Homeಕರ್ನಾಟಕಕೇಂದ್ರದಿಂದ ಕರ್ನಾಟಕಕ್ಕೆ ಅನ್ಯಾಯ: ಬಹಿರಂಗ ಚರ್ಚೆ ಆಹ್ವಾನದ ಬಗ್ಗೆ ಕೇಳಿದ್ದಕ್ಕೆ ಉಡಾಫೆಯಿಂದ ಉತ್ತರಿಸಿದ ನಿರ್ಮಲಾ ಸೀತಾರಾಮನ್

ಕೇಂದ್ರದಿಂದ ಕರ್ನಾಟಕಕ್ಕೆ ಅನ್ಯಾಯ: ಬಹಿರಂಗ ಚರ್ಚೆ ಆಹ್ವಾನದ ಬಗ್ಗೆ ಕೇಳಿದ್ದಕ್ಕೆ ಉಡಾಫೆಯಿಂದ ಉತ್ತರಿಸಿದ ನಿರ್ಮಲಾ ಸೀತಾರಾಮನ್

- Advertisement -
- Advertisement -

ಕರ್ನಾಟಕ ರಾಜ್ಯಕ್ಕೆ ಕೇಂದ್ರ ಸರ್ಕಾರ ಪರಿಹಾರಗಳಲ್ಲಿ ಬಿಡುಗಡೆ ಮಾಡದೆ ವಿಳಂಬ ಮಾಡಿದೆ ಎಂದು ರಾಜ್ಯ ಸರಕಾರ ಆರೋಪಿಸಿತ್ತು, ಇದಲ್ಲದೆ ಪರಿಹಾರ ಬಿಡುಗಡೆಗೆ ನಿರ್ದೇಶನ ಕೋರಿ ಸಿದ್ದರಾಮಯ್ಯ ಸರಕಾರ ಸುಪ್ರೀಂಕೋರ್ಟ್‌ ಮೊರೆ ಹೋಗಿತ್ತು. ಈ ಮಧ್ಯೆ ಮಾರ್ಚ್‌ 24ರಂದು ಬೆಂಗಳೂರಿನಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು, ಕರ್ನಾಟಕಕ್ಕೆ ನೀಡಬೇಕಿದ್ದ ಒಂದೊಂದು ಪೈಸೆಯನ್ನೂ ನಾವು ಸರಿಯಾದ ಸಮಯಕ್ಕೆ ನೀಡಿದ್ದೇವೆ ಎಂದು ಹೇಳಿಕೆಯನ್ನು ನೀಡಿದ್ದರು.

ತೆರಿಗೆ ಹಂಚಿಕೆ ಅನುದಾನದಲ್ಲಿ ಅನ್ಯಾಯದ ಬಗ್ಗೆ ಕರ್ನಾಟದಿಂದ ರಾಜ್ಯಸಭೆಗೆ ಆಯ್ಕೆಯಾಗಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಹಿರಂಗ ಚರ್ಚೆಗೆ ಅವರು ಸಿದ್ದರಿದ್ದೀರಾ ಎಂದು  ಸಚಿವ ಕೃಷ್ಣಬೈರೇಗೌಡ ಅವರು ಪ್ರಶ್ನಿಸಿದ್ದರು. ಇದರ ಬೆನ್ನಲ್ಲಿ ಜಾಗೃತ ಕರ್ನಾಟಕ ಸಂಘಟನೆ ಮುಖಾಮುಖಿ ಬಹಿರಂಗ ಚರ್ಚೆಗೆ ವೇದಿಕೆ ಸಿದ್ದ ಮಾಡಿತ್ತು. ಆದರೆ ಅವರು ಚರ್ಚೆಗೆ ಹಾಜರಾಗದೆ ಗೈರಾಗಿದ್ದರು.

ಈ ಮಧ್ಯೆ ಕೇಂದ್ರದಿಂದ ಕರ್ನಾಟಕಕ್ಕೆ ಅನ್ಯಾಯದ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಬಹಿರಂಗ ಚರ್ಚೆಯ ಆಹ್ವಾನದ ಬಗ್ಗೆ ಕೇಳಿದ್ದಕ್ಕೆ ಸಚಿವೆ ನಿರ್ಮಲಾ ಸೀತಾರಾಮನ್ ಉಡಾಫೆಯಿಂದ ಉತ್ತರಿಸಿದ್ದಾರೆ. ಈ ಕುರಿತ ವಿಡಿಯೋ ವೈರಲ್‌ ಆಗಿದೆ. ಸಚಿವರ ಬಳಿ ಪತ್ರಿಗೋಷ್ಟಿಯಲ್ಲಿ ತೆರಿಗೆ ಹಂಚಿಕೆ ಅನುದಾನದ ಬಗ್ಗೆ ಚರ್ಚೆಗೆ ಬಹಿರಂಗ ಆಹ್ವಾನ ಬಂದಿತ್ತು ಅದನ್ನು ಯಾಕೆ ಸ್ವೀಕಾರ ಮಾಡಬಾರದು ಎಂದು ಪ್ರಶ್ನಿಸಿದ್ದಾರೆ. ಇದಲ್ಲದೆ ಇನ್ನೋರ್ವ ಪತ್ರಕರ್ತರು, ಚರ್ಚೆಗೆ ಆಹ್ವಾನ ಬಂದಿದೆ, ಕರ್ನಾಟಕ ಸರಕಾರ ಮತ್ತು ಇಬ್ಬರು ಒಂದೇ ವೇದಿಕೆಯಲ್ಲಿ ಕುಳಿತು ಇದಕ್ಕೆ ಸ್ಪಷ್ಟನೆ ನೀಡಬಹುದಲ್ಲ ಎಂದು ಕೇಳಿದ್ದಾರೆ. ಈಗ ಎಲ್ಲರೂ ಹಣಕಾಸಿನ ವಿಚಾರಕ್ಕೆ ನನ್ನಲ್ಲಿ ಪ್ರಶ್ನೆ ಕೇಳುತ್ತಿದ್ದಾರೆ. ಮೊದಲು ಕೇಳಿ ಎಂದು ಉಡಾಫೆಯಿಂದ ಉತ್ತರಿಸಿದ್ದಾರೆ.

 

ಚರ್ಚೆಗೆ ವೇದಿಕೆ ಸಿದ್ದಪಡಿಸಿದ್ದ ಜಾಗೃತ ಕರ್ನಾಟಕ ಸಂಘಟನೆ 

ತೆರಿಗೆ ಹಂಚಿಕೆ ಅನುದಾನದಲ್ಲಿ ಅನ್ಯಾಯದ ಬಗ್ಗೆ ಮುಖಾಮುಖಿ ಚರ್ಚೆಗೆ ಜಾಗೃತ ಕರ್ನಾಟಕ ಸಂಘಟನೆ ಬೆಂಗಳೂರಿನ ಗಾಂಧಿ ಭವನದಲ್ಲಿ ಸಿದ್ದಪಡಿಸಿದ್ದ ವೇದಿಕೆಯಲ್ಲಿ ಶನಿವಾರ ಸಂಜೆ 5.30ಕ್ಕೆ ಸರಿಯಾಗಿ ಕಾರ್ಯಕ್ರಮ ಆರಂಭವಾಗಿತು. ನಿರ್ಮಲಾ ಸೀತಾರಾಮನ್ ಅವರಿಗೆ ಒಂದು ಕುರ್ಚಿಯನ್ನು, ಕೃಷ್ಣ ಬೈರೇಗೌಡರಿಗೆ ಒಂದು ಕುರ್ಚಿಯನ್ನು ಕಾಯ್ದಿರಿಸಲಾಗಿತ್ತು. ನಿರ್ಮಲಾ ಸೀತಾರಾಮನ್ ಚರ್ಚೆಗೆ ಹಾಜರಾಗದೆ ಗೈರಾಗಿದ್ದರು. ಸಭೆಯಲ್ಲಿ ಪಿಪಿಟಿ ಪ್ರೆಸೆಂಟೇಷನ್ ಮೂಲಕ ರಾಜ್ಯಕ್ಕಾದ ತೆರಿಗೆ ವಂಚನೆ ಬಗ್ಗೆ ಸಚಿವ ಕೃಷ್ಣ ಬೈರೇಗೌಡ ಅವರು ವಿವರಣೆ ನೀಡಿದ್ದರು. ಆರ್ಥಿಕ ವಿಶ್ಲೇಷಕರಾದ ಪ್ರೊ.ಟಿ.ಆರ್‌.ಚಂದ್ರಶೇಖರ್‌, ರೈತಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ, ಬರಹಗಾರ ನಾಗೇಗೌಡ ಕೀಲಾರ, ಹೈಕೋರ್ಟ್ ವಕೀಲರಾದ ರಾಜಲಕ್ಷ್ಮಿ ಅಂಕಲಗಿ, ಜಾಗೃತ ಕರ್ನಾಟಕ ಸಂಘಟನೆಯ ಸೀತಾ, ಕನ್ನಡಪರ ಹೋರಾಟಗಾರ ಶಿವಾನಂದ ಗುಂಡಣ್ಣ ಸಂವಾದದಲ್ಲಿ ಪಾಲ್ಗೊಂಡಿದ್ದರು.

ಇದನ್ನು ಓದಿ: ಎನ್‌ಐಎ ಅಧಿಕಾರಿಗಳು ಮಧ್ಯರಾತ್ರಿ ಮನೆಗೆ ನುಗ್ಗಿ ಮಹಿಳೆಯರಿಗೆ ಹಿಂಸಿಸಿದ್ದಾರೆ: ಮಮತಾ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...