Homeಮುಖಪುಟತೆರಿಗೆ ಹಂಚಿಕೆ ತಾರತಮ್ಯ ಇಲ್ಲ ಎಂದ ವಿತ್ತ ಸಚಿವೆ; 'ಪಟ್ಟಭದ್ರ ಹಿತಾಸಕ್ತಿಗಳ ವಿನಾಶಕಾರಿ ನಿರೂಪಣೆ' ಎಂದು...

ತೆರಿಗೆ ಹಂಚಿಕೆ ತಾರತಮ್ಯ ಇಲ್ಲ ಎಂದ ವಿತ್ತ ಸಚಿವೆ; ‘ಪಟ್ಟಭದ್ರ ಹಿತಾಸಕ್ತಿಗಳ ವಿನಾಶಕಾರಿ ನಿರೂಪಣೆ’ ಎಂದು ಆರೋಪ

- Advertisement -
- Advertisement -

ಬಿಜೆಪಿಯೇತರ ಆಡಳಿತವಿರುವ ರಾಜ್ಯ ಸರ್ಕಾರಗಳು, ನಿರ್ದಿಷ್ಟವಾಗಿ ದಕ್ಷಿಣ ಭಾರತದ ಸರ್ಕಾರಗಳು (ಆರ್ಥಿಕ) ತೆರಿಗೆ ಪಾಲಿನಿಂದ ವಂಚಿತವಾಗಿವೆ ಹಾಗೂ ಜಿಎಸ್‌ಟಿ ಪರಿಹಾರ ವಿಚಾರಗಳಿಗೆ ಸಂಬಂಧಿಸಿದಂತೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಕಾಂಗ್ರೆಸ್ ಸಂಸದ ಅಧೀರ್ ರಂಜನ್ ಚೌಧರಿ ಅವರು ಸೋಮವಾರ ಸಂಸತ್ತಿನಲ್ಲಿ ವಾಗ್ವಾದ ನಡೆಸಿದರು.

ಅಧೀರ್ ರಂಜನ್ ಚೌಧರಿ ಮಾತಿಗೆ ಕೆರಳಿದ ಸೀತಾರಾಮನ್, ‘ರಾಜ್ಯಗಳ ಆರ್ಥಿಕ ಪಾಲಿನ ಹಂಚಿಕೆಯು ಹಣಕಾಸು ಆಯೋಗದ ಶಿಫಾರಸಿನ ಪ್ರಕಾರ ನಡೆಯುತ್ತದೆ. ತೆರಿಗೆ ಆದಾಯದ ಹಂಚಿಕೆಯಲ್ಲಿ ಕೆಲವರಿಗೆ ವಿವೇಚನೆ ಇಲ್ಲ. ಪಟ್ಟಭದ್ರ ಹಿತಾಸಕ್ತಿ ಗುಂಪುಗಳು ಹರಡುತ್ತಿರುವ ರಾಜಕೀಯದ ವಿನಾಶಕಾರಿ ನಿರೂಪಣೆ’ ಎಂದು ಅವರು ಕೇಂದ್ರದ ವಿರುದ್ಧದ ಆರೋಪಗಳಿಗೆ ತಿರುಗೇಟು ಕೊಟ್ಟರು.

ಕರ್ನಾಟಕ, ಕೇರಳ ಹಾಗೂ ತಮಿಳುನಾಡು ರಾಜ್ಯಗಳಿಂದ ಕೇಳಿಬರುತ್ತಿರುವ ತೆರಿಗೆ ಹಂಚಿಕೆ ತಾರತಮ್ಯದ ಬಗ್ಗೆ ಮಾತನಾಡಿದ ಕಾಂಗ್ರೆಸ್ ನಾಯಕ ಚೌಧರಿ, ‘ಇದು ನಿರ್ಮಲಾ ಸೀತಾರಾಮನ್ ಮತ್ತು ಆಡಳಿತಾರೂಢ ಬಿಜೆಪಿಯನ್ನು ನಿರಂಕುಶ. ವಿರೋಧ-ಆಡಳಿತದ ರಾಜ್ಯಗಳ ಬಗ್ಗೆ ಇರುವ ತಾರತಮ್ಯದ ನಿಲುವು’ ಎಂದು ಎಂದು ಲೋಕಸಭೆಯಲ್ಲಿ ಆರೋಪಿಸಿದರು.

‘ಇತ್ತೀಚಿನ ಉದಾಹರಣೆ ಕರ್ನಾಟಕ… ನಿಮ್ಮ ಆಡಳಿತದ ನಿರ್ದಾಕ್ಷಿಣ್ಯ ಧೋರಣೆಯ ವಿರುದ್ಧ ಇಡೀ ಸಚಿವಾಲಯ ಆಂದೋಲನ ನಡೆಸುತ್ತಿದೆ. ಕೆಲವು ತಿಂಗಳ ಹಿಂದೆ ಎಲ್ಲವೂ ಹುನ್ನಾರವಾಗಿತ್ತು. ಆದರೆ, ಹೊಸ ಸರ್ಕಾರ ಬಂದ ನಂತರ ತೊಂದರೆ ಪ್ರಾರಂಭವಾಯಿತೆ’ ಎಂದು ಕಾಂಗ್ರೆಸ್ ನಾಯಕ ಪ್ರಶ್ನಿಸಿದರು.

‘ನನಗೆ ಈ ರಾಜ್ಯದ ಪರ ಒಲವಿಲ್ಲ; ಪಾವತಿಯನ್ನು ನಿಲ್ಲಿಸಿ’ ಎಂದು ಹೇಳಲು ಯಾವುದೇ ಹಣಕಾಸು ಸಚಿವರು ಮಧ್ಯಪ್ರವೇಶಿಸುವುದಕ್ಕೆ ಸಾಧ್ಯವಿಲ್ಲ, ಅದು ಅಸಾಧ್ಯ. ಆರ್ಥಿಕ ಹಂಚಿಕೆ ವ್ಯವಸ್ಥೆಯು ಉತ್ತಮವಾಗಿ ಇರಿಸಲ್ಪಟ್ಟಿದೆ’ ಎಂದು ಸೀತಾರಾಮನ್ ಲೋಕಸಭೆಯಲ್ಲಿ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಅವರಿಗೆ ಉತ್ತರಿಸಿದರು.

‘ಬಿಜೆಪಿಯೇತರ ಆಡಳಿತವಿರುವ ರಾಜ್ಯಗಳು ನ್ಯಾಯಸಮ್ಮತವಾದ ಬಾಕಿಯಿಂದ ವಂಚಿತವಾಗಿವೆ ಎಂಬ ಸಾಮಾನ್ಯ ಗ್ರಹಿಕೆ ಇದೆ’ ಎಂದು ಕರ್ನಾಟಕವನ್ನು ಉದಾಹರಣೆಯಾಗಿ ಉಲ್ಲೇಖಿಸಿ ಚೌಧರಿ ಹೇಳಿದರು. ‘ಕರ್ನಾಟಕ ರಾಜ್ಯವು ತನ್ನ ನ್ಯಾಯಸಮ್ಮತವಾದ ಬಾಕಿಗಳಿಂದ ವಂಚಿತವಾಗಿದೆ ಎಂಬುದು ನಿಜವೇ? ಆರು ತಿಂಗಳ ಹಿಂದೆ ಅದೆಲ್ಲವೂ ಹಂಕಿ ಡೋರಿ, ಈಗ ಏನಾಯಿತು ಎಂದು ಅವರು ಪ್ರಶ್ನಿಸಿದರು.

ಫೆಬ್ರವರಿ 7 ರಂದು ದೆಹಲಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಕರ್ನಾಟಕದ ಆಡಳಿತಾರೂಢ ಶಾಸಕರು ರಾಜ್ಯಕ್ಕೆ ನ್ಯಾಯುತ ತೆರಿಗೆ ಪಾಲು ನೀಡುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸುವ ಮುನ್ನ ಚೌಧರಿ ಅವರು ಕೇಂದ್ರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

‘ಯಾವುದೇ ಕೇಂದ್ರ ಹಣಕಾಸು ಸಚಿವರು ಆಯೋಗದ ಶಿಫಾರಸುಗಳೊಂದಿಗೆ ಆಟವಾಡಲು ಸಾಧ್ಯವಿಲ್ಲ’ ಎಂದು ಸೀತಾರಾಮನ್ ಹೇಳಿದರು.

‘ಕೆಲವು ರಾಜ್ಯಗಳ ವಿರುದ್ಧ ತಾರತಮ್ಯ ಮಾಡಲಾಗುತ್ತಿದೆ ಎಂಬ ಈ ಆತಂಕವು ರಾಜಕೀಯ ವಿರೋಧಿಗಳ ನಿರೂಪಣೆಯಾಗಿದೆ. ಇದನ್ನು ಹೇಳಲು ನನಗೆ ವಿಷಾದವಿದೆ, ಪಟ್ಟಭದ್ರ ಹಿತಾಸಕ್ತಿಗಳು ಹೇಳಲು ಸಂತೋಷಪಡುತ್ತವೆ’ ಎಂದು ಅವರು ಪ್ರಶ್ನೋತ್ತರ ಅವಧಿಯಲ್ಲಿ ಹೇಳಿದರು.

“ಎಸ್‌ಜಿಎಸ್‌ಟಿ ರಾಜ್ಯಗಳಿಗೆ 100 ಪ್ರತಿಶತದಷ್ಟು ಹೋಗುತ್ತದೆ… ಇದು ಸ್ವಯಂಚಾಲಿತ ನಿಬಂಧನೆಯಾಗಿದೆ. ಐಜಿಎಸ್‌ಟಿ ಅಂತರರಾಜ್ಯ ಪಾವತಿಗಳನ್ನು ಒಳಗೊಂಡಿರುತ್ತದೆ; ನಿಯತಕಾಲಿಕವಾಗಿ ಪರಿಶೀಲಿಸಲಾಗುತ್ತದೆ. ಏಕೆಂದರೆ, ರಾಜ್ಯಗಳು ತಮ್ಮ ಕೈಯಲ್ಲಿ ಹಣವನ್ನು ಪಡೆಯಬೇಕು. ಅದನ್ನು ವಿಂಗಡಿಸಲಾಗುತ್ತದೆ ಮತ್ತು ನಂತರ ನಿಯತಕಾಲಿಕವಾಗಿ ವಾಸ್ತವಕ್ಕೆ ಸರಿಹೊಂದಿಸಲಾಗುತ್ತದೆ. ‘ಸಿಜಿಎಸ್‌ಟಿ’ಯನ್ನು ಹಣಕಾಸು ಆಯೋಗದ ಪ್ರಕಾರ ವಿಂಗಡಿಸಲಾಗಿದೆ’ ಎಂದು ಅವರು ಸಂಸತ್ತಿಗೆ ತಿಳಿಸಿದರು.

‘ನಾನು ವಿನಮ್ರವಾಗಿ ತಿಳಿಸಲು ಬಯಸುತ್ತೇನೆ, ಆದ್ದರಿಂದ ಅಧೀರ್‌ ರವರೆ ದಯವಿಟ್ಟು ಅರ್ಥಮಾಡಿಕೊಳ್ಳಿ … ನನ್ನ ಇಚ್ಛೆ ಮತ್ತು ಕಲ್ಪನೆಗಳಿಗೆ ಅನುಗುಣವಾಗಿ ಹಂಚಿಕೆಗಳನ್ನು ಬದಲಾಯಿಸುವ ಹಕ್ಕು ನನಗಿಲ್ಲ. ನಾನು ಒಂದು ರಾಜ್ಯವನ್ನು ಇಷ್ಟಪಡುತ್ತೇನೆ ಅಥವಾ ಇನ್ನೊಂದು ನನ್ನ ಪಕ್ಷದ ರಾಜಕೀಯದ ವಿರುದ್ಧ ಎಂದು ಹೇಳಲು ಸಾಧ್ಯವಿಲ್ಲ’ ಎಂದು ಅವರು ಹೇಳಿದರು.

‘ನಾನು ಶೇ.100ರಷ್ಟು ಹಣಕಾಸು ಆಯೋಗದ ಶಿಫಾರಸುಗಳನ್ನು ಅನುಸರಿಸಬೇಕು ಮತ್ತು ಪ್ರತಿಯೊಬ್ಬ ಹಣಕಾಸು ಮಂತ್ರಿಯೂ ಅದನ್ನೇ ಮಾಡುತ್ತಾರೆ. ಯಾವುದೇ ಹಣಕಾಸು ಸಚಿವರು ಮಧ್ಯಪ್ರವೇಶಿಸುವ ಯಾವುದೇ ಸಾಧ್ಯತೆಯಿಲ್ಲ, ‘ನನಗೆ ಈ ರಾಜ್ಯ ಇಷ್ಟವಿಲ್ಲ, ಆದ್ದರಿಂದ ಪಾವತಿಯನ್ನು ನಿಲ್ಲಿಸಿ ಎಂದು ಹೇಳಲು ಯಾವುದೇ ಮಾರ್ಗವಿಲ್ಲ’ ಎಂದು ಹೇಳುವ ಮೂಲಕ ಆರೋಪಗಳನ್ನು ನಿರಾಕರಿಸಿದರು.

‘ಆರು ತಿಂಗಳ ಹಿಂದಿನವರೆಗೆ ಎಲ್ಲವೂ ‘ಹಂಕಿ ಡೋರಿ’ ಎಂದು ಅಧೀರ್‌ ಜಿ ಹೇಳುತ್ತಿದ್ದಾರೆ. ಹಾಗಿದ್ದಲ್ಲಿ ಏನು ತಪ್ಪಾಗಿದೆ? ನೀವು ಖರ್ಚು ಮಾಡಬಾರದ ವಸ್ತುಗಳಿಗೆ ಖರ್ಚು ಮಾಡಲು ಪ್ರಾರಂಭಿಸಿದ್ದೀರಾ? ನಾನು ಅದನ್ನು ಪ್ರಶ್ನಿಸುತ್ತಿಲ್ಲ… ಆದರೆ, ನೀವು ಅದನ್ನು ಖರ್ಚು ಮಾಡಿದ್ದೀರಿ. , ಆದ್ದರಿಂದ ಕೇಂದ್ರದ ಮೇಲೆ ಆಪಾದನೆಯನ್ನು ಹಾಕಬೇಡಿ, ಏಕೆಂದರೆ ಅದು ನಿಯಮ ಪುಸ್ತಕದ ಮೂಲಕ ಹೋಗುತ್ತದೆ’ ಎಂದು ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಪರೋಕ್ಷವಾಗಿ ಟೀಕಿಸಿದರು.

‘ಹಣಕಾಸು ಆಯೋಗವು ನನಗೆ ಶಿಫಾರಸು ಮಾಡದಿದ್ದರೆ ನಾನು ಏನನ್ನೂ ಮಾಡಲು ಸಾಧ್ಯವಿಲ್ಲ… ದಯವಿಟ್ಟು ಫೈನಾನ್ಸ್ ಕಮಿಷನ್ ಜೊತೆ ಮಾತನಾಡಿ…’ ಎಂದು ನಮಸ್ತೆ ಹೇಳುತ್ತಾ ಕುಳಿತರು.

ಇದನ್ನೂ ಓದಿ; ಪೇಟಿಎಂ ಸಂಸ್ಥಾಪಕ ಮೋದಿಯವರ ಭಕ್ತ, ಪ್ರಧಾನಿಯೊಂದಿಗೆ ಸೆಲ್ಫಿ ತೆಗೆದುಕೊಳ್ಳುತ್ತಾರೆ: ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕ್ಯಾಬಿನೆಟ್‌ನಲ್ಲಿ ಮಹಿಳೆಯರಿಗಿಲ್ಲ ಸ್ಥಾನ: ಸಿಎಂ ಡಿ.ಕೆ. ಶಿವಕುಮಾರ್ ಗೆ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆಯಿಂದ ಬಹಿರಂಗ ಪತ್ರ

ಕರ್ನಾಟಕದ ನೂತನ ಸಚಿವ ಸಂಪುಟದಲ್ಲಿ ಒಬ್ಬರೇ ಒಬ್ಬರು ಮಹಿಳಾ ಶಾಸಕರಿಗೆ ಅವಕಾಶ ನೀಡದಿರುವುದನ್ನು ತೀವ್ರವಾಗಿ ಖಂಡಿಸಿರುವ ರಾಜ್ಯದ ಪ್ರಮುಖ ಮಹಿಳಾ ಹಾಗೂ ಜನಪರ ಸಂಘಟನೆಗಳ ಒಕ್ಕೂಟ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆ ಮುಖ್ಯಮಂತ್ರಿಗಳಿಗೆ ಬಹಿರಂಗ...

ಜಾರ್ಖಂಡ್ | ಜೆಪಿಎಸ್‌ಸಿ, ಜೆಎಸ್‌ಎಸ್‌ಸಿ ಪರೀಕ್ಷಾ ಅಕ್ರಮಗಳ ವಿರುದ್ಧ ತೀವ್ರಗೊಂಡ ಪ್ರತಿಭಟನೆ : ಆರು ಮಂದಿಯಿಂದ ಉಪವಾಸ ಸತ್ಯಾಗ್ರಹ

ಜಾರ್ಖಂಡ್ ಲೋಕ ಸೇವಾ ಆಯೋಗ (ಜೆಪಿಎಸ್‌ಸಿ) ಮತ್ತು ಜಾರ್ಖಂಡ್ ಸಿಬ್ಬಂದಿ ಆಯ್ಕೆ ಆಯೋಗ (ಜೆಎಸ್ಎಸ್‌ಸಿ) ನಡೆಸಿದ ವಿವಿಧ ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿರುವ ಆಪಾದಿತ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮಗಳ ವಿರುದ್ಧದ ಪ್ರತಿಭಟನೆಯು ತೀವ್ರ...

ಸಚಿವ ಸ್ಥಾನ ಸಿಗದಿದ್ದಕ್ಕೆ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂಬುದು ಸುಳ್ಳು: ಶಾಸಕ ಬಿ. ಆರ್‌ ಪಾಟೀಲ್‌ ಸ್ಪಷ್ಟನೆ

ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ಸಲ್ಲಿಸಿರುವುದು ನಿಜ. ಆದರೆ, ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತಿದ್ದೇನೆ ಎಂದು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸುದ್ದಿಗಳು...

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...