Homeಕರೋನಾ ತಲ್ಲಣಕೊರೊನಾ: 500 ರಿಂದ 2 ಸಾವಿರಕ್ಕೆ ಮಾಸ್ಕ್ ದಂಡ ಹೆಚ್ಚಿಸಿದ ದೆಹಲಿ ಸರ್ಕಾರ

ಕೊರೊನಾ: 500 ರಿಂದ 2 ಸಾವಿರಕ್ಕೆ ಮಾಸ್ಕ್ ದಂಡ ಹೆಚ್ಚಿಸಿದ ದೆಹಲಿ ಸರ್ಕಾರ

"ಇದು ರಾಜಕೀಯದ ಸಮಯವಲ್ಲ, ನಾವು ಕೆಲವು ದಿನಗಳ ಕಾಲ ರಾಜಕೀಯ ಬದಿಗಿಟ್ಟು ಜನರಿಗೆ ಸೇವೆ ಸಲ್ಲಿಸುವ ಸಮಯ ಇದು” ಎಂದು ಕೇಜ್ರೀವಾಲ್ ಹೇಳಿದ್ದಾರೆ.

- Advertisement -
- Advertisement -

ದೆಹಲಿಯಲ್ಲಿ ಮಾಸ್ಕ್ ಧರಿಸದಿದ್ದರೆ 500 ರೂಪಾಯಿಗಳಿಗೆ ಇದ್ದ ದಂಡವನ್ನು  2,000 ರೂಪಾಯಿಗಳಿಗೆ ದೆಹಲಿ ಸರ್ಕಾರ ಹೆಚ್ಚಿಸಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಗುರುವಾರ ಪ್ರಕಟಿಸಿದ್ದಾರೆ.

“ಜನರು ಮಾಸ್ಕ್‌ಗಳನ್ನು ಧರಿಸುತ್ತಾರೆ. ಆದರೆ ಕೆಲವರಿಗೆ ಅದರ ಬಗ್ಗೆ ಅಸಡ್ಡೆ ಇದೆ. ಹಾಗಾಗಿ ನಾವು ನಿಯಮಗಳನ್ನು ಬಿಗಿಗೊಳಿಸಬೇಕಾಗಿದೆ. ಈ ಹಿನ್ನೆಲೆಯಲ್ಲಿ ದಂಡವನ್ನು 500 ರಿಂದ 2000 ಕ್ಕೆ ಏರಿಸಲಾಗಿದೆ” ಎಂದು ದೆಹಲಿಯ ಕೊರೊನಾ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ನಡೆದ ಸರ್ವಪಕ್ಷ ಸಭೆಯ ನಂತರ ಪತ್ರಿಕಾಗೋಷ್ಠಿಯಲ್ಲಿ ಕೇಜ್ರಿವಾಲ್ ತಿಳಿಸಿದ್ದಾರೆ.

ಕೊರೊನಾ ರೋಗಿಗಳಿಗೆ ಆದಷ್ಟು ಗರಿಷ್ಠ ಆರೈಕೆ ನೀಡಲು ಸರ್ಕಾರವು ತುರ್ತು ಪರಿಸ್ಥಿತಿಯ ಶಸ್ತ್ರಚಿಕಿತ್ಸೆ ಬಿಟ್ಟು ಬೇರೆ ಶಸ್ತ್ರಚಿಕಿತ್ಸೆಗಳನ್ನು ಸ್ಥಗಿತಗೊಳಿಸುವಂತೆ ಆಸ್ಪತ್ರೆಗಳನ್ನು ಒತ್ತಾಯಿಸುತ್ತದೆ ಎಂದು ಮುಖ್ಯಮಂತ್ರಿ ಕೇಜ್ರಿವಾಲ್ ಹೇಳಿದರು.

ಎಲ್ಲಾ ಖಾಸಗಿ ಆಸ್ಪತ್ರೆಗಳು ತಮ್ಮ ಐಸಿಯು ಹಾಸಿಗೆಗಳಲ್ಲಿ 80% ಮತ್ತು ಐಸಿಯು ಅಲ್ಲದ ಹಾಸಿಗೆಗಳಲ್ಲಿ 60% ಹಾಸಿಗೆಗಳನನ್ನು ಕೊರೊನಾ ಸೋಂಕಿತ ರೋಗಿಗಳಿಗೆ ಕಾಯ್ದಿರಿಸಲು ತಿಳಿಸಲಾಗಿದೆ.

ಇದನ್ನೂ ಓದಿ: ಕೊರೊನಾ ಆಸ್ಪತ್ರೆಯಲ್ಲೇ ರೋಗಿಗೆ ಲೈಂಗಿಕ ಕಿರುಕುಳ ನೀಡಿದ BJP ಕಾರ್ಯಕರ್ತ!

ಇನ್ನು ಛತ್ ಪೂಜೆಯ ಮೇಲಿನ ನಿರ್ಬಂಧಗಳ ಕುರಿತು ಟೀಕಿಸಿದ ಬಿಜೆಪಿಗೆ ’ಇದು ರಾಜಕೀಯ ಮತ್ತು ಆರೋಪಗಳನ್ನು ಮಾಡುವ ಸಮಯವಲ್ಲ ಎಂದು ಹೇಳಿದ್ದಾರೆ. “ದೆಹಲಿ ಜನರು ಛತ್ ಪೂಜೆ ಆಚರಿಸಲು ನಾನು ಯಾಕೆ ಬಯಸುವುದಿಲ್ಲ..? ಇದು ಶುಭ ಸಂದರ್ಭ ಮತ್ತು ಜನರು ಅದನ್ನು ಆಚರಿಸಬೇಕು ಆದರೆ ಅವರ ಮನೆಯೊಳಗೆ ಆಚರಿಸಬೇಕು ಅಷ್ಟೆ. ಹೊರಗೆ ಗುಂಪುಗೂಡಿ ಆಚರಿಸಬಾರದು” ಎಂದರು.

“ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವಾಗ ದೆಹಲಿಯ ಜನರಿಗೆ ಇದು ಕಷ್ಟದ ಸಮಯ ಎಂದು ನಾನು ಸಭೆಯಲ್ಲಿ ಎಲ್ಲ ಪಕ್ಷಗಳಿಗೆ ಹೇಳಿದೆ. ಇದು ರಾಜಕೀಯದ ಸಮಯವಲ್ಲ, ರಾಜಕೀಯ ಮಾಡಲು ಸಂಪೂರ್ಣ ಜೀವಿತಾವಧಿ ಇದೆ. ನಾವು ಕೆಲವು ದಿನಗಳ ಕಾಲ ರಾಜಕೀಯ ಮತ್ತು ಆರೋಪಗಳನ್ನು ಬದಿಗಿಡಬೇಕು. ಜನರಿಗೆ ಸೇವೆ ಸಲ್ಲಿಸುವ ಸಮಯ ಇದು” ಎಂದು ಅಭಿಪ್ರಾಯ ಪಟ್ಟಿದ್ದಾರೆ.

ಸರ್ವಪಕ್ಷ ಸಭೆಯ ನಂತರ ದೆಹಲಿ ಬಿಜೆಪಿ ಮುಖ್ಯಸ್ಥ ಆದೇಶ್ ಗುಪ್ತಾ ಅವರು “ಎಎಪಿ ಸರ್ಕಾರ ಸರಿಯಾದ ಕ್ರಮಗಳನ್ನು ತೆಗೆದುಕೊಳ್ಳುವಲ್ಲಿ ವಿಫಲವಾಗಿದೆ” ಎಂದು ಹೇಳಿದರು. ’ದೆಹಲಿ ಸರ್ಕಾರವು ಸರಿಯಾದ ಕ್ರಮಗಳನ್ನು ತೆಗೆದುಕೊಂಡಿದ್ದರೆ ಜನರು ಒಟ್ಟಾಗಿ ಛತ್ ಪೂಜೆಯನ್ನು ಆಚರಿಸುವಲ್ಲಿ ಸಮಸ್ಯೆಗಳನ್ನು ಎದುರಿಸುತ್ತಿರಲಿಲ್ಲ’ ಎಂದರು.


ಇದನ್ನೂ ಓದಿ: ಛತ್ ಪೂಜೆಗೆ ದೆಹಲಿ ಸರ್ಕಾರ ನಿರ್ಬಂಧ, ಹಸ್ತಕ್ಷೇಪ ಮಾಡಲ್ಲ ಎಂದ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...