Homeಮುಖಪುಟಮನುಸ್ಮೃತಿ ಸುಟ್ಟಿದ್ದು ಏಕೆಂದು ವಿವರಿಸಿದ ಅಮಿತಾಬ್ ಬಚ್ಚನ್ ವಿರುದ್ಧ FIR!

ಮನುಸ್ಮೃತಿ ಸುಟ್ಟಿದ್ದು ಏಕೆಂದು ವಿವರಿಸಿದ ಅಮಿತಾಬ್ ಬಚ್ಚನ್ ವಿರುದ್ಧ FIR!

ಡಾ.ಬಿ.ಆರ್ ಅಂಬೇಡ್ಕರ್‌ರವರು ಜಾತಿ ಬೇಧಭಾವ ಮತ್ತು ಅಸ್ಫೃಶ್ಯತೆಯನ್ನು ವೈಚಾರಿಕವಾಗಿ ವಿರೋಧಿಸುವ ಸಲುವಾಗಿ ಪ್ರಾಚೀನ ಹಿಂದೂ ಗ್ರಂಥ ಮನುಸ್ಮೃತಿಯನ್ನು ಸುಟ್ಟು ಹಾಕಿ ಪ್ರತಿಭಟಿಸಿದ್ದರು.

- Advertisement -
- Advertisement -

ಜನಪ್ರಿಯ ಹಿಂದಿ ಕಾರ್ಯಕ್ರಮ ‘ಕೌನ್ ಬನೇಗ ಕರೋಡ್‌ಪತಿ’ ನಿರೂಪಕ ಅಮಿತಾಬ್ ಬಚ್ಚನ್ ಮತ್ತು ಸೋನಿ ಟಿವಿ ಕಾರ್ಯಕ್ರಮ ತಯಾರಕರ ವಿರುದ್ಧ ಲಕ್ನೋ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ‘1927ರ ಡಿಸೆಂಬರ್ 25 ರಂದು ಡಾ.ಬಿ.ಆರ್ ಅಂಬೇಡ್ಕರ್‌ರವರು ಯಾವ ಧರ್ಮಗ್ರಂಥವನ್ನು ಸುಟ್ಟರು’ ಎಂಬ ಪ್ರಶ್ನೆ ಆಧಾರದಲ್ಲಿ ದೂರು ದಾಖಲಾಗಿತ್ತು.

ನಡೆದುದ್ದೇನು?

ಶುಕ್ರವಾರ ನಡೆದ ಕೌನ್ ಬನೇಗ ಕರೋಡ್‌ಪತಿ ಕಾರ್ಯಕ್ರಮದ ‘ಕರಮ್‌​ವೀರ್’ ಎಂಬ ವಿಶೇಷ ಸಂಚಿಕೆಯಲ್ಲಿ ಅತಿಥಿಗಳಾಗಿ ನಟ ಅನುಪ್ ಸೋನಿ ಮತ್ತು ಸಾಮಾಜಿಕ ಕಾರ್ಯಕರ್ತ ಬೆಜವಾಡ ವಿಲ್ಸನ್ ಹಾಟ್​ ಸೀಟ್​ನಲ್ಲಿ ಕುಳಿತಿದ್ದರು. ಅಮಿತಾಭ್ ಬಚ್ಚನ್ 6,40,000 ರೂಪಾಯಿಯ ನಗದು ಬಹುಮಾನಕ್ಕಾಗಿ ಪ್ರಶ್ನೆಯೊಂದನ್ನು ಕೇಳಿದರು. ಆ ಪ್ರಶ್ನೆ ಈಗಿದೆ.

1927ರ ಡಿಸೆಂಬರ್ 25ರಂದು ಡಾ.ಬಿ.ಆರ್.ಅಂಬೇಡ್ಕರ್​ ಹಾಗೂ ಅವರ ಅನುಯಾಯಿಗಳು ಯಾವ ಗ್ರಂಥದ ಪ್ರತಿಗಳನ್ನು ಸುಟ್ಟು ಹಾಕಿದರು?

ಆಯ್ಕೆಗಳು ಹೀಗಿವೆ:

ಎ. ವಿಷ್ಣುಪುರಾಣ

ಬಿ. ಭಗವದ್ಗೀತೆ

ಸಿ. ಋಗ್ವೇದ

ಡಿ. ಮನುಸ್ಮೃತಿ

ಈ ಪ್ರಶ್ನೆಗೆ ಬೆಜವಾಡ ವಿಲ್ಸನ್ ಮತ್ತು ಅನೂಪ್ ಸೋನಿ ಮನುಸ್ಮೃತಿ ಎಂದು ಉತ್ತರ ನೀಡಿದರು. ಸರಿ ಉತ್ತರವೆಂದು ಘೋಷಿಸಿದ ಅಮಿತಾಬ್ ಬಚ್ಚನ್, “1927ರ ಡಿಸೆಂಬರ್ 25 ರಂದು ಡಾ.ಬಿ.ಆರ್ ಅಂಬೇಡ್ಕರ್‌ರವರು ಜಾತಿ ಬೇಧಭಾವ ಮತ್ತು ಅಸ್ಫೃಶ್ಯತೆಯನ್ನು ವೈಚಾರಿಕವಾಗಿ ವಿರೋಧಿಸುವ ಸಲುವಾಗಿ ಪ್ರಾಚೀನ ಹಿಂದೂ ಗ್ರಂಥ ಮನುಸ್ಮೃತಿಯನ್ನು ಸುಟ್ಟು ಹಾಕಿ ಪ್ರತಿಭಟಿಸಿದರು” ಎಂದು ವಿವರಣೆ ನೀಡಿದರು.

ಎಫ್‌ಐಆರ್ ಏಕೆ?

ಇತಿಹಾಸದಲ್ಲಿ ದಾಖಲಾಗಿರುವ ಈ ಘಟನೆಯ ಪ್ರಶ್ನೆ ಮತ್ತು ಅಮಿತಾಬ್ ಬಚ್ಚನ್‌ರವರ ವಿವರಣೆ ಕೆಲ ಸಾಮಾಜಿಕ ಮಾಧ್ಯಮ ಬಳಕೆದಾರರನ್ನು ಕೆರಳಿಸಿದೆ. ಈ ಪ್ರಶ್ನೆಯು ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿದೆ, ಹಾಗಾಗಿ ಕೌನ್ ಬನೇಗ ಕರೋಡ್‌ಪತಿ ಕಾರ್ಯಕ್ರಮವನ್ನು ಬಹಿಷ್ಕರಿಸಲು ಕರೆ ನೀಡಿದ್ದಾರೆ. ಅಲ್ಲದೇ ಲಕ್ನೋ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.


ಇದನ್ನೂ ಓದಿ: ಡಾ.ಬಿ.ಆರ್.ಅಂಬೇಡ್ಕರ್, ಸಂವಿಧಾನ ಮತ್ತು RSSನ ಮನಪರಿವರ್ತನೆ! : ಅಂಬೇಡ್ಕರ್‌ ಹೊಗಳಿದ ಬಿ.ಎಲ್‌ ಸಂತೋಷ್‌ಗೆ 9 ಪ್ರಶ್ನೆಗಳು


ಸಿನಿಮಾ ನಿರ್ಮಾಪಕ ವಿವೇಕ್​ ಅಗ್ನಿಹೋತ್ರಿ “ಕೆಬಿಸಿಯನ್ನು (ಕೌನ್ ಬನೇಗ ಕರೋಡ್‌ಪತಿ) ಕಮ್ಮಿಸ್‌ಗಳು ಅಪಹರಿಸಿದ್ದಾರೆ. ಇದರಿಂದ ಸಂಸ್ಕೃತಿ ಯುದ್ಧಗಳು ಹೇಗೆ ಗೆಲ್ಲುತ್ತವೆ ಎಂಬುದನ್ನು ಮುಗ್ಧ ಮಕ್ಕಳು ಕಲಿಯುತ್ತಾರೆ. ಇದನ್ನು ಕೋಡಿಂಗ್ ಎಂದು ಕರೆಯಲಾಗುತ್ತದೆ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮತ್ತೊಬ್ಬರು “ಕೆಬಿಸಿ ತನ್ನ ಕಾರ್ಯಕ್ರಮವನ್ನು ‘ಕೌನ್ ಬನೇಗ ಕಮ್ಯುನಿಷ್ಟ್’ ಎಂದು ಬದಲಿಸಿಕೊಳ್ಳಬೇಕು. ನಾವು ಇದನ್ನು ಬಹಿಷ್ಕರಿಸುತ್ತೇವೆ ಎಂದು ಟ್ವೀಟ್ ಮಾಡಿದ್ದಾರೆ.

ಇದು ನಿಜಕ್ಕೂ ವಿವಾದವೇ?

ಅಂಬೇಡ್ಕರ್‌ರವರು ಮನುಸ್ಮೃತಿಯನ್ನು ವಿರೋಧಿಸಿದ್ದುದು, ಅದನ್ನು ಸುಟ್ಟು ಹಾಕಿ ಪ್ರತಿಭಟಿಸಿರುವುದು ಅವರ ಬರಹಗಳಲ್ಲಿ ಮಾತ್ರವಲ್ಲದೇ ನಮ್ಮ ಇತಿಹಾಸದಲ್ಲಿ ದಾಖಲಾಗಿದೆ. ಅದು ನಮಗೆ ಒಪ್ಪಿಗೆ ಇರಬಹುದು ಅಥವಾ ಇಲ್ಲದಿರಬಹುದು. ಆದರೆ ಅದನ್ನು ಅಳಿಸಲು ಅಥವಾ ಬದಲಿಸಲು ಸಾಧ್ಯವಿಲ್ಲ. ಹಾಗಿರುವಾಗ ಇದರಲ್ಲಿ ವಿವಾದ ಎಲ್ಲಿದೆ? ಎಂದು ಕೆಲವರು ಪ್ರಶ್ನಿಸಿದ್ದಾರೆ.

ಕೆಲವರು ಕೆಬಿಸಿಯ ಆ ಪ್ರಶ್ನೆಯನ್ನು ಸಮರ್ಥಿಸಿಕೊಂಡಿದ್ದಾರೆ. “ಆ ಪ್ರಶ್ನೆಯಲ್ಲಿ ಯಾವುದೇ ತಪ್ಪಿಲ್ಲ, ಮೊದಲನೆಯದಾಗಿ ಇದು ಕೇವಲ ಸರಳ ಸಾಮಾನ್ಯ ಜ್ಞಾನದ ಪ್ರಶ್ನೆಯಾಗಿದೆ. ಭಾರತದಲ್ಲಿ ನಡೆಯುತ್ತಿರುವ ವರ್ಣಭೇದದ ಇಂದಿನ ಯುಗದಲ್ಲಿ ಅನೇಕ ಭಾರತೀಯರಿಗೆ ಮನುಸ್ಮೃತಿಯ ಅಪಾಯಗಳ ಬಗ್ಗೆ ತಿಳಿದಿಲ್ಲದಿರುವುದರಿಂದ ಪ್ರಶ್ನೆ ಕೇಳಿರುವುದು ಸರಿಯಾಗಿದೆ. ಮನುಸ್ಮೃತಿಯನ್ನು ಸುಡುವುದು ನಿಜಕ್ಕೂ ಒಂದು ಅದ್ಭುತ ಕ್ರಾಂತಿಕಾರಿ ಕ್ರಿಯೆ. ಜಾತಿವಾದವು ಬೇಗನೆ ಕಣ್ಮರೆಯಾದರೆ ಉತ್ತಮ” ಎಂದು ಅಭಿಪ್ರಾಯಪಟ್ಟಿದ್ದಾರೆ.

ಮತ್ತೊಬ್ಬರು “ಮನುಸ್ಮೃತಿಯು ತಾರತಮ್ಯದ ದಾರಿದೀಪವಾಗಿದೆ ಮತ್ತು ಅದರಿಂದ ಇಂದಿಗೂ ದಲಿತರಿಗೆ ಕಿರುಕುಳ ನೀಡಲಾಗುತ್ತಿದೆ!! ಈ ವಿಷಯದ ಬಗ್ಗೆ ಜಾಗೃತಿ ಮೂಡಿಸಿದ್ದಕ್ಕಾಗಿ ಕೆಬಿಸಿಗೆ ಧನ್ಯವಾದಗಳು. ನಾನು ಕೆಬಿಸಿಯನ್ನು ಬೆಂಬಲಿಸುತ್ತೇನೆ. ಕೆಬಿಸಿಯನ್ನು ಬಾಯ್ಕಾಟ್ ಮಾಡಬೇಕು ಎನ್ನುತ್ತಿರುವವರು ಮೊದಲು ಮನುಸ್ಮೃತಿಯನ್ನು ಓದಿ ನಂತರ ಪ್ರತಿಕ್ರಿಯಿಸಲಿ” ಎಂದು ಸವಾಲು ಹಾಕಿದ್ದಾರೆ.

ಒಟ್ಟಿನಲ್ಲಿ ಇಂದು ಭಾರತದಲ್ಲಿ ತಮಗೆ ರುಚಿಸದ ಎಲ್ಲಾ ವಿಷಯಗಳನ್ನು ಬಾಯ್ಕಾಟ್ ಮಾಡಬೇಕೆಂದು ಆಗ್ರಹಿಸುವುದು ಸಾಮಾನ್ಯವಾಗಿಬಿಟ್ಟಿದೆ. ಅದು ತಮಗೆ ಏಕೆ ಸರಿಯೆನಿಸುತ್ತಿಲ್ಲ, ಅದರಿಂದಾಗುವ ಅಪಾಯಗಳೇನು ಎಂದು ವಿವರವಾಗಿ ಚರ್ಚಿಸುವ ಬದಲು ಬಾಯ್ಕಾಟ್ ಎಂದು ಟ್ರೆಂಡ್ ಮಾಡಲಾಗುತ್ತಿದೆ. ಆ ಪಟ್ಟಿಗೆ ಈ ಪ್ರಕರಣ ಹೊಸ ಸೇರ್ಪಡೆಯಾಗಿದೆ.


ಇದನ್ನೂ ಓದಿ: ಮುತ್ತಯ್ಯ ಮುರುಳೀಧರನ್ ಪಾತ್ರದಲ್ಲಿ ವಿಜಯ್ ಸೇತುಪತಿ: ‘800’ ಚಿತ್ರ ಬಾಯ್ಕಾಟ್ ಎಂದ ತಮಿಳಿಗರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಇದೆಲ್ಲವೂ ನಾಟಕವಷ್ಟೇ.
    ಅಮಿತಾಬ್‌ಗೇ ಆಗಲಿ ಅಥವ ಸೋನಿ ವಾಹಿನಿ ಯವರಿಗೇ ಆಗಲಿ ಬಾಬಾಸಾಹೇಬರ ಕುರಿತಾಗಿ ಯಾವುದೇ ರೀತಿಯ ಪ್ರೀತ್ಯಾದರ ಅಥವ ಗೌರವಗಳಾಗಲೀ ಇಲ್ಲ. ಇಂಥಹ ಪ್ರಶ್ನೆಗಳನ್ನು ಕೇಳಿದಾಗ ನಮ್ಮ ದೇಶದಲ್ಲಿ ಸಹಜವಾಗಿಯೇ ವಾಕ್ಸಮರ ಮತ್ತು ತಿಕ್ಕಾಟಗಳಾಗುತ್ತವೆ, ಜಾಲವಾಹಿನಿಯಲ್ಲಿ ಚರ್ಚೆಗಳಾಗುತ್ತವೆ, ತತ್ಕಾರಣದಿಂದ ಬಹುಜನರ ಗಮನ ಕಾರ್ಯಕ್ರಮದತ್ತ ಹರಿದು, ಕಾರ್ಯಕ್ರಮದ ಕುರಿತಾದ ಟಿ ಆರ್ ಪಿ ಹೆಚ್ಚುತ್ತದೆ ಎಂಬ ದುರಾಲೋಚನೆಯಿಂದ ಈ ಪ್ರಶ್ನೆ ಕೇಳಿರುತ್ತಾರೆ. ಇಷ್ಟು ವರ್ಷಗಳಿಂದ ನಡೆಯುತ್ತಿರುವ ಕಾರ್ಯಕ್ರಮದಲ್ಲಿ ಕೇಳದ ಪ್ರಶ್ನೆ, ಬೆಜವಾಡ ವಿಲ್ಸನ್ ಹಾಟ್‌ಸೀಟ್‌ನಲ್ಲಿ ಕುಳಿತಾಗಲೇ ಕೇಳಿದ್ದಾರೆಂದರೆ, ಅದರ ಅಂತರಾರ್ಥ ತಿಳಿಯುತ್ತದೆ. ಈಗ ಬೆಜವಾಡ ವಿಲ್ಸನ್‌ರವರ ಕುರಿತು ತಿಳಿದಿರುವವರೂ ಇದರ ಕಡೆ ಗಮನವೀಯುತ್ತಾರೆ. ಬಹುಜನರನ್ನು ಬುಟ್ಟಿಗೆ ಹಾಕಿಕೊಳ್ಳುವ ಕಾರ್ಪೊರೇಟ್ ಕುತಂತ್ರವಿದಷ್ಟೇ….
    ವಿಶ್ವನಾಥ ಎನ್ ಅಮಾಸ

  2. ಇದೆಲ್ಲವೂ ನಾಟಕವಷ್ಟೇ.
    ಅಮಿತಾಬ್‌ಗೇ ಆಗಲಿ ಅಥವ ಸೋನಿ ವಾಹಿನಿ ಯವರಿಗೇ ಆಗಲಿ ಬಾಬಾಸಾಹೇಬರ ಕುರಿತಾಗಿ ಯಾವುದೇ ರೀತಿಯ ಪ್ರೀತ್ಯಾದರ ಅಥವ ಗೌರವಗಳಾಗಲೀ ಇಲ್ಲ. ಇಂಥಹ ಪ್ರಶ್ನೆಗಳನ್ನು ಕೇಳಿದಾಗ ನಮ್ಮ ದೇಶದಲ್ಲಿ ಸಹಜವಾಗಿಯೇ ವಾಕ್ಸಮರ ಮತ್ತು ತಿಕ್ಕಾಟಗಳಾಗುತ್ತವೆ, ಜಾಲವಾಹಿನಿಯಲ್ಲಿ ಚರ್ಚೆಗಳಾಗುತ್ತವೆ, ತತ್ಕಾರಣದಿಂದ ಬಹುಜನರ ಗಮನ ಕಾರ್ಯಕ್ರಮದತ್ತ ಹರಿದು, ಕಾರ್ಯಕ್ರಮದ ಕುರಿತಾದ ಟಿ ಆರ್ ಪಿ ಹೆಚ್ಚುತ್ತದೆ ಎಂಬ ದುರಾಲೋಚನೆಯಿಂದ ಈ ಪ್ರಶ್ನೆ ಕೇಳಿರುತ್ತಾರೆ. ಇಷ್ಟು ವರ್ಷಗಳಿಂದ ನಡೆಯುತ್ತಿರುವ ಕಾರ್ಯಕ್ರಮದಲ್ಲಿ ಕೇಳದ ಪ್ರಶ್ನೆ, ಬೆಜವಾಡ ವಿಲ್ಸನ್ ಹಾಟ್‌ಸೀಟ್‌ನಲ್ಲಿ ಕುಳಿತಾಗಲೇ ಕೇಳಿದ್ದಾರೆಂದರೆ, ಅದರ ಅಂತರಾರ್ಥ ತಿಳಿಯುತ್ತದೆ. ಈಗ ಬೆಜವಾಡ ವಿಲ್ಸನ್‌ರವರ ಕುರಿತು ತಿಳಿದಿರುವವರೂ ಇದರ ಕಡೆ ಗಮನವೀಯುತ್ತಾರೆ. ಬಹುಜನರನ್ನು ಬುಟ್ಟಿಗೆ ಹಾಕಿಕೊಳ್ಳುವ ಕಾರ್ಪೊರೇಟ್ ಕುತಂತ್ರವಿದಷ್ಟೇ….
    ವಿಶ್ವನಾಥ ಎನ್ ಅಮಾಸ
    K V Nayaka

  3. ಅಮಿತಾಬ್ ಜೀ ರವರು ಕೇಳಿದ ಪ್ರಶ್ನೆ ಕರೆಕ್ಟ್..ಅದಕ್ಕೆ ನೀಡಿದ ಉತ್ತರ ಸರಿ ಇದೆ…… ನಮ್ಮ ಬಾರತದ ಎಸ್ಟೋ ಜನರಿಗೆ ಬಾಬ ಸಾಬ್ ಅಂಬೇಡ್ಕರ್ ರವರು ಮನುಸ್ಮೃತಿ ಯನ್ನು ಸುಟ್ಟೀಧೂ ಗೊತ್ತಿಲ್ಲ ….ಇದ್ದರಿಂದ ಅದನ್ನು ಏಕೆ ಏತಕ್ಕಾಗಿ ಯಾವ ಜನರಿಗೆ ಅನ್ಯಾಯ ಆಗಿದೆ…ಅದರಲ್ಲಿ ಹಿಂದುಗಳು ಬಡ ಹಿಂದು ಜನರನ್ನು ಹೀಗೆ ಹಲವಾರು ಬಾರಿ ದೇಶದ ನಾನಾ ಭಾಗಗಳಲ್ಲಿ.. ಅಂದರೆ ಕನ್ಯಾಕುಮಾರಿ ಯಿಂದ….ಕಾಶ್ಮೀರದ ವರೆಗೆ…ಈ ಬಡ ಹಿಂದುಗಳಿಗೆ ಶಾಲೆಗೆ….ಕುಡಿಯುವ ನೀರಿಗೆ…ದೇವಸ್ಥಾನ ಪ್ರವೇಶ…ಇನ್ನು ಎಷ್ಟೆಷ್ಟೋ….ಕಾನೂನು ಮಾಡಿ ಬಡ ಜನರಿಗೆ ಬದುಕಲು ಕಷ್ಟ ಆಗಿದೆ……ದಯವಿಟ್ಟು ಮನುಸ್ಮೃತಿ ಜನರು ಓದಿ ಆಗ ನೀವು ಸಹ ಅದನ್ನು ಸುಡಲು ಮನಸ್ಸು ಬರುತ್ತೆ….ಈ ಪ್ರಶ್ನೆ ಕೇಳಿದ್ದು ತಪ್ಪಲ್ಲ…ಕೆಲವು ಬ್ರಾಹ್ಮಣ ಮಂಧಿಗಳು ಮಾತ್ರ ಜನರಿಗೆ ಇದು ಗೊತ್ತಿರಲಿಲ್ಲ…ಮತ್ತೇ ಜನರಿಗೆ ಗೊತ್ತು ಮಾಡಿ ನಮ್ಮ ಮರ್ಯಾದೆ ಹಾಳು ಮಾಡ್ತಾರೆ ಅಂಥಾ ..ಕೋರ್ಟ್ನಲ್ಲಿ ಕೇಸ್ ಹಾಕುತ್ತಾರೆ….ಅಮಿತಾಬ್ ರವರರಿಗೆ ಏನು ಆಗಲ್ಲ…ಜೈ ಅಮಿತಾಬ್ ಜಿ….

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...