Homeಮುಖಪುಟಮನುಸ್ಮೃತಿ ಸುಟ್ಟಿದ್ದು ಏಕೆಂದು ವಿವರಿಸಿದ ಅಮಿತಾಬ್ ಬಚ್ಚನ್ ವಿರುದ್ಧ FIR!

ಮನುಸ್ಮೃತಿ ಸುಟ್ಟಿದ್ದು ಏಕೆಂದು ವಿವರಿಸಿದ ಅಮಿತಾಬ್ ಬಚ್ಚನ್ ವಿರುದ್ಧ FIR!

ಡಾ.ಬಿ.ಆರ್ ಅಂಬೇಡ್ಕರ್‌ರವರು ಜಾತಿ ಬೇಧಭಾವ ಮತ್ತು ಅಸ್ಫೃಶ್ಯತೆಯನ್ನು ವೈಚಾರಿಕವಾಗಿ ವಿರೋಧಿಸುವ ಸಲುವಾಗಿ ಪ್ರಾಚೀನ ಹಿಂದೂ ಗ್ರಂಥ ಮನುಸ್ಮೃತಿಯನ್ನು ಸುಟ್ಟು ಹಾಕಿ ಪ್ರತಿಭಟಿಸಿದ್ದರು.

- Advertisement -
- Advertisement -

ಜನಪ್ರಿಯ ಹಿಂದಿ ಕಾರ್ಯಕ್ರಮ ‘ಕೌನ್ ಬನೇಗ ಕರೋಡ್‌ಪತಿ’ ನಿರೂಪಕ ಅಮಿತಾಬ್ ಬಚ್ಚನ್ ಮತ್ತು ಸೋನಿ ಟಿವಿ ಕಾರ್ಯಕ್ರಮ ತಯಾರಕರ ವಿರುದ್ಧ ಲಕ್ನೋ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ‘1927ರ ಡಿಸೆಂಬರ್ 25 ರಂದು ಡಾ.ಬಿ.ಆರ್ ಅಂಬೇಡ್ಕರ್‌ರವರು ಯಾವ ಧರ್ಮಗ್ರಂಥವನ್ನು ಸುಟ್ಟರು’ ಎಂಬ ಪ್ರಶ್ನೆ ಆಧಾರದಲ್ಲಿ ದೂರು ದಾಖಲಾಗಿತ್ತು.

ನಡೆದುದ್ದೇನು?

ಶುಕ್ರವಾರ ನಡೆದ ಕೌನ್ ಬನೇಗ ಕರೋಡ್‌ಪತಿ ಕಾರ್ಯಕ್ರಮದ ‘ಕರಮ್‌​ವೀರ್’ ಎಂಬ ವಿಶೇಷ ಸಂಚಿಕೆಯಲ್ಲಿ ಅತಿಥಿಗಳಾಗಿ ನಟ ಅನುಪ್ ಸೋನಿ ಮತ್ತು ಸಾಮಾಜಿಕ ಕಾರ್ಯಕರ್ತ ಬೆಜವಾಡ ವಿಲ್ಸನ್ ಹಾಟ್​ ಸೀಟ್​ನಲ್ಲಿ ಕುಳಿತಿದ್ದರು. ಅಮಿತಾಭ್ ಬಚ್ಚನ್ 6,40,000 ರೂಪಾಯಿಯ ನಗದು ಬಹುಮಾನಕ್ಕಾಗಿ ಪ್ರಶ್ನೆಯೊಂದನ್ನು ಕೇಳಿದರು. ಆ ಪ್ರಶ್ನೆ ಈಗಿದೆ.

1927ರ ಡಿಸೆಂಬರ್ 25ರಂದು ಡಾ.ಬಿ.ಆರ್.ಅಂಬೇಡ್ಕರ್​ ಹಾಗೂ ಅವರ ಅನುಯಾಯಿಗಳು ಯಾವ ಗ್ರಂಥದ ಪ್ರತಿಗಳನ್ನು ಸುಟ್ಟು ಹಾಕಿದರು?

ಆಯ್ಕೆಗಳು ಹೀಗಿವೆ:

ಎ. ವಿಷ್ಣುಪುರಾಣ

ಬಿ. ಭಗವದ್ಗೀತೆ

ಸಿ. ಋಗ್ವೇದ

ಡಿ. ಮನುಸ್ಮೃತಿ

ಈ ಪ್ರಶ್ನೆಗೆ ಬೆಜವಾಡ ವಿಲ್ಸನ್ ಮತ್ತು ಅನೂಪ್ ಸೋನಿ ಮನುಸ್ಮೃತಿ ಎಂದು ಉತ್ತರ ನೀಡಿದರು. ಸರಿ ಉತ್ತರವೆಂದು ಘೋಷಿಸಿದ ಅಮಿತಾಬ್ ಬಚ್ಚನ್, “1927ರ ಡಿಸೆಂಬರ್ 25 ರಂದು ಡಾ.ಬಿ.ಆರ್ ಅಂಬೇಡ್ಕರ್‌ರವರು ಜಾತಿ ಬೇಧಭಾವ ಮತ್ತು ಅಸ್ಫೃಶ್ಯತೆಯನ್ನು ವೈಚಾರಿಕವಾಗಿ ವಿರೋಧಿಸುವ ಸಲುವಾಗಿ ಪ್ರಾಚೀನ ಹಿಂದೂ ಗ್ರಂಥ ಮನುಸ್ಮೃತಿಯನ್ನು ಸುಟ್ಟು ಹಾಕಿ ಪ್ರತಿಭಟಿಸಿದರು” ಎಂದು ವಿವರಣೆ ನೀಡಿದರು.

ಎಫ್‌ಐಆರ್ ಏಕೆ?

ಇತಿಹಾಸದಲ್ಲಿ ದಾಖಲಾಗಿರುವ ಈ ಘಟನೆಯ ಪ್ರಶ್ನೆ ಮತ್ತು ಅಮಿತಾಬ್ ಬಚ್ಚನ್‌ರವರ ವಿವರಣೆ ಕೆಲ ಸಾಮಾಜಿಕ ಮಾಧ್ಯಮ ಬಳಕೆದಾರರನ್ನು ಕೆರಳಿಸಿದೆ. ಈ ಪ್ರಶ್ನೆಯು ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿದೆ, ಹಾಗಾಗಿ ಕೌನ್ ಬನೇಗ ಕರೋಡ್‌ಪತಿ ಕಾರ್ಯಕ್ರಮವನ್ನು ಬಹಿಷ್ಕರಿಸಲು ಕರೆ ನೀಡಿದ್ದಾರೆ. ಅಲ್ಲದೇ ಲಕ್ನೋ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.


ಇದನ್ನೂ ಓದಿ: ಡಾ.ಬಿ.ಆರ್.ಅಂಬೇಡ್ಕರ್, ಸಂವಿಧಾನ ಮತ್ತು RSSನ ಮನಪರಿವರ್ತನೆ! : ಅಂಬೇಡ್ಕರ್‌ ಹೊಗಳಿದ ಬಿ.ಎಲ್‌ ಸಂತೋಷ್‌ಗೆ 9 ಪ್ರಶ್ನೆಗಳು


ಸಿನಿಮಾ ನಿರ್ಮಾಪಕ ವಿವೇಕ್​ ಅಗ್ನಿಹೋತ್ರಿ “ಕೆಬಿಸಿಯನ್ನು (ಕೌನ್ ಬನೇಗ ಕರೋಡ್‌ಪತಿ) ಕಮ್ಮಿಸ್‌ಗಳು ಅಪಹರಿಸಿದ್ದಾರೆ. ಇದರಿಂದ ಸಂಸ್ಕೃತಿ ಯುದ್ಧಗಳು ಹೇಗೆ ಗೆಲ್ಲುತ್ತವೆ ಎಂಬುದನ್ನು ಮುಗ್ಧ ಮಕ್ಕಳು ಕಲಿಯುತ್ತಾರೆ. ಇದನ್ನು ಕೋಡಿಂಗ್ ಎಂದು ಕರೆಯಲಾಗುತ್ತದೆ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮತ್ತೊಬ್ಬರು “ಕೆಬಿಸಿ ತನ್ನ ಕಾರ್ಯಕ್ರಮವನ್ನು ‘ಕೌನ್ ಬನೇಗ ಕಮ್ಯುನಿಷ್ಟ್’ ಎಂದು ಬದಲಿಸಿಕೊಳ್ಳಬೇಕು. ನಾವು ಇದನ್ನು ಬಹಿಷ್ಕರಿಸುತ್ತೇವೆ ಎಂದು ಟ್ವೀಟ್ ಮಾಡಿದ್ದಾರೆ.

ಇದು ನಿಜಕ್ಕೂ ವಿವಾದವೇ?

ಅಂಬೇಡ್ಕರ್‌ರವರು ಮನುಸ್ಮೃತಿಯನ್ನು ವಿರೋಧಿಸಿದ್ದುದು, ಅದನ್ನು ಸುಟ್ಟು ಹಾಕಿ ಪ್ರತಿಭಟಿಸಿರುವುದು ಅವರ ಬರಹಗಳಲ್ಲಿ ಮಾತ್ರವಲ್ಲದೇ ನಮ್ಮ ಇತಿಹಾಸದಲ್ಲಿ ದಾಖಲಾಗಿದೆ. ಅದು ನಮಗೆ ಒಪ್ಪಿಗೆ ಇರಬಹುದು ಅಥವಾ ಇಲ್ಲದಿರಬಹುದು. ಆದರೆ ಅದನ್ನು ಅಳಿಸಲು ಅಥವಾ ಬದಲಿಸಲು ಸಾಧ್ಯವಿಲ್ಲ. ಹಾಗಿರುವಾಗ ಇದರಲ್ಲಿ ವಿವಾದ ಎಲ್ಲಿದೆ? ಎಂದು ಕೆಲವರು ಪ್ರಶ್ನಿಸಿದ್ದಾರೆ.

ಕೆಲವರು ಕೆಬಿಸಿಯ ಆ ಪ್ರಶ್ನೆಯನ್ನು ಸಮರ್ಥಿಸಿಕೊಂಡಿದ್ದಾರೆ. “ಆ ಪ್ರಶ್ನೆಯಲ್ಲಿ ಯಾವುದೇ ತಪ್ಪಿಲ್ಲ, ಮೊದಲನೆಯದಾಗಿ ಇದು ಕೇವಲ ಸರಳ ಸಾಮಾನ್ಯ ಜ್ಞಾನದ ಪ್ರಶ್ನೆಯಾಗಿದೆ. ಭಾರತದಲ್ಲಿ ನಡೆಯುತ್ತಿರುವ ವರ್ಣಭೇದದ ಇಂದಿನ ಯುಗದಲ್ಲಿ ಅನೇಕ ಭಾರತೀಯರಿಗೆ ಮನುಸ್ಮೃತಿಯ ಅಪಾಯಗಳ ಬಗ್ಗೆ ತಿಳಿದಿಲ್ಲದಿರುವುದರಿಂದ ಪ್ರಶ್ನೆ ಕೇಳಿರುವುದು ಸರಿಯಾಗಿದೆ. ಮನುಸ್ಮೃತಿಯನ್ನು ಸುಡುವುದು ನಿಜಕ್ಕೂ ಒಂದು ಅದ್ಭುತ ಕ್ರಾಂತಿಕಾರಿ ಕ್ರಿಯೆ. ಜಾತಿವಾದವು ಬೇಗನೆ ಕಣ್ಮರೆಯಾದರೆ ಉತ್ತಮ” ಎಂದು ಅಭಿಪ್ರಾಯಪಟ್ಟಿದ್ದಾರೆ.

ಮತ್ತೊಬ್ಬರು “ಮನುಸ್ಮೃತಿಯು ತಾರತಮ್ಯದ ದಾರಿದೀಪವಾಗಿದೆ ಮತ್ತು ಅದರಿಂದ ಇಂದಿಗೂ ದಲಿತರಿಗೆ ಕಿರುಕುಳ ನೀಡಲಾಗುತ್ತಿದೆ!! ಈ ವಿಷಯದ ಬಗ್ಗೆ ಜಾಗೃತಿ ಮೂಡಿಸಿದ್ದಕ್ಕಾಗಿ ಕೆಬಿಸಿಗೆ ಧನ್ಯವಾದಗಳು. ನಾನು ಕೆಬಿಸಿಯನ್ನು ಬೆಂಬಲಿಸುತ್ತೇನೆ. ಕೆಬಿಸಿಯನ್ನು ಬಾಯ್ಕಾಟ್ ಮಾಡಬೇಕು ಎನ್ನುತ್ತಿರುವವರು ಮೊದಲು ಮನುಸ್ಮೃತಿಯನ್ನು ಓದಿ ನಂತರ ಪ್ರತಿಕ್ರಿಯಿಸಲಿ” ಎಂದು ಸವಾಲು ಹಾಕಿದ್ದಾರೆ.

ಒಟ್ಟಿನಲ್ಲಿ ಇಂದು ಭಾರತದಲ್ಲಿ ತಮಗೆ ರುಚಿಸದ ಎಲ್ಲಾ ವಿಷಯಗಳನ್ನು ಬಾಯ್ಕಾಟ್ ಮಾಡಬೇಕೆಂದು ಆಗ್ರಹಿಸುವುದು ಸಾಮಾನ್ಯವಾಗಿಬಿಟ್ಟಿದೆ. ಅದು ತಮಗೆ ಏಕೆ ಸರಿಯೆನಿಸುತ್ತಿಲ್ಲ, ಅದರಿಂದಾಗುವ ಅಪಾಯಗಳೇನು ಎಂದು ವಿವರವಾಗಿ ಚರ್ಚಿಸುವ ಬದಲು ಬಾಯ್ಕಾಟ್ ಎಂದು ಟ್ರೆಂಡ್ ಮಾಡಲಾಗುತ್ತಿದೆ. ಆ ಪಟ್ಟಿಗೆ ಈ ಪ್ರಕರಣ ಹೊಸ ಸೇರ್ಪಡೆಯಾಗಿದೆ.


ಇದನ್ನೂ ಓದಿ: ಮುತ್ತಯ್ಯ ಮುರುಳೀಧರನ್ ಪಾತ್ರದಲ್ಲಿ ವಿಜಯ್ ಸೇತುಪತಿ: ‘800’ ಚಿತ್ರ ಬಾಯ್ಕಾಟ್ ಎಂದ ತಮಿಳಿಗರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಇದೆಲ್ಲವೂ ನಾಟಕವಷ್ಟೇ.
    ಅಮಿತಾಬ್‌ಗೇ ಆಗಲಿ ಅಥವ ಸೋನಿ ವಾಹಿನಿ ಯವರಿಗೇ ಆಗಲಿ ಬಾಬಾಸಾಹೇಬರ ಕುರಿತಾಗಿ ಯಾವುದೇ ರೀತಿಯ ಪ್ರೀತ್ಯಾದರ ಅಥವ ಗೌರವಗಳಾಗಲೀ ಇಲ್ಲ. ಇಂಥಹ ಪ್ರಶ್ನೆಗಳನ್ನು ಕೇಳಿದಾಗ ನಮ್ಮ ದೇಶದಲ್ಲಿ ಸಹಜವಾಗಿಯೇ ವಾಕ್ಸಮರ ಮತ್ತು ತಿಕ್ಕಾಟಗಳಾಗುತ್ತವೆ, ಜಾಲವಾಹಿನಿಯಲ್ಲಿ ಚರ್ಚೆಗಳಾಗುತ್ತವೆ, ತತ್ಕಾರಣದಿಂದ ಬಹುಜನರ ಗಮನ ಕಾರ್ಯಕ್ರಮದತ್ತ ಹರಿದು, ಕಾರ್ಯಕ್ರಮದ ಕುರಿತಾದ ಟಿ ಆರ್ ಪಿ ಹೆಚ್ಚುತ್ತದೆ ಎಂಬ ದುರಾಲೋಚನೆಯಿಂದ ಈ ಪ್ರಶ್ನೆ ಕೇಳಿರುತ್ತಾರೆ. ಇಷ್ಟು ವರ್ಷಗಳಿಂದ ನಡೆಯುತ್ತಿರುವ ಕಾರ್ಯಕ್ರಮದಲ್ಲಿ ಕೇಳದ ಪ್ರಶ್ನೆ, ಬೆಜವಾಡ ವಿಲ್ಸನ್ ಹಾಟ್‌ಸೀಟ್‌ನಲ್ಲಿ ಕುಳಿತಾಗಲೇ ಕೇಳಿದ್ದಾರೆಂದರೆ, ಅದರ ಅಂತರಾರ್ಥ ತಿಳಿಯುತ್ತದೆ. ಈಗ ಬೆಜವಾಡ ವಿಲ್ಸನ್‌ರವರ ಕುರಿತು ತಿಳಿದಿರುವವರೂ ಇದರ ಕಡೆ ಗಮನವೀಯುತ್ತಾರೆ. ಬಹುಜನರನ್ನು ಬುಟ್ಟಿಗೆ ಹಾಕಿಕೊಳ್ಳುವ ಕಾರ್ಪೊರೇಟ್ ಕುತಂತ್ರವಿದಷ್ಟೇ….
    ವಿಶ್ವನಾಥ ಎನ್ ಅಮಾಸ

  2. ಇದೆಲ್ಲವೂ ನಾಟಕವಷ್ಟೇ.
    ಅಮಿತಾಬ್‌ಗೇ ಆಗಲಿ ಅಥವ ಸೋನಿ ವಾಹಿನಿ ಯವರಿಗೇ ಆಗಲಿ ಬಾಬಾಸಾಹೇಬರ ಕುರಿತಾಗಿ ಯಾವುದೇ ರೀತಿಯ ಪ್ರೀತ್ಯಾದರ ಅಥವ ಗೌರವಗಳಾಗಲೀ ಇಲ್ಲ. ಇಂಥಹ ಪ್ರಶ್ನೆಗಳನ್ನು ಕೇಳಿದಾಗ ನಮ್ಮ ದೇಶದಲ್ಲಿ ಸಹಜವಾಗಿಯೇ ವಾಕ್ಸಮರ ಮತ್ತು ತಿಕ್ಕಾಟಗಳಾಗುತ್ತವೆ, ಜಾಲವಾಹಿನಿಯಲ್ಲಿ ಚರ್ಚೆಗಳಾಗುತ್ತವೆ, ತತ್ಕಾರಣದಿಂದ ಬಹುಜನರ ಗಮನ ಕಾರ್ಯಕ್ರಮದತ್ತ ಹರಿದು, ಕಾರ್ಯಕ್ರಮದ ಕುರಿತಾದ ಟಿ ಆರ್ ಪಿ ಹೆಚ್ಚುತ್ತದೆ ಎಂಬ ದುರಾಲೋಚನೆಯಿಂದ ಈ ಪ್ರಶ್ನೆ ಕೇಳಿರುತ್ತಾರೆ. ಇಷ್ಟು ವರ್ಷಗಳಿಂದ ನಡೆಯುತ್ತಿರುವ ಕಾರ್ಯಕ್ರಮದಲ್ಲಿ ಕೇಳದ ಪ್ರಶ್ನೆ, ಬೆಜವಾಡ ವಿಲ್ಸನ್ ಹಾಟ್‌ಸೀಟ್‌ನಲ್ಲಿ ಕುಳಿತಾಗಲೇ ಕೇಳಿದ್ದಾರೆಂದರೆ, ಅದರ ಅಂತರಾರ್ಥ ತಿಳಿಯುತ್ತದೆ. ಈಗ ಬೆಜವಾಡ ವಿಲ್ಸನ್‌ರವರ ಕುರಿತು ತಿಳಿದಿರುವವರೂ ಇದರ ಕಡೆ ಗಮನವೀಯುತ್ತಾರೆ. ಬಹುಜನರನ್ನು ಬುಟ್ಟಿಗೆ ಹಾಕಿಕೊಳ್ಳುವ ಕಾರ್ಪೊರೇಟ್ ಕುತಂತ್ರವಿದಷ್ಟೇ….
    ವಿಶ್ವನಾಥ ಎನ್ ಅಮಾಸ
    K V Nayaka

  3. ಅಮಿತಾಬ್ ಜೀ ರವರು ಕೇಳಿದ ಪ್ರಶ್ನೆ ಕರೆಕ್ಟ್..ಅದಕ್ಕೆ ನೀಡಿದ ಉತ್ತರ ಸರಿ ಇದೆ…… ನಮ್ಮ ಬಾರತದ ಎಸ್ಟೋ ಜನರಿಗೆ ಬಾಬ ಸಾಬ್ ಅಂಬೇಡ್ಕರ್ ರವರು ಮನುಸ್ಮೃತಿ ಯನ್ನು ಸುಟ್ಟೀಧೂ ಗೊತ್ತಿಲ್ಲ ….ಇದ್ದರಿಂದ ಅದನ್ನು ಏಕೆ ಏತಕ್ಕಾಗಿ ಯಾವ ಜನರಿಗೆ ಅನ್ಯಾಯ ಆಗಿದೆ…ಅದರಲ್ಲಿ ಹಿಂದುಗಳು ಬಡ ಹಿಂದು ಜನರನ್ನು ಹೀಗೆ ಹಲವಾರು ಬಾರಿ ದೇಶದ ನಾನಾ ಭಾಗಗಳಲ್ಲಿ.. ಅಂದರೆ ಕನ್ಯಾಕುಮಾರಿ ಯಿಂದ….ಕಾಶ್ಮೀರದ ವರೆಗೆ…ಈ ಬಡ ಹಿಂದುಗಳಿಗೆ ಶಾಲೆಗೆ….ಕುಡಿಯುವ ನೀರಿಗೆ…ದೇವಸ್ಥಾನ ಪ್ರವೇಶ…ಇನ್ನು ಎಷ್ಟೆಷ್ಟೋ….ಕಾನೂನು ಮಾಡಿ ಬಡ ಜನರಿಗೆ ಬದುಕಲು ಕಷ್ಟ ಆಗಿದೆ……ದಯವಿಟ್ಟು ಮನುಸ್ಮೃತಿ ಜನರು ಓದಿ ಆಗ ನೀವು ಸಹ ಅದನ್ನು ಸುಡಲು ಮನಸ್ಸು ಬರುತ್ತೆ….ಈ ಪ್ರಶ್ನೆ ಕೇಳಿದ್ದು ತಪ್ಪಲ್ಲ…ಕೆಲವು ಬ್ರಾಹ್ಮಣ ಮಂಧಿಗಳು ಮಾತ್ರ ಜನರಿಗೆ ಇದು ಗೊತ್ತಿರಲಿಲ್ಲ…ಮತ್ತೇ ಜನರಿಗೆ ಗೊತ್ತು ಮಾಡಿ ನಮ್ಮ ಮರ್ಯಾದೆ ಹಾಳು ಮಾಡ್ತಾರೆ ಅಂಥಾ ..ಕೋರ್ಟ್ನಲ್ಲಿ ಕೇಸ್ ಹಾಕುತ್ತಾರೆ….ಅಮಿತಾಬ್ ರವರರಿಗೆ ಏನು ಆಗಲ್ಲ…ಜೈ ಅಮಿತಾಬ್ ಜಿ….

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...