Homeಕರೋನಾ ತಲ್ಲಣಕೊರೊನಾ: 500 ರಿಂದ 2 ಸಾವಿರಕ್ಕೆ ಮಾಸ್ಕ್ ದಂಡ ಹೆಚ್ಚಿಸಿದ ದೆಹಲಿ ಸರ್ಕಾರ

ಕೊರೊನಾ: 500 ರಿಂದ 2 ಸಾವಿರಕ್ಕೆ ಮಾಸ್ಕ್ ದಂಡ ಹೆಚ್ಚಿಸಿದ ದೆಹಲಿ ಸರ್ಕಾರ

"ಇದು ರಾಜಕೀಯದ ಸಮಯವಲ್ಲ, ನಾವು ಕೆಲವು ದಿನಗಳ ಕಾಲ ರಾಜಕೀಯ ಬದಿಗಿಟ್ಟು ಜನರಿಗೆ ಸೇವೆ ಸಲ್ಲಿಸುವ ಸಮಯ ಇದು” ಎಂದು ಕೇಜ್ರೀವಾಲ್ ಹೇಳಿದ್ದಾರೆ.

- Advertisement -
- Advertisement -

ದೆಹಲಿಯಲ್ಲಿ ಮಾಸ್ಕ್ ಧರಿಸದಿದ್ದರೆ 500 ರೂಪಾಯಿಗಳಿಗೆ ಇದ್ದ ದಂಡವನ್ನು  2,000 ರೂಪಾಯಿಗಳಿಗೆ ದೆಹಲಿ ಸರ್ಕಾರ ಹೆಚ್ಚಿಸಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಗುರುವಾರ ಪ್ರಕಟಿಸಿದ್ದಾರೆ.

“ಜನರು ಮಾಸ್ಕ್‌ಗಳನ್ನು ಧರಿಸುತ್ತಾರೆ. ಆದರೆ ಕೆಲವರಿಗೆ ಅದರ ಬಗ್ಗೆ ಅಸಡ್ಡೆ ಇದೆ. ಹಾಗಾಗಿ ನಾವು ನಿಯಮಗಳನ್ನು ಬಿಗಿಗೊಳಿಸಬೇಕಾಗಿದೆ. ಈ ಹಿನ್ನೆಲೆಯಲ್ಲಿ ದಂಡವನ್ನು 500 ರಿಂದ 2000 ಕ್ಕೆ ಏರಿಸಲಾಗಿದೆ” ಎಂದು ದೆಹಲಿಯ ಕೊರೊನಾ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ನಡೆದ ಸರ್ವಪಕ್ಷ ಸಭೆಯ ನಂತರ ಪತ್ರಿಕಾಗೋಷ್ಠಿಯಲ್ಲಿ ಕೇಜ್ರಿವಾಲ್ ತಿಳಿಸಿದ್ದಾರೆ.

ಕೊರೊನಾ ರೋಗಿಗಳಿಗೆ ಆದಷ್ಟು ಗರಿಷ್ಠ ಆರೈಕೆ ನೀಡಲು ಸರ್ಕಾರವು ತುರ್ತು ಪರಿಸ್ಥಿತಿಯ ಶಸ್ತ್ರಚಿಕಿತ್ಸೆ ಬಿಟ್ಟು ಬೇರೆ ಶಸ್ತ್ರಚಿಕಿತ್ಸೆಗಳನ್ನು ಸ್ಥಗಿತಗೊಳಿಸುವಂತೆ ಆಸ್ಪತ್ರೆಗಳನ್ನು ಒತ್ತಾಯಿಸುತ್ತದೆ ಎಂದು ಮುಖ್ಯಮಂತ್ರಿ ಕೇಜ್ರಿವಾಲ್ ಹೇಳಿದರು.

ಎಲ್ಲಾ ಖಾಸಗಿ ಆಸ್ಪತ್ರೆಗಳು ತಮ್ಮ ಐಸಿಯು ಹಾಸಿಗೆಗಳಲ್ಲಿ 80% ಮತ್ತು ಐಸಿಯು ಅಲ್ಲದ ಹಾಸಿಗೆಗಳಲ್ಲಿ 60% ಹಾಸಿಗೆಗಳನನ್ನು ಕೊರೊನಾ ಸೋಂಕಿತ ರೋಗಿಗಳಿಗೆ ಕಾಯ್ದಿರಿಸಲು ತಿಳಿಸಲಾಗಿದೆ.

ಇದನ್ನೂ ಓದಿ: ಕೊರೊನಾ ಆಸ್ಪತ್ರೆಯಲ್ಲೇ ರೋಗಿಗೆ ಲೈಂಗಿಕ ಕಿರುಕುಳ ನೀಡಿದ BJP ಕಾರ್ಯಕರ್ತ!

ಇನ್ನು ಛತ್ ಪೂಜೆಯ ಮೇಲಿನ ನಿರ್ಬಂಧಗಳ ಕುರಿತು ಟೀಕಿಸಿದ ಬಿಜೆಪಿಗೆ ’ಇದು ರಾಜಕೀಯ ಮತ್ತು ಆರೋಪಗಳನ್ನು ಮಾಡುವ ಸಮಯವಲ್ಲ ಎಂದು ಹೇಳಿದ್ದಾರೆ. “ದೆಹಲಿ ಜನರು ಛತ್ ಪೂಜೆ ಆಚರಿಸಲು ನಾನು ಯಾಕೆ ಬಯಸುವುದಿಲ್ಲ..? ಇದು ಶುಭ ಸಂದರ್ಭ ಮತ್ತು ಜನರು ಅದನ್ನು ಆಚರಿಸಬೇಕು ಆದರೆ ಅವರ ಮನೆಯೊಳಗೆ ಆಚರಿಸಬೇಕು ಅಷ್ಟೆ. ಹೊರಗೆ ಗುಂಪುಗೂಡಿ ಆಚರಿಸಬಾರದು” ಎಂದರು.

“ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವಾಗ ದೆಹಲಿಯ ಜನರಿಗೆ ಇದು ಕಷ್ಟದ ಸಮಯ ಎಂದು ನಾನು ಸಭೆಯಲ್ಲಿ ಎಲ್ಲ ಪಕ್ಷಗಳಿಗೆ ಹೇಳಿದೆ. ಇದು ರಾಜಕೀಯದ ಸಮಯವಲ್ಲ, ರಾಜಕೀಯ ಮಾಡಲು ಸಂಪೂರ್ಣ ಜೀವಿತಾವಧಿ ಇದೆ. ನಾವು ಕೆಲವು ದಿನಗಳ ಕಾಲ ರಾಜಕೀಯ ಮತ್ತು ಆರೋಪಗಳನ್ನು ಬದಿಗಿಡಬೇಕು. ಜನರಿಗೆ ಸೇವೆ ಸಲ್ಲಿಸುವ ಸಮಯ ಇದು” ಎಂದು ಅಭಿಪ್ರಾಯ ಪಟ್ಟಿದ್ದಾರೆ.

ಸರ್ವಪಕ್ಷ ಸಭೆಯ ನಂತರ ದೆಹಲಿ ಬಿಜೆಪಿ ಮುಖ್ಯಸ್ಥ ಆದೇಶ್ ಗುಪ್ತಾ ಅವರು “ಎಎಪಿ ಸರ್ಕಾರ ಸರಿಯಾದ ಕ್ರಮಗಳನ್ನು ತೆಗೆದುಕೊಳ್ಳುವಲ್ಲಿ ವಿಫಲವಾಗಿದೆ” ಎಂದು ಹೇಳಿದರು. ’ದೆಹಲಿ ಸರ್ಕಾರವು ಸರಿಯಾದ ಕ್ರಮಗಳನ್ನು ತೆಗೆದುಕೊಂಡಿದ್ದರೆ ಜನರು ಒಟ್ಟಾಗಿ ಛತ್ ಪೂಜೆಯನ್ನು ಆಚರಿಸುವಲ್ಲಿ ಸಮಸ್ಯೆಗಳನ್ನು ಎದುರಿಸುತ್ತಿರಲಿಲ್ಲ’ ಎಂದರು.


ಇದನ್ನೂ ಓದಿ: ಛತ್ ಪೂಜೆಗೆ ದೆಹಲಿ ಸರ್ಕಾರ ನಿರ್ಬಂಧ, ಹಸ್ತಕ್ಷೇಪ ಮಾಡಲ್ಲ ಎಂದ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....