Homeಮುಖಪುಟಹಣಕಾಸು ಅಕ್ರಮ | ಹಿರಿಯ ಬ್ಯಾಂಕ್ ಅಧಿಕಾರಿಯನ್ನು ಪ್ರಶ್ನಿಸಿದ ಪತ್ರಕರ್ತನ ಬಂಧನ

ಹಣಕಾಸು ಅಕ್ರಮ | ಹಿರಿಯ ಬ್ಯಾಂಕ್ ಅಧಿಕಾರಿಯನ್ನು ಪ್ರಶ್ನಿಸಿದ ಪತ್ರಕರ್ತನ ಬಂಧನ

- Advertisement -
- Advertisement -

ಸಹಕಾರಿ ಬ್ಯಾಂಕ್‌ ಒಂದರಲ್ಲಿ ಹಣಕಾಸಿನ ಅಕ್ರಮ ನಡೆದಿದೆ ಎಂದು ಆರೋಪಿಸಿ ಪ್ರತಿಭಟನೆ ನಡೆಯುತ್ತಿದ್ದ ವೇಳೆ, ಬ್ಯಾಂಕಿನ ವ್ಯವಸ್ಥಾಪಕ ನಿರ್ದೇಶಕರನ್ನು ಪ್ರಶ್ನಿಸಿದ ಅಸ್ಸಾಂನ ಡಿಜಿಟಲ್ ನ್ಯೂಸ್ ಪೋರ್ಟಲ್ ಪತ್ರಕರ್ತನನ್ನು ಬಂಧಿಸಲಾಗಿದೆ.

‘ದಿ ಕ್ರಾಸ್ ಕರೆಂಟ್’ ಎಂಬ ಡಿಜಿಟಲ್ ಸುದ್ದಿ ಸಂಸ್ಥೆಯ ಮುಖ್ಯ ವರದಿಗಾರ ದಿಲ್ವಾರ್ ಹುಸೇನ್ ಮೊಜುಂದಾರ್ ಅವರನ್ನು ಮಂಗಳವಾರ ಮಧ್ಯಾಹ್ನ ಪನ್‌ಬಜಾರ್ ಪೊಲೀಸ್ ಠಾಣೆಗೆ ಕರೆಸಿ, ಸುಮಾರು ಗಂಟೆಗಳ ಕಾಲ ಠಾಣೆಯಲ್ಲಿ ಕೂರಿಸಿ ನಂತರ ಬಂಧಿಸಲಾಗಿದೆ ಎಂದು ವರದಿಯಾಗಿದೆ.

ಗುವಾಹಟಿ ಪ್ರೆಸ್ ಕ್ಲಬ್‌ನ ಸಹಾಯಕ ಪ್ರಧಾನ ಕಾರ್ಯದರ್ಶಿಯೂ ಆಗಿರುವ ಮೊಜುಂದಾರ್ ಅವರನ್ನು ಮಧ್ಯರಾತ್ರಿಯ ಬಳಿಕ, ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) ನ ವಿವಿಧ ಸೆಕ್ಷನ್‌ಗಳು ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯ ಸೆಕ್ಷನ್‌ಗಳಡಿ ಬಂಧಿಸಲಾಗಿದೆ ಎಂದು ವರದಿ ಹೇಳಿದೆ.

ಅಸ್ಸಾಂ ರಾಷ್ಟ್ರೀಯ ಪರಿಷತ್ತಿನ ಯುವ ಘಟಕವಾದ ರಾಷ್ಟ್ರೀಯ ಯುವ ಶಕ್ತಿ (ಜೆವೈಎಸ್) ಮಂಗಳವಾರ ಅಸ್ಸಾಂ ಸಹಕಾರಿ ಅಪೆಕ್ಸ್ ಬ್ಯಾಂಕ್ ಲಿಮಿಟೆಡ್ ಮುಂದೆ ಆರ್ಥಿಕ ಅಕ್ರಮಗಳ ವಿರುದ್ಧ ಧರಣಿ ನಡೆಸುತ್ತಿದ್ದಾಗ ಪತ್ರಕರ್ತ ದಿಲ್ವಾರ್ ಹುಸೇನ್ ಅವರು ಬ್ಯಾಂಕಿನ ವ್ಯವಸ್ಥಾಪಕ ನಿರ್ದೇಶಕರಿಗೆ ಪ್ರಶ್ನೆಗಳನ್ನು ಕೇಳಿದ್ದಾರೆ. ಆ ಬಳಿಕ ಅವರನ್ನು ಬಂಧಿಸಲಾಗಿದೆ ಎನ್ನಲಾಗಿದೆ.

ಪೊಲೀಸರು ದಾಖಲಿಸಿರುವ ಎಫ್‌ಐಆರ್‌ನಲ್ಲಿ ಮೊಜುಂದಾರ್ ಅವರನ್ನು ಪ್ರಮುಖ ಆರೋಪಿ ಎಂದು ಹೆಸರಿಸಲಾಗಿದೆ. ಪರಿಶಿಷ್ಟ ಪಂಗಡ (ಎಸ್‌ಟಿ) ಸಮುದಾಯಕ್ಕೆ ಸೇರಿದ ದೂರುದಾರರನ್ನು ಪತ್ರಕರ್ತ ಉದ್ದೇಶಪೂರ್ವಕವಾಗಿ ಅವಮಾನಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಪೊಲೀಸ್ ವರದಿಯಲ್ಲಿ, ಬಿಎನ್ಎಸ್ ಮತ್ತು ಎಸ್ಸಿ/ಎಸ್ಟಿ ಕಾಯ್ದೆಯ ನಿಬಂಧನೆಗಳ ಪ್ರಕಾರ ಅಪರಾಧವು ಸಂಜ್ಞೇಯ ಮತ್ತು ಜಾಮೀನು ರಹಿತವಾಗಿದೆ ಎಂದು ಉಲ್ಲೇಖಿಸಲಾಗಿದೆ. ಇದರಿಂದಾಗಿ ಪತ್ರಕರ್ತನನ್ನು ತಕ್ಷಣ ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆರೋಪಿ ದೂರುದಾರರು ಅಥವಾ ಸಾಕ್ಷಿಗಳ ಮೇಲೆ ಪ್ರಭಾವ ಬೀರದಂತೆ ತಡೆಯಲು, ನ್ಯಾಯಯುತ ತನಿಖೆಯನ್ನು ಖಚಿತಪಡಿಸಿಕೊಳ್ಳಲು ಮತ್ತು ಸಾಕ್ಷ್ಯಗಳನ್ನು ಹಾಳು ಮಾಡುವುದನ್ನು ತಪ್ಪಿಸಲು ಬಂಧನ ಅಗತ್ಯವಾಗಿತ್ತು ಎಂದು ಪೊಲೀಸರು ಹೇಳೀದ್ದಾರೆ.

ಬ್ಯಾಂಕಿನ ಎಂ.ಡಿ ಕಚೇರಿಗೆ ಕರೆಸಿ ಪ್ರತಿಭಟನೆಯ ವಿಡಿಯೋ ಡಿಲಿಟ್ ಮಾಡುವಂತೆ ನನ್ನನ್ನು ಒತ್ತಾಯಿಸಲಾಗಿದೆ. ಪ್ರತಿಭಟನೆ ನಿಲ್ಲಿಸುವಂತೆ ನನಗೆ ಒತ್ತಾಯಿಸಲಾಗಿದೆ ಎಂದು ಪತ್ರಕರ್ತ ದಿಲ್ವಾರ್ ಹುಸೇನ್ ಕೂಡ ಪ್ರತಿದೂರು ನೀಡಿದ್ದಾರೆ. ಆದರೆ, ಅದನ್ನು ಇನ್ನೂ ದಾಖಲು ಮಾಡಿಕೊಂಡಿಲ್ಲ ಎನ್ನಲಾಗಿದೆ.

ದಿಲ್ವಾರ್ ಹುಸೇನ್ ಅವರಿಗೆ ಔಷಧಿ ಬೇಕು ಎಂದು ಪದೇ ಪದೇ ಮನವಿ ಮಾಡಿದ ನಂತರ, ಮಂಗಳವಾರ ತಡರಾತ್ರಿ ಅವರ ಪತ್ನಿ ಮತ್ತು ವಕೀಲರಿಗೆ ಪೊಲೀಸ್ ಠಾಣೆಗೆ ಪ್ರವೇಶಿಸಲು ಅವಕಾಶ ನೀಡಲಾಯಿತು ಎಂದು ವರದಿಯಾಗಿದೆ.

ಹಲವಾರು ಮಾಧ್ಯಮ ಸಂಸ್ಥೆಗಳು ಪತ್ರಕರ್ತನ ಬಂಧನವನ್ನು ಖಂಡಿಸಿವೆ ಮತ್ತು ಬುಧವಾರ ಪ್ರತಿಭಟನೆ ಆಯೋಜಿಸಿದೆ. ಕಾಂಗ್ರೆಸ್, ರೈಜೋರ್ ದಳ ಮತ್ತು ಅಸ್ಸಾಂ ರಾಷ್ಟ್ರೀಯ ಪರಿಷತ್‌ನಂತಹ ವಿರೋಧ ಪಕ್ಷಗಳು ಕೂಡ ಅವರನ್ನು ತಕ್ಷಣ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿವೆ.

ಹೈಕೋರ್ಟ್ ನ್ಯಾಯಮೂರ್ತಿ ನಿವಾಸದಲ್ಲಿ ನಗದು ಪತ್ತೆ ಪ್ರಕರಣ: ಎಫ್‌ಐಆರ್ ದಾಖಲಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ನಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...