Homeಮುಖಪುಟನಿರ್ಭಯ ಹಂತಕರನ್ನು ನೇಣಿಗೇರಿಸುವಾಗ ನೆನಪಾದಳು ‘ಧರ್ಮಸ್ಥಳದ ನಿರ್ಭಯ’

ನಿರ್ಭಯ ಹಂತಕರನ್ನು ನೇಣಿಗೇರಿಸುವಾಗ ನೆನಪಾದಳು ‘ಧರ್ಮಸ್ಥಳದ ನಿರ್ಭಯ’

ಧರ್ಮಸ್ಥಳದ ನಿರ್ಭಯಳಿಗೆ ನ್ಯಾಯ ಸಿಗುವುದು ಸುಲಭವಲ್ಲ!! ನ್ಯಾಯ ದೇವತೆಯನ್ನೇ ಗಲಿಬಿಲಿಗೊಳಿಸುವ ಪವಾಡ ಶಕ್ತಿ ಧರ್ಮಸ್ಥಳದ ಧರ್ಮ-ದೇವರ ಯಜಮಾನರಿಗಿದೆಯೆಂದೇ ಕರಾವಳಿಗರು ಮಾತನಾಡಿಕೊಳ್ಳುತ್ತಿದ್ದಾರೆ.

- Advertisement -
- Advertisement -

ಭರತಖಂಡವನ್ನೇ ಅಖಂಡವಾಗಿ ಬೆಚ್ಚಿಬೀಳಿಸಿದ ನಿರ್ಭಯಾ ಪ್ರಕರಣದ ಪಾತಕಿಗಳನ್ನು ಗಲ್ಲಿಗೇರಿಸಲಾಗಿದೆ. ಅಮಾಯಕ ಹುಡುಗಿಯ ಮೇಲೆ ಬರ್ಬರ ಲೈಂಗಿಕ ದಾಳಿ ನಡೆಸಿ ಕೊಂದು ಹಾಕಿದ್ದ ಪಾತಕಿಗಳು ಪ್ರಭಾವಿಗಳಾಗಿರಲಿಲ್ಲ, ಅಧಿಕಾರಸ್ಥರ ವಂಶಜರೂ ಆಗಿರಲಿಲ್ಲ. ಬಹುಷಃ ಈ ಕಾರಣದಿಂದಲೇ ಸದರಿ ರೇಪ್ ಅಂಡ್ ಮರ್ಡರ್ ಕೇಸ್‌ನ ತನಿಖೆಯಲ್ಲಿ ದೊಡ್ಡ ಅಡ್ಡಿ ಎದುರಾಗಿರಲಿಲ್ಲ. ಅಂತಿಮವಾಗಿ ನ್ಯಾಯಾಲಯಗಳೂ ಆರೋಪಿಗಳಿಗೆ ಗಲ್ಲು ಶಿಕ್ಷೆಯನ್ನೇ ವಿಧಿಸಿದವು. ಅದು ಮೊನ್ನೆ ಜಾರಿಯೂ ಆಯಿತು. ಈ ಹೊತ್ತಲ್ಲಿ ನಿರ್ಭಯಳಷ್ಟೇ ಕ್ರೂರವಾಗಿ ಅತ್ಯಾಚಾರ ಹತ್ಯೆಗೀಡಾದ ದಕ್ಷಿಣ ಕನ್ನಡದ ಧರ್ಮಸ್ಥಳದ ’ನಿರ್ಭಯ’ ಗೌಡ ಎಂಬ ಪಾಪದ ವಿದ್ಯಾರ್ಥಿನಿ ಕರಾವಳಿಗರಿಗೆ ನೆನಪಾಗುತ್ತಿದ್ದಾಳೆ!!

’ನಿರ್ಭಯಳನ್ನು ಅತ್ಯಾಚಾರವೆಸಗಿ ಸಾಯಿಸಿರುವ ಸಂಶಯ ದೇವದೂತ ಪ್ರಭಾವಳಿಯ ಪರಿವಾರದ ಮೇಲಿದೆ. ಈ ಕುಟುಂಬದ ಯಜಮಾನ ಸಾಕ್ಷಾತ್ ರಾಷ್ಟ್ರಪತಿ, ಪ್ರಧಾನಿಯಾದಿಯಾಗಿ ಸರ್ಕಾರಗಳ ನಡೆಸುವ ಅಷ್ಟೂ ಅಧಿಕಾರಸ್ಥರನ್ನು ಕ್ಷಣಮಾತ್ರದಲ್ಲಿ ಸಂಪರ್ಕಿಸಬಹುದ ಸರ್ವಶಕ್ತ!! ಹೀಗಾಗಿಯೇ ನ್ಯಾಯದೇವತೆ ಎಂಬ ಪ್ರತೀತಿಯ ಧರ್ಮಸ್ಥಳ ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ನಡೆದ ಪಾತಕ ಪ್ರಕರಣ ನ್ಯಾಯದ ಪರಿಧಿಗೆ ಒಳಪಡುತ್ತಲೇ ಇಲ್ಲವೆಂಬ ಚರ್ಚೆ ಇವತ್ತಿಗೂ ನಡೆಯುತ್ತಿದೆ!!. ಕಾಲೇಜಿನಿಂದ ಮನೆಗೆ ಹೋಗುವಾಗ ಉಜಿರೆ-ಧರ್ಮಸ್ಥಳ ಹೆದ್ದಾರಿಯಲ್ಲಿ ಹಾಡುಹಗಲೇ ಅಪಹರಿಸಲ್ಪಟ್ಟ ಹುಡುಗಿ ಕಣ್ಮರೆಯಾದ ಕ್ಷಣದಿಂದಲೇ ತನಿಖೆಯ ದಿಕ್ಕುತಪ್ಪಿಸುವ ವ್ಯವಸ್ಥಿತ ಸ್ಕೆಚ್ ಒಂದು ಕಾರ್ಯಾಚರಣೆ ನಾಜೂಕಾಗಿ ನಡೆಯುತ್ತಲೇ ಇದೆ. ಈ ಪ್ರಕರಣಕ್ಕೆ ನ್ಯಾಯ ಸಿಗುವ ಸಾಧ್ಯತೆ ದಿನಕಳೆದಂತೆ ಕಮ್ಮಿಯಾಗುತ್ತಲೇ ಇದೆ.

ದೆಹಲಿಯಲ್ಲಿ ನಿರ್ಭಯಾ ಅತ್ಯಾಚಾರ-ಕೊಲೆ ನಡೆದಿದ್ದು 2012ರ ಡಿಸೆಂಬರ್ 16ರಂದು ಅದಕ್ಕೂ ಎರಡು ಕಾಲು ತಿಂಗಳು ಮೊದಲು ಅಂದರೆ 2012 ಅಕ್ಟೋಬರ್ 8ರಂದು ಧರ್ಮಸ್ಥಳದ ನಿರ್ಭಯಳನ್ನು ಅಪಹರಿಸಿ ಅತ್ಯಾಚಾರ ನಡೆಸಿ ಆಕೆಯ ಮನೆ ಹತ್ತಿರ ಕಾಡಿನಲ್ಲಿ ಎಸೆಯಲಾಗಿತ್ತು. ಆಕೆ ಕಾಣೆಯಾದಾಗ ರಾತ್ರಿಯಿಡೀ ಹುಡುಕಾಡಿದ ಕಾಡಿನಲ್ಲೆ ಬೆಳಿಗ್ಗೆ ಅತ್ಯಾಚಾರಗೊಂಡಿದ್ದ ದೇಹ ಕಂಡುಬಂದಿತ್ತು. ಆಕೆಯ ಮರ್ಮಾಂಗಕ್ಕೆ ಮಣ್ಣು ಹಾಕಿ ವೀರ್ಯ ಪರೀಕ್ಷೆ ವಿಫಲಗೊಳಿಸುವ ಯೋಜನೆ ಮಾಡಲಾಗಿತ್ತು. ಆ ರಾತ್ರಿ ಮಳೆಯಾಗಿತ್ತು, ಆದರೆ ಮೃತ ದೇಹದ ಹತ್ತಿರವೇ ಬಿದ್ದಿದ್ದ ಆಕೆಯ ಪಠ್ಯಪುಸ್ತಕ ಒಂಚೂರು ಒದ್ದೆಯಾಗಿರಲಿಲ್ಲ. ವ್ಯವಸ್ಥಿತವಾಗಿ ಸಾಕ್ಷ್ಯಗಳನ್ನು ನಾಶ ಮಾಡುವ ಶತಪ್ರಯತ್ನ ರೇಪಿಸ್ಟ್ ಗ್ಯಾಂಗ್ ಮಾಡಿತ್ತು.

ಉಜಿರೆ-ಧರ್ಮಸ್ಥಳದಲ್ಲಿ ಪ್ರತಿಭಟನೆಗಳು ಸರಣಿಯಾಗಿ ಭುಗಿಲೆದ್ದು ಇಡೀ ದಕ್ಷಿಣ ಕನ್ನಡಕ್ಕೆ ಹೋರಾಟದ ಕಿಚ್ಚು ವ್ಯಾಪಿಸಿತ್ತು. ಪ್ರತಿಭಟನಾಕಾರರ ಆಕ್ರೋಶ, ಅನುಮಾನ ಧರ್ಮ ವ್ಯಾಪಾರಿಯ ರಕ್ತಸಂಬಂಧಿ ಪುಂಡ ಹುಡುಗರ ಮೇಲೆ ಕೇಂದ್ರೀಕೃತವಾಗಿತ್ತು. ಜನರು ನ್ಯಾಯಕ್ಕಾಗಿ ಹೋರಾಡುತ್ತಿದ್ದರೆ ಪೋಲಿಸರು ಪ್ರಕರಣ ಹಳ್ಳ ಹಿಡಿಸಲು ಹವಣಿಸುತ್ತಿದ್ದರು. ಧರ್ಮಸ್ಥಳದ ಮಂಜುನಾಥ, ಧರ್ಮ ದೇವತೆ ಅಣ್ಣಪ್ಪ ಸ್ವಾಮಿ ಅಂಗಳದಲ್ಲಿ ಅಂಡೆಲೆಯುತ್ತಿದ್ದ ಮಾನಸಿಕ ಅಸ್ವಸ್ಥ ಸಂತೋಷ್‌ರಾವ್ ಹುಡುಗಿಯನ್ನು ಅಪಹರಿಸಿ ಕಾಡಿನಲ್ಲಿ ಅತ್ಯಾಚಾರ ನಡೆಸಿದ್ದಾನೆಂದು ಕತೆ ಕಟ್ಟಲಾಯಿತು. ಧರ್ಮಸ್ಥಳದ ಧರ್ಮಾಧಿಕಾರಿಯೂ ದೈವ ಸ್ವರೂಪಿ ಎಂದೇ ಧರ್ಮಸ್ಥಳದ ಶ್ರದ್ಧಾಳುಗಳು ನಂಬುವ ವೀರೇಂದ್ರ ಹೆಗ್ಗಡೆ ಪರಿವಾರದ ಉದಯ ಜೈನ್, ಮಲ್ಲಿಕ್ ಜೈನ್ ಮತ್ತು ಆಶ್ರಿತ್ ಜೈನ್ ಎಂಬ ನವ ತರುಣರು ಸಂತೋಷ್‌ರಾವ್‌ನೇ ಅತ್ಯಾಚಾರಿ ಎಂದು ತೀರ್ಪು ಕೊಟ್ಟು ಪೊಲೀಸರಿಗೆ ಹಿಡಿದು ಕೊಟ್ಟಿದ್ದರು! ಇಲ್ಲಿ ಅಡಗಿದೆ ನಿರ್ಭಯಳ ರೇಪ್ ಆಂಡ್ ಮರ್ಡರ್ ಮಿಸ್ಟರಿ!!

ಧರ್ಮಸ್ಥಳ ದೇವರ ದೊರೆಗಳ ಪರಿವಾರದ ಮೇಲಿದ್ದ ಜನತೆಯ ಶಂಕೆ ಬಲವಾಯಿತು. ಧರ್ಮಸ್ಥಳದಲ್ಲಿ ಅಸಂಖ್ಯಾ ಹೆಣ್ಣು ಜೀವಗಳ ಅಸಹಜ ಸಾವು ಸಂಭವಿಸುತ್ತಿರುವ ಪುಕಾರುಗಳು ಎದ್ದವು. ಪೊಲೀಸರೇ ಕೊಟ್ಟ ಮಾಹಿತಿಯಂತೆ ನಿರ್ಭಯಳಿಗಿಂತ ಮೊದಲು ದೇವ ಸನ್ನಿಧಿಯಲ್ಲಿ ನೂರಾರು ಹೆಣ್ಣು ಬಲಿ-ಬಲಾತ್ಕಾರ ನಡೆದಿರುವುದು ಹೊರಗೆ ಬಂದಿತು. ಸಿಬಿಐನಿಂದಲೇ ನಿರ್ಭಯ ಅತ್ಯಾಚಾರದ ತನಿಖೆ ನಡೆಯಬೇಕೆಂಬ ಬೇಡಿಕೆಯನ್ನು ಪ್ರತಿಭಟನಾಕಾರರು ಇಟ್ಟರು. ಸ್ಥಳೀಯ ಪೊಲೀಸರು ನೈಜ ಅಪರಾಧಿಗಳನ್ನು ರಕ್ಷಿಸಲು ನಾಟಕ ನಡೆಸುತ್ತಿದ್ದಾರೆಂಬ ಅನಿಸಿಕೆ ಜನರದ್ದಾಗಿತ್ತು. ಕೊನೆಗೆ ಸರ್ಕಾರವು ಸಿಬಿಐಗೆ ಸೌಜನ್ಯ ಪ್ರಕರಣವನ್ನು ಹಸ್ತಾಂತರಿಸಬೇಕಾಗಿ ಬಂತು. ಆದರೆ ಸಿಬಿಐ ಸಹ ಪ್ರಾಮಾಣಿಕ ತನಿಖೆ ನಡೆಸಲೇ ಇಲ್ಲ. ಸ್ಥಳೀಯ ಪೊಲೀಸರ ತನಿಖೆ ಜಾಡಿನಲ್ಲೇ ಸಾಗಿದ ಸಿಬಿಐ ಶೂರರು ಅಪರಾಧಿಗಳು ತಪ್ಪಿಸಿಕೊಳ್ಳಲು ಅನುಕೂಲವಾಗುವಂತ “ತನಿಖೆ” ತಂತ್ರ ನಡೆಸಿತು.

2017ರಲ್ಲಿ ಸಿಬಿಐನ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ಆರಂಭವಾಗಿತ್ತು. ಸಿಬಿಐ ವೈಫಲ್ಯವನ್ನು ನ್ಯಾಯಾಧೀಶೆ ಬಿ.ಎಸ್. ರೇಖಾ ಎತ್ತಿ ತೋರಿಸಿದರು. ಸರಿಯಾಗಿ ಯಾಕೆ ತನಿಖೆ ನಡೆಸಿಲ್ಲವೆಂದು ಕಟುವಾಗಿ ಸಿಬಿಐಗೆ ಪ್ರಶ್ನಿಸಿದ್ದರು. ವೈದ್ಯರುಗಳ ಪ್ರಕಾರ ಅರೆಹುಚ್ಚ ಸಂತೋಷ್ ರಾವ್‌ಗೆ ಲೈಂಗಿಕ ಸಾಮರ್ಥ್ಯವೇ ಇಲ್ಲ. ವೈಜ್ಞಾನಿಕ ವಿವರಗಳಂತೆ ಸೌಜನ್ಯಳ ಮೃತದೇಹದಲ್ಲಿ ಸಿಕ್ಕ ಕೂದಲೂ ಸಂತೋಷ್ ರಾವ್‌ನದ್ದಾಗಿರಲಿಲ್ಲ. ವೀರ್ಯ ಸಂಗ್ರಹಿಸದಿರುವುದು ಸೇರಿದಂತೆ ಹಲವು ಲೋಪ-ದೋಷಗಳ ಬಗ್ಗೆ ನ್ಯಾಯಾಧೀಶರು ಸಿಬಿಐ ಪೊಲೀಸರನ್ನು ತರಾಟೆಗೆ ತೆಗೆದುಕೊಂಡಿದ್ದರು. ದೇವ ಪರಿವಾರದ ಜೈನ್‌ಗಳನ್ನು ಸಿಬಿಐ ನಿಷ್ಠುರ ತನಿಖೆಗೆ ಒಳಪಡಿಸಿರಲೇ ಇಲ್ಲ.

ನಿರ್ಭಯಳ ತಂದೆ ಚಂದಪ್ಪಗೌಡ ತನಗೆ ಉದಯ್ ಜೈನ್, ಮಲ್ಲಿಕ್ ಜೈನ್ ಮತ್ತು ಆಶ್ರಿತ್ ಜೈನ್ ಮೇಲೆ ಬಲವಾದ ಅನುಮಾನವಿದೆ ಎಂದು ಹೇಳಿದ್ದರು. ಸಿಬಿಐ ನ್ಯಾಯಾಲಯ ಈ ತ್ರಿಮೂರ್ತಿಗಳಿಗೆ ಸಮನ್ಸ್ ಕಳುಹಿಸಿತ್ತು, ಅದಕ್ಕೆ ಅವರು ಹೈಕೋರ್ಟಿನಿಂದ ತಡೆಯಾಜ್ಞೆ ತಂದರು. ಈ ನಡುವೆ ನಿರ್ಭಯಳನ್ನು ಎಳೆದುಕೊಂಡು ಹೋಗುತ್ತಿರುವುದನ್ನು ಕಂಡಿದ್ದ ರವಿ ಪೂಜಾರಿ ನಿಗೂಢವಾಗಿ ಆತ್ಮಹತ್ಯೆ ಮಾಡಿಕೊಂಡರು. ಕೇಸ್ ತನಿಖೆ ನಡೆಸಿದ ಪೊಲೀಸ್ ಅಧಿಕಾರಿಗಳು ಬಡ್ತಿ ಪಡೆದುಕೊಂಡರು. ವಿಚಾರಣೆಗೆ ಬಿದ್ದಿರುವ ತಡೆ ತೆರವಾಗುವ ಲಕ್ಷಣವೊಂದೂ ಕಾಣಿಸುತ್ತಿಲ್ಲ. ಕೇಂದ್ರ ಮತ್ತು ರಾಜ್ಯದಲ್ಲಿ ಧರ್ಮವ್ಯಾಪಾರಿಯ ಶಿಷ್ಯರೇ ಆಡಳಿತ ನಡೆಸುತ್ತಿದ್ದಾರೆ. ಈ ಧರ್ಮಾಡಳಿತದಲ್ಲಿ ನಿರ್ಭಯಾಗೆ ಸಿಕ್ಕಂತೆ ಧರ್ಮಸ್ಥಳದ ನಿರ್ಭಯಳಿಗೆ ನ್ಯಾಯ ಸಿಗುವುದು ಸುಲಭವಲ್ಲ!! ನ್ಯಾಯ ದೇವತೆಯನ್ನೇ ಗಲಿಬಿಲಿಗೊಳಿಸುವ ಪವಾಡ ಶಕ್ತಿ ಧರ್ಮಸ್ಥಳದ ಧರ್ಮ-ದೇವರ ಯಜಮಾನರಿಗಿದೆಯೆಂದೇ ಕರಾವಳಿಗರು ಮಾತನಾಡಿಕೊಳ್ಳುತ್ತಿದ್ದಾರೆ.

(ಸಂತ್ರಸ್ತೆಯ ನಿಜವಾದ ಹೆಸರನ್ನು ಧರ್ಮಸ್ಥಳದ ನಿರ್ಭಯ ಎಂದು ಬದಲಿಸಲಾಗಿದೆ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...