Homeಕರ್ನಾಟಕದಲಿತ ಯುವ ಹೋರಾಟಗಾರ ಸಂದೇಶ್ ವಿರುದ್ಧ ಎಫ್‌ಐಆರ್‌; ಬಂಧನ

ದಲಿತ ಯುವ ಹೋರಾಟಗಾರ ಸಂದೇಶ್ ವಿರುದ್ಧ ಎಫ್‌ಐಆರ್‌; ಬಂಧನ

- Advertisement -
- Advertisement -

ಕೋಲಾರ ಜಿಲ್ಲೆಯ ಯುವ ದಲಿತ ಹೋರಾಟಗಾರ, ಡಾ.ಅಂಬೇಡ್ಕರ್‌ ಸೇವಾ ಸಮಿತಿ ಕರ್ನಾಟಕ (ಎಎಸ್‌ಎಸ್‌ಕೆ) ಸಂಘಟನೆಯ ಅಧ್ಯಕ್ಷ ಕೆ.ಎಂ.ಸಂದೇಶ್ ಅವರ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ.

ಕೋಲಾರ ಜಿಲ್ಲೆಯಲ್ಲಿ ದಲಿತರ ಮೇಲಾಗುವ ದೌರ್ಜನ್ಯಗಳ ಸಂದರ್ಭದಲ್ಲಿ ಸ್ಥಳಕ್ಕೆ ಹಾಜರಾಗಿ ಸಂತ್ರಸ್ತರ ಪರ ನಿಲ್ಲುವ ಮೂಲಕ ಗಮನ ಸೆಳೆಯುತ್ತಿರುವ ಸಂದೇಶ್‌ ಅವರ ಮೇಲೆ ಬೇಕಂತಲೇ ಪ್ರಕರಣ ದಾಖಲಿಸಲಾಗಿದೆ ಎಂದು ಎಎಸ್‌ಎಸ್‌ಕೆ ಕಾರ್ಯಕರ್ತರು ದೂರಿದ್ದಾರೆ.

“ದಲಿತ ಹೆಣ್ಣುಮಗಳೊಬ್ಬಳಿಗೆ ಸವರ್ಣೀಯ ಜಾತಿಯ ಹುಡುಗ ಮೋಸ ಮಾಡಿದ್ದನ್ನು ಕೇಳಿ, ಆಕೆಯ ನೆರವಿಗೆ ಸಂದೇಶ್ ಧಾವಿಸಿದ್ದರು. ಮೋಸ ಮಾಡಿದ್ದ ಹುಡುಗನನ್ನು ಕರೆದುಕೊಂಡು ಬಂದು, ಸಂಧಾನ ನಡೆಸಿದ್ದರು. ಹುಡುಗ- ಹುಡುಗಿ ಇಬ್ಬರೂ ಮದುವೆಯಾಗುವುದಾಗಿ ಒಪ್ಪಿಕೊಂಡರು. ಆದರೆ ನಂತರದಲ್ಲಿ ಅಪಹರಣದ ಆರೋಪ ಹೊರಿಸಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ” ಎಂದು ಎಎಸ್‌ಎಸ್‌ಕೆಯ ಕಾರ್ಯಕರ್ತರೊಬ್ಬರು ‘ನಾನುಗೌರಿ.ಕಾಂ’ಗೆ ತಿಳಿಸಿದ್ದಾರೆ.

ದೊಡ್ಡ ಬಳ್ಳಾಪುರ ಸರ್ಕಲ್ ವ್ಯಾಪ್ತಿಯ ರಾಜಾನಕುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ನೊಂದ ದಲಿತರ ಪರವಾಗಿ ಹೋರಾಟ ಮಾಡುತ್ತಾ, ಸಂದೇಶ್ ಮುಂಚೂಣಿಯಲ್ಲಿದ್ದಾರೆ. ಹೀಗಾಗಿ ಅವರನ್ನು ತೊಂದರೆ ಸಿಲುಕಿಸಲಾಗಿದೆ ಎಂದು ಆರೋಪಿಸಲಾಗುತ್ತಿದೆ.

“ಹುಡುಗನನ್ನು ಅಪಹರಣ ಮಾಡಲಾಗಿದೆ ಎಂಬುದು ಸುಳ್ಳು. ದಲಿತ ಹೆಣ್ಣುಮಗಳಿಗೆ ನ್ಯಾಯ ದೊರಕಿಸಬೇಕೆಂದು ಸಂದೇಶ್‌ ಮುಂದಾಗಿದ್ದರು. ವಂಚನೆ ಮಾಡಲು ಯತ್ನಿಸಿದ್ದ ನವೀನ್‌ನನ್ನು ಯಲಹಂಕ ತಾಲ್ಲೂಕಿನ ರಾಜನಕುಂಟೆಯಿಂದ ಕರೆದುಕೊಂಡು ಬಂದಿದ್ದರು. ಸಮಸ್ಯೆಯನ್ನು ಬಗೆಹರಿಸಿಕೊಳ್ಳಲು ನವೀನ್‌ ಆಗಮಿಸಿದ್ದರು. ಆದರೆ ನವೀನ್ ಸ್ನೇಹಿತರು ದೂರು ನೀಡಿದ್ದಾರೆಂದು ಪೊಲೀಸರು ಎಫ್‌ಐಆರ್‌ ಮಾಡಿದ್ದಾರೆ. ನವೀನ್ ವಿಚಾರವಾಗಿ ಕರೆ ಮಾಡಿದಾಗ ಸಂದೇಶ್ ಸ್ವಲ್ಪ ಖಾರವಾಗಿ ಮಾತನಾಡಿದ್ದರು. ಇದರಿಂದ ಪೊಲೀಸರು ಸಿಟ್ಟಿಗೆಟ್ಟು ಈ ರೀತಿಯಲ್ಲಿ ಸಿಲುಕಿಸಿದ್ದಾರೆ” ಎಂದೂ ದೂರಲಾಗುತ್ತಿದೆ.

ದೂರಿನಲ್ಲಿ ಏನಿದೆ?

ದಿನಾಂಕ 13.02.2023 ರಂದು ಬೆಳಗಿನ ಜಾವ 4.00 ಗಂಟೆಗೆ ಮಲಪ್ಪ ಪೂಜಾರ್ ಎಂಬವರು ಠಾಣೆಗೆ ಹಾಜಾರಾಗಿ ದೂರು ನೀಡಿದ್ದು ಅದರನ್ವಯ ಸಂದೇಶ್ ಮತ್ತು ಇತರ ನಾಲ್ವರ ವಿರುದ್ಧ ಪ್ರಕರಣ ದಾಖಲಿಸಿರುವುದಾಗಿ ಎಫ್‌ಐಆರ್‌ನಲ್ಲಿ ತಿಳಿಸಲಾಗಿದೆ.

ಮಲ್ಲಪ್ಪ ಅವರು ರಘುನಾಥಪುರದಲ್ಲಿರುವ ಎಲ್ & ಟಿ ಕಂಪನಿಯಲ್ಲಿ ಕೆಲಸ ಮಾಡಿಕೊಂಡಿದ್ದಾರೆ. ಕಂಪನಿಯವರು ಕೊಟ್ಟಿರುವ ರೂಮ್‌ನಲ್ಲಿ ಮಲ್ಲಪ್ಪ ಪೂಜಾರ್‌, ಸಂತೋಷ, ರಾಮು, ವಾಸು ಹಾಗೂ ಶ್ರೀಶೈಲಾ ಒಟ್ಟಿಗೆ ವಾಸವಿದ್ದರು. ದಿನಾಂಕ 12/02/2023 ರಂದು ಭಾನುವಾರವಾಗಿದ್ದರಿಂದ ಕೆಲಸಕ್ಕೆ ರಜೆ ಇತ್ತು. ಮಲ್ಲಪ್ಪ ಮನೆಯಲ್ಲಿಯೇ ಇದ್ದರು. ಸಂತೋಷ, ರಾಮು, ವಾಸು ಹಾಗೂ ಶ್ರೀಶೈಲಾ ಅವರು ಸಂಜೆ 5-00 ಗಂಟೆಗೆ ರಾಜಾನುಕುಂಟೆಯ ಪಿ.ಕೆ. ಮೆನ್ಸ್‌ವೇರ್‌ನಲ್ಲಿ ಬಟ್ಟೆ ತೆಗೆದುಕೊಂಡು ಬರುವುದಾಗಿ ಹೇಳಿ ಹೋಗಿದ್ದರು.

ಸಂತೋಷ ಲವ್ ಮಾಡುತ್ತಿದ್ದ ಹುಡುಗಿಯು ಇಬ್ಬರು ವ್ಯಕ್ತಿಗಳೊಂದಿಗೆ ಅಂದು ಸಂಜೆ 6-00 ಗಂಟೆ ಸಮಯದಲ್ಲಿ ರೂಮಿನ ಬಳಿಗೆ ಬಂದು ಸಂತೋಷ ಎಲ್ಲಿ ಎಂದು ಕೇಳಿದರು. ಅದಕ್ಕೆ ಮಲ್ಲಪ್ಪ “ಸಂತೋಷ ರಾಜಾನುಕುಂಟೆಗೆ ಬಟ್ಟೆ ತೆಗೆದುಕೊಂಡು ಬರಲು ಹೋಗಿದ್ದಾನೆ” ಎಂದು ತಿಳಿಸಿದರು.

ಆಗ ಅವರು ಸಂತೋಷನನ್ನು ತೋರಿಸು ಎಂದು ಮಲ್ಲಪ್ಪನವರನ್ನು ಕರೆದುಕೊಂಡು ತಾವು ಬಂದಿದೆ XUV 500 ಕಾರಿನಲ್ಲಿ ಹೋದರು. ರಘುನಾಥಪುರ ಸರ್ಕಲ್‌ಗೆ ಬಂದಾಗ ಮತ್ತೊಬ್ಬ ವ್ಯಕ್ತಿ ಕಾರಿನಲ್ಲಿ, ಹತ್ತಿಕೊಂಡರು. ನಂತರ ಮಲ್ಲಪ್ಪ ಸೇರಿದಂತೆ 5 ಜನರು ಸಂಜೆ 7-00 ಗಂಟೆಗೆ ರಾಜಾನುಕುಂಟೆಯ ಪಿಕೆ ಮೆನ್ಸ್ ವೇರ್ ಬಳಿ ಬಂದರು.

“ಬಟ್ಟೆ ಅಂಗಡಿಯಲ್ಲಿದ್ದ ಸಂತೋಷನನ್ನು ಅವರಿಗೆ ತೋರಿಸಿದೆ. ಅಲ್ಲಿಗೆ ಆಗಲೇ ಬಂದಿದ್ದ ಮತ್ತಿಬ್ಬರು ವ್ಯಕ್ತಿಗಳು ಸೇರಿ ನನಗೆ ನಾವು ದೊಡ್ಡಬಳ್ಳಾಪುರ ಪೊಲೀಸರು. ಸಂತೋಷನನ್ನು, ಯಾವುದೋ ಕೇಸಿನಲ್ಲಿ ವಿಚಾರಣೆ ಮಾಡಬೇಕಾಗಿದ್ದು, ಕರೆದುಕೊಂಡು ಹೋಗುತ್ತೇವೆ ಎಂದು ಸಂತೋಷನನ್ನು ಬಲವಂತವಾಗಿ ಕಾರಿನಲ್ಲಿ ಕೂರಿಸಿಕೊಂಡು ಹೊರಟು ಹೋದರು” ಎಂದು ಮಲ್ಲಪ್ಪ ಹೇಳಿರುವುದಾಗಿ ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

“ಅವರಲ್ಲಿದ್ದ ಒಬ್ಬ ವ್ಯಕ್ತಿಯ ಹೆಸರು ಸಂದೇಶ್ ಅಂತ ಗೊತ್ತಾಯಿತು. ನಾವು ಬೆಳಗಿನ ಜಾವ 1-00 ಗಂಟೆಯವರೆಗೆ ನನ್ನ ಸ್ನೇಹಿತ ಸಂತೋಷನ ಮೊಬೈಲ್ ಫೋನ್ ನಂಬರ್‌ಗೆ ಫೋನ್ ಮಾಡಿದೆವು. ಸಂತೋಷ್‌ ಪೋನ್ ತೆಗೆಯದ ಕಾರಣ ದೊಡ್ಡಬಳಾಪುರ ಪೊಲೀಸ್ ಠಾಣೆಗೆ ಹೋಗಿ ವಿಚಾರ ಮಾಡಿದೆವು. ಪೊಲೀಸಿನವರು ಸಂತೋಷನನ್ನು ಕರೆದುಕೊಂಡು ಬಂದಿರುವುದಿಲ್ಲ ಎಂದು ತಿಳಿಸಿ ರಾಜಾನುಕುಂಟೆ ಪೊಲೀಸ್ ಠಾಣೆಗೆ ಹೋಗಿ ದೂರು ನೀಡುವಂತೆ ತಿಳಿಸಿದರು. ಪೊಲೀಸರೆಂದು ಹೇಳಿಕೊಂಡು ನನ್ನ ಸ್ನೇಹಿತ ಸಂತೋಷನನ್ನು XUV 500 ಕಾರಿನಲ್ಲಿ ಅಪಹರಿಸಿಕೊಂಡು ಹೋಗಿರುವ ಸಂದೇಶ್‌ ಮತ್ತು ಇತರರ ವಿರುದ್ಧ ಕಾನೂನು ರೀತ್ಯಾ ಕ್ರಮ ಜರುಗಿಸಬೇಕು” ಎಂದು ಮಲ್ಲಪ್ಪ ಹೇಳಿದ್ದಾರೆಂಬುದು ಎಫ್‌ಐಆರ್‌ನ ಸಾರಾಂಶ. ದೂರಿನ ಅನ್ವಯ ಐಪಿಸಿ ಕಲಂ 419,363 ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ತಕ್ಷಣವೇ ಸಂದೇಶ್ ಅವರನ್ನು ಬಂಧಿಸಲಾಗಿದೆ.

ನಿರಂತರದ ಹೋರಾಟದಲ್ಲಿ ಸಂದೇಶ್ ಭಾಗಿ

ದಲಿತರ ಮೇಲೆ ಹಲ್ಲೆ, ದೌರ್ಜನ್ಯಗಳಾದಾಗ ಅಲ್ಲಿ ಹಾಜರಾಗುವ ಮೂಲಕ ಸಂದೇಶ್ ಗಮನ ಸೆಳೆಯುತ್ತಿದ್ದಾರೆ. ಅವರ ಫೇಸ್‌ಬುಕ್‌ ಖಾತೆಯನ್ನು ಪರಿಶೀಲಿಸಿದರೆ ಇಂತಹ ಸಾಕಷ್ಟು ಹೋರಾಟಗಳಲ್ಲಿ ಸಂದೇಶ್‌ ಮುಂಚೂಣಿಯಲ್ಲಿರುವುದು ತಿಳಿಯುತ್ತದೆ.

ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನ ಉಳ್ಳೇರಹಳ್ಳಿಯಲ್ಲಿ ಗ್ರಾಮದೇವತೆ ಭೂತಮ್ಮನ ಮೆರವಣಿಗೆಯ ವೇಳೆ ದಲಿತ ಬಾಲಕ ದೇವರಿಗೆ ಸಂಬಂಧಿಸಿದ ಗುಜ್ಜಕೋಲನ್ನು ಮುಟ್ಟಿದನೆಂದು ಆರೋಪಿಸಿ ಸವರ್ಣೀಯರು ಸಾಮಾಜಿಕ ಬಹಿಷ್ಕಾರ ಹಾಕಿದ ಘಟನೆ ಚರ್ಚೆಗೆ ಗ್ರಾಸವಾಗಿತ್ತು. ಈ ಪ್ರಕರಣ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಲು ಸಂದೇಶ್ ಕಾರಣವಾಗಿದ್ದರು.

ಘಟನೆಯ ಬಳಿಕ ಸ್ಥಳಕ್ಕೆ ಧಾವಿಸಿದ ಅಂಬೇಡ್ಕರ್‌ ಸೇವಾ ಸಮಿತಿ ಕರ್ನಾಟಕ (ಎಎಸ್‌ಎಸ್‌ಕೆ) ಸಂಘಟನೆಯ  ಯುವಕರು, ಕುಟುಂಬಕ್ಕೆ ಅರಿವು ಮೂಡಿಸಿದ್ದರು. “ನಿಮ್ಮ ಮನೆಯಲ್ಲಿ ಇರಬೇಕಾದದ್ದು ಈ ದೇವರ ಫೋಟೋಗಳಲ್ಲ. ನಿಮಗೆ ನ್ಯಾಯ ದೊರಕಿಸಿಕೊಟ್ಟ ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಫೋಟೋ” ಎಂದು ಹೇಳಿದ್ದರು. ಮನೆಯಲ್ಲಿದ್ದ ವೆಂಕಟೇಶ್ವರನ ಫೋಟೋಗಳನ್ನು ತೆಗೆದ ಶೋಭಾ ದಂಪತಿ, ಬಾಬಾ ಸಾಹೇಬ್‌ ಅಂಬೇಡ್ಕರ್‌ರವರ ಭಾವಚಿತ್ರ ಇಟ್ಟರು. ಜೊತೆಗೆ ಬುದ್ಧನ ವಿಗ್ರಹವನ್ನು ಪಕ್ಕದಲ್ಲಿ ಇರಿಸಿದ್ದರು. ಫೋಟೋ ತೆರವಿನ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಭಾರೀ ವೈರಲ್ ಆಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...