Homeಮುಖಪುಟತೆರಿಗೆ ಹಂಚಿಕೆ ತಾರತಮ್ಯ ಇಲ್ಲ ಎಂದ ವಿತ್ತ ಸಚಿವೆ; 'ಪಟ್ಟಭದ್ರ ಹಿತಾಸಕ್ತಿಗಳ ವಿನಾಶಕಾರಿ ನಿರೂಪಣೆ' ಎಂದು...

ತೆರಿಗೆ ಹಂಚಿಕೆ ತಾರತಮ್ಯ ಇಲ್ಲ ಎಂದ ವಿತ್ತ ಸಚಿವೆ; ‘ಪಟ್ಟಭದ್ರ ಹಿತಾಸಕ್ತಿಗಳ ವಿನಾಶಕಾರಿ ನಿರೂಪಣೆ’ ಎಂದು ಆರೋಪ

- Advertisement -
- Advertisement -

ಬಿಜೆಪಿಯೇತರ ಆಡಳಿತವಿರುವ ರಾಜ್ಯ ಸರ್ಕಾರಗಳು, ನಿರ್ದಿಷ್ಟವಾಗಿ ದಕ್ಷಿಣ ಭಾರತದ ಸರ್ಕಾರಗಳು (ಆರ್ಥಿಕ) ತೆರಿಗೆ ಪಾಲಿನಿಂದ ವಂಚಿತವಾಗಿವೆ ಹಾಗೂ ಜಿಎಸ್‌ಟಿ ಪರಿಹಾರ ವಿಚಾರಗಳಿಗೆ ಸಂಬಂಧಿಸಿದಂತೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಕಾಂಗ್ರೆಸ್ ಸಂಸದ ಅಧೀರ್ ರಂಜನ್ ಚೌಧರಿ ಅವರು ಸೋಮವಾರ ಸಂಸತ್ತಿನಲ್ಲಿ ವಾಗ್ವಾದ ನಡೆಸಿದರು.

ಅಧೀರ್ ರಂಜನ್ ಚೌಧರಿ ಮಾತಿಗೆ ಕೆರಳಿದ ಸೀತಾರಾಮನ್, ‘ರಾಜ್ಯಗಳ ಆರ್ಥಿಕ ಪಾಲಿನ ಹಂಚಿಕೆಯು ಹಣಕಾಸು ಆಯೋಗದ ಶಿಫಾರಸಿನ ಪ್ರಕಾರ ನಡೆಯುತ್ತದೆ. ತೆರಿಗೆ ಆದಾಯದ ಹಂಚಿಕೆಯಲ್ಲಿ ಕೆಲವರಿಗೆ ವಿವೇಚನೆ ಇಲ್ಲ. ಪಟ್ಟಭದ್ರ ಹಿತಾಸಕ್ತಿ ಗುಂಪುಗಳು ಹರಡುತ್ತಿರುವ ರಾಜಕೀಯದ ವಿನಾಶಕಾರಿ ನಿರೂಪಣೆ’ ಎಂದು ಅವರು ಕೇಂದ್ರದ ವಿರುದ್ಧದ ಆರೋಪಗಳಿಗೆ ತಿರುಗೇಟು ಕೊಟ್ಟರು.

ಕರ್ನಾಟಕ, ಕೇರಳ ಹಾಗೂ ತಮಿಳುನಾಡು ರಾಜ್ಯಗಳಿಂದ ಕೇಳಿಬರುತ್ತಿರುವ ತೆರಿಗೆ ಹಂಚಿಕೆ ತಾರತಮ್ಯದ ಬಗ್ಗೆ ಮಾತನಾಡಿದ ಕಾಂಗ್ರೆಸ್ ನಾಯಕ ಚೌಧರಿ, ‘ಇದು ನಿರ್ಮಲಾ ಸೀತಾರಾಮನ್ ಮತ್ತು ಆಡಳಿತಾರೂಢ ಬಿಜೆಪಿಯನ್ನು ನಿರಂಕುಶ. ವಿರೋಧ-ಆಡಳಿತದ ರಾಜ್ಯಗಳ ಬಗ್ಗೆ ಇರುವ ತಾರತಮ್ಯದ ನಿಲುವು’ ಎಂದು ಎಂದು ಲೋಕಸಭೆಯಲ್ಲಿ ಆರೋಪಿಸಿದರು.

‘ಇತ್ತೀಚಿನ ಉದಾಹರಣೆ ಕರ್ನಾಟಕ… ನಿಮ್ಮ ಆಡಳಿತದ ನಿರ್ದಾಕ್ಷಿಣ್ಯ ಧೋರಣೆಯ ವಿರುದ್ಧ ಇಡೀ ಸಚಿವಾಲಯ ಆಂದೋಲನ ನಡೆಸುತ್ತಿದೆ. ಕೆಲವು ತಿಂಗಳ ಹಿಂದೆ ಎಲ್ಲವೂ ಹುನ್ನಾರವಾಗಿತ್ತು. ಆದರೆ, ಹೊಸ ಸರ್ಕಾರ ಬಂದ ನಂತರ ತೊಂದರೆ ಪ್ರಾರಂಭವಾಯಿತೆ’ ಎಂದು ಕಾಂಗ್ರೆಸ್ ನಾಯಕ ಪ್ರಶ್ನಿಸಿದರು.

‘ನನಗೆ ಈ ರಾಜ್ಯದ ಪರ ಒಲವಿಲ್ಲ; ಪಾವತಿಯನ್ನು ನಿಲ್ಲಿಸಿ’ ಎಂದು ಹೇಳಲು ಯಾವುದೇ ಹಣಕಾಸು ಸಚಿವರು ಮಧ್ಯಪ್ರವೇಶಿಸುವುದಕ್ಕೆ ಸಾಧ್ಯವಿಲ್ಲ, ಅದು ಅಸಾಧ್ಯ. ಆರ್ಥಿಕ ಹಂಚಿಕೆ ವ್ಯವಸ್ಥೆಯು ಉತ್ತಮವಾಗಿ ಇರಿಸಲ್ಪಟ್ಟಿದೆ’ ಎಂದು ಸೀತಾರಾಮನ್ ಲೋಕಸಭೆಯಲ್ಲಿ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಅವರಿಗೆ ಉತ್ತರಿಸಿದರು.

‘ಬಿಜೆಪಿಯೇತರ ಆಡಳಿತವಿರುವ ರಾಜ್ಯಗಳು ನ್ಯಾಯಸಮ್ಮತವಾದ ಬಾಕಿಯಿಂದ ವಂಚಿತವಾಗಿವೆ ಎಂಬ ಸಾಮಾನ್ಯ ಗ್ರಹಿಕೆ ಇದೆ’ ಎಂದು ಕರ್ನಾಟಕವನ್ನು ಉದಾಹರಣೆಯಾಗಿ ಉಲ್ಲೇಖಿಸಿ ಚೌಧರಿ ಹೇಳಿದರು. ‘ಕರ್ನಾಟಕ ರಾಜ್ಯವು ತನ್ನ ನ್ಯಾಯಸಮ್ಮತವಾದ ಬಾಕಿಗಳಿಂದ ವಂಚಿತವಾಗಿದೆ ಎಂಬುದು ನಿಜವೇ? ಆರು ತಿಂಗಳ ಹಿಂದೆ ಅದೆಲ್ಲವೂ ಹಂಕಿ ಡೋರಿ, ಈಗ ಏನಾಯಿತು ಎಂದು ಅವರು ಪ್ರಶ್ನಿಸಿದರು.

ಫೆಬ್ರವರಿ 7 ರಂದು ದೆಹಲಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಕರ್ನಾಟಕದ ಆಡಳಿತಾರೂಢ ಶಾಸಕರು ರಾಜ್ಯಕ್ಕೆ ನ್ಯಾಯುತ ತೆರಿಗೆ ಪಾಲು ನೀಡುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸುವ ಮುನ್ನ ಚೌಧರಿ ಅವರು ಕೇಂದ್ರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

‘ಯಾವುದೇ ಕೇಂದ್ರ ಹಣಕಾಸು ಸಚಿವರು ಆಯೋಗದ ಶಿಫಾರಸುಗಳೊಂದಿಗೆ ಆಟವಾಡಲು ಸಾಧ್ಯವಿಲ್ಲ’ ಎಂದು ಸೀತಾರಾಮನ್ ಹೇಳಿದರು.

‘ಕೆಲವು ರಾಜ್ಯಗಳ ವಿರುದ್ಧ ತಾರತಮ್ಯ ಮಾಡಲಾಗುತ್ತಿದೆ ಎಂಬ ಈ ಆತಂಕವು ರಾಜಕೀಯ ವಿರೋಧಿಗಳ ನಿರೂಪಣೆಯಾಗಿದೆ. ಇದನ್ನು ಹೇಳಲು ನನಗೆ ವಿಷಾದವಿದೆ, ಪಟ್ಟಭದ್ರ ಹಿತಾಸಕ್ತಿಗಳು ಹೇಳಲು ಸಂತೋಷಪಡುತ್ತವೆ’ ಎಂದು ಅವರು ಪ್ರಶ್ನೋತ್ತರ ಅವಧಿಯಲ್ಲಿ ಹೇಳಿದರು.

“ಎಸ್‌ಜಿಎಸ್‌ಟಿ ರಾಜ್ಯಗಳಿಗೆ 100 ಪ್ರತಿಶತದಷ್ಟು ಹೋಗುತ್ತದೆ… ಇದು ಸ್ವಯಂಚಾಲಿತ ನಿಬಂಧನೆಯಾಗಿದೆ. ಐಜಿಎಸ್‌ಟಿ ಅಂತರರಾಜ್ಯ ಪಾವತಿಗಳನ್ನು ಒಳಗೊಂಡಿರುತ್ತದೆ; ನಿಯತಕಾಲಿಕವಾಗಿ ಪರಿಶೀಲಿಸಲಾಗುತ್ತದೆ. ಏಕೆಂದರೆ, ರಾಜ್ಯಗಳು ತಮ್ಮ ಕೈಯಲ್ಲಿ ಹಣವನ್ನು ಪಡೆಯಬೇಕು. ಅದನ್ನು ವಿಂಗಡಿಸಲಾಗುತ್ತದೆ ಮತ್ತು ನಂತರ ನಿಯತಕಾಲಿಕವಾಗಿ ವಾಸ್ತವಕ್ಕೆ ಸರಿಹೊಂದಿಸಲಾಗುತ್ತದೆ. ‘ಸಿಜಿಎಸ್‌ಟಿ’ಯನ್ನು ಹಣಕಾಸು ಆಯೋಗದ ಪ್ರಕಾರ ವಿಂಗಡಿಸಲಾಗಿದೆ’ ಎಂದು ಅವರು ಸಂಸತ್ತಿಗೆ ತಿಳಿಸಿದರು.

‘ನಾನು ವಿನಮ್ರವಾಗಿ ತಿಳಿಸಲು ಬಯಸುತ್ತೇನೆ, ಆದ್ದರಿಂದ ಅಧೀರ್‌ ರವರೆ ದಯವಿಟ್ಟು ಅರ್ಥಮಾಡಿಕೊಳ್ಳಿ … ನನ್ನ ಇಚ್ಛೆ ಮತ್ತು ಕಲ್ಪನೆಗಳಿಗೆ ಅನುಗುಣವಾಗಿ ಹಂಚಿಕೆಗಳನ್ನು ಬದಲಾಯಿಸುವ ಹಕ್ಕು ನನಗಿಲ್ಲ. ನಾನು ಒಂದು ರಾಜ್ಯವನ್ನು ಇಷ್ಟಪಡುತ್ತೇನೆ ಅಥವಾ ಇನ್ನೊಂದು ನನ್ನ ಪಕ್ಷದ ರಾಜಕೀಯದ ವಿರುದ್ಧ ಎಂದು ಹೇಳಲು ಸಾಧ್ಯವಿಲ್ಲ’ ಎಂದು ಅವರು ಹೇಳಿದರು.

‘ನಾನು ಶೇ.100ರಷ್ಟು ಹಣಕಾಸು ಆಯೋಗದ ಶಿಫಾರಸುಗಳನ್ನು ಅನುಸರಿಸಬೇಕು ಮತ್ತು ಪ್ರತಿಯೊಬ್ಬ ಹಣಕಾಸು ಮಂತ್ರಿಯೂ ಅದನ್ನೇ ಮಾಡುತ್ತಾರೆ. ಯಾವುದೇ ಹಣಕಾಸು ಸಚಿವರು ಮಧ್ಯಪ್ರವೇಶಿಸುವ ಯಾವುದೇ ಸಾಧ್ಯತೆಯಿಲ್ಲ, ‘ನನಗೆ ಈ ರಾಜ್ಯ ಇಷ್ಟವಿಲ್ಲ, ಆದ್ದರಿಂದ ಪಾವತಿಯನ್ನು ನಿಲ್ಲಿಸಿ ಎಂದು ಹೇಳಲು ಯಾವುದೇ ಮಾರ್ಗವಿಲ್ಲ’ ಎಂದು ಹೇಳುವ ಮೂಲಕ ಆರೋಪಗಳನ್ನು ನಿರಾಕರಿಸಿದರು.

‘ಆರು ತಿಂಗಳ ಹಿಂದಿನವರೆಗೆ ಎಲ್ಲವೂ ‘ಹಂಕಿ ಡೋರಿ’ ಎಂದು ಅಧೀರ್‌ ಜಿ ಹೇಳುತ್ತಿದ್ದಾರೆ. ಹಾಗಿದ್ದಲ್ಲಿ ಏನು ತಪ್ಪಾಗಿದೆ? ನೀವು ಖರ್ಚು ಮಾಡಬಾರದ ವಸ್ತುಗಳಿಗೆ ಖರ್ಚು ಮಾಡಲು ಪ್ರಾರಂಭಿಸಿದ್ದೀರಾ? ನಾನು ಅದನ್ನು ಪ್ರಶ್ನಿಸುತ್ತಿಲ್ಲ… ಆದರೆ, ನೀವು ಅದನ್ನು ಖರ್ಚು ಮಾಡಿದ್ದೀರಿ. , ಆದ್ದರಿಂದ ಕೇಂದ್ರದ ಮೇಲೆ ಆಪಾದನೆಯನ್ನು ಹಾಕಬೇಡಿ, ಏಕೆಂದರೆ ಅದು ನಿಯಮ ಪುಸ್ತಕದ ಮೂಲಕ ಹೋಗುತ್ತದೆ’ ಎಂದು ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಪರೋಕ್ಷವಾಗಿ ಟೀಕಿಸಿದರು.

‘ಹಣಕಾಸು ಆಯೋಗವು ನನಗೆ ಶಿಫಾರಸು ಮಾಡದಿದ್ದರೆ ನಾನು ಏನನ್ನೂ ಮಾಡಲು ಸಾಧ್ಯವಿಲ್ಲ… ದಯವಿಟ್ಟು ಫೈನಾನ್ಸ್ ಕಮಿಷನ್ ಜೊತೆ ಮಾತನಾಡಿ…’ ಎಂದು ನಮಸ್ತೆ ಹೇಳುತ್ತಾ ಕುಳಿತರು.

ಇದನ್ನೂ ಓದಿ; ಪೇಟಿಎಂ ಸಂಸ್ಥಾಪಕ ಮೋದಿಯವರ ಭಕ್ತ, ಪ್ರಧಾನಿಯೊಂದಿಗೆ ಸೆಲ್ಫಿ ತೆಗೆದುಕೊಳ್ಳುತ್ತಾರೆ: ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...