Homeಮುಖಪುಟತೆರಿಗೆ ಹಂಚಿಕೆ ತಾರತಮ್ಯ ಇಲ್ಲ ಎಂದ ವಿತ್ತ ಸಚಿವೆ; 'ಪಟ್ಟಭದ್ರ ಹಿತಾಸಕ್ತಿಗಳ ವಿನಾಶಕಾರಿ ನಿರೂಪಣೆ' ಎಂದು...

ತೆರಿಗೆ ಹಂಚಿಕೆ ತಾರತಮ್ಯ ಇಲ್ಲ ಎಂದ ವಿತ್ತ ಸಚಿವೆ; ‘ಪಟ್ಟಭದ್ರ ಹಿತಾಸಕ್ತಿಗಳ ವಿನಾಶಕಾರಿ ನಿರೂಪಣೆ’ ಎಂದು ಆರೋಪ

- Advertisement -
- Advertisement -

ಬಿಜೆಪಿಯೇತರ ಆಡಳಿತವಿರುವ ರಾಜ್ಯ ಸರ್ಕಾರಗಳು, ನಿರ್ದಿಷ್ಟವಾಗಿ ದಕ್ಷಿಣ ಭಾರತದ ಸರ್ಕಾರಗಳು (ಆರ್ಥಿಕ) ತೆರಿಗೆ ಪಾಲಿನಿಂದ ವಂಚಿತವಾಗಿವೆ ಹಾಗೂ ಜಿಎಸ್‌ಟಿ ಪರಿಹಾರ ವಿಚಾರಗಳಿಗೆ ಸಂಬಂಧಿಸಿದಂತೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಕಾಂಗ್ರೆಸ್ ಸಂಸದ ಅಧೀರ್ ರಂಜನ್ ಚೌಧರಿ ಅವರು ಸೋಮವಾರ ಸಂಸತ್ತಿನಲ್ಲಿ ವಾಗ್ವಾದ ನಡೆಸಿದರು.

ಅಧೀರ್ ರಂಜನ್ ಚೌಧರಿ ಮಾತಿಗೆ ಕೆರಳಿದ ಸೀತಾರಾಮನ್, ‘ರಾಜ್ಯಗಳ ಆರ್ಥಿಕ ಪಾಲಿನ ಹಂಚಿಕೆಯು ಹಣಕಾಸು ಆಯೋಗದ ಶಿಫಾರಸಿನ ಪ್ರಕಾರ ನಡೆಯುತ್ತದೆ. ತೆರಿಗೆ ಆದಾಯದ ಹಂಚಿಕೆಯಲ್ಲಿ ಕೆಲವರಿಗೆ ವಿವೇಚನೆ ಇಲ್ಲ. ಪಟ್ಟಭದ್ರ ಹಿತಾಸಕ್ತಿ ಗುಂಪುಗಳು ಹರಡುತ್ತಿರುವ ರಾಜಕೀಯದ ವಿನಾಶಕಾರಿ ನಿರೂಪಣೆ’ ಎಂದು ಅವರು ಕೇಂದ್ರದ ವಿರುದ್ಧದ ಆರೋಪಗಳಿಗೆ ತಿರುಗೇಟು ಕೊಟ್ಟರು.

ಕರ್ನಾಟಕ, ಕೇರಳ ಹಾಗೂ ತಮಿಳುನಾಡು ರಾಜ್ಯಗಳಿಂದ ಕೇಳಿಬರುತ್ತಿರುವ ತೆರಿಗೆ ಹಂಚಿಕೆ ತಾರತಮ್ಯದ ಬಗ್ಗೆ ಮಾತನಾಡಿದ ಕಾಂಗ್ರೆಸ್ ನಾಯಕ ಚೌಧರಿ, ‘ಇದು ನಿರ್ಮಲಾ ಸೀತಾರಾಮನ್ ಮತ್ತು ಆಡಳಿತಾರೂಢ ಬಿಜೆಪಿಯನ್ನು ನಿರಂಕುಶ. ವಿರೋಧ-ಆಡಳಿತದ ರಾಜ್ಯಗಳ ಬಗ್ಗೆ ಇರುವ ತಾರತಮ್ಯದ ನಿಲುವು’ ಎಂದು ಎಂದು ಲೋಕಸಭೆಯಲ್ಲಿ ಆರೋಪಿಸಿದರು.

‘ಇತ್ತೀಚಿನ ಉದಾಹರಣೆ ಕರ್ನಾಟಕ… ನಿಮ್ಮ ಆಡಳಿತದ ನಿರ್ದಾಕ್ಷಿಣ್ಯ ಧೋರಣೆಯ ವಿರುದ್ಧ ಇಡೀ ಸಚಿವಾಲಯ ಆಂದೋಲನ ನಡೆಸುತ್ತಿದೆ. ಕೆಲವು ತಿಂಗಳ ಹಿಂದೆ ಎಲ್ಲವೂ ಹುನ್ನಾರವಾಗಿತ್ತು. ಆದರೆ, ಹೊಸ ಸರ್ಕಾರ ಬಂದ ನಂತರ ತೊಂದರೆ ಪ್ರಾರಂಭವಾಯಿತೆ’ ಎಂದು ಕಾಂಗ್ರೆಸ್ ನಾಯಕ ಪ್ರಶ್ನಿಸಿದರು.

‘ನನಗೆ ಈ ರಾಜ್ಯದ ಪರ ಒಲವಿಲ್ಲ; ಪಾವತಿಯನ್ನು ನಿಲ್ಲಿಸಿ’ ಎಂದು ಹೇಳಲು ಯಾವುದೇ ಹಣಕಾಸು ಸಚಿವರು ಮಧ್ಯಪ್ರವೇಶಿಸುವುದಕ್ಕೆ ಸಾಧ್ಯವಿಲ್ಲ, ಅದು ಅಸಾಧ್ಯ. ಆರ್ಥಿಕ ಹಂಚಿಕೆ ವ್ಯವಸ್ಥೆಯು ಉತ್ತಮವಾಗಿ ಇರಿಸಲ್ಪಟ್ಟಿದೆ’ ಎಂದು ಸೀತಾರಾಮನ್ ಲೋಕಸಭೆಯಲ್ಲಿ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಅವರಿಗೆ ಉತ್ತರಿಸಿದರು.

‘ಬಿಜೆಪಿಯೇತರ ಆಡಳಿತವಿರುವ ರಾಜ್ಯಗಳು ನ್ಯಾಯಸಮ್ಮತವಾದ ಬಾಕಿಯಿಂದ ವಂಚಿತವಾಗಿವೆ ಎಂಬ ಸಾಮಾನ್ಯ ಗ್ರಹಿಕೆ ಇದೆ’ ಎಂದು ಕರ್ನಾಟಕವನ್ನು ಉದಾಹರಣೆಯಾಗಿ ಉಲ್ಲೇಖಿಸಿ ಚೌಧರಿ ಹೇಳಿದರು. ‘ಕರ್ನಾಟಕ ರಾಜ್ಯವು ತನ್ನ ನ್ಯಾಯಸಮ್ಮತವಾದ ಬಾಕಿಗಳಿಂದ ವಂಚಿತವಾಗಿದೆ ಎಂಬುದು ನಿಜವೇ? ಆರು ತಿಂಗಳ ಹಿಂದೆ ಅದೆಲ್ಲವೂ ಹಂಕಿ ಡೋರಿ, ಈಗ ಏನಾಯಿತು ಎಂದು ಅವರು ಪ್ರಶ್ನಿಸಿದರು.

ಫೆಬ್ರವರಿ 7 ರಂದು ದೆಹಲಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಕರ್ನಾಟಕದ ಆಡಳಿತಾರೂಢ ಶಾಸಕರು ರಾಜ್ಯಕ್ಕೆ ನ್ಯಾಯುತ ತೆರಿಗೆ ಪಾಲು ನೀಡುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸುವ ಮುನ್ನ ಚೌಧರಿ ಅವರು ಕೇಂದ್ರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

‘ಯಾವುದೇ ಕೇಂದ್ರ ಹಣಕಾಸು ಸಚಿವರು ಆಯೋಗದ ಶಿಫಾರಸುಗಳೊಂದಿಗೆ ಆಟವಾಡಲು ಸಾಧ್ಯವಿಲ್ಲ’ ಎಂದು ಸೀತಾರಾಮನ್ ಹೇಳಿದರು.

‘ಕೆಲವು ರಾಜ್ಯಗಳ ವಿರುದ್ಧ ತಾರತಮ್ಯ ಮಾಡಲಾಗುತ್ತಿದೆ ಎಂಬ ಈ ಆತಂಕವು ರಾಜಕೀಯ ವಿರೋಧಿಗಳ ನಿರೂಪಣೆಯಾಗಿದೆ. ಇದನ್ನು ಹೇಳಲು ನನಗೆ ವಿಷಾದವಿದೆ, ಪಟ್ಟಭದ್ರ ಹಿತಾಸಕ್ತಿಗಳು ಹೇಳಲು ಸಂತೋಷಪಡುತ್ತವೆ’ ಎಂದು ಅವರು ಪ್ರಶ್ನೋತ್ತರ ಅವಧಿಯಲ್ಲಿ ಹೇಳಿದರು.

“ಎಸ್‌ಜಿಎಸ್‌ಟಿ ರಾಜ್ಯಗಳಿಗೆ 100 ಪ್ರತಿಶತದಷ್ಟು ಹೋಗುತ್ತದೆ… ಇದು ಸ್ವಯಂಚಾಲಿತ ನಿಬಂಧನೆಯಾಗಿದೆ. ಐಜಿಎಸ್‌ಟಿ ಅಂತರರಾಜ್ಯ ಪಾವತಿಗಳನ್ನು ಒಳಗೊಂಡಿರುತ್ತದೆ; ನಿಯತಕಾಲಿಕವಾಗಿ ಪರಿಶೀಲಿಸಲಾಗುತ್ತದೆ. ಏಕೆಂದರೆ, ರಾಜ್ಯಗಳು ತಮ್ಮ ಕೈಯಲ್ಲಿ ಹಣವನ್ನು ಪಡೆಯಬೇಕು. ಅದನ್ನು ವಿಂಗಡಿಸಲಾಗುತ್ತದೆ ಮತ್ತು ನಂತರ ನಿಯತಕಾಲಿಕವಾಗಿ ವಾಸ್ತವಕ್ಕೆ ಸರಿಹೊಂದಿಸಲಾಗುತ್ತದೆ. ‘ಸಿಜಿಎಸ್‌ಟಿ’ಯನ್ನು ಹಣಕಾಸು ಆಯೋಗದ ಪ್ರಕಾರ ವಿಂಗಡಿಸಲಾಗಿದೆ’ ಎಂದು ಅವರು ಸಂಸತ್ತಿಗೆ ತಿಳಿಸಿದರು.

‘ನಾನು ವಿನಮ್ರವಾಗಿ ತಿಳಿಸಲು ಬಯಸುತ್ತೇನೆ, ಆದ್ದರಿಂದ ಅಧೀರ್‌ ರವರೆ ದಯವಿಟ್ಟು ಅರ್ಥಮಾಡಿಕೊಳ್ಳಿ … ನನ್ನ ಇಚ್ಛೆ ಮತ್ತು ಕಲ್ಪನೆಗಳಿಗೆ ಅನುಗುಣವಾಗಿ ಹಂಚಿಕೆಗಳನ್ನು ಬದಲಾಯಿಸುವ ಹಕ್ಕು ನನಗಿಲ್ಲ. ನಾನು ಒಂದು ರಾಜ್ಯವನ್ನು ಇಷ್ಟಪಡುತ್ತೇನೆ ಅಥವಾ ಇನ್ನೊಂದು ನನ್ನ ಪಕ್ಷದ ರಾಜಕೀಯದ ವಿರುದ್ಧ ಎಂದು ಹೇಳಲು ಸಾಧ್ಯವಿಲ್ಲ’ ಎಂದು ಅವರು ಹೇಳಿದರು.

‘ನಾನು ಶೇ.100ರಷ್ಟು ಹಣಕಾಸು ಆಯೋಗದ ಶಿಫಾರಸುಗಳನ್ನು ಅನುಸರಿಸಬೇಕು ಮತ್ತು ಪ್ರತಿಯೊಬ್ಬ ಹಣಕಾಸು ಮಂತ್ರಿಯೂ ಅದನ್ನೇ ಮಾಡುತ್ತಾರೆ. ಯಾವುದೇ ಹಣಕಾಸು ಸಚಿವರು ಮಧ್ಯಪ್ರವೇಶಿಸುವ ಯಾವುದೇ ಸಾಧ್ಯತೆಯಿಲ್ಲ, ‘ನನಗೆ ಈ ರಾಜ್ಯ ಇಷ್ಟವಿಲ್ಲ, ಆದ್ದರಿಂದ ಪಾವತಿಯನ್ನು ನಿಲ್ಲಿಸಿ ಎಂದು ಹೇಳಲು ಯಾವುದೇ ಮಾರ್ಗವಿಲ್ಲ’ ಎಂದು ಹೇಳುವ ಮೂಲಕ ಆರೋಪಗಳನ್ನು ನಿರಾಕರಿಸಿದರು.

‘ಆರು ತಿಂಗಳ ಹಿಂದಿನವರೆಗೆ ಎಲ್ಲವೂ ‘ಹಂಕಿ ಡೋರಿ’ ಎಂದು ಅಧೀರ್‌ ಜಿ ಹೇಳುತ್ತಿದ್ದಾರೆ. ಹಾಗಿದ್ದಲ್ಲಿ ಏನು ತಪ್ಪಾಗಿದೆ? ನೀವು ಖರ್ಚು ಮಾಡಬಾರದ ವಸ್ತುಗಳಿಗೆ ಖರ್ಚು ಮಾಡಲು ಪ್ರಾರಂಭಿಸಿದ್ದೀರಾ? ನಾನು ಅದನ್ನು ಪ್ರಶ್ನಿಸುತ್ತಿಲ್ಲ… ಆದರೆ, ನೀವು ಅದನ್ನು ಖರ್ಚು ಮಾಡಿದ್ದೀರಿ. , ಆದ್ದರಿಂದ ಕೇಂದ್ರದ ಮೇಲೆ ಆಪಾದನೆಯನ್ನು ಹಾಕಬೇಡಿ, ಏಕೆಂದರೆ ಅದು ನಿಯಮ ಪುಸ್ತಕದ ಮೂಲಕ ಹೋಗುತ್ತದೆ’ ಎಂದು ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಪರೋಕ್ಷವಾಗಿ ಟೀಕಿಸಿದರು.

‘ಹಣಕಾಸು ಆಯೋಗವು ನನಗೆ ಶಿಫಾರಸು ಮಾಡದಿದ್ದರೆ ನಾನು ಏನನ್ನೂ ಮಾಡಲು ಸಾಧ್ಯವಿಲ್ಲ… ದಯವಿಟ್ಟು ಫೈನಾನ್ಸ್ ಕಮಿಷನ್ ಜೊತೆ ಮಾತನಾಡಿ…’ ಎಂದು ನಮಸ್ತೆ ಹೇಳುತ್ತಾ ಕುಳಿತರು.

ಇದನ್ನೂ ಓದಿ; ಪೇಟಿಎಂ ಸಂಸ್ಥಾಪಕ ಮೋದಿಯವರ ಭಕ್ತ, ಪ್ರಧಾನಿಯೊಂದಿಗೆ ಸೆಲ್ಫಿ ತೆಗೆದುಕೊಳ್ಳುತ್ತಾರೆ: ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...