Homeಮುಖಪುಟಸುಪ್ರೀಂ ಕೋರ್ಟ್‌ ತೀರ್ಪಿನ 12 ದಿನಗಳ ಬಳಿಕ ಬಾಂಡ್‌ಗಳ ಮುದ್ರಣ ನಿಲ್ಲಿಸಲು ಎಸ್‌ಬಿಐಗೆ ಸೂಚಿಸಿದ್ದ ಹಣಕಾಸು...

ಸುಪ್ರೀಂ ಕೋರ್ಟ್‌ ತೀರ್ಪಿನ 12 ದಿನಗಳ ಬಳಿಕ ಬಾಂಡ್‌ಗಳ ಮುದ್ರಣ ನಿಲ್ಲಿಸಲು ಎಸ್‌ಬಿಐಗೆ ಸೂಚಿಸಿದ್ದ ಹಣಕಾಸು ಸಚಿವಾಲಯ: ವರದಿ

- Advertisement -
- Advertisement -

ಚುನಾವಣಾ ಬಾಂಡ್‌ಗಳನ್ನು ಅಸಂವಿಧಾನಿಕ ಎಂದು ಸುಪ್ರೀಂಕೋರ್ಟ್ ರದ್ದುಗೊಳಿಸಿದ 12 ದಿನಗಳ ನಂತರ ಹಣಕಾಸು ಸಚಿವಾಲಯವು ಭಾರತೀಯ ಸ್ಟೇಟ್ ಬ್ಯಾಂಕ್ (ಎಸ್‌ಬಿಐ)ಗೆ ಬಾಂಡ್‌ಗಳ ಮುದ್ರಣವನ್ನು ಔಪಚಾರಿಕವಾಗಿ ತಡೆಹಿಡಿಯಲು ಸೂಚನೆ ನೀಡಿದೆ, ಎನ್ನುವುದು ಆರ್‌ಟಿಐ ಮಾಹಿತಿಯಿಂದ ಬಯಲಾಗಿದೆ.

ಹಣಕಾಸು ಸಚಿವಾಲಯ ಮತ್ತು ಎಸ್‌ಬಿಐ ನಡುವಿನ ಪತ್ರ ವ್ಯವಹಾರ ಮತ್ತು ಇಮೇಲ್‌ಗಳ ಟಿಪ್ಪಣಿಗಳ ಪ್ರಕಾರ, ಈ ಕುರಿತು ಫೆಬ್ರವರಿ 28ರಂದು ಸೂಚನೆಗಳು ಬಂದಿರುವುದನ್ನು ಬಹಿರಂಗಪಡಿಸುತ್ತದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಕಳೆದ ವರ್ಷ ನವೆಂಬರ್ 2ರಂದು ಸತತ ವಿಚಾರಣೆಯ ನಂತರ ಸುಪ್ರೀಂ ಕೋರ್ಟ್ ಆರಂಭದಲ್ಲಿ ತನ್ನ ತೀರ್ಪನ್ನು ಕಾಯ್ದಿರಿಸಿತ್ತು. ಮೂರು ತಿಂಗಳ ನಂತರ ಅಂದರೆ ಫೆಬ್ರವರಿ 15ರಂದು ಚುನಾವಣಾ ಬಾಂಡ್‌ಗಳ ಯೋಜನೆಯನ್ನು ಅಸಂವಿಧಾನಿಕ ಎಂದು ಸುಪ್ರೀಂಕೋರ್ಟ್‌ ಘೋಷಿಸಿದೆ ಮತ್ತು ದೇಣಿಗೆಗಳ ವಿವರಗಳನ್ನು ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಲು ಚುನಾವಣಾ ಆಯೋಗಕ್ಕೆ ಆದೇಶಿಸಿತ್ತು.

ಫೆಬ್ರವರಿ 27ರ ಟಿಪ್ಪಣಿಯು 400 ಬುಕ್‌ಲೆಟ್‌ಗಳು ಮತ್ತು 10,000 ಚುನಾವಣಾ ಬಾಂಡ್‌ಗಳನ್ನು ಮುದ್ರಿಸಲು ಆದೇಶಿಸಿರುವುದನ್ನು ತೋರಿಸಿದೆ. ಅಂದರೆ ಎಲೆಕ್ಟೋರಲ್ ಬಾಂಡ್‌ಗಳ ಕುರಿತ ಅಂತಿಮ ತೀರ್ಪಿಗೆ ಮೂರು ದಿನಗಳ ಮೊದಲು ಫೆ. 12ರಂದು ಈ ಆದೇಶವನ್ನು ನೀಡಲಾಗಿದೆ. ಎಲೆಕ್ಟೋರಲ್‌ ಬಾಂಡ್‌ಗಳನ್ನು ಸುಪ್ರೀಂ ಕೋರ್ಟ್‌ ಅಸಂವಿಧಾನಿಕ ಎಂದು ಘೋಷಿಸಿದ ಮೂರು ದಿನಗಳ ಹಿಂದೆ ತಲಾ ರೂ 1 ಕೋಟಿ ಮೌಲ್ಯದ 10,000 ಚುನಾವಣಾ ಬಾಂಡ್‌ಗಳ ಮುದ್ರಣಕ್ಕೆ ಕೇಂದ್ರ ವಿತ್ತ ಸಚಿವಾಲಯವು ಸೆಕ್ಯುರಿಟಿ ಪ್ರಿಂಟಿಂಗ್‌ ಎಂಡ್‌ ಮಿಂಟಿಂಗ್‌ ಕಾರ್ಪೊರೇಷನ್‌ ಆಫ್‌ ಇಂಡಿಯಾಗೆ (ಎಸ್‌ಪಿಎಂಸಿಐಎಲ್)‌ ಅಂತಿಮ ಅನುಮೋದನೆ ನೀಡಿತ್ತು ಎಂದು indianexpress.com ವರದಿ ಮಾಡಿದೆ. ಕೇಂದ್ರ ಸರ್ಕಾರದ ಸೂಚನೆ ದೊರೆಯುವ ಮುಂಚೆ ಎಸ್‌ಪಿಎಂಸಿಐಎಲ್‌ 8,350 ಬಾಂಡ್‌ಗಳನ್ನು ಮುದ್ರಿಸಿ ಎಸ್‌ಬಿಐಗೆ ನೀಡಿತ್ತು.

ಇದಾದ ಒಂದು ದಿನದ ನಂತರ, ಎಸ್‌ಬಿಐನ ಬ್ಯಾಂಕಿಂಗ್ ವಿಭಾಗದ ಸಹಾಯಕ ಜನರಲ್ ಮ್ಯಾನೇಜರ್ ‘ಚುನಾವಣಾ ಬಾಂಡ್‌ಗಳ ಮುದ್ರಣವನ್ನು ತಡೆಹಿಡಿಯಿರಿ – ಎಲೆಕ್ಟೋರಲ್ ಬಾಂಡ್ ಸ್ಕೀಮ್ 2018’ ಎಂಬ ಶೀರ್ಷಿಕೆಯ ಮೇಲ್‌ನಲ್ಲಿ ಮುದ್ರಣವನ್ನು ನಿಲ್ಲಿಸಲು ಆದೇಶಗಳನ್ನು ಕಳುಹಿಸಿದ್ದಾರೆ.

ನಾವು 23.02.2024ರ ಒಟ್ಟು 8,350 ಬಾಂಡ್‌ಗಳ ಇಮೇಲ್‌ನ್ನು ಒಳಗೊಂಡಿರುವ ಚುನಾವಣಾ ಬಾಂಡ್‌ಗಳ 4 ಬಾಕ್ಸ್‌ಗಳ ಭದ್ರತಾ ರೂಪಗಳ ಸ್ವೀಕೃತಿಯನ್ನು ಅಂಗೀಕರಿಸಿದ್ದೇವೆ. ಗೌರವಾನ್ವಿತ ಸುಪ್ರೀಂ ಕೋರ್ಟ್ ನೀಡಿದ ತೀರ್ಪಿನ ಹಿನ್ನೆಲೆ, ಉಳಿದ 1,650 ಎಲೆಕ್ಟೋರಲ್ ಬಾಂಡ್‌ಗೆ ಮುದ್ರಣವನ್ನು ತಡೆಹಿಡಿಯಲು ನಾವು ನಿಮ್ಮನ್ನು ವಿನಂತಿಸುತ್ತೇವೆ ಎಂದು ಮೇಲ್‌ನಲ್ಲಿ ಹೇಳಲಾಗಿದೆ. ಇದರರ್ಥ ಮುದ್ರಣವನ್ನು ನಿಲ್ಲಿಸುವ ಅಂತಿಮ ಆದೇಶದ ಮೊದಲು, SPMCIL ಈಗಾಗಲೇ ತಲಾ 1 ಕೋಟಿ ಮೌಲ್ಯದ 8,350 ಬಾಂಡ್‌ಗಳನ್ನು ರವಾನಿಸಿದೆ.

ಚುನಾವಣಾ ಆಯೋಗದ ಅಂಕಿಅಂಶಗಳ ಪ್ರಕಾರ, ಬಿಜೆಪಿಯು 2018ರಿಂದ ಚುನಾವಣಾ ಬಾಂಡ್‌ಗಳ ಮೂಲಕ 8,251.8 ಕೋಟಿ ರೂ.ಗಳನ್ನು ಪಡೆದಿದೆ, ಈ ಅವಧಿಯಲ್ಲಿ ಮಾರಾಟವಾದ ಒಟ್ಟು ಬಾಂಡ್ ಮೌಲ್ಯದ 16,518 ಕೋಟಿ ರೂ.ಆಗಿದ್ದು, ಒಟ್ಟು ಚುನಾವಣಾ ಬಾಂಡ್‌ಗಳ ಮೂಲಕ ಪಡೆದ ನಿಧಿಯಲ್ಲಿ 50% ಬಿಜೆಪಿ ಪಾಲಾಗಿದೆ ಎಂದು ದಾಖಲೆಗಳು ಸೂಚಿಸುತ್ತದೆ.

ಇದನ್ನು ಓದಿ: ದಲಿತ ಮಹಿಳೆಗೆ ಜಾತಿ ನಿಂದನೆಗೈದು ಥಳಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ರಾಜೀನಾಮೆ ನೀಡಿ, ಬಿಜೆಪಿ ಟಿಕೆಟ್‌ನಲ್ಲಿ ಸ್ಪರ್ಧಿಸಿ”: ಟಿಎಂಸಿ ಬಂಡುಕೋರರಿಗೆ ಮಹುವಾ ಮೊಯಿತ್ರಾ ನೇರ ಸವಾಲು

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (TMC) ಪಕ್ಷದೊಳಗೆ ತೀವ್ರ ಭಿನ್ನಾಭಿಪ್ರಾಯ ಸ್ಫೋಟಗೊಂಡಿದೆ. ಕೇಂದ್ರದ ಬಿಜೆಪಿ ನೇತೃತ್ವದ ಎನ್‌ಡಿಎ (NDA) ಮೈತ್ರಿಕೂಟಕ್ಕೆ ಬೆಂಬಲ ನೀಡಲು ಮುಂದಾಗಿರುವ ಸ್ವಪಕ್ಷದ ಬಂಡಾಯ ಸಂಸದರ ವಿರುದ್ಧ ಟಿಎಂಸಿ ಸಂಸದೆ...

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...