Homeಮುಖಪುಟಸುಪ್ರೀಂ ಕೋರ್ಟ್‌ ತೀರ್ಪಿನ 12 ದಿನಗಳ ಬಳಿಕ ಬಾಂಡ್‌ಗಳ ಮುದ್ರಣ ನಿಲ್ಲಿಸಲು ಎಸ್‌ಬಿಐಗೆ ಸೂಚಿಸಿದ್ದ ಹಣಕಾಸು...

ಸುಪ್ರೀಂ ಕೋರ್ಟ್‌ ತೀರ್ಪಿನ 12 ದಿನಗಳ ಬಳಿಕ ಬಾಂಡ್‌ಗಳ ಮುದ್ರಣ ನಿಲ್ಲಿಸಲು ಎಸ್‌ಬಿಐಗೆ ಸೂಚಿಸಿದ್ದ ಹಣಕಾಸು ಸಚಿವಾಲಯ: ವರದಿ

- Advertisement -
- Advertisement -

ಚುನಾವಣಾ ಬಾಂಡ್‌ಗಳನ್ನು ಅಸಂವಿಧಾನಿಕ ಎಂದು ಸುಪ್ರೀಂಕೋರ್ಟ್ ರದ್ದುಗೊಳಿಸಿದ 12 ದಿನಗಳ ನಂತರ ಹಣಕಾಸು ಸಚಿವಾಲಯವು ಭಾರತೀಯ ಸ್ಟೇಟ್ ಬ್ಯಾಂಕ್ (ಎಸ್‌ಬಿಐ)ಗೆ ಬಾಂಡ್‌ಗಳ ಮುದ್ರಣವನ್ನು ಔಪಚಾರಿಕವಾಗಿ ತಡೆಹಿಡಿಯಲು ಸೂಚನೆ ನೀಡಿದೆ, ಎನ್ನುವುದು ಆರ್‌ಟಿಐ ಮಾಹಿತಿಯಿಂದ ಬಯಲಾಗಿದೆ.

ಹಣಕಾಸು ಸಚಿವಾಲಯ ಮತ್ತು ಎಸ್‌ಬಿಐ ನಡುವಿನ ಪತ್ರ ವ್ಯವಹಾರ ಮತ್ತು ಇಮೇಲ್‌ಗಳ ಟಿಪ್ಪಣಿಗಳ ಪ್ರಕಾರ, ಈ ಕುರಿತು ಫೆಬ್ರವರಿ 28ರಂದು ಸೂಚನೆಗಳು ಬಂದಿರುವುದನ್ನು ಬಹಿರಂಗಪಡಿಸುತ್ತದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಕಳೆದ ವರ್ಷ ನವೆಂಬರ್ 2ರಂದು ಸತತ ವಿಚಾರಣೆಯ ನಂತರ ಸುಪ್ರೀಂ ಕೋರ್ಟ್ ಆರಂಭದಲ್ಲಿ ತನ್ನ ತೀರ್ಪನ್ನು ಕಾಯ್ದಿರಿಸಿತ್ತು. ಮೂರು ತಿಂಗಳ ನಂತರ ಅಂದರೆ ಫೆಬ್ರವರಿ 15ರಂದು ಚುನಾವಣಾ ಬಾಂಡ್‌ಗಳ ಯೋಜನೆಯನ್ನು ಅಸಂವಿಧಾನಿಕ ಎಂದು ಸುಪ್ರೀಂಕೋರ್ಟ್‌ ಘೋಷಿಸಿದೆ ಮತ್ತು ದೇಣಿಗೆಗಳ ವಿವರಗಳನ್ನು ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಲು ಚುನಾವಣಾ ಆಯೋಗಕ್ಕೆ ಆದೇಶಿಸಿತ್ತು.

ಫೆಬ್ರವರಿ 27ರ ಟಿಪ್ಪಣಿಯು 400 ಬುಕ್‌ಲೆಟ್‌ಗಳು ಮತ್ತು 10,000 ಚುನಾವಣಾ ಬಾಂಡ್‌ಗಳನ್ನು ಮುದ್ರಿಸಲು ಆದೇಶಿಸಿರುವುದನ್ನು ತೋರಿಸಿದೆ. ಅಂದರೆ ಎಲೆಕ್ಟೋರಲ್ ಬಾಂಡ್‌ಗಳ ಕುರಿತ ಅಂತಿಮ ತೀರ್ಪಿಗೆ ಮೂರು ದಿನಗಳ ಮೊದಲು ಫೆ. 12ರಂದು ಈ ಆದೇಶವನ್ನು ನೀಡಲಾಗಿದೆ. ಎಲೆಕ್ಟೋರಲ್‌ ಬಾಂಡ್‌ಗಳನ್ನು ಸುಪ್ರೀಂ ಕೋರ್ಟ್‌ ಅಸಂವಿಧಾನಿಕ ಎಂದು ಘೋಷಿಸಿದ ಮೂರು ದಿನಗಳ ಹಿಂದೆ ತಲಾ ರೂ 1 ಕೋಟಿ ಮೌಲ್ಯದ 10,000 ಚುನಾವಣಾ ಬಾಂಡ್‌ಗಳ ಮುದ್ರಣಕ್ಕೆ ಕೇಂದ್ರ ವಿತ್ತ ಸಚಿವಾಲಯವು ಸೆಕ್ಯುರಿಟಿ ಪ್ರಿಂಟಿಂಗ್‌ ಎಂಡ್‌ ಮಿಂಟಿಂಗ್‌ ಕಾರ್ಪೊರೇಷನ್‌ ಆಫ್‌ ಇಂಡಿಯಾಗೆ (ಎಸ್‌ಪಿಎಂಸಿಐಎಲ್)‌ ಅಂತಿಮ ಅನುಮೋದನೆ ನೀಡಿತ್ತು ಎಂದು indianexpress.com ವರದಿ ಮಾಡಿದೆ. ಕೇಂದ್ರ ಸರ್ಕಾರದ ಸೂಚನೆ ದೊರೆಯುವ ಮುಂಚೆ ಎಸ್‌ಪಿಎಂಸಿಐಎಲ್‌ 8,350 ಬಾಂಡ್‌ಗಳನ್ನು ಮುದ್ರಿಸಿ ಎಸ್‌ಬಿಐಗೆ ನೀಡಿತ್ತು.

ಇದಾದ ಒಂದು ದಿನದ ನಂತರ, ಎಸ್‌ಬಿಐನ ಬ್ಯಾಂಕಿಂಗ್ ವಿಭಾಗದ ಸಹಾಯಕ ಜನರಲ್ ಮ್ಯಾನೇಜರ್ ‘ಚುನಾವಣಾ ಬಾಂಡ್‌ಗಳ ಮುದ್ರಣವನ್ನು ತಡೆಹಿಡಿಯಿರಿ – ಎಲೆಕ್ಟೋರಲ್ ಬಾಂಡ್ ಸ್ಕೀಮ್ 2018’ ಎಂಬ ಶೀರ್ಷಿಕೆಯ ಮೇಲ್‌ನಲ್ಲಿ ಮುದ್ರಣವನ್ನು ನಿಲ್ಲಿಸಲು ಆದೇಶಗಳನ್ನು ಕಳುಹಿಸಿದ್ದಾರೆ.

ನಾವು 23.02.2024ರ ಒಟ್ಟು 8,350 ಬಾಂಡ್‌ಗಳ ಇಮೇಲ್‌ನ್ನು ಒಳಗೊಂಡಿರುವ ಚುನಾವಣಾ ಬಾಂಡ್‌ಗಳ 4 ಬಾಕ್ಸ್‌ಗಳ ಭದ್ರತಾ ರೂಪಗಳ ಸ್ವೀಕೃತಿಯನ್ನು ಅಂಗೀಕರಿಸಿದ್ದೇವೆ. ಗೌರವಾನ್ವಿತ ಸುಪ್ರೀಂ ಕೋರ್ಟ್ ನೀಡಿದ ತೀರ್ಪಿನ ಹಿನ್ನೆಲೆ, ಉಳಿದ 1,650 ಎಲೆಕ್ಟೋರಲ್ ಬಾಂಡ್‌ಗೆ ಮುದ್ರಣವನ್ನು ತಡೆಹಿಡಿಯಲು ನಾವು ನಿಮ್ಮನ್ನು ವಿನಂತಿಸುತ್ತೇವೆ ಎಂದು ಮೇಲ್‌ನಲ್ಲಿ ಹೇಳಲಾಗಿದೆ. ಇದರರ್ಥ ಮುದ್ರಣವನ್ನು ನಿಲ್ಲಿಸುವ ಅಂತಿಮ ಆದೇಶದ ಮೊದಲು, SPMCIL ಈಗಾಗಲೇ ತಲಾ 1 ಕೋಟಿ ಮೌಲ್ಯದ 8,350 ಬಾಂಡ್‌ಗಳನ್ನು ರವಾನಿಸಿದೆ.

ಚುನಾವಣಾ ಆಯೋಗದ ಅಂಕಿಅಂಶಗಳ ಪ್ರಕಾರ, ಬಿಜೆಪಿಯು 2018ರಿಂದ ಚುನಾವಣಾ ಬಾಂಡ್‌ಗಳ ಮೂಲಕ 8,251.8 ಕೋಟಿ ರೂ.ಗಳನ್ನು ಪಡೆದಿದೆ, ಈ ಅವಧಿಯಲ್ಲಿ ಮಾರಾಟವಾದ ಒಟ್ಟು ಬಾಂಡ್ ಮೌಲ್ಯದ 16,518 ಕೋಟಿ ರೂ.ಆಗಿದ್ದು, ಒಟ್ಟು ಚುನಾವಣಾ ಬಾಂಡ್‌ಗಳ ಮೂಲಕ ಪಡೆದ ನಿಧಿಯಲ್ಲಿ 50% ಬಿಜೆಪಿ ಪಾಲಾಗಿದೆ ಎಂದು ದಾಖಲೆಗಳು ಸೂಚಿಸುತ್ತದೆ.

ಇದನ್ನು ಓದಿ: ದಲಿತ ಮಹಿಳೆಗೆ ಜಾತಿ ನಿಂದನೆಗೈದು ಥಳಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...