Homeಮುಖಪುಟಸುಪ್ರೀಂ ಕೋರ್ಟ್‌ ನೋಟಿಸ್‌ ನಂತರ ಬಿಜೆಪಿ ಸಂಸದ ಸಿಂಗ್ ವಿರುದ್ಧ FIR: ಕ್ರೀಡಾಪಟುಗಳ ಹೋರಾಟಕ್ಕೆ ಮೊದಲ...

ಸುಪ್ರೀಂ ಕೋರ್ಟ್‌ ನೋಟಿಸ್‌ ನಂತರ ಬಿಜೆಪಿ ಸಂಸದ ಸಿಂಗ್ ವಿರುದ್ಧ FIR: ಕ್ರೀಡಾಪಟುಗಳ ಹೋರಾಟಕ್ಕೆ ಮೊದಲ ಜಯ

- Advertisement -
- Advertisement -

ಮಹಿಳಾ ಆಟಗಾರರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಹೊತ್ತಿರುವ ಭಾರತದ ಕುಸ್ತಿ ಫೆಡರೇಶನ್ ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಎಫ್‌ಐಆರ್‌ ದಾಖಲಿಸುವುದಾಗಿ ದೆಹಲಿ ಪೊಲೀಸರು ಶುಕ್ರವಾರ ಹೇಳಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಇಂದು (ಶುಕ್ರವಾರ) ಸಂಜೆಯೊಳಗೆ ಎಫ್‌ಐಆರ್ ದಾಖಲಿಸಲಾಗುವುದು ಎಂದು ಸಾಲಿಸಿಟರ್ ತುಷಾರ್ ಮೆಹ್ತಾ ಸುಪ್ರೀಂ ಕೋರ್ಟ್‌ಗೆ ತಿಳಿಸಿದ್ದಾರೆ. ಇದು ಕ್ರೀಡಾಪಟುಗಳಿಗೆ ಸಿಕ್ಕ ಮೊದಲ ಗೆಲುವು, ಆದರೆ ಸಿಂಗ್ ಬಂಧನಚವಾಗುವವರೆಗೂ ಪ್ರತಿಭಟನೆ ಮುಂದುವರೆಸುವುದಾಗಿ ಪ್ರತಿಭಟನಾ ನಿರತ ಕ್ರೀಡಾಪಟುಗಳು ತಿಳಿಸಿದ್ದಾರೆ.

ಲೈಂಗಿಕ ಕಿರುಕುಳದ ವಿಚಾರವಾಗಿ ಕ್ರೀಡಾ ಆಡಳಿತ ಮಂಡಳಿಯ ಮುಖ್ಯಸ್ಥರ ವಿರುದ್ಧ ಏಳು ಪ್ರತ್ಯೇಕ ದೂರು ನೀಡಿದರೂ ದೆಹಲಿ ಪೊಲೀಸರು ಎಫ್‌ಐಆರ್‌ ದಾಖಲಿಸಿಕೊಳ್ಳದ ಕಾರಣ ದೇಶದ ಅಗ್ರ ಕುಸ್ತಿಪಟುಗಳು ಎಫ್ಐಆರ್ ದಾಖಲಿಸುವಂತೆ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಪಿ ಎಸ್ ನರಸಿಂಹ ಅವರ ಪೀಠವು ದೇಶದ ಅಗ್ರ ಕುಸ್ತಿಪಟುಗಳು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸುತ್ತಿದೆ.

ಏಪ್ರಿಲ್ 23 ರಂದು, ಒಲಿಂಪಿಕ್ ಕಂಚಿನ ಪದಕ ವಿಜೇತರಾದ ಸಾಕ್ಷಿ ಮಲಿಕ್ ಮತ್ತು ಬಜರಂಗ್ ಪುನಿಯಾ ಮತ್ತು ಕಾಮನ್ವೆಲ್ತ್ ಗೇಮ್ಸ್ ಚಿನ್ನದ ಪದಕ ವಿಜೇತ ವಿನೇಶ್ ಫೋಗಟ್ ಸೇರಿದಂತೆ ಹಲವಾರು ಕ್ರೀಡಾಪಟುಗಳು ಸಿಂಗ್ ವಿರುದ್ಧ ಕ್ರಮ ಕೈಗೊಳ್ಳುವಂತೆ ದೆಹಲಿಯ ಜಂತರ್ ಮಂತರ್‌ನಲ್ಲಿ ತಮ್ಮ ಧರಣಿ ಪ್ರತಿಭಟನೆಯನ್ನು ಪುನರಾರಂಭಿಸಿದರು.

ಅಪ್ರಾಪ್ತ ವಯಸ್ಕ ಸೇರಿದಂತೆ ಏಳು ಮಹಿಳಾ ಕುಸ್ತಿಪಟುಗಳು ಏಪ್ರಿಲ್ 21ರಂದು ದೆಹಲಿಯಲ್ಲಿ ಆತನ ವಿರುದ್ಧ ಲೈಂಗಿಕ ಕಿರುಕುಳದ ದೂರು ದಾಖಲಿಸಿದ್ದಾರೆ.

ಇದನ್ನೂ ಓದಿ: ಕುಸ್ತಿಪಟುಗಳ ಪ್ರತಿಭಟನೆ ದೇಶಕ್ಕೆ ಕಳಂಕ ಎಂದ ಪಿಟಿ ಉಷಾ: ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ರೋಶ

ಈ ವಿಚಾರವಾಗಿ ಕುಸ್ತಿಪಟುಗಳು ಮೊದಲು ಜನವರಿಯಲ್ಲಿ ಬೀದಿಗಿಳಿದಿದ್ದರು. ಈ ವೇಳೆ ಸರ್ಕಾರವು ಬಿಜೆಪಿ ಸಂಸದ ಸಿಂಗ್ ಅವರನ್ನು ಕೆಲವು ವಾರಗಳ ಕಾಲ ಅಧಿಕಾರದಿಂದ ದೂರವಿಡುವಂತೆ ಮತ್ತು ಆರೋಪಗಳನ್ನು ಪರಿಶೀಲಿಸಲು ಮೇಲ್ವಿಚಾರಣಾ ಸಮಿತಿಯನ್ನು ರಚಿಸಿತು. ಆ ನಂತರ ಕ್ರೀಡಾಪಟುಗಳು ಪ್ರತಿಭಟನೆಯನ್ನು ಹಿಂತೆಗೆದುಕೊಂಡಿದ್ದರು. ಸಮಿತಿಯ ವರದಿಯನ್ನು ಬಹಿರಂಗಪಡಿಸದ ಕಾರಣ ಮತ್ತೆ ಪ್ರತಿಭಟನೆ ಆರಂಭಿಸಿದ್ದಾರೆ.

ಮಂಗಳವಾರ ವಿಚಾರಣೆ ಆರಂಭಿಸಿದ ಸುಪ್ರೀಂ ಕೋರ್ಟ್, ಕುಸ್ತಿಪಟುಗಳ ಅರ್ಜಿಯಲ್ಲಿನ ಆರೋಪಗಳು “ಗಂಭೀರ” ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಒಂದು ದಿನದ ನಂತರ, ಅಧಿಕಾರಿಗಳು ಪ್ರಕರಣವನ್ನು ದಾಖಲಿಸುವ ಮೊದಲು ಪ್ರಾಥಮಿಕ ತನಿಖೆ ಅಗತ್ಯ ಎಂದು ದೆಹಲಿ ಪೊಲೀಸರು ನ್ಯಾಯಾಲಯಕ್ಕೆ ತಿಳಿಸಿದರು.

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರದ ವಿಚಾರಣೆಗೆ ಮುನ್ನ, ರಾಷ್ಟ್ರೀಯ ಶ್ರೇಯಾಂಕದ ಕುಸ್ತಿಪಟು ಮತ್ತು ಪುನಿಯಾ ಅವರ ಪತ್ನಿ ಸಂಗೀತಾ ಫೋಗಟ್, ಸಿಂಗ್‌ಗೆ ಶಿಕ್ಷೆಯಾಗುವವರೆಗೂ ಕ್ರೀಡಾಪಟುಗಳು ಪ್ರತಿಭಟನಾ ಸ್ಥಳದಲ್ಲೇ ಇರುತ್ತಾರೆ ಎಂದು ಪ್ರತಿಪಾದಿಸಿದ್ದಾರೆ ಎಂದು ಎಎನ್‌ಐ ವರದಿ ಮಾಡಿದೆ.

”ನಮಗೆ ಈ ಮೊದಲು ನ್ಯಾಯ ಸಿಗಲಿಲ್ಲ. ಮಹಿಳಾ ಆಟಗಾರರ ಮೇಲಿನ ಲೈಂಗಿಕ ಕಿರುಕುಳಕ್ಕಾಗಿ ಆತನನ್ನು ದೂಷಿಸಿದ್ದಾರೆ ಆದ್ದರಿಂದ ಎಫ್ಐಆರ್ ದಾಖಲಿಸಬೇಕು ಮತ್ತು ಕೃತ್ಯಗಳ ಪ್ರಕಾರ ಶಿಕ್ಷೆಗೆ ಗುರಿಯಾಗಬೇಕು. ನೀವು ನೋಡುವಂತೆ ಯಾರೂ ನಮ್ಮ ಬಳಿಗೆ ಬಂದಿಲ್ಲ, ನಾವು ಫೋನ್ ಕರೆಯನ್ನು ಸ್ವೀಕರಿಸಲಿಲ್ಲ. ನಮಗೆ ನ್ಯಾಯ ಸಿಗುತ್ತದೆ ಎಂದು ಯಾರೂ ನಮಗೆ ಹೇಳಿಲ್ಲ” ಎಂದು ಕ್ರೀಡಾಪಟುಗಳು ನೋವು ತೋಡಿಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಶ್ರೀ ರಾಮನ ಭಕ್ತರು ಪರಸ್ತ್ರಿಯರನ್ನು ಕಣ್ಣೆತ್ತಿಯೂ ಕೂಡ ನೋಡುವುದಿಲ್ಲ ಅಂತದರಲ್ಲಿ…..

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...