Homeಕರ್ನಾಟಕದಲಿತ ಯುವ ಹೋರಾಟಗಾರ ಸಂದೇಶ್ ವಿರುದ್ಧ ಎಫ್‌ಐಆರ್‌; ಬಂಧನ

ದಲಿತ ಯುವ ಹೋರಾಟಗಾರ ಸಂದೇಶ್ ವಿರುದ್ಧ ಎಫ್‌ಐಆರ್‌; ಬಂಧನ

- Advertisement -
- Advertisement -

ಕೋಲಾರ ಜಿಲ್ಲೆಯ ಯುವ ದಲಿತ ಹೋರಾಟಗಾರ, ಡಾ.ಅಂಬೇಡ್ಕರ್‌ ಸೇವಾ ಸಮಿತಿ ಕರ್ನಾಟಕ (ಎಎಸ್‌ಎಸ್‌ಕೆ) ಸಂಘಟನೆಯ ಅಧ್ಯಕ್ಷ ಕೆ.ಎಂ.ಸಂದೇಶ್ ಅವರ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ.

ಕೋಲಾರ ಜಿಲ್ಲೆಯಲ್ಲಿ ದಲಿತರ ಮೇಲಾಗುವ ದೌರ್ಜನ್ಯಗಳ ಸಂದರ್ಭದಲ್ಲಿ ಸ್ಥಳಕ್ಕೆ ಹಾಜರಾಗಿ ಸಂತ್ರಸ್ತರ ಪರ ನಿಲ್ಲುವ ಮೂಲಕ ಗಮನ ಸೆಳೆಯುತ್ತಿರುವ ಸಂದೇಶ್‌ ಅವರ ಮೇಲೆ ಬೇಕಂತಲೇ ಪ್ರಕರಣ ದಾಖಲಿಸಲಾಗಿದೆ ಎಂದು ಎಎಸ್‌ಎಸ್‌ಕೆ ಕಾರ್ಯಕರ್ತರು ದೂರಿದ್ದಾರೆ.

“ದಲಿತ ಹೆಣ್ಣುಮಗಳೊಬ್ಬಳಿಗೆ ಸವರ್ಣೀಯ ಜಾತಿಯ ಹುಡುಗ ಮೋಸ ಮಾಡಿದ್ದನ್ನು ಕೇಳಿ, ಆಕೆಯ ನೆರವಿಗೆ ಸಂದೇಶ್ ಧಾವಿಸಿದ್ದರು. ಮೋಸ ಮಾಡಿದ್ದ ಹುಡುಗನನ್ನು ಕರೆದುಕೊಂಡು ಬಂದು, ಸಂಧಾನ ನಡೆಸಿದ್ದರು. ಹುಡುಗ- ಹುಡುಗಿ ಇಬ್ಬರೂ ಮದುವೆಯಾಗುವುದಾಗಿ ಒಪ್ಪಿಕೊಂಡರು. ಆದರೆ ನಂತರದಲ್ಲಿ ಅಪಹರಣದ ಆರೋಪ ಹೊರಿಸಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ” ಎಂದು ಎಎಸ್‌ಎಸ್‌ಕೆಯ ಕಾರ್ಯಕರ್ತರೊಬ್ಬರು ‘ನಾನುಗೌರಿ.ಕಾಂ’ಗೆ ತಿಳಿಸಿದ್ದಾರೆ.

ದೊಡ್ಡ ಬಳ್ಳಾಪುರ ಸರ್ಕಲ್ ವ್ಯಾಪ್ತಿಯ ರಾಜಾನಕುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ನೊಂದ ದಲಿತರ ಪರವಾಗಿ ಹೋರಾಟ ಮಾಡುತ್ತಾ, ಸಂದೇಶ್ ಮುಂಚೂಣಿಯಲ್ಲಿದ್ದಾರೆ. ಹೀಗಾಗಿ ಅವರನ್ನು ತೊಂದರೆ ಸಿಲುಕಿಸಲಾಗಿದೆ ಎಂದು ಆರೋಪಿಸಲಾಗುತ್ತಿದೆ.

“ಹುಡುಗನನ್ನು ಅಪಹರಣ ಮಾಡಲಾಗಿದೆ ಎಂಬುದು ಸುಳ್ಳು. ದಲಿತ ಹೆಣ್ಣುಮಗಳಿಗೆ ನ್ಯಾಯ ದೊರಕಿಸಬೇಕೆಂದು ಸಂದೇಶ್‌ ಮುಂದಾಗಿದ್ದರು. ವಂಚನೆ ಮಾಡಲು ಯತ್ನಿಸಿದ್ದ ನವೀನ್‌ನನ್ನು ಯಲಹಂಕ ತಾಲ್ಲೂಕಿನ ರಾಜನಕುಂಟೆಯಿಂದ ಕರೆದುಕೊಂಡು ಬಂದಿದ್ದರು. ಸಮಸ್ಯೆಯನ್ನು ಬಗೆಹರಿಸಿಕೊಳ್ಳಲು ನವೀನ್‌ ಆಗಮಿಸಿದ್ದರು. ಆದರೆ ನವೀನ್ ಸ್ನೇಹಿತರು ದೂರು ನೀಡಿದ್ದಾರೆಂದು ಪೊಲೀಸರು ಎಫ್‌ಐಆರ್‌ ಮಾಡಿದ್ದಾರೆ. ನವೀನ್ ವಿಚಾರವಾಗಿ ಕರೆ ಮಾಡಿದಾಗ ಸಂದೇಶ್ ಸ್ವಲ್ಪ ಖಾರವಾಗಿ ಮಾತನಾಡಿದ್ದರು. ಇದರಿಂದ ಪೊಲೀಸರು ಸಿಟ್ಟಿಗೆಟ್ಟು ಈ ರೀತಿಯಲ್ಲಿ ಸಿಲುಕಿಸಿದ್ದಾರೆ” ಎಂದೂ ದೂರಲಾಗುತ್ತಿದೆ.

ದೂರಿನಲ್ಲಿ ಏನಿದೆ?

ದಿನಾಂಕ 13.02.2023 ರಂದು ಬೆಳಗಿನ ಜಾವ 4.00 ಗಂಟೆಗೆ ಮಲಪ್ಪ ಪೂಜಾರ್ ಎಂಬವರು ಠಾಣೆಗೆ ಹಾಜಾರಾಗಿ ದೂರು ನೀಡಿದ್ದು ಅದರನ್ವಯ ಸಂದೇಶ್ ಮತ್ತು ಇತರ ನಾಲ್ವರ ವಿರುದ್ಧ ಪ್ರಕರಣ ದಾಖಲಿಸಿರುವುದಾಗಿ ಎಫ್‌ಐಆರ್‌ನಲ್ಲಿ ತಿಳಿಸಲಾಗಿದೆ.

ಮಲ್ಲಪ್ಪ ಅವರು ರಘುನಾಥಪುರದಲ್ಲಿರುವ ಎಲ್ & ಟಿ ಕಂಪನಿಯಲ್ಲಿ ಕೆಲಸ ಮಾಡಿಕೊಂಡಿದ್ದಾರೆ. ಕಂಪನಿಯವರು ಕೊಟ್ಟಿರುವ ರೂಮ್‌ನಲ್ಲಿ ಮಲ್ಲಪ್ಪ ಪೂಜಾರ್‌, ಸಂತೋಷ, ರಾಮು, ವಾಸು ಹಾಗೂ ಶ್ರೀಶೈಲಾ ಒಟ್ಟಿಗೆ ವಾಸವಿದ್ದರು. ದಿನಾಂಕ 12/02/2023 ರಂದು ಭಾನುವಾರವಾಗಿದ್ದರಿಂದ ಕೆಲಸಕ್ಕೆ ರಜೆ ಇತ್ತು. ಮಲ್ಲಪ್ಪ ಮನೆಯಲ್ಲಿಯೇ ಇದ್ದರು. ಸಂತೋಷ, ರಾಮು, ವಾಸು ಹಾಗೂ ಶ್ರೀಶೈಲಾ ಅವರು ಸಂಜೆ 5-00 ಗಂಟೆಗೆ ರಾಜಾನುಕುಂಟೆಯ ಪಿ.ಕೆ. ಮೆನ್ಸ್‌ವೇರ್‌ನಲ್ಲಿ ಬಟ್ಟೆ ತೆಗೆದುಕೊಂಡು ಬರುವುದಾಗಿ ಹೇಳಿ ಹೋಗಿದ್ದರು.

ಸಂತೋಷ ಲವ್ ಮಾಡುತ್ತಿದ್ದ ಹುಡುಗಿಯು ಇಬ್ಬರು ವ್ಯಕ್ತಿಗಳೊಂದಿಗೆ ಅಂದು ಸಂಜೆ 6-00 ಗಂಟೆ ಸಮಯದಲ್ಲಿ ರೂಮಿನ ಬಳಿಗೆ ಬಂದು ಸಂತೋಷ ಎಲ್ಲಿ ಎಂದು ಕೇಳಿದರು. ಅದಕ್ಕೆ ಮಲ್ಲಪ್ಪ “ಸಂತೋಷ ರಾಜಾನುಕುಂಟೆಗೆ ಬಟ್ಟೆ ತೆಗೆದುಕೊಂಡು ಬರಲು ಹೋಗಿದ್ದಾನೆ” ಎಂದು ತಿಳಿಸಿದರು.

ಆಗ ಅವರು ಸಂತೋಷನನ್ನು ತೋರಿಸು ಎಂದು ಮಲ್ಲಪ್ಪನವರನ್ನು ಕರೆದುಕೊಂಡು ತಾವು ಬಂದಿದೆ XUV 500 ಕಾರಿನಲ್ಲಿ ಹೋದರು. ರಘುನಾಥಪುರ ಸರ್ಕಲ್‌ಗೆ ಬಂದಾಗ ಮತ್ತೊಬ್ಬ ವ್ಯಕ್ತಿ ಕಾರಿನಲ್ಲಿ, ಹತ್ತಿಕೊಂಡರು. ನಂತರ ಮಲ್ಲಪ್ಪ ಸೇರಿದಂತೆ 5 ಜನರು ಸಂಜೆ 7-00 ಗಂಟೆಗೆ ರಾಜಾನುಕುಂಟೆಯ ಪಿಕೆ ಮೆನ್ಸ್ ವೇರ್ ಬಳಿ ಬಂದರು.

“ಬಟ್ಟೆ ಅಂಗಡಿಯಲ್ಲಿದ್ದ ಸಂತೋಷನನ್ನು ಅವರಿಗೆ ತೋರಿಸಿದೆ. ಅಲ್ಲಿಗೆ ಆಗಲೇ ಬಂದಿದ್ದ ಮತ್ತಿಬ್ಬರು ವ್ಯಕ್ತಿಗಳು ಸೇರಿ ನನಗೆ ನಾವು ದೊಡ್ಡಬಳ್ಳಾಪುರ ಪೊಲೀಸರು. ಸಂತೋಷನನ್ನು, ಯಾವುದೋ ಕೇಸಿನಲ್ಲಿ ವಿಚಾರಣೆ ಮಾಡಬೇಕಾಗಿದ್ದು, ಕರೆದುಕೊಂಡು ಹೋಗುತ್ತೇವೆ ಎಂದು ಸಂತೋಷನನ್ನು ಬಲವಂತವಾಗಿ ಕಾರಿನಲ್ಲಿ ಕೂರಿಸಿಕೊಂಡು ಹೊರಟು ಹೋದರು” ಎಂದು ಮಲ್ಲಪ್ಪ ಹೇಳಿರುವುದಾಗಿ ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

“ಅವರಲ್ಲಿದ್ದ ಒಬ್ಬ ವ್ಯಕ್ತಿಯ ಹೆಸರು ಸಂದೇಶ್ ಅಂತ ಗೊತ್ತಾಯಿತು. ನಾವು ಬೆಳಗಿನ ಜಾವ 1-00 ಗಂಟೆಯವರೆಗೆ ನನ್ನ ಸ್ನೇಹಿತ ಸಂತೋಷನ ಮೊಬೈಲ್ ಫೋನ್ ನಂಬರ್‌ಗೆ ಫೋನ್ ಮಾಡಿದೆವು. ಸಂತೋಷ್‌ ಪೋನ್ ತೆಗೆಯದ ಕಾರಣ ದೊಡ್ಡಬಳಾಪುರ ಪೊಲೀಸ್ ಠಾಣೆಗೆ ಹೋಗಿ ವಿಚಾರ ಮಾಡಿದೆವು. ಪೊಲೀಸಿನವರು ಸಂತೋಷನನ್ನು ಕರೆದುಕೊಂಡು ಬಂದಿರುವುದಿಲ್ಲ ಎಂದು ತಿಳಿಸಿ ರಾಜಾನುಕುಂಟೆ ಪೊಲೀಸ್ ಠಾಣೆಗೆ ಹೋಗಿ ದೂರು ನೀಡುವಂತೆ ತಿಳಿಸಿದರು. ಪೊಲೀಸರೆಂದು ಹೇಳಿಕೊಂಡು ನನ್ನ ಸ್ನೇಹಿತ ಸಂತೋಷನನ್ನು XUV 500 ಕಾರಿನಲ್ಲಿ ಅಪಹರಿಸಿಕೊಂಡು ಹೋಗಿರುವ ಸಂದೇಶ್‌ ಮತ್ತು ಇತರರ ವಿರುದ್ಧ ಕಾನೂನು ರೀತ್ಯಾ ಕ್ರಮ ಜರುಗಿಸಬೇಕು” ಎಂದು ಮಲ್ಲಪ್ಪ ಹೇಳಿದ್ದಾರೆಂಬುದು ಎಫ್‌ಐಆರ್‌ನ ಸಾರಾಂಶ. ದೂರಿನ ಅನ್ವಯ ಐಪಿಸಿ ಕಲಂ 419,363 ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ತಕ್ಷಣವೇ ಸಂದೇಶ್ ಅವರನ್ನು ಬಂಧಿಸಲಾಗಿದೆ.

ನಿರಂತರದ ಹೋರಾಟದಲ್ಲಿ ಸಂದೇಶ್ ಭಾಗಿ

ದಲಿತರ ಮೇಲೆ ಹಲ್ಲೆ, ದೌರ್ಜನ್ಯಗಳಾದಾಗ ಅಲ್ಲಿ ಹಾಜರಾಗುವ ಮೂಲಕ ಸಂದೇಶ್ ಗಮನ ಸೆಳೆಯುತ್ತಿದ್ದಾರೆ. ಅವರ ಫೇಸ್‌ಬುಕ್‌ ಖಾತೆಯನ್ನು ಪರಿಶೀಲಿಸಿದರೆ ಇಂತಹ ಸಾಕಷ್ಟು ಹೋರಾಟಗಳಲ್ಲಿ ಸಂದೇಶ್‌ ಮುಂಚೂಣಿಯಲ್ಲಿರುವುದು ತಿಳಿಯುತ್ತದೆ.

ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನ ಉಳ್ಳೇರಹಳ್ಳಿಯಲ್ಲಿ ಗ್ರಾಮದೇವತೆ ಭೂತಮ್ಮನ ಮೆರವಣಿಗೆಯ ವೇಳೆ ದಲಿತ ಬಾಲಕ ದೇವರಿಗೆ ಸಂಬಂಧಿಸಿದ ಗುಜ್ಜಕೋಲನ್ನು ಮುಟ್ಟಿದನೆಂದು ಆರೋಪಿಸಿ ಸವರ್ಣೀಯರು ಸಾಮಾಜಿಕ ಬಹಿಷ್ಕಾರ ಹಾಕಿದ ಘಟನೆ ಚರ್ಚೆಗೆ ಗ್ರಾಸವಾಗಿತ್ತು. ಈ ಪ್ರಕರಣ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಲು ಸಂದೇಶ್ ಕಾರಣವಾಗಿದ್ದರು.

ಘಟನೆಯ ಬಳಿಕ ಸ್ಥಳಕ್ಕೆ ಧಾವಿಸಿದ ಅಂಬೇಡ್ಕರ್‌ ಸೇವಾ ಸಮಿತಿ ಕರ್ನಾಟಕ (ಎಎಸ್‌ಎಸ್‌ಕೆ) ಸಂಘಟನೆಯ  ಯುವಕರು, ಕುಟುಂಬಕ್ಕೆ ಅರಿವು ಮೂಡಿಸಿದ್ದರು. “ನಿಮ್ಮ ಮನೆಯಲ್ಲಿ ಇರಬೇಕಾದದ್ದು ಈ ದೇವರ ಫೋಟೋಗಳಲ್ಲ. ನಿಮಗೆ ನ್ಯಾಯ ದೊರಕಿಸಿಕೊಟ್ಟ ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಫೋಟೋ” ಎಂದು ಹೇಳಿದ್ದರು. ಮನೆಯಲ್ಲಿದ್ದ ವೆಂಕಟೇಶ್ವರನ ಫೋಟೋಗಳನ್ನು ತೆಗೆದ ಶೋಭಾ ದಂಪತಿ, ಬಾಬಾ ಸಾಹೇಬ್‌ ಅಂಬೇಡ್ಕರ್‌ರವರ ಭಾವಚಿತ್ರ ಇಟ್ಟರು. ಜೊತೆಗೆ ಬುದ್ಧನ ವಿಗ್ರಹವನ್ನು ಪಕ್ಕದಲ್ಲಿ ಇರಿಸಿದ್ದರು. ಫೋಟೋ ತೆರವಿನ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಭಾರೀ ವೈರಲ್ ಆಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...