Homeಕರೋನಾ ತಲ್ಲಣಲಾಕ್‌ಡೌನ್‌ನಿಂದ ಆರ್ಥಿಕ ಸಮಸ್ಯೆ: ಹೈಕೋರ್ಟ್ ಮುಂದೆ ತರಕಾರಿ ಮಾರಿದ ವಕೀಲ!

ಲಾಕ್‌ಡೌನ್‌ನಿಂದ ಆರ್ಥಿಕ ಸಮಸ್ಯೆ: ಹೈಕೋರ್ಟ್ ಮುಂದೆ ತರಕಾರಿ ಮಾರಿದ ವಕೀಲ!

ನ್ಯಾಯಾಲಯಗಳು ಸ್ಥಗಿತಗೊಂಡಿದ್ದರಿಂದ, ತುರ್ತು ವಿಷಯಗಳಿಗೆ ಮಾತ್ರ ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಹಾಜರಾಗಿ ಕಾರ್ಯನಿರ್ವಹಿಸುತ್ತಿರುವುದರಿಂದ ನಗರದ ಹಲವು ವಕೀಲರಿಗೆ ಮೂರು ತಿಂಗಳಿನಿಂದ ಯಾವುದೇ ಕೆಲಸವಿಲ್ಲ.

- Advertisement -
- Advertisement -

ಸಾಂಕ್ರಾಮಿಕ ರೋಗದ ಸಮಯದಲ್ಲಿ ಅಗತ್ಯವಿರುವ ವಕೀಲರಿಗೆ ಹಣಕಾಸಿನ ನೆರವು ನೀಡುವಲ್ಲಿ ರಾಜ್ಯ ಬಾರ್ ಕೌನ್ಸಿಲ್ ವಿಳಂಬ ಮಾಡಿರುವುದನ್ನು ವಿರೋಧಿಸಿ ಹಲವಾರು ವಕೀಲರು ಒರಿಸ್ಸಾ ಹೈಕೋರ್ಟ್‌ನ ಹೊರಗೆ ತರಕಾರಿಗಳನ್ನು ಮಾರಾಟ ಮಾಡುವ ಮೂಲಕ ವಿನೂತನವಾಗಿ ಪ್ರತಿಭಟಿಸಿದ್ದಾರೆ.

ಬೆಳಿಗ್ಗೆ 8 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ತರಕಾರಿಗಳನ್ನು ಮಾರಾಟ ಮಾಡಿದ ಸಪನ್ ಕುಮಾರ್ ಪಾಲ್, “ಹೈಕೋರ್ಟ್ ಮತ್ತು ಕೆಳ ನ್ಯಾಯಾಲಯಗಳು ಸ್ಥಗಿತಗೊಂಡಿದ್ದರಿಂದ, ತುರ್ತು ವಿಷಯಗಳಿಗೆ ಮಾತ್ರ ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಹಾಜರಾಗಿ ಕಾರ್ಯನಿರ್ವಹಿಸುತ್ತಿವೆ. ಇದರಿಂದ ನಗರದ ಹಲವು ವಕೀಲರಿಗೆ ಮೂರು ತಿಂಗಳಿನಿಂದ ಯಾವುದೇ ಕೆಲಸವಿಲ್ಲ. ಆದರೆ ಕೌನ್ಸಿಲ್ ಇನ್ನೂ ನಮಗೆ  ಹಣಕಾಸಿನ ನೆರವು ನೀಡಿಲ್ಲ. ಹಾಗಾಗಿ ಮುಂದೆ ನಾವು ಈಗ ತರಕಾರಿಗಳನ್ನು ಮಾರಾಟ ಮಾಡಬೇಕಾಗಬಹುದು ಎಂದು ತೋರುತ್ತಿದೆ” ಎಂದು ಹೇಳಿದ್ದಾರೆ.

ಏಪ್ರಿಲ್ 5 ರಂದು, ಬಾರ್ ಕೌನ್ಸಿಲ್ ಆಫ್ ಇಂಡಿಯಾ ಒಡಿಶಾ, ಸ್ಟೇಟ್ ಬಾರ್ ಕೌನ್ಸಿಲ್ ತುರ್ತು ಹಣಕಾಸು ನೆರವು ನಿಯಮಗಳು-2020ನ್ನು ಅಂಗೀಕರಿಸಿತು. ಇದರ ಅಡಿಯಲ್ಲಿ, ಬಿಕ್ಕಟ್ಟಿನ ಸಂದರ್ಭದಲ್ಲಿ ಜೀವನೋಪಾಯಕ್ಕಾಗಿ ಹಣಕಾಸಿನ ನೆರವು ಅಗತ್ಯವಿರುವ ವಕೀಲರಿಗೆ ಕಾರ್ಯವಿಧಾನಕ್ಕೆ ಅನುಗುಣವಾಗಿ ರೂ.10,000 ನೀಡಲಾಗುತ್ತದೆ ಎಂದು ನಿಯಮಗಳಲ್ಲಿ ಸೂಚಿಸಲಾಗಿದೆ.

ಈ ಕುರಿತು ಕೌನ್ಸಿಲ್ ಮೇ 10 ರವರೆಗೆ ರಾಜ್ಯದಾದ್ಯಂತ ವಿವಿಧ ಬಾರ್ ಅಸೋಸಿಯೇಷನ್‌ಗಳ ವಕೀಲರಿಂದ ಸಹಾಯ ಬೇಕಿದ್ದವರಿಂದ ಅರ್ಜಿಗಳನ್ನು ಆಹ್ವಾನಿಸಿತ್ತು.

ಇದುವರೆಗೆ 15,000 ಅರ್ಜಿಗಳನ್ನು ಸ್ವೀಕರಿಸಲಾಗಿದೆ. ಆರ್ಥಿಕ ನೆರವು ಬಯಸುವ ಅರ್ಹ ವಕೀಲರ ಪಟ್ಟಿಯನ್ನು ಸಿದ್ಧಪಡಿಸುವ ಪರಿಶೀಲನೆ ನಡೆಯುತ್ತಿದೆ ಎಂದು ರಾಜ್ಯ ಬಾರ್ ಕೌನ್ಸಿಲ್ ಮೂಲಗಳು ತಿಳಿಸಿವೆ.

ಈ ಉದ್ದೇಶಕ್ಕಾಗಿ ಒಡಿಶಾ ರಾಜ್ಯ ಬಾರ್ ಕೌನ್ಸಿಲ್, ವಕೀಲರ ‘ವೆಲ್ಫೇರ್ ಕಾರ್ಪಸ್ ನಿಧಿ’ಯನ್ನು ರಚಿಸಲಾಗಿತ್ತು. ಕಳೆದ 15 ವರ್ಷಗಳಿಂದ ಇಲ್ಲಿಯವರೆಗೆ, ಹೆಚ್ಚು ಅನುಭವ ಹೊಂದಿರುವ ವಕೀಲರಿಗೆ ಈ ನಿಧಿಯಿಂದ 32 ಲಕ್ಷ ರೂ.ಗಳನ್ನು ನೀಡಲಾಗಿದೆ.


ಇದನ್ನೂ ಓದಿ: ವಿಕಾಸ್ ದುಬೆ ಸಹಚರರ ಹತ್ಯೆ: ಸಿಬಿಐ ತನಿಖೆಗೆ ಸುಪ್ರೀಂನಲ್ಲಿ ಪಿಐಎಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...