಸಲು ಆದೇಶಗಳನ್ನು ಕಳುಹಿಸಿದ್ದಾರೆ.

ನಾವು 23.02.2024ರ ಒಟ್ಟು 8,350 ಬಾಂಡ್‌ಗಳ ಇಮೇಲ್‌ನ್ನು ಒಳಗೊಂಡಿರುವ ಚುನಾವಣಾ ಬಾಂಡ್‌ಗಳ 4 ಬಾಕ್ಸ್‌ಗಳ ಭದ್ರತಾ ರೂಪಗಳ ಸ್ವೀಕೃತಿಯನ್ನು ಅಂಗೀಕರಿಸಿದ್ದೇವೆ. ಗೌರವಾನ್ವಿತ ಸುಪ್ರೀಂ ಕೋರ್ಟ್ ನೀಡಿದ ತೀರ್ಪಿನ ಹಿನ್ನೆಲೆ, ಉಳಿದ 1,650 ಎಲೆಕ್ಟೋರಲ್ ಬಾಂಡ್‌ಗೆ ಮುದ್ರಣವನ್ನು ತಡೆಹಿಡಿಯಲು ನಾವು ನಿಮ್ಮನ್ನು ವಿನಂತಿಸುತ್ತೇವೆ ಎಂದು ಮೇಲ್‌ನಲ್ಲಿ ಹೇಳಲಾಗಿದೆ. ಇದರರ್ಥ ಮುದ್ರಣವನ್ನು ನಿಲ್ಲಿಸುವ ಅಂತಿಮ ಆದೇಶದ ಮೊದಲು, SPMCIL ಈಗಾಗಲೇ ತಲಾ 1 ಕೋಟಿ ಮೌಲ್ಯದ 8,350 ಬಾಂಡ್‌ಗಳನ್ನು ರವಾನಿಸಿದೆ.

ಚುನಾವಣಾ ಆಯೋಗದ ಅಂಕಿಅಂಶಗಳ ಪ್ರಕಾರ, ಬಿಜೆಪಿಯು 2018ರಿಂದ ಚುನಾವಣಾ ಬಾಂಡ್‌ಗಳ ಮೂಲಕ 8,251.8 ಕೋಟಿ ರೂ.ಗಳನ್ನು ಪಡೆದಿದೆ, ಈ ಅವಧಿಯಲ್ಲಿ ಮಾರಾಟವಾದ ಒಟ್ಟು ಬಾಂಡ್ ಮೌಲ್ಯದ 16,518 ಕೋಟಿ ರೂ.ಆಗಿದ್ದು, ಒಟ್ಟು ಚುನಾವಣಾ ಬಾಂಡ್‌ಗಳ ಮೂಲಕ ಪಡೆದ ನಿಧಿಯಲ್ಲಿ 50% ಬಿಜೆಪಿ ಪಾಲಾಗಿದೆ ಎಂದು ದಾಖಲೆಗಳು ಸೂಚಿಸುತ್ತದೆ.

ಇದನ್ನು ಓದಿ: ದಲಿತ ಮಹಿಳೆಗೆ ಜಾತಿ ನಿಂದನೆಗೈದು ಥಳಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...

ದಟ್ಟಾರಣ್ಯದೊಳಗೆ ಮೂರು ದಿನಗಳನ್ನು ಕಳೆದಿದ್ದು ಹೇಗೆ..ದಾರಿ ತಪ್ಪಿದ ಬಳಿಕ ಏನಾಯ್ತು? ನಾಪತ್ತೆ ವಿಚಾರ ಬಿಚ್ಚಿಟ್ಟ ಶರಣ್ಯ

ಕಳೆದ ಗುರುವಾರ (ಏಪ್ರಿಲ್ 2, 2026) ಕೊಡಗಿನ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿ ನಾಪತ್ತೆಯಾಗಿದ್ದ ಕೇರಳದ ಯುವತಿ ಶರಣ್ಯ, ಮೂರು ದಿನಗಳ ಬಳಿಕ, ಅಂದರೆ ನಾಪತ್ತೆಯಾದ ನಾಲ್ಕನೇ ದಿನ ಭಾನುವಾರ (ಏಪ್ರಿಲ್ 4,...

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...