Homeಮುಖಪುಟಮನುಸ್ಮೃತಿ ಸುಟ್ಟಿದ್ದು ಏಕೆಂದು ವಿವರಿಸಿದ ಅಮಿತಾಬ್ ಬಚ್ಚನ್ ವಿರುದ್ಧ FIR!

ಮನುಸ್ಮೃತಿ ಸುಟ್ಟಿದ್ದು ಏಕೆಂದು ವಿವರಿಸಿದ ಅಮಿತಾಬ್ ಬಚ್ಚನ್ ವಿರುದ್ಧ FIR!

ಡಾ.ಬಿ.ಆರ್ ಅಂಬೇಡ್ಕರ್‌ರವರು ಜಾತಿ ಬೇಧಭಾವ ಮತ್ತು ಅಸ್ಫೃಶ್ಯತೆಯನ್ನು ವೈಚಾರಿಕವಾಗಿ ವಿರೋಧಿಸುವ ಸಲುವಾಗಿ ಪ್ರಾಚೀನ ಹಿಂದೂ ಗ್ರಂಥ ಮನುಸ್ಮೃತಿಯನ್ನು ಸುಟ್ಟು ಹಾಕಿ ಪ್ರತಿಭಟಿಸಿದ್ದರು.

- Advertisement -
- Advertisement -

ಜನಪ್ರಿಯ ಹಿಂದಿ ಕಾರ್ಯಕ್ರಮ ‘ಕೌನ್ ಬನೇಗ ಕರೋಡ್‌ಪತಿ’ ನಿರೂಪಕ ಅಮಿತಾಬ್ ಬಚ್ಚನ್ ಮತ್ತು ಸೋನಿ ಟಿವಿ ಕಾರ್ಯಕ್ರಮ ತಯಾರಕರ ವಿರುದ್ಧ ಲಕ್ನೋ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ‘1927ರ ಡಿಸೆಂಬರ್ 25 ರಂದು ಡಾ.ಬಿ.ಆರ್ ಅಂಬೇಡ್ಕರ್‌ರವರು ಯಾವ ಧರ್ಮಗ್ರಂಥವನ್ನು ಸುಟ್ಟರು’ ಎಂಬ ಪ್ರಶ್ನೆ ಆಧಾರದಲ್ಲಿ ದೂರು ದಾಖಲಾಗಿತ್ತು.

ನಡೆದುದ್ದೇನು?

ಶುಕ್ರವಾರ ನಡೆದ ಕೌನ್ ಬನೇಗ ಕರೋಡ್‌ಪತಿ ಕಾರ್ಯಕ್ರಮದ ‘ಕರಮ್‌​ವೀರ್’ ಎಂಬ ವಿಶೇಷ ಸಂಚಿಕೆಯಲ್ಲಿ ಅತಿಥಿಗಳಾಗಿ ನಟ ಅನುಪ್ ಸೋನಿ ಮತ್ತು ಸಾಮಾಜಿಕ ಕಾರ್ಯಕರ್ತ ಬೆಜವಾಡ ವಿಲ್ಸನ್ ಹಾಟ್​ ಸೀಟ್​ನಲ್ಲಿ ಕುಳಿತಿದ್ದರು. ಅಮಿತಾಭ್ ಬಚ್ಚನ್ 6,40,000 ರೂಪಾಯಿಯ ನಗದು ಬಹುಮಾನಕ್ಕಾಗಿ ಪ್ರಶ್ನೆಯೊಂದನ್ನು ಕೇಳಿದರು. ಆ ಪ್ರಶ್ನೆ ಈಗಿದೆ.

1927ರ ಡಿಸೆಂಬರ್ 25ರಂದು ಡಾ.ಬಿ.ಆರ್.ಅಂಬೇಡ್ಕರ್​ ಹಾಗೂ ಅವರ ಅನುಯಾಯಿಗಳು ಯಾವ ಗ್ರಂಥದ ಪ್ರತಿಗಳನ್ನು ಸುಟ್ಟು ಹಾಕಿದರು?

ಆಯ್ಕೆಗಳು ಹೀಗಿವೆ:

ಎ. ವಿಷ್ಣುಪುರಾಣ

ಬಿ. ಭಗವದ್ಗೀತೆ

ಸಿ. ಋಗ್ವೇದ

ಡಿ. ಮನುಸ್ಮೃತಿ

ಈ ಪ್ರಶ್ನೆಗೆ ಬೆಜವಾಡ ವಿಲ್ಸನ್ ಮತ್ತು ಅನೂಪ್ ಸೋನಿ ಮನುಸ್ಮೃತಿ ಎಂದು ಉತ್ತರ ನೀಡಿದರು. ಸರಿ ಉತ್ತರವೆಂದು ಘೋಷಿಸಿದ ಅಮಿತಾಬ್ ಬಚ್ಚನ್, “1927ರ ಡಿಸೆಂಬರ್ 25 ರಂದು ಡಾ.ಬಿ.ಆರ್ ಅಂಬೇಡ್ಕರ್‌ರವರು ಜಾತಿ ಬೇಧಭಾವ ಮತ್ತು ಅಸ್ಫೃಶ್ಯತೆಯನ್ನು ವೈಚಾರಿಕವಾಗಿ ವಿರೋಧಿಸುವ ಸಲುವಾಗಿ ಪ್ರಾಚೀನ ಹಿಂದೂ ಗ್ರಂಥ ಮನುಸ್ಮೃತಿಯನ್ನು ಸುಟ್ಟು ಹಾಕಿ ಪ್ರತಿಭಟಿಸಿದರು” ಎಂದು ವಿವರಣೆ ನೀಡಿದರು.

ಎಫ್‌ಐಆರ್ ಏಕೆ?

ಇತಿಹಾಸದಲ್ಲಿ ದಾಖಲಾಗಿರುವ ಈ ಘಟನೆಯ ಪ್ರಶ್ನೆ ಮತ್ತು ಅಮಿತಾಬ್ ಬಚ್ಚನ್‌ರವರ ವಿವರಣೆ ಕೆಲ ಸಾಮಾಜಿಕ ಮಾಧ್ಯಮ ಬಳಕೆದಾರರನ್ನು ಕೆರಳಿಸಿದೆ. ಈ ಪ್ರಶ್ನೆಯು ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿದೆ, ಹಾಗಾಗಿ ಕೌನ್ ಬನೇಗ ಕರೋಡ್‌ಪತಿ ಕಾರ್ಯಕ್ರಮವನ್ನು ಬಹಿಷ್ಕರಿಸಲು ಕರೆ ನೀಡಿದ್ದಾರೆ. ಅಲ್ಲದೇ ಲಕ್ನೋ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.


ಇದನ್ನೂ ಓದಿ: ಡಾ.ಬಿ.ಆರ್.ಅಂಬೇಡ್ಕರ್, ಸಂವಿಧಾನ ಮತ್ತು RSSನ ಮನಪರಿವರ್ತನೆ! : ಅಂಬೇಡ್ಕರ್‌ ಹೊಗಳಿದ ಬಿ.ಎಲ್‌ ಸಂತೋಷ್‌ಗೆ 9 ಪ್ರಶ್ನೆಗಳು


ಸಿನಿಮಾ ನಿರ್ಮಾಪಕ ವಿವೇಕ್​ ಅಗ್ನಿಹೋತ್ರಿ “ಕೆಬಿಸಿಯನ್ನು (ಕೌನ್ ಬನೇಗ ಕರೋಡ್‌ಪತಿ) ಕಮ್ಮಿಸ್‌ಗಳು ಅಪಹರಿಸಿದ್ದಾರೆ. ಇದರಿಂದ ಸಂಸ್ಕೃತಿ ಯುದ್ಧಗಳು ಹೇಗೆ ಗೆಲ್ಲುತ್ತವೆ ಎಂಬುದನ್ನು ಮುಗ್ಧ ಮಕ್ಕಳು ಕಲಿಯುತ್ತಾರೆ. ಇದನ್ನು ಕೋಡಿಂಗ್ ಎಂದು ಕರೆಯಲಾಗುತ್ತದೆ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮತ್ತೊಬ್ಬರು “ಕೆಬಿಸಿ ತನ್ನ ಕಾರ್ಯಕ್ರಮವನ್ನು ‘ಕೌನ್ ಬನೇಗ ಕಮ್ಯುನಿಷ್ಟ್’ ಎಂದು ಬದಲಿಸಿಕೊಳ್ಳಬೇಕು. ನಾವು ಇದನ್ನು ಬಹಿಷ್ಕರಿಸುತ್ತೇವೆ ಎಂದು ಟ್ವೀಟ್ ಮಾಡಿದ್ದಾರೆ.

ಇದು ನಿಜಕ್ಕೂ ವಿವಾದವೇ?

ಅಂಬೇಡ್ಕರ್‌ರವರು ಮನುಸ್ಮೃತಿಯನ್ನು ವಿರೋಧಿಸಿದ್ದುದು, ಅದನ್ನು ಸುಟ್ಟು ಹಾಕಿ ಪ್ರತಿಭಟಿಸಿರುವುದು ಅವರ ಬರಹಗಳಲ್ಲಿ ಮಾತ್ರವಲ್ಲದೇ ನಮ್ಮ ಇತಿಹಾಸದಲ್ಲಿ ದಾಖಲಾಗಿದೆ. ಅದು ನಮಗೆ ಒಪ್ಪಿಗೆ ಇರಬಹುದು ಅಥವಾ ಇಲ್ಲದಿರಬಹುದು. ಆದರೆ ಅದನ್ನು ಅಳಿಸಲು ಅಥವಾ ಬದಲಿಸಲು ಸಾಧ್ಯವಿಲ್ಲ. ಹಾಗಿರುವಾಗ ಇದರಲ್ಲಿ ವಿವಾದ ಎಲ್ಲಿದೆ? ಎಂದು ಕೆಲವರು ಪ್ರಶ್ನಿಸಿದ್ದಾರೆ.

ಕೆಲವರು ಕೆಬಿಸಿಯ ಆ ಪ್ರಶ್ನೆಯನ್ನು ಸಮರ್ಥಿಸಿಕೊಂಡಿದ್ದಾರೆ. “ಆ ಪ್ರಶ್ನೆಯಲ್ಲಿ ಯಾವುದೇ ತಪ್ಪಿಲ್ಲ, ಮೊದಲನೆಯದಾಗಿ ಇದು ಕೇವಲ ಸರಳ ಸಾಮಾನ್ಯ ಜ್ಞಾನದ ಪ್ರಶ್ನೆಯಾಗಿದೆ. ಭಾರತದಲ್ಲಿ ನಡೆಯುತ್ತಿರುವ ವರ್ಣಭೇದದ ಇಂದಿನ ಯುಗದಲ್ಲಿ ಅನೇಕ ಭಾರತೀಯರಿಗೆ ಮನುಸ್ಮೃತಿಯ ಅಪಾಯಗಳ ಬಗ್ಗೆ ತಿಳಿದಿಲ್ಲದಿರುವುದರಿಂದ ಪ್ರಶ್ನೆ ಕೇಳಿರುವುದು ಸರಿಯಾಗಿದೆ. ಮನುಸ್ಮೃತಿಯನ್ನು ಸುಡುವುದು ನಿಜಕ್ಕೂ ಒಂದು ಅದ್ಭುತ ಕ್ರಾಂತಿಕಾರಿ ಕ್ರಿಯೆ. ಜಾತಿವಾದವು ಬೇಗನೆ ಕಣ್ಮರೆಯಾದರೆ ಉತ್ತಮ” ಎಂದು ಅಭಿಪ್ರಾಯಪಟ್ಟಿದ್ದಾರೆ.

ಮತ್ತೊಬ್ಬರು “ಮನುಸ್ಮೃತಿಯು ತಾರತಮ್ಯದ ದಾರಿದೀಪವಾಗಿದೆ ಮತ್ತು ಅದರಿಂದ ಇಂದಿಗೂ ದಲಿತರಿಗೆ ಕಿರುಕುಳ ನೀಡಲಾಗುತ್ತಿದೆ!! ಈ ವಿಷಯದ ಬಗ್ಗೆ ಜಾಗೃತಿ ಮೂಡಿಸಿದ್ದಕ್ಕಾಗಿ ಕೆಬಿಸಿಗೆ ಧನ್ಯವಾದಗಳು. ನಾನು ಕೆಬಿಸಿಯನ್ನು ಬೆಂಬಲಿಸುತ್ತೇನೆ. ಕೆಬಿಸಿಯನ್ನು ಬಾಯ್ಕಾಟ್ ಮಾಡಬೇಕು ಎನ್ನುತ್ತಿರುವವರು ಮೊದಲು ಮನುಸ್ಮೃತಿಯನ್ನು ಓದಿ ನಂತರ ಪ್ರತಿಕ್ರಿಯಿಸಲಿ” ಎಂದು ಸವಾಲು ಹಾಕಿದ್ದಾರೆ.

ಒಟ್ಟಿನಲ್ಲಿ ಇಂದು ಭಾರತದಲ್ಲಿ ತಮಗೆ ರುಚಿಸದ ಎಲ್ಲಾ ವಿಷಯಗಳನ್ನು ಬಾಯ್ಕಾಟ್ ಮಾಡಬೇಕೆಂದು ಆಗ್ರಹಿಸುವುದು ಸಾಮಾನ್ಯವಾಗಿಬಿಟ್ಟಿದೆ. ಅದು ತಮಗೆ ಏಕೆ ಸರಿಯೆನಿಸುತ್ತಿಲ್ಲ, ಅದರಿಂದಾಗುವ ಅಪಾಯಗಳೇನು ಎಂದು ವಿವರವಾಗಿ ಚರ್ಚಿಸುವ ಬದಲು ಬಾಯ್ಕಾಟ್ ಎಂದು ಟ್ರೆಂಡ್ ಮಾಡಲಾಗುತ್ತಿದೆ. ಆ ಪಟ್ಟಿಗೆ ಈ ಪ್ರಕರಣ ಹೊಸ ಸೇರ್ಪಡೆಯಾಗಿದೆ.


ಇದನ್ನೂ ಓದಿ: ಮುತ್ತಯ್ಯ ಮುರುಳೀಧರನ್ ಪಾತ್ರದಲ್ಲಿ ವಿಜಯ್ ಸೇತುಪತಿ: ‘800’ ಚಿತ್ರ ಬಾಯ್ಕಾಟ್ ಎಂದ ತಮಿಳಿಗರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಇದೆಲ್ಲವೂ ನಾಟಕವಷ್ಟೇ.
    ಅಮಿತಾಬ್‌ಗೇ ಆಗಲಿ ಅಥವ ಸೋನಿ ವಾಹಿನಿ ಯವರಿಗೇ ಆಗಲಿ ಬಾಬಾಸಾಹೇಬರ ಕುರಿತಾಗಿ ಯಾವುದೇ ರೀತಿಯ ಪ್ರೀತ್ಯಾದರ ಅಥವ ಗೌರವಗಳಾಗಲೀ ಇಲ್ಲ. ಇಂಥಹ ಪ್ರಶ್ನೆಗಳನ್ನು ಕೇಳಿದಾಗ ನಮ್ಮ ದೇಶದಲ್ಲಿ ಸಹಜವಾಗಿಯೇ ವಾಕ್ಸಮರ ಮತ್ತು ತಿಕ್ಕಾಟಗಳಾಗುತ್ತವೆ, ಜಾಲವಾಹಿನಿಯಲ್ಲಿ ಚರ್ಚೆಗಳಾಗುತ್ತವೆ, ತತ್ಕಾರಣದಿಂದ ಬಹುಜನರ ಗಮನ ಕಾರ್ಯಕ್ರಮದತ್ತ ಹರಿದು, ಕಾರ್ಯಕ್ರಮದ ಕುರಿತಾದ ಟಿ ಆರ್ ಪಿ ಹೆಚ್ಚುತ್ತದೆ ಎಂಬ ದುರಾಲೋಚನೆಯಿಂದ ಈ ಪ್ರಶ್ನೆ ಕೇಳಿರುತ್ತಾರೆ. ಇಷ್ಟು ವರ್ಷಗಳಿಂದ ನಡೆಯುತ್ತಿರುವ ಕಾರ್ಯಕ್ರಮದಲ್ಲಿ ಕೇಳದ ಪ್ರಶ್ನೆ, ಬೆಜವಾಡ ವಿಲ್ಸನ್ ಹಾಟ್‌ಸೀಟ್‌ನಲ್ಲಿ ಕುಳಿತಾಗಲೇ ಕೇಳಿದ್ದಾರೆಂದರೆ, ಅದರ ಅಂತರಾರ್ಥ ತಿಳಿಯುತ್ತದೆ. ಈಗ ಬೆಜವಾಡ ವಿಲ್ಸನ್‌ರವರ ಕುರಿತು ತಿಳಿದಿರುವವರೂ ಇದರ ಕಡೆ ಗಮನವೀಯುತ್ತಾರೆ. ಬಹುಜನರನ್ನು ಬುಟ್ಟಿಗೆ ಹಾಕಿಕೊಳ್ಳುವ ಕಾರ್ಪೊರೇಟ್ ಕುತಂತ್ರವಿದಷ್ಟೇ….
    ವಿಶ್ವನಾಥ ಎನ್ ಅಮಾಸ

  2. ಇದೆಲ್ಲವೂ ನಾಟಕವಷ್ಟೇ.
    ಅಮಿತಾಬ್‌ಗೇ ಆಗಲಿ ಅಥವ ಸೋನಿ ವಾಹಿನಿ ಯವರಿಗೇ ಆಗಲಿ ಬಾಬಾಸಾಹೇಬರ ಕುರಿತಾಗಿ ಯಾವುದೇ ರೀತಿಯ ಪ್ರೀತ್ಯಾದರ ಅಥವ ಗೌರವಗಳಾಗಲೀ ಇಲ್ಲ. ಇಂಥಹ ಪ್ರಶ್ನೆಗಳನ್ನು ಕೇಳಿದಾಗ ನಮ್ಮ ದೇಶದಲ್ಲಿ ಸಹಜವಾಗಿಯೇ ವಾಕ್ಸಮರ ಮತ್ತು ತಿಕ್ಕಾಟಗಳಾಗುತ್ತವೆ, ಜಾಲವಾಹಿನಿಯಲ್ಲಿ ಚರ್ಚೆಗಳಾಗುತ್ತವೆ, ತತ್ಕಾರಣದಿಂದ ಬಹುಜನರ ಗಮನ ಕಾರ್ಯಕ್ರಮದತ್ತ ಹರಿದು, ಕಾರ್ಯಕ್ರಮದ ಕುರಿತಾದ ಟಿ ಆರ್ ಪಿ ಹೆಚ್ಚುತ್ತದೆ ಎಂಬ ದುರಾಲೋಚನೆಯಿಂದ ಈ ಪ್ರಶ್ನೆ ಕೇಳಿರುತ್ತಾರೆ. ಇಷ್ಟು ವರ್ಷಗಳಿಂದ ನಡೆಯುತ್ತಿರುವ ಕಾರ್ಯಕ್ರಮದಲ್ಲಿ ಕೇಳದ ಪ್ರಶ್ನೆ, ಬೆಜವಾಡ ವಿಲ್ಸನ್ ಹಾಟ್‌ಸೀಟ್‌ನಲ್ಲಿ ಕುಳಿತಾಗಲೇ ಕೇಳಿದ್ದಾರೆಂದರೆ, ಅದರ ಅಂತರಾರ್ಥ ತಿಳಿಯುತ್ತದೆ. ಈಗ ಬೆಜವಾಡ ವಿಲ್ಸನ್‌ರವರ ಕುರಿತು ತಿಳಿದಿರುವವರೂ ಇದರ ಕಡೆ ಗಮನವೀಯುತ್ತಾರೆ. ಬಹುಜನರನ್ನು ಬುಟ್ಟಿಗೆ ಹಾಕಿಕೊಳ್ಳುವ ಕಾರ್ಪೊರೇಟ್ ಕುತಂತ್ರವಿದಷ್ಟೇ….
    ವಿಶ್ವನಾಥ ಎನ್ ಅಮಾಸ
    K V Nayaka

  3. ಅಮಿತಾಬ್ ಜೀ ರವರು ಕೇಳಿದ ಪ್ರಶ್ನೆ ಕರೆಕ್ಟ್..ಅದಕ್ಕೆ ನೀಡಿದ ಉತ್ತರ ಸರಿ ಇದೆ…… ನಮ್ಮ ಬಾರತದ ಎಸ್ಟೋ ಜನರಿಗೆ ಬಾಬ ಸಾಬ್ ಅಂಬೇಡ್ಕರ್ ರವರು ಮನುಸ್ಮೃತಿ ಯನ್ನು ಸುಟ್ಟೀಧೂ ಗೊತ್ತಿಲ್ಲ ….ಇದ್ದರಿಂದ ಅದನ್ನು ಏಕೆ ಏತಕ್ಕಾಗಿ ಯಾವ ಜನರಿಗೆ ಅನ್ಯಾಯ ಆಗಿದೆ…ಅದರಲ್ಲಿ ಹಿಂದುಗಳು ಬಡ ಹಿಂದು ಜನರನ್ನು ಹೀಗೆ ಹಲವಾರು ಬಾರಿ ದೇಶದ ನಾನಾ ಭಾಗಗಳಲ್ಲಿ.. ಅಂದರೆ ಕನ್ಯಾಕುಮಾರಿ ಯಿಂದ….ಕಾಶ್ಮೀರದ ವರೆಗೆ…ಈ ಬಡ ಹಿಂದುಗಳಿಗೆ ಶಾಲೆಗೆ….ಕುಡಿಯುವ ನೀರಿಗೆ…ದೇವಸ್ಥಾನ ಪ್ರವೇಶ…ಇನ್ನು ಎಷ್ಟೆಷ್ಟೋ….ಕಾನೂನು ಮಾಡಿ ಬಡ ಜನರಿಗೆ ಬದುಕಲು ಕಷ್ಟ ಆಗಿದೆ……ದಯವಿಟ್ಟು ಮನುಸ್ಮೃತಿ ಜನರು ಓದಿ ಆಗ ನೀವು ಸಹ ಅದನ್ನು ಸುಡಲು ಮನಸ್ಸು ಬರುತ್ತೆ….ಈ ಪ್ರಶ್ನೆ ಕೇಳಿದ್ದು ತಪ್ಪಲ್ಲ…ಕೆಲವು ಬ್ರಾಹ್ಮಣ ಮಂಧಿಗಳು ಮಾತ್ರ ಜನರಿಗೆ ಇದು ಗೊತ್ತಿರಲಿಲ್ಲ…ಮತ್ತೇ ಜನರಿಗೆ ಗೊತ್ತು ಮಾಡಿ ನಮ್ಮ ಮರ್ಯಾದೆ ಹಾಳು ಮಾಡ್ತಾರೆ ಅಂಥಾ ..ಕೋರ್ಟ್ನಲ್ಲಿ ಕೇಸ್ ಹಾಕುತ್ತಾರೆ….ಅಮಿತಾಬ್ ರವರರಿಗೆ ಏನು ಆಗಲ್ಲ…ಜೈ ಅಮಿತಾಬ್ ಜಿ….

LEAVE A REPLY

Please enter your comment!
Please enter your name here

- Advertisment -

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...