Homeಮುಖಪುಟಮನುಸ್ಮೃತಿ ಸುಟ್ಟಿದ್ದು ಏಕೆಂದು ವಿವರಿಸಿದ ಅಮಿತಾಬ್ ಬಚ್ಚನ್ ವಿರುದ್ಧ FIR!

ಮನುಸ್ಮೃತಿ ಸುಟ್ಟಿದ್ದು ಏಕೆಂದು ವಿವರಿಸಿದ ಅಮಿತಾಬ್ ಬಚ್ಚನ್ ವಿರುದ್ಧ FIR!

ಡಾ.ಬಿ.ಆರ್ ಅಂಬೇಡ್ಕರ್‌ರವರು ಜಾತಿ ಬೇಧಭಾವ ಮತ್ತು ಅಸ್ಫೃಶ್ಯತೆಯನ್ನು ವೈಚಾರಿಕವಾಗಿ ವಿರೋಧಿಸುವ ಸಲುವಾಗಿ ಪ್ರಾಚೀನ ಹಿಂದೂ ಗ್ರಂಥ ಮನುಸ್ಮೃತಿಯನ್ನು ಸುಟ್ಟು ಹಾಕಿ ಪ್ರತಿಭಟಿಸಿದ್ದರು.

- Advertisement -
- Advertisement -

ಜನಪ್ರಿಯ ಹಿಂದಿ ಕಾರ್ಯಕ್ರಮ ‘ಕೌನ್ ಬನೇಗ ಕರೋಡ್‌ಪತಿ’ ನಿರೂಪಕ ಅಮಿತಾಬ್ ಬಚ್ಚನ್ ಮತ್ತು ಸೋನಿ ಟಿವಿ ಕಾರ್ಯಕ್ರಮ ತಯಾರಕರ ವಿರುದ್ಧ ಲಕ್ನೋ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ‘1927ರ ಡಿಸೆಂಬರ್ 25 ರಂದು ಡಾ.ಬಿ.ಆರ್ ಅಂಬೇಡ್ಕರ್‌ರವರು ಯಾವ ಧರ್ಮಗ್ರಂಥವನ್ನು ಸುಟ್ಟರು’ ಎಂಬ ಪ್ರಶ್ನೆ ಆಧಾರದಲ್ಲಿ ದೂರು ದಾಖಲಾಗಿತ್ತು.

ನಡೆದುದ್ದೇನು?

ಶುಕ್ರವಾರ ನಡೆದ ಕೌನ್ ಬನೇಗ ಕರೋಡ್‌ಪತಿ ಕಾರ್ಯಕ್ರಮದ ‘ಕರಮ್‌​ವೀರ್’ ಎಂಬ ವಿಶೇಷ ಸಂಚಿಕೆಯಲ್ಲಿ ಅತಿಥಿಗಳಾಗಿ ನಟ ಅನುಪ್ ಸೋನಿ ಮತ್ತು ಸಾಮಾಜಿಕ ಕಾರ್ಯಕರ್ತ ಬೆಜವಾಡ ವಿಲ್ಸನ್ ಹಾಟ್​ ಸೀಟ್​ನಲ್ಲಿ ಕುಳಿತಿದ್ದರು. ಅಮಿತಾಭ್ ಬಚ್ಚನ್ 6,40,000 ರೂಪಾಯಿಯ ನಗದು ಬಹುಮಾನಕ್ಕಾಗಿ ಪ್ರಶ್ನೆಯೊಂದನ್ನು ಕೇಳಿದರು. ಆ ಪ್ರಶ್ನೆ ಈಗಿದೆ.

1927ರ ಡಿಸೆಂಬರ್ 25ರಂದು ಡಾ.ಬಿ.ಆರ್.ಅಂಬೇಡ್ಕರ್​ ಹಾಗೂ ಅವರ ಅನುಯಾಯಿಗಳು ಯಾವ ಗ್ರಂಥದ ಪ್ರತಿಗಳನ್ನು ಸುಟ್ಟು ಹಾಕಿದರು?

ಆಯ್ಕೆಗಳು ಹೀಗಿವೆ:

ಎ. ವಿಷ್ಣುಪುರಾಣ

ಬಿ. ಭಗವದ್ಗೀತೆ

ಸಿ. ಋಗ್ವೇದ

ಡಿ. ಮನುಸ್ಮೃತಿ

ಈ ಪ್ರಶ್ನೆಗೆ ಬೆಜವಾಡ ವಿಲ್ಸನ್ ಮತ್ತು ಅನೂಪ್ ಸೋನಿ ಮನುಸ್ಮೃತಿ ಎಂದು ಉತ್ತರ ನೀಡಿದರು. ಸರಿ ಉತ್ತರವೆಂದು ಘೋಷಿಸಿದ ಅಮಿತಾಬ್ ಬಚ್ಚನ್, “1927ರ ಡಿಸೆಂಬರ್ 25 ರಂದು ಡಾ.ಬಿ.ಆರ್ ಅಂಬೇಡ್ಕರ್‌ರವರು ಜಾತಿ ಬೇಧಭಾವ ಮತ್ತು ಅಸ್ಫೃಶ್ಯತೆಯನ್ನು ವೈಚಾರಿಕವಾಗಿ ವಿರೋಧಿಸುವ ಸಲುವಾಗಿ ಪ್ರಾಚೀನ ಹಿಂದೂ ಗ್ರಂಥ ಮನುಸ್ಮೃತಿಯನ್ನು ಸುಟ್ಟು ಹಾಕಿ ಪ್ರತಿಭಟಿಸಿದರು” ಎಂದು ವಿವರಣೆ ನೀಡಿದರು.

ಎಫ್‌ಐಆರ್ ಏಕೆ?

ಇತಿಹಾಸದಲ್ಲಿ ದಾಖಲಾಗಿರುವ ಈ ಘಟನೆಯ ಪ್ರಶ್ನೆ ಮತ್ತು ಅಮಿತಾಬ್ ಬಚ್ಚನ್‌ರವರ ವಿವರಣೆ ಕೆಲ ಸಾಮಾಜಿಕ ಮಾಧ್ಯಮ ಬಳಕೆದಾರರನ್ನು ಕೆರಳಿಸಿದೆ. ಈ ಪ್ರಶ್ನೆಯು ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿದೆ, ಹಾಗಾಗಿ ಕೌನ್ ಬನೇಗ ಕರೋಡ್‌ಪತಿ ಕಾರ್ಯಕ್ರಮವನ್ನು ಬಹಿಷ್ಕರಿಸಲು ಕರೆ ನೀಡಿದ್ದಾರೆ. ಅಲ್ಲದೇ ಲಕ್ನೋ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.


ಇದನ್ನೂ ಓದಿ: ಡಾ.ಬಿ.ಆರ್.ಅಂಬೇಡ್ಕರ್, ಸಂವಿಧಾನ ಮತ್ತು RSSನ ಮನಪರಿವರ್ತನೆ! : ಅಂಬೇಡ್ಕರ್‌ ಹೊಗಳಿದ ಬಿ.ಎಲ್‌ ಸಂತೋಷ್‌ಗೆ 9 ಪ್ರಶ್ನೆಗಳು


ಸಿನಿಮಾ ನಿರ್ಮಾಪಕ ವಿವೇಕ್​ ಅಗ್ನಿಹೋತ್ರಿ “ಕೆಬಿಸಿಯನ್ನು (ಕೌನ್ ಬನೇಗ ಕರೋಡ್‌ಪತಿ) ಕಮ್ಮಿಸ್‌ಗಳು ಅಪಹರಿಸಿದ್ದಾರೆ. ಇದರಿಂದ ಸಂಸ್ಕೃತಿ ಯುದ್ಧಗಳು ಹೇಗೆ ಗೆಲ್ಲುತ್ತವೆ ಎಂಬುದನ್ನು ಮುಗ್ಧ ಮಕ್ಕಳು ಕಲಿಯುತ್ತಾರೆ. ಇದನ್ನು ಕೋಡಿಂಗ್ ಎಂದು ಕರೆಯಲಾಗುತ್ತದೆ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮತ್ತೊಬ್ಬರು “ಕೆಬಿಸಿ ತನ್ನ ಕಾರ್ಯಕ್ರಮವನ್ನು ‘ಕೌನ್ ಬನೇಗ ಕಮ್ಯುನಿಷ್ಟ್’ ಎಂದು ಬದಲಿಸಿಕೊಳ್ಳಬೇಕು. ನಾವು ಇದನ್ನು ಬಹಿಷ್ಕರಿಸುತ್ತೇವೆ ಎಂದು ಟ್ವೀಟ್ ಮಾಡಿದ್ದಾರೆ.

ಇದು ನಿಜಕ್ಕೂ ವಿವಾದವೇ?

ಅಂಬೇಡ್ಕರ್‌ರವರು ಮನುಸ್ಮೃತಿಯನ್ನು ವಿರೋಧಿಸಿದ್ದುದು, ಅದನ್ನು ಸುಟ್ಟು ಹಾಕಿ ಪ್ರತಿಭಟಿಸಿರುವುದು ಅವರ ಬರಹಗಳಲ್ಲಿ ಮಾತ್ರವಲ್ಲದೇ ನಮ್ಮ ಇತಿಹಾಸದಲ್ಲಿ ದಾಖಲಾಗಿದೆ. ಅದು ನಮಗೆ ಒಪ್ಪಿಗೆ ಇರಬಹುದು ಅಥವಾ ಇಲ್ಲದಿರಬಹುದು. ಆದರೆ ಅದನ್ನು ಅಳಿಸಲು ಅಥವಾ ಬದಲಿಸಲು ಸಾಧ್ಯವಿಲ್ಲ. ಹಾಗಿರುವಾಗ ಇದರಲ್ಲಿ ವಿವಾದ ಎಲ್ಲಿದೆ? ಎಂದು ಕೆಲವರು ಪ್ರಶ್ನಿಸಿದ್ದಾರೆ.

ಕೆಲವರು ಕೆಬಿಸಿಯ ಆ ಪ್ರಶ್ನೆಯನ್ನು ಸಮರ್ಥಿಸಿಕೊಂಡಿದ್ದಾರೆ. “ಆ ಪ್ರಶ್ನೆಯಲ್ಲಿ ಯಾವುದೇ ತಪ್ಪಿಲ್ಲ, ಮೊದಲನೆಯದಾಗಿ ಇದು ಕೇವಲ ಸರಳ ಸಾಮಾನ್ಯ ಜ್ಞಾನದ ಪ್ರಶ್ನೆಯಾಗಿದೆ. ಭಾರತದಲ್ಲಿ ನಡೆಯುತ್ತಿರುವ ವರ್ಣಭೇದದ ಇಂದಿನ ಯುಗದಲ್ಲಿ ಅನೇಕ ಭಾರತೀಯರಿಗೆ ಮನುಸ್ಮೃತಿಯ ಅಪಾಯಗಳ ಬಗ್ಗೆ ತಿಳಿದಿಲ್ಲದಿರುವುದರಿಂದ ಪ್ರಶ್ನೆ ಕೇಳಿರುವುದು ಸರಿಯಾಗಿದೆ. ಮನುಸ್ಮೃತಿಯನ್ನು ಸುಡುವುದು ನಿಜಕ್ಕೂ ಒಂದು ಅದ್ಭುತ ಕ್ರಾಂತಿಕಾರಿ ಕ್ರಿಯೆ. ಜಾತಿವಾದವು ಬೇಗನೆ ಕಣ್ಮರೆಯಾದರೆ ಉತ್ತಮ” ಎಂದು ಅಭಿಪ್ರಾಯಪಟ್ಟಿದ್ದಾರೆ.

ಮತ್ತೊಬ್ಬರು “ಮನುಸ್ಮೃತಿಯು ತಾರತಮ್ಯದ ದಾರಿದೀಪವಾಗಿದೆ ಮತ್ತು ಅದರಿಂದ ಇಂದಿಗೂ ದಲಿತರಿಗೆ ಕಿರುಕುಳ ನೀಡಲಾಗುತ್ತಿದೆ!! ಈ ವಿಷಯದ ಬಗ್ಗೆ ಜಾಗೃತಿ ಮೂಡಿಸಿದ್ದಕ್ಕಾಗಿ ಕೆಬಿಸಿಗೆ ಧನ್ಯವಾದಗಳು. ನಾನು ಕೆಬಿಸಿಯನ್ನು ಬೆಂಬಲಿಸುತ್ತೇನೆ. ಕೆಬಿಸಿಯನ್ನು ಬಾಯ್ಕಾಟ್ ಮಾಡಬೇಕು ಎನ್ನುತ್ತಿರುವವರು ಮೊದಲು ಮನುಸ್ಮೃತಿಯನ್ನು ಓದಿ ನಂತರ ಪ್ರತಿಕ್ರಿಯಿಸಲಿ” ಎಂದು ಸವಾಲು ಹಾಕಿದ್ದಾರೆ.

ಒಟ್ಟಿನಲ್ಲಿ ಇಂದು ಭಾರತದಲ್ಲಿ ತಮಗೆ ರುಚಿಸದ ಎಲ್ಲಾ ವಿಷಯಗಳನ್ನು ಬಾಯ್ಕಾಟ್ ಮಾಡಬೇಕೆಂದು ಆಗ್ರಹಿಸುವುದು ಸಾಮಾನ್ಯವಾಗಿಬಿಟ್ಟಿದೆ. ಅದು ತಮಗೆ ಏಕೆ ಸರಿಯೆನಿಸುತ್ತಿಲ್ಲ, ಅದರಿಂದಾಗುವ ಅಪಾಯಗಳೇನು ಎಂದು ವಿವರವಾಗಿ ಚರ್ಚಿಸುವ ಬದಲು ಬಾಯ್ಕಾಟ್ ಎಂದು ಟ್ರೆಂಡ್ ಮಾಡಲಾಗುತ್ತಿದೆ. ಆ ಪಟ್ಟಿಗೆ ಈ ಪ್ರಕರಣ ಹೊಸ ಸೇರ್ಪಡೆಯಾಗಿದೆ.


ಇದನ್ನೂ ಓದಿ: ಮುತ್ತಯ್ಯ ಮುರುಳೀಧರನ್ ಪಾತ್ರದಲ್ಲಿ ವಿಜಯ್ ಸೇತುಪತಿ: ‘800’ ಚಿತ್ರ ಬಾಯ್ಕಾಟ್ ಎಂದ ತಮಿಳಿಗರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಇದೆಲ್ಲವೂ ನಾಟಕವಷ್ಟೇ.
    ಅಮಿತಾಬ್‌ಗೇ ಆಗಲಿ ಅಥವ ಸೋನಿ ವಾಹಿನಿ ಯವರಿಗೇ ಆಗಲಿ ಬಾಬಾಸಾಹೇಬರ ಕುರಿತಾಗಿ ಯಾವುದೇ ರೀತಿಯ ಪ್ರೀತ್ಯಾದರ ಅಥವ ಗೌರವಗಳಾಗಲೀ ಇಲ್ಲ. ಇಂಥಹ ಪ್ರಶ್ನೆಗಳನ್ನು ಕೇಳಿದಾಗ ನಮ್ಮ ದೇಶದಲ್ಲಿ ಸಹಜವಾಗಿಯೇ ವಾಕ್ಸಮರ ಮತ್ತು ತಿಕ್ಕಾಟಗಳಾಗುತ್ತವೆ, ಜಾಲವಾಹಿನಿಯಲ್ಲಿ ಚರ್ಚೆಗಳಾಗುತ್ತವೆ, ತತ್ಕಾರಣದಿಂದ ಬಹುಜನರ ಗಮನ ಕಾರ್ಯಕ್ರಮದತ್ತ ಹರಿದು, ಕಾರ್ಯಕ್ರಮದ ಕುರಿತಾದ ಟಿ ಆರ್ ಪಿ ಹೆಚ್ಚುತ್ತದೆ ಎಂಬ ದುರಾಲೋಚನೆಯಿಂದ ಈ ಪ್ರಶ್ನೆ ಕೇಳಿರುತ್ತಾರೆ. ಇಷ್ಟು ವರ್ಷಗಳಿಂದ ನಡೆಯುತ್ತಿರುವ ಕಾರ್ಯಕ್ರಮದಲ್ಲಿ ಕೇಳದ ಪ್ರಶ್ನೆ, ಬೆಜವಾಡ ವಿಲ್ಸನ್ ಹಾಟ್‌ಸೀಟ್‌ನಲ್ಲಿ ಕುಳಿತಾಗಲೇ ಕೇಳಿದ್ದಾರೆಂದರೆ, ಅದರ ಅಂತರಾರ್ಥ ತಿಳಿಯುತ್ತದೆ. ಈಗ ಬೆಜವಾಡ ವಿಲ್ಸನ್‌ರವರ ಕುರಿತು ತಿಳಿದಿರುವವರೂ ಇದರ ಕಡೆ ಗಮನವೀಯುತ್ತಾರೆ. ಬಹುಜನರನ್ನು ಬುಟ್ಟಿಗೆ ಹಾಕಿಕೊಳ್ಳುವ ಕಾರ್ಪೊರೇಟ್ ಕುತಂತ್ರವಿದಷ್ಟೇ….
    ವಿಶ್ವನಾಥ ಎನ್ ಅಮಾಸ

  2. ಇದೆಲ್ಲವೂ ನಾಟಕವಷ್ಟೇ.
    ಅಮಿತಾಬ್‌ಗೇ ಆಗಲಿ ಅಥವ ಸೋನಿ ವಾಹಿನಿ ಯವರಿಗೇ ಆಗಲಿ ಬಾಬಾಸಾಹೇಬರ ಕುರಿತಾಗಿ ಯಾವುದೇ ರೀತಿಯ ಪ್ರೀತ್ಯಾದರ ಅಥವ ಗೌರವಗಳಾಗಲೀ ಇಲ್ಲ. ಇಂಥಹ ಪ್ರಶ್ನೆಗಳನ್ನು ಕೇಳಿದಾಗ ನಮ್ಮ ದೇಶದಲ್ಲಿ ಸಹಜವಾಗಿಯೇ ವಾಕ್ಸಮರ ಮತ್ತು ತಿಕ್ಕಾಟಗಳಾಗುತ್ತವೆ, ಜಾಲವಾಹಿನಿಯಲ್ಲಿ ಚರ್ಚೆಗಳಾಗುತ್ತವೆ, ತತ್ಕಾರಣದಿಂದ ಬಹುಜನರ ಗಮನ ಕಾರ್ಯಕ್ರಮದತ್ತ ಹರಿದು, ಕಾರ್ಯಕ್ರಮದ ಕುರಿತಾದ ಟಿ ಆರ್ ಪಿ ಹೆಚ್ಚುತ್ತದೆ ಎಂಬ ದುರಾಲೋಚನೆಯಿಂದ ಈ ಪ್ರಶ್ನೆ ಕೇಳಿರುತ್ತಾರೆ. ಇಷ್ಟು ವರ್ಷಗಳಿಂದ ನಡೆಯುತ್ತಿರುವ ಕಾರ್ಯಕ್ರಮದಲ್ಲಿ ಕೇಳದ ಪ್ರಶ್ನೆ, ಬೆಜವಾಡ ವಿಲ್ಸನ್ ಹಾಟ್‌ಸೀಟ್‌ನಲ್ಲಿ ಕುಳಿತಾಗಲೇ ಕೇಳಿದ್ದಾರೆಂದರೆ, ಅದರ ಅಂತರಾರ್ಥ ತಿಳಿಯುತ್ತದೆ. ಈಗ ಬೆಜವಾಡ ವಿಲ್ಸನ್‌ರವರ ಕುರಿತು ತಿಳಿದಿರುವವರೂ ಇದರ ಕಡೆ ಗಮನವೀಯುತ್ತಾರೆ. ಬಹುಜನರನ್ನು ಬುಟ್ಟಿಗೆ ಹಾಕಿಕೊಳ್ಳುವ ಕಾರ್ಪೊರೇಟ್ ಕುತಂತ್ರವಿದಷ್ಟೇ….
    ವಿಶ್ವನಾಥ ಎನ್ ಅಮಾಸ
    K V Nayaka

  3. ಅಮಿತಾಬ್ ಜೀ ರವರು ಕೇಳಿದ ಪ್ರಶ್ನೆ ಕರೆಕ್ಟ್..ಅದಕ್ಕೆ ನೀಡಿದ ಉತ್ತರ ಸರಿ ಇದೆ…… ನಮ್ಮ ಬಾರತದ ಎಸ್ಟೋ ಜನರಿಗೆ ಬಾಬ ಸಾಬ್ ಅಂಬೇಡ್ಕರ್ ರವರು ಮನುಸ್ಮೃತಿ ಯನ್ನು ಸುಟ್ಟೀಧೂ ಗೊತ್ತಿಲ್ಲ ….ಇದ್ದರಿಂದ ಅದನ್ನು ಏಕೆ ಏತಕ್ಕಾಗಿ ಯಾವ ಜನರಿಗೆ ಅನ್ಯಾಯ ಆಗಿದೆ…ಅದರಲ್ಲಿ ಹಿಂದುಗಳು ಬಡ ಹಿಂದು ಜನರನ್ನು ಹೀಗೆ ಹಲವಾರು ಬಾರಿ ದೇಶದ ನಾನಾ ಭಾಗಗಳಲ್ಲಿ.. ಅಂದರೆ ಕನ್ಯಾಕುಮಾರಿ ಯಿಂದ….ಕಾಶ್ಮೀರದ ವರೆಗೆ…ಈ ಬಡ ಹಿಂದುಗಳಿಗೆ ಶಾಲೆಗೆ….ಕುಡಿಯುವ ನೀರಿಗೆ…ದೇವಸ್ಥಾನ ಪ್ರವೇಶ…ಇನ್ನು ಎಷ್ಟೆಷ್ಟೋ….ಕಾನೂನು ಮಾಡಿ ಬಡ ಜನರಿಗೆ ಬದುಕಲು ಕಷ್ಟ ಆಗಿದೆ……ದಯವಿಟ್ಟು ಮನುಸ್ಮೃತಿ ಜನರು ಓದಿ ಆಗ ನೀವು ಸಹ ಅದನ್ನು ಸುಡಲು ಮನಸ್ಸು ಬರುತ್ತೆ….ಈ ಪ್ರಶ್ನೆ ಕೇಳಿದ್ದು ತಪ್ಪಲ್ಲ…ಕೆಲವು ಬ್ರಾಹ್ಮಣ ಮಂಧಿಗಳು ಮಾತ್ರ ಜನರಿಗೆ ಇದು ಗೊತ್ತಿರಲಿಲ್ಲ…ಮತ್ತೇ ಜನರಿಗೆ ಗೊತ್ತು ಮಾಡಿ ನಮ್ಮ ಮರ್ಯಾದೆ ಹಾಳು ಮಾಡ್ತಾರೆ ಅಂಥಾ ..ಕೋರ್ಟ್ನಲ್ಲಿ ಕೇಸ್ ಹಾಕುತ್ತಾರೆ….ಅಮಿತಾಬ್ ರವರರಿಗೆ ಏನು ಆಗಲ್ಲ…ಜೈ ಅಮಿತಾಬ್ ಜಿ….

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...