Homeಕರ್ನಾಟಕಮುಸ್ಲಿಂ ಜನಸಂಖ್ಯೆ ತೋರಿಸಲು ಪಾಕಿಸ್ತಾನದ ಧ್ವಜ ಬಳಕೆ: ಅಜಿತ್ ಹನುಮಕ್ಕನವರ್ ವಿರುದ್ಧ ಎಫ್‌ಐಆರ್‌

ಮುಸ್ಲಿಂ ಜನಸಂಖ್ಯೆ ತೋರಿಸಲು ಪಾಕಿಸ್ತಾನದ ಧ್ವಜ ಬಳಕೆ: ಅಜಿತ್ ಹನುಮಕ್ಕನವರ್ ವಿರುದ್ಧ ಎಫ್‌ಐಆರ್‌

- Advertisement -
- Advertisement -

ಮುಸ್ಲಿಂ ಜನಸಂಖ್ಯೆಯನ್ನು ತೋರಿಸಲು ಪಾಕಿಸ್ತಾನ ಧ್ವಜವನ್ನು ಬಳಸಿದ್ದ ಏಷ್ಯಾನೆಟ್ ಸುವರ್ಣ ನ್ಯೂಸ್ ಮತ್ತು ನಿರೂಪಕ ಅಜಿತ್ ಹನುಮಕ್ಕನವರ್ ವಿರುದ್ಧ ಕೋಮು ದ್ವೇಷವನ್ನು ಹರಡಿದ ಆರೋಪದಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ಏಷ್ಯಾನೆಟ್ ಸುವರ್ಣ ನ್ಯೂಸ್ ಮತ್ತು ಅದರ ನಿರೂಪಕ ಅಜಿತ್ ಹನುಮಕ್ಕನವರ್ ವಿರುದ್ಧ ಐಪಿಸಿ ಸೆಕ್ಷನ್ 505 (2) ಅಡಿಯಲ್ಲಿ ದ್ವೇಷವನ್ನು ಸೃಷ್ಟಿಸಿದ ಅಥವಾ ಉತ್ತೇಜಿಸಲು ಯತ್ನಿಸಿದ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ.

 

 

ಪ್ರಧಾನ ಮಂತ್ರಿಗಳ ಆರ್ಥಿಕ ಸಲಹಾ ಮಂಡಳಿ ಬಿಡುಗಡೆ ಮಾಡಿರುವ ಜನಸಂಖ್ಯಾ ವರದಿಯಲ್ಲಿ ದೇಶದಲ್ಲಿ ಹಿಂದೂಗಳ ಜನ ಸಂಖ್ಯೆ ಇಳಿಕೆಯಾಗಿದೆ. ಮುಸ್ಲಿಮರ ಜನಸಂಖ್ಯೆ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದೆ ಎಂದು ತಿಳಿಸಿತ್ತು. ಚುನಾವಣೆಯ ಹೊತ್ತಲ್ಲೇ ಬಿಡುಗಡೆ ಮಾಡಿರುವ ವರದಿ ದೇಶದಾದ್ಯಂತ ವಿವಾದದ ಕಿಡಿ ಹೊತ್ತಿಸಿದೆ. ಈ ವರದಿ ಆಧರಿಸಿ ಮೇ 9, 2024ರಂದು ರಾತ್ರಿ 8:30ಕ್ಕೆ ಸುವರ್ಣ ನ್ಯೂಸ್ ಸುದ್ದಿ ಪ್ರಕಟಿಸಿತ್ತು. ಅಜಿತ್ ಹನುಮಕ್ಕನವರ್ ಸುದ್ದಿ ವಿಶ್ಲೇಷಣೆ ಮಾಡಿದ್ದರು. ಸುದ್ದಿಯಲ್ಲಿ ಹಿಂದೂ ಮುಸ್ಲಿಮರ ಜನಸಂಖ್ಯೆ ತೋರಿಸುವಾಗ ಹಿಂದೂಗಳ ಜನಸಂಖ್ಯೆಗೆ ಭಾರತದ ಧ್ವಜ ಮತ್ತು ಮುಸ್ಲಿಮರ ಜನಸಂಖ್ಯೆಗೆ ಪಾಕಿಸ್ತಾನ ಧ್ವಜದ ಗ್ರಾಫಿಕ್ಸ್ ಬಳಸಲಾಗಿದೆ. ಈ ಕುರಿತು ಸಾಮಾಜಿಕ ಕಾರ್ಯಕರ್ತರಾಗಿರುವ ತನ್ವೀರ್ ಅಹ್ಮದ್ ಎಂಬವರು ದೂರು ದಾಖಲಿಸಿದ್ದರು. ಈ ದೂರಿನ ಮೇರೆಗೆ ಹೈಗ್ರೌಂಡ್ಸ್‌ ಪೊಲೀಸರು ಎಫ್‌ಐಆರ್‌ ದಾಖಲಿಸಿಕೊಂಡಿದ್ದಾರೆ.

ಇದಲ್ಲದೆ ಏಷ್ಯಾನೆಟ್ ಸುವರ್ಣ ನ್ಯೂಸ್ ಮತ್ತು ನಿರೂಪಕ ಅಜಿತ್ ಹನುಮಕ್ಕನವರ್ ವಿರುದ್ಧ ಕೋಮು ದ್ವೇಷವನ್ನು ಹರಡಿದ ಆರೋಪದಲ್ಲಿ ಅಸೋಸಿಯೇಷನ್‌ ಫಾರ್‌‌ ಪ್ರೊಟೆಕ್ಷನ್ ಸಿವಿಲ್‌ ರೈಟ್ಸ್ ಸಂಘಟನೆಯ ನಿಯೋಗವು (ಎಪಿಸಿಆರ್) ಬೆಂಗಳೂರು ಸಹಾಯಕ ಪೊಲೀಸ್ ಆಯುಕ್ತರಿಗೆ ದೂರು ನೀಡಿತ್ತು. ದೂರಿನಲ್ಲಿ ರಾಷ್ಟ್ರೀಯ ಧ್ವಜಗಳನ್ನು ಧಾರ್ಮಿಕ ಸಮುದಾಯಗಳಿಗೆ ರೂಪಕಗಳಾಗಿ ಬಳಸುವುದು ತಪ್ಪುದಾರಿಗೆಳೆಯುವಂತಿದೆ, ಆದ್ದರಿಂದ ಸುವರ್ಣ ನ್ಯೂಸ್‌ ಮತ್ತು ನಿರೂಪಕ ಅಜಿತ್ ಹನುಮಕ್ಕನವರ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಲಾಗಿತ್ತು.

ಲೋಕಸಭಾ ಚುನಾವಣೆಯ ನಡುವೆ ಹಿಂದೂ ಜನಸಂಖ್ಯೆಯಲ್ಲಿ ಇಳಿಕೆ ಮತ್ತು ಮುಸ್ಲಿಂ ಜನಸಂಖ್ಯೆಯಲ್ಲಿ ಗಣನೀಯ ಹೆಚ್ಚಳವನ್ನು ಎತ್ತಿ ತೋರಿಸಿರುವ ಪ್ರಧಾನ ಮಂತ್ರಿಗಳ ಆರ್ಥಿಕ ಸಲಹಾ ಮಂಡಳಿಯ ವರದಿಯು ರಾಷ್ಟ್ರದಾದ್ಯಂತ ಚರ್ಚೆಗೆ ಗ್ರಾಸವಾಗಿತ್ತು. ಪಾಪ್ಯುಲೇಶನ್ ಫೌಂಡೇಶನ್ ಆಫ್ ಇಂಡಿಯಾ (ಪಿಎಫ್‌ಐ), ಈ ವರದಿಯನ್ನು ವಿಭಜನೆಯನ್ನು ಸೃಷ್ಟಿಸಲು ಬಳಸುತ್ತಿರುವ ಬಗ್ಗೆ ಕಳವಳವನ್ನು ವ್ಯಕ್ತಪಡಿಸಿತ್ತು.

ಇದನ್ನು ಓದಿ: ಮುಸ್ಲಿಂ ಜನಸಂಖ್ಯೆ ತೋರಿಸಲು ಪಾಕಿಸ್ತಾನದ ಧ್ವಜ ಬಳಕೆ: ಸುವರ್ಣ ನ್ಯೂಸ್, ನಿರೂಪಕ ಅಜಿತ್ ಹನುಮಕ್ಕನವರ್ ವಿರುದ್ಧ ದೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...