Homeಮುಖಪುಟಮನುಸ್ಮೃತಿ ಸುಟ್ಟಿದ್ದು ಏಕೆಂದು ವಿವರಿಸಿದ ಅಮಿತಾಬ್ ಬಚ್ಚನ್ ವಿರುದ್ಧ FIR!

ಮನುಸ್ಮೃತಿ ಸುಟ್ಟಿದ್ದು ಏಕೆಂದು ವಿವರಿಸಿದ ಅಮಿತಾಬ್ ಬಚ್ಚನ್ ವಿರುದ್ಧ FIR!

ಡಾ.ಬಿ.ಆರ್ ಅಂಬೇಡ್ಕರ್‌ರವರು ಜಾತಿ ಬೇಧಭಾವ ಮತ್ತು ಅಸ್ಫೃಶ್ಯತೆಯನ್ನು ವೈಚಾರಿಕವಾಗಿ ವಿರೋಧಿಸುವ ಸಲುವಾಗಿ ಪ್ರಾಚೀನ ಹಿಂದೂ ಗ್ರಂಥ ಮನುಸ್ಮೃತಿಯನ್ನು ಸುಟ್ಟು ಹಾಕಿ ಪ್ರತಿಭಟಿಸಿದ್ದರು.

- Advertisement -
- Advertisement -

ಜನಪ್ರಿಯ ಹಿಂದಿ ಕಾರ್ಯಕ್ರಮ ‘ಕೌನ್ ಬನೇಗ ಕರೋಡ್‌ಪತಿ’ ನಿರೂಪಕ ಅಮಿತಾಬ್ ಬಚ್ಚನ್ ಮತ್ತು ಸೋನಿ ಟಿವಿ ಕಾರ್ಯಕ್ರಮ ತಯಾರಕರ ವಿರುದ್ಧ ಲಕ್ನೋ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ‘1927ರ ಡಿಸೆಂಬರ್ 25 ರಂದು ಡಾ.ಬಿ.ಆರ್ ಅಂಬೇಡ್ಕರ್‌ರವರು ಯಾವ ಧರ್ಮಗ್ರಂಥವನ್ನು ಸುಟ್ಟರು’ ಎಂಬ ಪ್ರಶ್ನೆ ಆಧಾರದಲ್ಲಿ ದೂರು ದಾಖಲಾಗಿತ್ತು.

ನಡೆದುದ್ದೇನು?

ಶುಕ್ರವಾರ ನಡೆದ ಕೌನ್ ಬನೇಗ ಕರೋಡ್‌ಪತಿ ಕಾರ್ಯಕ್ರಮದ ‘ಕರಮ್‌​ವೀರ್’ ಎಂಬ ವಿಶೇಷ ಸಂಚಿಕೆಯಲ್ಲಿ ಅತಿಥಿಗಳಾಗಿ ನಟ ಅನುಪ್ ಸೋನಿ ಮತ್ತು ಸಾಮಾಜಿಕ ಕಾರ್ಯಕರ್ತ ಬೆಜವಾಡ ವಿಲ್ಸನ್ ಹಾಟ್​ ಸೀಟ್​ನಲ್ಲಿ ಕುಳಿತಿದ್ದರು. ಅಮಿತಾಭ್ ಬಚ್ಚನ್ 6,40,000 ರೂಪಾಯಿಯ ನಗದು ಬಹುಮಾನಕ್ಕಾಗಿ ಪ್ರಶ್ನೆಯೊಂದನ್ನು ಕೇಳಿದರು. ಆ ಪ್ರಶ್ನೆ ಈಗಿದೆ.

1927ರ ಡಿಸೆಂಬರ್ 25ರಂದು ಡಾ.ಬಿ.ಆರ್.ಅಂಬೇಡ್ಕರ್​ ಹಾಗೂ ಅವರ ಅನುಯಾಯಿಗಳು ಯಾವ ಗ್ರಂಥದ ಪ್ರತಿಗಳನ್ನು ಸುಟ್ಟು ಹಾಕಿದರು?

ಆಯ್ಕೆಗಳು ಹೀಗಿವೆ:

ಎ. ವಿಷ್ಣುಪುರಾಣ

ಬಿ. ಭಗವದ್ಗೀತೆ

ಸಿ. ಋಗ್ವೇದ

ಡಿ. ಮನುಸ್ಮೃತಿ

ಈ ಪ್ರಶ್ನೆಗೆ ಬೆಜವಾಡ ವಿಲ್ಸನ್ ಮತ್ತು ಅನೂಪ್ ಸೋನಿ ಮನುಸ್ಮೃತಿ ಎಂದು ಉತ್ತರ ನೀಡಿದರು. ಸರಿ ಉತ್ತರವೆಂದು ಘೋಷಿಸಿದ ಅಮಿತಾಬ್ ಬಚ್ಚನ್, “1927ರ ಡಿಸೆಂಬರ್ 25 ರಂದು ಡಾ.ಬಿ.ಆರ್ ಅಂಬೇಡ್ಕರ್‌ರವರು ಜಾತಿ ಬೇಧಭಾವ ಮತ್ತು ಅಸ್ಫೃಶ್ಯತೆಯನ್ನು ವೈಚಾರಿಕವಾಗಿ ವಿರೋಧಿಸುವ ಸಲುವಾಗಿ ಪ್ರಾಚೀನ ಹಿಂದೂ ಗ್ರಂಥ ಮನುಸ್ಮೃತಿಯನ್ನು ಸುಟ್ಟು ಹಾಕಿ ಪ್ರತಿಭಟಿಸಿದರು” ಎಂದು ವಿವರಣೆ ನೀಡಿದರು.

ಎಫ್‌ಐಆರ್ ಏಕೆ?

ಇತಿಹಾಸದಲ್ಲಿ ದಾಖಲಾಗಿರುವ ಈ ಘಟನೆಯ ಪ್ರಶ್ನೆ ಮತ್ತು ಅಮಿತಾಬ್ ಬಚ್ಚನ್‌ರವರ ವಿವರಣೆ ಕೆಲ ಸಾಮಾಜಿಕ ಮಾಧ್ಯಮ ಬಳಕೆದಾರರನ್ನು ಕೆರಳಿಸಿದೆ. ಈ ಪ್ರಶ್ನೆಯು ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿದೆ, ಹಾಗಾಗಿ ಕೌನ್ ಬನೇಗ ಕರೋಡ್‌ಪತಿ ಕಾರ್ಯಕ್ರಮವನ್ನು ಬಹಿಷ್ಕರಿಸಲು ಕರೆ ನೀಡಿದ್ದಾರೆ. ಅಲ್ಲದೇ ಲಕ್ನೋ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.


ಇದನ್ನೂ ಓದಿ: ಡಾ.ಬಿ.ಆರ್.ಅಂಬೇಡ್ಕರ್, ಸಂವಿಧಾನ ಮತ್ತು RSSನ ಮನಪರಿವರ್ತನೆ! : ಅಂಬೇಡ್ಕರ್‌ ಹೊಗಳಿದ ಬಿ.ಎಲ್‌ ಸಂತೋಷ್‌ಗೆ 9 ಪ್ರಶ್ನೆಗಳು


ಸಿನಿಮಾ ನಿರ್ಮಾಪಕ ವಿವೇಕ್​ ಅಗ್ನಿಹೋತ್ರಿ “ಕೆಬಿಸಿಯನ್ನು (ಕೌನ್ ಬನೇಗ ಕರೋಡ್‌ಪತಿ) ಕಮ್ಮಿಸ್‌ಗಳು ಅಪಹರಿಸಿದ್ದಾರೆ. ಇದರಿಂದ ಸಂಸ್ಕೃತಿ ಯುದ್ಧಗಳು ಹೇಗೆ ಗೆಲ್ಲುತ್ತವೆ ಎಂಬುದನ್ನು ಮುಗ್ಧ ಮಕ್ಕಳು ಕಲಿಯುತ್ತಾರೆ. ಇದನ್ನು ಕೋಡಿಂಗ್ ಎಂದು ಕರೆಯಲಾಗುತ್ತದೆ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮತ್ತೊಬ್ಬರು “ಕೆಬಿಸಿ ತನ್ನ ಕಾರ್ಯಕ್ರಮವನ್ನು ‘ಕೌನ್ ಬನೇಗ ಕಮ್ಯುನಿಷ್ಟ್’ ಎಂದು ಬದಲಿಸಿಕೊಳ್ಳಬೇಕು. ನಾವು ಇದನ್ನು ಬಹಿಷ್ಕರಿಸುತ್ತೇವೆ ಎಂದು ಟ್ವೀಟ್ ಮಾಡಿದ್ದಾರೆ.

ಇದು ನಿಜಕ್ಕೂ ವಿವಾದವೇ?

ಅಂಬೇಡ್ಕರ್‌ರವರು ಮನುಸ್ಮೃತಿಯನ್ನು ವಿರೋಧಿಸಿದ್ದುದು, ಅದನ್ನು ಸುಟ್ಟು ಹಾಕಿ ಪ್ರತಿಭಟಿಸಿರುವುದು ಅವರ ಬರಹಗಳಲ್ಲಿ ಮಾತ್ರವಲ್ಲದೇ ನಮ್ಮ ಇತಿಹಾಸದಲ್ಲಿ ದಾಖಲಾಗಿದೆ. ಅದು ನಮಗೆ ಒಪ್ಪಿಗೆ ಇರಬಹುದು ಅಥವಾ ಇಲ್ಲದಿರಬಹುದು. ಆದರೆ ಅದನ್ನು ಅಳಿಸಲು ಅಥವಾ ಬದಲಿಸಲು ಸಾಧ್ಯವಿಲ್ಲ. ಹಾಗಿರುವಾಗ ಇದರಲ್ಲಿ ವಿವಾದ ಎಲ್ಲಿದೆ? ಎಂದು ಕೆಲವರು ಪ್ರಶ್ನಿಸಿದ್ದಾರೆ.

ಕೆಲವರು ಕೆಬಿಸಿಯ ಆ ಪ್ರಶ್ನೆಯನ್ನು ಸಮರ್ಥಿಸಿಕೊಂಡಿದ್ದಾರೆ. “ಆ ಪ್ರಶ್ನೆಯಲ್ಲಿ ಯಾವುದೇ ತಪ್ಪಿಲ್ಲ, ಮೊದಲನೆಯದಾಗಿ ಇದು ಕೇವಲ ಸರಳ ಸಾಮಾನ್ಯ ಜ್ಞಾನದ ಪ್ರಶ್ನೆಯಾಗಿದೆ. ಭಾರತದಲ್ಲಿ ನಡೆಯುತ್ತಿರುವ ವರ್ಣಭೇದದ ಇಂದಿನ ಯುಗದಲ್ಲಿ ಅನೇಕ ಭಾರತೀಯರಿಗೆ ಮನುಸ್ಮೃತಿಯ ಅಪಾಯಗಳ ಬಗ್ಗೆ ತಿಳಿದಿಲ್ಲದಿರುವುದರಿಂದ ಪ್ರಶ್ನೆ ಕೇಳಿರುವುದು ಸರಿಯಾಗಿದೆ. ಮನುಸ್ಮೃತಿಯನ್ನು ಸುಡುವುದು ನಿಜಕ್ಕೂ ಒಂದು ಅದ್ಭುತ ಕ್ರಾಂತಿಕಾರಿ ಕ್ರಿಯೆ. ಜಾತಿವಾದವು ಬೇಗನೆ ಕಣ್ಮರೆಯಾದರೆ ಉತ್ತಮ” ಎಂದು ಅಭಿಪ್ರಾಯಪಟ್ಟಿದ್ದಾರೆ.

ಮತ್ತೊಬ್ಬರು “ಮನುಸ್ಮೃತಿಯು ತಾರತಮ್ಯದ ದಾರಿದೀಪವಾಗಿದೆ ಮತ್ತು ಅದರಿಂದ ಇಂದಿಗೂ ದಲಿತರಿಗೆ ಕಿರುಕುಳ ನೀಡಲಾಗುತ್ತಿದೆ!! ಈ ವಿಷಯದ ಬಗ್ಗೆ ಜಾಗೃತಿ ಮೂಡಿಸಿದ್ದಕ್ಕಾಗಿ ಕೆಬಿಸಿಗೆ ಧನ್ಯವಾದಗಳು. ನಾನು ಕೆಬಿಸಿಯನ್ನು ಬೆಂಬಲಿಸುತ್ತೇನೆ. ಕೆಬಿಸಿಯನ್ನು ಬಾಯ್ಕಾಟ್ ಮಾಡಬೇಕು ಎನ್ನುತ್ತಿರುವವರು ಮೊದಲು ಮನುಸ್ಮೃತಿಯನ್ನು ಓದಿ ನಂತರ ಪ್ರತಿಕ್ರಿಯಿಸಲಿ” ಎಂದು ಸವಾಲು ಹಾಕಿದ್ದಾರೆ.

ಒಟ್ಟಿನಲ್ಲಿ ಇಂದು ಭಾರತದಲ್ಲಿ ತಮಗೆ ರುಚಿಸದ ಎಲ್ಲಾ ವಿಷಯಗಳನ್ನು ಬಾಯ್ಕಾಟ್ ಮಾಡಬೇಕೆಂದು ಆಗ್ರಹಿಸುವುದು ಸಾಮಾನ್ಯವಾಗಿಬಿಟ್ಟಿದೆ. ಅದು ತಮಗೆ ಏಕೆ ಸರಿಯೆನಿಸುತ್ತಿಲ್ಲ, ಅದರಿಂದಾಗುವ ಅಪಾಯಗಳೇನು ಎಂದು ವಿವರವಾಗಿ ಚರ್ಚಿಸುವ ಬದಲು ಬಾಯ್ಕಾಟ್ ಎಂದು ಟ್ರೆಂಡ್ ಮಾಡಲಾಗುತ್ತಿದೆ. ಆ ಪಟ್ಟಿಗೆ ಈ ಪ್ರಕರಣ ಹೊಸ ಸೇರ್ಪಡೆಯಾಗಿದೆ.


ಇದನ್ನೂ ಓದಿ: ಮುತ್ತಯ್ಯ ಮುರುಳೀಧರನ್ ಪಾತ್ರದಲ್ಲಿ ವಿಜಯ್ ಸೇತುಪತಿ: ‘800’ ಚಿತ್ರ ಬಾಯ್ಕಾಟ್ ಎಂದ ತಮಿಳಿಗರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಇದೆಲ್ಲವೂ ನಾಟಕವಷ್ಟೇ.
    ಅಮಿತಾಬ್‌ಗೇ ಆಗಲಿ ಅಥವ ಸೋನಿ ವಾಹಿನಿ ಯವರಿಗೇ ಆಗಲಿ ಬಾಬಾಸಾಹೇಬರ ಕುರಿತಾಗಿ ಯಾವುದೇ ರೀತಿಯ ಪ್ರೀತ್ಯಾದರ ಅಥವ ಗೌರವಗಳಾಗಲೀ ಇಲ್ಲ. ಇಂಥಹ ಪ್ರಶ್ನೆಗಳನ್ನು ಕೇಳಿದಾಗ ನಮ್ಮ ದೇಶದಲ್ಲಿ ಸಹಜವಾಗಿಯೇ ವಾಕ್ಸಮರ ಮತ್ತು ತಿಕ್ಕಾಟಗಳಾಗುತ್ತವೆ, ಜಾಲವಾಹಿನಿಯಲ್ಲಿ ಚರ್ಚೆಗಳಾಗುತ್ತವೆ, ತತ್ಕಾರಣದಿಂದ ಬಹುಜನರ ಗಮನ ಕಾರ್ಯಕ್ರಮದತ್ತ ಹರಿದು, ಕಾರ್ಯಕ್ರಮದ ಕುರಿತಾದ ಟಿ ಆರ್ ಪಿ ಹೆಚ್ಚುತ್ತದೆ ಎಂಬ ದುರಾಲೋಚನೆಯಿಂದ ಈ ಪ್ರಶ್ನೆ ಕೇಳಿರುತ್ತಾರೆ. ಇಷ್ಟು ವರ್ಷಗಳಿಂದ ನಡೆಯುತ್ತಿರುವ ಕಾರ್ಯಕ್ರಮದಲ್ಲಿ ಕೇಳದ ಪ್ರಶ್ನೆ, ಬೆಜವಾಡ ವಿಲ್ಸನ್ ಹಾಟ್‌ಸೀಟ್‌ನಲ್ಲಿ ಕುಳಿತಾಗಲೇ ಕೇಳಿದ್ದಾರೆಂದರೆ, ಅದರ ಅಂತರಾರ್ಥ ತಿಳಿಯುತ್ತದೆ. ಈಗ ಬೆಜವಾಡ ವಿಲ್ಸನ್‌ರವರ ಕುರಿತು ತಿಳಿದಿರುವವರೂ ಇದರ ಕಡೆ ಗಮನವೀಯುತ್ತಾರೆ. ಬಹುಜನರನ್ನು ಬುಟ್ಟಿಗೆ ಹಾಕಿಕೊಳ್ಳುವ ಕಾರ್ಪೊರೇಟ್ ಕುತಂತ್ರವಿದಷ್ಟೇ….
    ವಿಶ್ವನಾಥ ಎನ್ ಅಮಾಸ

  2. ಇದೆಲ್ಲವೂ ನಾಟಕವಷ್ಟೇ.
    ಅಮಿತಾಬ್‌ಗೇ ಆಗಲಿ ಅಥವ ಸೋನಿ ವಾಹಿನಿ ಯವರಿಗೇ ಆಗಲಿ ಬಾಬಾಸಾಹೇಬರ ಕುರಿತಾಗಿ ಯಾವುದೇ ರೀತಿಯ ಪ್ರೀತ್ಯಾದರ ಅಥವ ಗೌರವಗಳಾಗಲೀ ಇಲ್ಲ. ಇಂಥಹ ಪ್ರಶ್ನೆಗಳನ್ನು ಕೇಳಿದಾಗ ನಮ್ಮ ದೇಶದಲ್ಲಿ ಸಹಜವಾಗಿಯೇ ವಾಕ್ಸಮರ ಮತ್ತು ತಿಕ್ಕಾಟಗಳಾಗುತ್ತವೆ, ಜಾಲವಾಹಿನಿಯಲ್ಲಿ ಚರ್ಚೆಗಳಾಗುತ್ತವೆ, ತತ್ಕಾರಣದಿಂದ ಬಹುಜನರ ಗಮನ ಕಾರ್ಯಕ್ರಮದತ್ತ ಹರಿದು, ಕಾರ್ಯಕ್ರಮದ ಕುರಿತಾದ ಟಿ ಆರ್ ಪಿ ಹೆಚ್ಚುತ್ತದೆ ಎಂಬ ದುರಾಲೋಚನೆಯಿಂದ ಈ ಪ್ರಶ್ನೆ ಕೇಳಿರುತ್ತಾರೆ. ಇಷ್ಟು ವರ್ಷಗಳಿಂದ ನಡೆಯುತ್ತಿರುವ ಕಾರ್ಯಕ್ರಮದಲ್ಲಿ ಕೇಳದ ಪ್ರಶ್ನೆ, ಬೆಜವಾಡ ವಿಲ್ಸನ್ ಹಾಟ್‌ಸೀಟ್‌ನಲ್ಲಿ ಕುಳಿತಾಗಲೇ ಕೇಳಿದ್ದಾರೆಂದರೆ, ಅದರ ಅಂತರಾರ್ಥ ತಿಳಿಯುತ್ತದೆ. ಈಗ ಬೆಜವಾಡ ವಿಲ್ಸನ್‌ರವರ ಕುರಿತು ತಿಳಿದಿರುವವರೂ ಇದರ ಕಡೆ ಗಮನವೀಯುತ್ತಾರೆ. ಬಹುಜನರನ್ನು ಬುಟ್ಟಿಗೆ ಹಾಕಿಕೊಳ್ಳುವ ಕಾರ್ಪೊರೇಟ್ ಕುತಂತ್ರವಿದಷ್ಟೇ….
    ವಿಶ್ವನಾಥ ಎನ್ ಅಮಾಸ
    K V Nayaka

  3. ಅಮಿತಾಬ್ ಜೀ ರವರು ಕೇಳಿದ ಪ್ರಶ್ನೆ ಕರೆಕ್ಟ್..ಅದಕ್ಕೆ ನೀಡಿದ ಉತ್ತರ ಸರಿ ಇದೆ…… ನಮ್ಮ ಬಾರತದ ಎಸ್ಟೋ ಜನರಿಗೆ ಬಾಬ ಸಾಬ್ ಅಂಬೇಡ್ಕರ್ ರವರು ಮನುಸ್ಮೃತಿ ಯನ್ನು ಸುಟ್ಟೀಧೂ ಗೊತ್ತಿಲ್ಲ ….ಇದ್ದರಿಂದ ಅದನ್ನು ಏಕೆ ಏತಕ್ಕಾಗಿ ಯಾವ ಜನರಿಗೆ ಅನ್ಯಾಯ ಆಗಿದೆ…ಅದರಲ್ಲಿ ಹಿಂದುಗಳು ಬಡ ಹಿಂದು ಜನರನ್ನು ಹೀಗೆ ಹಲವಾರು ಬಾರಿ ದೇಶದ ನಾನಾ ಭಾಗಗಳಲ್ಲಿ.. ಅಂದರೆ ಕನ್ಯಾಕುಮಾರಿ ಯಿಂದ….ಕಾಶ್ಮೀರದ ವರೆಗೆ…ಈ ಬಡ ಹಿಂದುಗಳಿಗೆ ಶಾಲೆಗೆ….ಕುಡಿಯುವ ನೀರಿಗೆ…ದೇವಸ್ಥಾನ ಪ್ರವೇಶ…ಇನ್ನು ಎಷ್ಟೆಷ್ಟೋ….ಕಾನೂನು ಮಾಡಿ ಬಡ ಜನರಿಗೆ ಬದುಕಲು ಕಷ್ಟ ಆಗಿದೆ……ದಯವಿಟ್ಟು ಮನುಸ್ಮೃತಿ ಜನರು ಓದಿ ಆಗ ನೀವು ಸಹ ಅದನ್ನು ಸುಡಲು ಮನಸ್ಸು ಬರುತ್ತೆ….ಈ ಪ್ರಶ್ನೆ ಕೇಳಿದ್ದು ತಪ್ಪಲ್ಲ…ಕೆಲವು ಬ್ರಾಹ್ಮಣ ಮಂಧಿಗಳು ಮಾತ್ರ ಜನರಿಗೆ ಇದು ಗೊತ್ತಿರಲಿಲ್ಲ…ಮತ್ತೇ ಜನರಿಗೆ ಗೊತ್ತು ಮಾಡಿ ನಮ್ಮ ಮರ್ಯಾದೆ ಹಾಳು ಮಾಡ್ತಾರೆ ಅಂಥಾ ..ಕೋರ್ಟ್ನಲ್ಲಿ ಕೇಸ್ ಹಾಕುತ್ತಾರೆ….ಅಮಿತಾಬ್ ರವರರಿಗೆ ಏನು ಆಗಲ್ಲ…ಜೈ ಅಮಿತಾಬ್ ಜಿ….

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...