Homeಕರ್ನಾಟಕಕೇಂದ್ರದಿಂದ ಕರ್ನಾಟಕಕ್ಕೆ ಅನ್ಯಾಯ: ಬಹಿರಂಗ ಚರ್ಚೆ ಆಹ್ವಾನದ ಬಗ್ಗೆ ಕೇಳಿದ್ದಕ್ಕೆ ಉಡಾಫೆಯಿಂದ ಉತ್ತರಿಸಿದ ನಿರ್ಮಲಾ ಸೀತಾರಾಮನ್

ಕೇಂದ್ರದಿಂದ ಕರ್ನಾಟಕಕ್ಕೆ ಅನ್ಯಾಯ: ಬಹಿರಂಗ ಚರ್ಚೆ ಆಹ್ವಾನದ ಬಗ್ಗೆ ಕೇಳಿದ್ದಕ್ಕೆ ಉಡಾಫೆಯಿಂದ ಉತ್ತರಿಸಿದ ನಿರ್ಮಲಾ ಸೀತಾರಾಮನ್

- Advertisement -
- Advertisement -

ಕರ್ನಾಟಕ ರಾಜ್ಯಕ್ಕೆ ಕೇಂದ್ರ ಸರ್ಕಾರ ಪರಿಹಾರಗಳಲ್ಲಿ ಬಿಡುಗಡೆ ಮಾಡದೆ ವಿಳಂಬ ಮಾಡಿದೆ ಎಂದು ರಾಜ್ಯ ಸರಕಾರ ಆರೋಪಿಸಿತ್ತು, ಇದಲ್ಲದೆ ಪರಿಹಾರ ಬಿಡುಗಡೆಗೆ ನಿರ್ದೇಶನ ಕೋರಿ ಸಿದ್ದರಾಮಯ್ಯ ಸರಕಾರ ಸುಪ್ರೀಂಕೋರ್ಟ್‌ ಮೊರೆ ಹೋಗಿತ್ತು. ಈ ಮಧ್ಯೆ ಮಾರ್ಚ್‌ 24ರಂದು ಬೆಂಗಳೂರಿನಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು, ಕರ್ನಾಟಕಕ್ಕೆ ನೀಡಬೇಕಿದ್ದ ಒಂದೊಂದು ಪೈಸೆಯನ್ನೂ ನಾವು ಸರಿಯಾದ ಸಮಯಕ್ಕೆ ನೀಡಿದ್ದೇವೆ ಎಂದು ಹೇಳಿಕೆಯನ್ನು ನೀಡಿದ್ದರು.

ತೆರಿಗೆ ಹಂಚಿಕೆ ಅನುದಾನದಲ್ಲಿ ಅನ್ಯಾಯದ ಬಗ್ಗೆ ಕರ್ನಾಟದಿಂದ ರಾಜ್ಯಸಭೆಗೆ ಆಯ್ಕೆಯಾಗಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಹಿರಂಗ ಚರ್ಚೆಗೆ ಅವರು ಸಿದ್ದರಿದ್ದೀರಾ ಎಂದು  ಸಚಿವ ಕೃಷ್ಣಬೈರೇಗೌಡ ಅವರು ಪ್ರಶ್ನಿಸಿದ್ದರು. ಇದರ ಬೆನ್ನಲ್ಲಿ ಜಾಗೃತ ಕರ್ನಾಟಕ ಸಂಘಟನೆ ಮುಖಾಮುಖಿ ಬಹಿರಂಗ ಚರ್ಚೆಗೆ ವೇದಿಕೆ ಸಿದ್ದ ಮಾಡಿತ್ತು. ಆದರೆ ಅವರು ಚರ್ಚೆಗೆ ಹಾಜರಾಗದೆ ಗೈರಾಗಿದ್ದರು.

ಈ ಮಧ್ಯೆ ಕೇಂದ್ರದಿಂದ ಕರ್ನಾಟಕಕ್ಕೆ ಅನ್ಯಾಯದ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಬಹಿರಂಗ ಚರ್ಚೆಯ ಆಹ್ವಾನದ ಬಗ್ಗೆ ಕೇಳಿದ್ದಕ್ಕೆ ಸಚಿವೆ ನಿರ್ಮಲಾ ಸೀತಾರಾಮನ್ ಉಡಾಫೆಯಿಂದ ಉತ್ತರಿಸಿದ್ದಾರೆ. ಈ ಕುರಿತ ವಿಡಿಯೋ ವೈರಲ್‌ ಆಗಿದೆ. ಸಚಿವರ ಬಳಿ ಪತ್ರಿಗೋಷ್ಟಿಯಲ್ಲಿ ತೆರಿಗೆ ಹಂಚಿಕೆ ಅನುದಾನದ ಬಗ್ಗೆ ಚರ್ಚೆಗೆ ಬಹಿರಂಗ ಆಹ್ವಾನ ಬಂದಿತ್ತು ಅದನ್ನು ಯಾಕೆ ಸ್ವೀಕಾರ ಮಾಡಬಾರದು ಎಂದು ಪ್ರಶ್ನಿಸಿದ್ದಾರೆ. ಇದಲ್ಲದೆ ಇನ್ನೋರ್ವ ಪತ್ರಕರ್ತರು, ಚರ್ಚೆಗೆ ಆಹ್ವಾನ ಬಂದಿದೆ, ಕರ್ನಾಟಕ ಸರಕಾರ ಮತ್ತು ಇಬ್ಬರು ಒಂದೇ ವೇದಿಕೆಯಲ್ಲಿ ಕುಳಿತು ಇದಕ್ಕೆ ಸ್ಪಷ್ಟನೆ ನೀಡಬಹುದಲ್ಲ ಎಂದು ಕೇಳಿದ್ದಾರೆ. ಈಗ ಎಲ್ಲರೂ ಹಣಕಾಸಿನ ವಿಚಾರಕ್ಕೆ ನನ್ನಲ್ಲಿ ಪ್ರಶ್ನೆ ಕೇಳುತ್ತಿದ್ದಾರೆ. ಮೊದಲು ಕೇಳಿ ಎಂದು ಉಡಾಫೆಯಿಂದ ಉತ್ತರಿಸಿದ್ದಾರೆ.

 

ಚರ್ಚೆಗೆ ವೇದಿಕೆ ಸಿದ್ದಪಡಿಸಿದ್ದ ಜಾಗೃತ ಕರ್ನಾಟಕ ಸಂಘಟನೆ 

ತೆರಿಗೆ ಹಂಚಿಕೆ ಅನುದಾನದಲ್ಲಿ ಅನ್ಯಾಯದ ಬಗ್ಗೆ ಮುಖಾಮುಖಿ ಚರ್ಚೆಗೆ ಜಾಗೃತ ಕರ್ನಾಟಕ ಸಂಘಟನೆ ಬೆಂಗಳೂರಿನ ಗಾಂಧಿ ಭವನದಲ್ಲಿ ಸಿದ್ದಪಡಿಸಿದ್ದ ವೇದಿಕೆಯಲ್ಲಿ ಶನಿವಾರ ಸಂಜೆ 5.30ಕ್ಕೆ ಸರಿಯಾಗಿ ಕಾರ್ಯಕ್ರಮ ಆರಂಭವಾಗಿತು. ನಿರ್ಮಲಾ ಸೀತಾರಾಮನ್ ಅವರಿಗೆ ಒಂದು ಕುರ್ಚಿಯನ್ನು, ಕೃಷ್ಣ ಬೈರೇಗೌಡರಿಗೆ ಒಂದು ಕುರ್ಚಿಯನ್ನು ಕಾಯ್ದಿರಿಸಲಾಗಿತ್ತು. ನಿರ್ಮಲಾ ಸೀತಾರಾಮನ್ ಚರ್ಚೆಗೆ ಹಾಜರಾಗದೆ ಗೈರಾಗಿದ್ದರು. ಸಭೆಯಲ್ಲಿ ಪಿಪಿಟಿ ಪ್ರೆಸೆಂಟೇಷನ್ ಮೂಲಕ ರಾಜ್ಯಕ್ಕಾದ ತೆರಿಗೆ ವಂಚನೆ ಬಗ್ಗೆ ಸಚಿವ ಕೃಷ್ಣ ಬೈರೇಗೌಡ ಅವರು ವಿವರಣೆ ನೀಡಿದ್ದರು. ಆರ್ಥಿಕ ವಿಶ್ಲೇಷಕರಾದ ಪ್ರೊ.ಟಿ.ಆರ್‌.ಚಂದ್ರಶೇಖರ್‌, ರೈತಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ, ಬರಹಗಾರ ನಾಗೇಗೌಡ ಕೀಲಾರ, ಹೈಕೋರ್ಟ್ ವಕೀಲರಾದ ರಾಜಲಕ್ಷ್ಮಿ ಅಂಕಲಗಿ, ಜಾಗೃತ ಕರ್ನಾಟಕ ಸಂಘಟನೆಯ ಸೀತಾ, ಕನ್ನಡಪರ ಹೋರಾಟಗಾರ ಶಿವಾನಂದ ಗುಂಡಣ್ಣ ಸಂವಾದದಲ್ಲಿ ಪಾಲ್ಗೊಂಡಿದ್ದರು.

ಇದನ್ನು ಓದಿ: ಎನ್‌ಐಎ ಅಧಿಕಾರಿಗಳು ಮಧ್ಯರಾತ್ರಿ ಮನೆಗೆ ನುಗ್ಗಿ ಮಹಿಳೆಯರಿಗೆ ಹಿಂಸಿಸಿದ್ದಾರೆ: ಮಮತಾ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...