Homeಮುಖಪುಟಈರುಳ್ಳಿ ರಫ್ತು ನಿಷೇಧ ನಿರ್ಧಾರ ಸಮರ್ಥಿಸಿಕೊಂಡ ವಿತ್ತ ಸಚಿವೆ; ರೈತರ ಪ್ರತಿಭಟನೆಗೆ ಪವಾರ್ ಬೆಂಬಲ

ಈರುಳ್ಳಿ ರಫ್ತು ನಿಷೇಧ ನಿರ್ಧಾರ ಸಮರ್ಥಿಸಿಕೊಂಡ ವಿತ್ತ ಸಚಿವೆ; ರೈತರ ಪ್ರತಿಭಟನೆಗೆ ಪವಾರ್ ಬೆಂಬಲ

- Advertisement -
- Advertisement -

ಈರುಳ್ಳಿ ಸೇರಿದಂತೆ ಕೆಲವು ಉತ್ಪನ್ನಗಳ ವಿದೇಶಕ್ಕೆ ರಫ್ತು ನಿಷೇಧಿಸುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಗಳವಾರ ಸಮರ್ಥಿಸಿಕೊಂಡಿದ್ದಾರೆ. ‘ದೇಶೀಯ ಗ್ರಾಹಕರ ಹಿತಾಸಕ್ತಿಗಳನ್ನು ರಕ್ಷಿಸುವುದು ಅತ್ಯಗತ್ಯ’ ಎಂದು ಅವರು ಪ್ರತಿಪಾದಿಸಿದ್ದಾರೆ. ಮತ್ತೊಂದೆಡೆ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಮುಖ್ಯಸ್ಥ ಶರದ್ ಪವಾರ್ ನಾಸಿಕ್ ಜಿಲ್ಲೆಯ ಚಂದ್‌ವಾಡ್‌ನಲ್ಲಿ ಈರುಳ್ಳಿ ರಫ್ತು ನಿಷೇಧವನ್ನು ವಿರೋಧಿಸಿ ನಡೆದ ರೈತರ ಪ್ರತಿಭಟನೆಯಲ್ಲಿ ಪಾಲ್ಗೊಂಡು ಬೆಂಬಲ ನೀಡಿದ್ದಾರೆ.

ಈ ಕುರಿತು ಲೋಕಸಭೆಯಲ್ಲಿ ಮಂಗಳವಾರ ಮಾತನಾಡಿರುವ ನಿರ್ಮಲಾ ಸೀತಾರಾಮನ್, ‘ನಾವು ರೈತರು ಮತ್ತು ಗ್ರಾಹಕರ ಹಿತಾಸಕ್ತಿಗಳನ್ನು ಸಮತೋಲನಗೊಳಿಸುವುದಕ್ಕೆ ಆದ್ಯತೆ ನೀಡಿದ್ದೇವೆ. ಆಗಾಗ ಬೆಲೆಗಳು ಹೆಚ್ಚಾಗುತ್ತಿವೆ. ಈ ಸಂದರ್ಭದಲ್ಲಿ ನಾವು ಕೆಲವು ನಿರ್ಬಂಧಗಳನ್ನು ತೆಗೆದುಹಾಕಬೇಕು. ನಾವು ರೈತರಿಂದ ಖರೀದಿಸಿದ್ದಕ್ಕೆ ನೀಡುತ್ತಿರುವ ಬೆಲೆ ಸಮರ್ಪಕವಾಗಿದೆ ಎಂಬ ಪ್ರಜ್ಞೆ ನಮಗಿದೆ’ ಎಂದರು.

‘ನಮ್ಮ ಆರ್ಥಿಕತೆಯು ಸರಿಯಾದ ದಿಕ್ಕಿನಲ್ಲಿ ಸಾಗುತ್ತಿದೆ. ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಯಾಗಿ ಮಾರ್ಪಟ್ಟಿದ್ದೇವೆ. ಎರಡನೇ ತ್ರೈಮಾಸಿಕದಲ್ಲಿ 7.6% ಬೆಳವಣಿಗೆಯು ವಿಶ್ವದಲ್ಲೇ ಅತ್ಯಧಿಕವಾಗಿದೆ. ಸಾಮಾಜಿಕ ಕಲ್ಯಾಣದ ವಿಚಾರದಲ್ಲಿ ರಾಜಿ ಮಾಡಿಕೊಳ್ಳದೆ ಹಣಕಾಸಿನ ವಿವೇಕವು ಸರ್ಕಾರದ ಪ್ರಮುಖ ಆದ್ಯತೆಯಾಗಿದೆ’ ಎಂದು ಸೀತಾರಾಮನ್ ಹೇಳಿದರು.

ರೈತರ ಹೋರಾಟಕ್ಕೆ ಎನ್‌ಸಿಪಿ ಬೆಂಬಲ:

ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಮುಖ್ಯಸ್ಥ ಮತ್ತು ಕೇಂದ್ರದ ಮಾಜಿ ಕೃಷಿ ಸಚಿವ ಶರದ್ ಪವಾರ್ ಸೋಮವಾರ ನಾಸಿಕ್ ಜಿಲ್ಲೆಯ ಚಂದ್‌ವಾಡ್‌ನಲ್ಲಿ ಈರುಳ್ಳಿ ರಫ್ತು ನಿಷೇಧವನ್ನು ವಿರೋಧಿಸಿ ರೈತರು ನಡೆಸುತ್ತಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಬೆಂಬಲ ಸೂಚಿಸಿದ್ದಾರೆ. ಮತ್ತೊಂದು ಕಡೆ ಎನ್‌ಸಿಪಿ ಸಂಸದರು ಚಳಿಗಾಲದ ಅಧೀವೇಶನದಲ್ಲಿ ಧ್ವನಿ ಎತ್ತಿದ್ದಾರೆ.

ನಾಸಿಕ್‌ನಲ್ಲಿ ನಡೆದ ರೈತರ ಪ್ರತಿಭಟನೆಗೆ ಬೆಂಬಲ ನೀಡಿ ಮಾತನಾಡಿದ ಶರದ್ ಪವಾರ್

‘ಕೇಂದ್ರದ ಬಿಜೆಪಿ ಸರ್ಕಾರಕ್ಕೆ ರೈತರ ಶ್ರಮದ ಬಗ್ಗೆ ಗೌರವವಿಲ್ಲ ಮತ್ತು ಅದಕ್ಕಾಗಿಯೇ ರೈತರ ಹಿತಾಸಕ್ತಿ ವಿರುದ್ಧ ನೀತಿ ನಿರ್ಧಾರಗಳನ್ನು ತೆಗೆದುಕೊಳ್ಳುತ್ತದೆ. ಸಂಸತ್ತಿನಲ್ಲಿ ಈ ವಿಷಯವನ್ನು ಪ್ರಸ್ತಾಪಿಸಲಾಗುವುದು’ ಎಂದು ರೈತರಿಗೆ ಭರವಸೆ ನೀಡಿದ್ದರು.

‘ಈರುಳ್ಳಿ ಬೆಲೆ ಹೆಚ್ಚಳದಿಂದ ರೈತರು ಲಾಭ ಮಾಡುತ್ತಿದ್ದರೆ ಅದರಲ್ಲಿ ಯಾವುದೇ ತಪ್ಪಿಲ್ಲ. ಕುಟುಂಬದ ಒಟ್ಟು ಆಹಾರ ವೆಚ್ಚದಲ್ಲಿ ಈರುಳ್ಳಿಯ ಪಾಲು ಅತ್ಯಲ್ಪವಾಗಿರುವುದರಿಂದ ಜನರು ಅಂತಹ ತಾತ್ಕಾಲಿಕ ಬೆಲೆ ಹೆಚ್ಚಳವನ್ನು ಸಹಿಸಿಕೊಳ್ಳಬೇಕು’ ಎಂದು ಪವಾರ್ ಜನರಲ್ಲಿ ಮನವಿ ಮಾಡಿದರು.

ಇದನ್ನೂ ಓದಿ; ಗುರ್ಜರ್ ಜಮೀನಿಗೆ ನುಗ್ಗಿದ ಮೇಕೆಗಳು: ದಲಿತ ಮಹಿಳೆಯರಿಗೆ ಅಮಾನವೀಯವಾಗಿ ಥಳಿಸಿದ ಭೂ ಮಾಲೀಕ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...