Homeಕರೋನಾ ತಲ್ಲಣಲಾಕ್‌ಡೌನ್‌ನಿಂದ ಆರ್ಥಿಕ ಸಮಸ್ಯೆ: ಹೈಕೋರ್ಟ್ ಮುಂದೆ ತರಕಾರಿ ಮಾರಿದ ವಕೀಲ!

ಲಾಕ್‌ಡೌನ್‌ನಿಂದ ಆರ್ಥಿಕ ಸಮಸ್ಯೆ: ಹೈಕೋರ್ಟ್ ಮುಂದೆ ತರಕಾರಿ ಮಾರಿದ ವಕೀಲ!

ನ್ಯಾಯಾಲಯಗಳು ಸ್ಥಗಿತಗೊಂಡಿದ್ದರಿಂದ, ತುರ್ತು ವಿಷಯಗಳಿಗೆ ಮಾತ್ರ ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಹಾಜರಾಗಿ ಕಾರ್ಯನಿರ್ವಹಿಸುತ್ತಿರುವುದರಿಂದ ನಗರದ ಹಲವು ವಕೀಲರಿಗೆ ಮೂರು ತಿಂಗಳಿನಿಂದ ಯಾವುದೇ ಕೆಲಸವಿಲ್ಲ.

- Advertisement -
- Advertisement -

ಸಾಂಕ್ರಾಮಿಕ ರೋಗದ ಸಮಯದಲ್ಲಿ ಅಗತ್ಯವಿರುವ ವಕೀಲರಿಗೆ ಹಣಕಾಸಿನ ನೆರವು ನೀಡುವಲ್ಲಿ ರಾಜ್ಯ ಬಾರ್ ಕೌನ್ಸಿಲ್ ವಿಳಂಬ ಮಾಡಿರುವುದನ್ನು ವಿರೋಧಿಸಿ ಹಲವಾರು ವಕೀಲರು ಒರಿಸ್ಸಾ ಹೈಕೋರ್ಟ್‌ನ ಹೊರಗೆ ತರಕಾರಿಗಳನ್ನು ಮಾರಾಟ ಮಾಡುವ ಮೂಲಕ ವಿನೂತನವಾಗಿ ಪ್ರತಿಭಟಿಸಿದ್ದಾರೆ.

ಬೆಳಿಗ್ಗೆ 8 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ತರಕಾರಿಗಳನ್ನು ಮಾರಾಟ ಮಾಡಿದ ಸಪನ್ ಕುಮಾರ್ ಪಾಲ್, “ಹೈಕೋರ್ಟ್ ಮತ್ತು ಕೆಳ ನ್ಯಾಯಾಲಯಗಳು ಸ್ಥಗಿತಗೊಂಡಿದ್ದರಿಂದ, ತುರ್ತು ವಿಷಯಗಳಿಗೆ ಮಾತ್ರ ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಹಾಜರಾಗಿ ಕಾರ್ಯನಿರ್ವಹಿಸುತ್ತಿವೆ. ಇದರಿಂದ ನಗರದ ಹಲವು ವಕೀಲರಿಗೆ ಮೂರು ತಿಂಗಳಿನಿಂದ ಯಾವುದೇ ಕೆಲಸವಿಲ್ಲ. ಆದರೆ ಕೌನ್ಸಿಲ್ ಇನ್ನೂ ನಮಗೆ  ಹಣಕಾಸಿನ ನೆರವು ನೀಡಿಲ್ಲ. ಹಾಗಾಗಿ ಮುಂದೆ ನಾವು ಈಗ ತರಕಾರಿಗಳನ್ನು ಮಾರಾಟ ಮಾಡಬೇಕಾಗಬಹುದು ಎಂದು ತೋರುತ್ತಿದೆ” ಎಂದು ಹೇಳಿದ್ದಾರೆ.

ಏಪ್ರಿಲ್ 5 ರಂದು, ಬಾರ್ ಕೌನ್ಸಿಲ್ ಆಫ್ ಇಂಡಿಯಾ ಒಡಿಶಾ, ಸ್ಟೇಟ್ ಬಾರ್ ಕೌನ್ಸಿಲ್ ತುರ್ತು ಹಣಕಾಸು ನೆರವು ನಿಯಮಗಳು-2020ನ್ನು ಅಂಗೀಕರಿಸಿತು. ಇದರ ಅಡಿಯಲ್ಲಿ, ಬಿಕ್ಕಟ್ಟಿನ ಸಂದರ್ಭದಲ್ಲಿ ಜೀವನೋಪಾಯಕ್ಕಾಗಿ ಹಣಕಾಸಿನ ನೆರವು ಅಗತ್ಯವಿರುವ ವಕೀಲರಿಗೆ ಕಾರ್ಯವಿಧಾನಕ್ಕೆ ಅನುಗುಣವಾಗಿ ರೂ.10,000 ನೀಡಲಾಗುತ್ತದೆ ಎಂದು ನಿಯಮಗಳಲ್ಲಿ ಸೂಚಿಸಲಾಗಿದೆ.

ಈ ಕುರಿತು ಕೌನ್ಸಿಲ್ ಮೇ 10 ರವರೆಗೆ ರಾಜ್ಯದಾದ್ಯಂತ ವಿವಿಧ ಬಾರ್ ಅಸೋಸಿಯೇಷನ್‌ಗಳ ವಕೀಲರಿಂದ ಸಹಾಯ ಬೇಕಿದ್ದವರಿಂದ ಅರ್ಜಿಗಳನ್ನು ಆಹ್ವಾನಿಸಿತ್ತು.

ಇದುವರೆಗೆ 15,000 ಅರ್ಜಿಗಳನ್ನು ಸ್ವೀಕರಿಸಲಾಗಿದೆ. ಆರ್ಥಿಕ ನೆರವು ಬಯಸುವ ಅರ್ಹ ವಕೀಲರ ಪಟ್ಟಿಯನ್ನು ಸಿದ್ಧಪಡಿಸುವ ಪರಿಶೀಲನೆ ನಡೆಯುತ್ತಿದೆ ಎಂದು ರಾಜ್ಯ ಬಾರ್ ಕೌನ್ಸಿಲ್ ಮೂಲಗಳು ತಿಳಿಸಿವೆ.

ಈ ಉದ್ದೇಶಕ್ಕಾಗಿ ಒಡಿಶಾ ರಾಜ್ಯ ಬಾರ್ ಕೌನ್ಸಿಲ್, ವಕೀಲರ ‘ವೆಲ್ಫೇರ್ ಕಾರ್ಪಸ್ ನಿಧಿ’ಯನ್ನು ರಚಿಸಲಾಗಿತ್ತು. ಕಳೆದ 15 ವರ್ಷಗಳಿಂದ ಇಲ್ಲಿಯವರೆಗೆ, ಹೆಚ್ಚು ಅನುಭವ ಹೊಂದಿರುವ ವಕೀಲರಿಗೆ ಈ ನಿಧಿಯಿಂದ 32 ಲಕ್ಷ ರೂ.ಗಳನ್ನು ನೀಡಲಾಗಿದೆ.


ಇದನ್ನೂ ಓದಿ: ವಿಕಾಸ್ ದುಬೆ ಸಹಚರರ ಹತ್ಯೆ: ಸಿಬಿಐ ತನಿಖೆಗೆ ಸುಪ್ರೀಂನಲ್ಲಿ ಪಿಐಎಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...