Homeಕರ್ನಾಟಕದಲಿತ ಯುವ ಹೋರಾಟಗಾರ ಸಂದೇಶ್ ವಿರುದ್ಧ ಎಫ್‌ಐಆರ್‌; ಬಂಧನ

ದಲಿತ ಯುವ ಹೋರಾಟಗಾರ ಸಂದೇಶ್ ವಿರುದ್ಧ ಎಫ್‌ಐಆರ್‌; ಬಂಧನ

- Advertisement -
- Advertisement -

ಕೋಲಾರ ಜಿಲ್ಲೆಯ ಯುವ ದಲಿತ ಹೋರಾಟಗಾರ, ಡಾ.ಅಂಬೇಡ್ಕರ್‌ ಸೇವಾ ಸಮಿತಿ ಕರ್ನಾಟಕ (ಎಎಸ್‌ಎಸ್‌ಕೆ) ಸಂಘಟನೆಯ ಅಧ್ಯಕ್ಷ ಕೆ.ಎಂ.ಸಂದೇಶ್ ಅವರ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ.

ಕೋಲಾರ ಜಿಲ್ಲೆಯಲ್ಲಿ ದಲಿತರ ಮೇಲಾಗುವ ದೌರ್ಜನ್ಯಗಳ ಸಂದರ್ಭದಲ್ಲಿ ಸ್ಥಳಕ್ಕೆ ಹಾಜರಾಗಿ ಸಂತ್ರಸ್ತರ ಪರ ನಿಲ್ಲುವ ಮೂಲಕ ಗಮನ ಸೆಳೆಯುತ್ತಿರುವ ಸಂದೇಶ್‌ ಅವರ ಮೇಲೆ ಬೇಕಂತಲೇ ಪ್ರಕರಣ ದಾಖಲಿಸಲಾಗಿದೆ ಎಂದು ಎಎಸ್‌ಎಸ್‌ಕೆ ಕಾರ್ಯಕರ್ತರು ದೂರಿದ್ದಾರೆ.

“ದಲಿತ ಹೆಣ್ಣುಮಗಳೊಬ್ಬಳಿಗೆ ಸವರ್ಣೀಯ ಜಾತಿಯ ಹುಡುಗ ಮೋಸ ಮಾಡಿದ್ದನ್ನು ಕೇಳಿ, ಆಕೆಯ ನೆರವಿಗೆ ಸಂದೇಶ್ ಧಾವಿಸಿದ್ದರು. ಮೋಸ ಮಾಡಿದ್ದ ಹುಡುಗನನ್ನು ಕರೆದುಕೊಂಡು ಬಂದು, ಸಂಧಾನ ನಡೆಸಿದ್ದರು. ಹುಡುಗ- ಹುಡುಗಿ ಇಬ್ಬರೂ ಮದುವೆಯಾಗುವುದಾಗಿ ಒಪ್ಪಿಕೊಂಡರು. ಆದರೆ ನಂತರದಲ್ಲಿ ಅಪಹರಣದ ಆರೋಪ ಹೊರಿಸಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ” ಎಂದು ಎಎಸ್‌ಎಸ್‌ಕೆಯ ಕಾರ್ಯಕರ್ತರೊಬ್ಬರು ‘ನಾನುಗೌರಿ.ಕಾಂ’ಗೆ ತಿಳಿಸಿದ್ದಾರೆ.

ದೊಡ್ಡ ಬಳ್ಳಾಪುರ ಸರ್ಕಲ್ ವ್ಯಾಪ್ತಿಯ ರಾಜಾನಕುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ನೊಂದ ದಲಿತರ ಪರವಾಗಿ ಹೋರಾಟ ಮಾಡುತ್ತಾ, ಸಂದೇಶ್ ಮುಂಚೂಣಿಯಲ್ಲಿದ್ದಾರೆ. ಹೀಗಾಗಿ ಅವರನ್ನು ತೊಂದರೆ ಸಿಲುಕಿಸಲಾಗಿದೆ ಎಂದು ಆರೋಪಿಸಲಾಗುತ್ತಿದೆ.

“ಹುಡುಗನನ್ನು ಅಪಹರಣ ಮಾಡಲಾಗಿದೆ ಎಂಬುದು ಸುಳ್ಳು. ದಲಿತ ಹೆಣ್ಣುಮಗಳಿಗೆ ನ್ಯಾಯ ದೊರಕಿಸಬೇಕೆಂದು ಸಂದೇಶ್‌ ಮುಂದಾಗಿದ್ದರು. ವಂಚನೆ ಮಾಡಲು ಯತ್ನಿಸಿದ್ದ ನವೀನ್‌ನನ್ನು ಯಲಹಂಕ ತಾಲ್ಲೂಕಿನ ರಾಜನಕುಂಟೆಯಿಂದ ಕರೆದುಕೊಂಡು ಬಂದಿದ್ದರು. ಸಮಸ್ಯೆಯನ್ನು ಬಗೆಹರಿಸಿಕೊಳ್ಳಲು ನವೀನ್‌ ಆಗಮಿಸಿದ್ದರು. ಆದರೆ ನವೀನ್ ಸ್ನೇಹಿತರು ದೂರು ನೀಡಿದ್ದಾರೆಂದು ಪೊಲೀಸರು ಎಫ್‌ಐಆರ್‌ ಮಾಡಿದ್ದಾರೆ. ನವೀನ್ ವಿಚಾರವಾಗಿ ಕರೆ ಮಾಡಿದಾಗ ಸಂದೇಶ್ ಸ್ವಲ್ಪ ಖಾರವಾಗಿ ಮಾತನಾಡಿದ್ದರು. ಇದರಿಂದ ಪೊಲೀಸರು ಸಿಟ್ಟಿಗೆಟ್ಟು ಈ ರೀತಿಯಲ್ಲಿ ಸಿಲುಕಿಸಿದ್ದಾರೆ” ಎಂದೂ ದೂರಲಾಗುತ್ತಿದೆ.

ದೂರಿನಲ್ಲಿ ಏನಿದೆ?

ದಿನಾಂಕ 13.02.2023 ರಂದು ಬೆಳಗಿನ ಜಾವ 4.00 ಗಂಟೆಗೆ ಮಲಪ್ಪ ಪೂಜಾರ್ ಎಂಬವರು ಠಾಣೆಗೆ ಹಾಜಾರಾಗಿ ದೂರು ನೀಡಿದ್ದು ಅದರನ್ವಯ ಸಂದೇಶ್ ಮತ್ತು ಇತರ ನಾಲ್ವರ ವಿರುದ್ಧ ಪ್ರಕರಣ ದಾಖಲಿಸಿರುವುದಾಗಿ ಎಫ್‌ಐಆರ್‌ನಲ್ಲಿ ತಿಳಿಸಲಾಗಿದೆ.

ಮಲ್ಲಪ್ಪ ಅವರು ರಘುನಾಥಪುರದಲ್ಲಿರುವ ಎಲ್ & ಟಿ ಕಂಪನಿಯಲ್ಲಿ ಕೆಲಸ ಮಾಡಿಕೊಂಡಿದ್ದಾರೆ. ಕಂಪನಿಯವರು ಕೊಟ್ಟಿರುವ ರೂಮ್‌ನಲ್ಲಿ ಮಲ್ಲಪ್ಪ ಪೂಜಾರ್‌, ಸಂತೋಷ, ರಾಮು, ವಾಸು ಹಾಗೂ ಶ್ರೀಶೈಲಾ ಒಟ್ಟಿಗೆ ವಾಸವಿದ್ದರು. ದಿನಾಂಕ 12/02/2023 ರಂದು ಭಾನುವಾರವಾಗಿದ್ದರಿಂದ ಕೆಲಸಕ್ಕೆ ರಜೆ ಇತ್ತು. ಮಲ್ಲಪ್ಪ ಮನೆಯಲ್ಲಿಯೇ ಇದ್ದರು. ಸಂತೋಷ, ರಾಮು, ವಾಸು ಹಾಗೂ ಶ್ರೀಶೈಲಾ ಅವರು ಸಂಜೆ 5-00 ಗಂಟೆಗೆ ರಾಜಾನುಕುಂಟೆಯ ಪಿ.ಕೆ. ಮೆನ್ಸ್‌ವೇರ್‌ನಲ್ಲಿ ಬಟ್ಟೆ ತೆಗೆದುಕೊಂಡು ಬರುವುದಾಗಿ ಹೇಳಿ ಹೋಗಿದ್ದರು.

ಸಂತೋಷ ಲವ್ ಮಾಡುತ್ತಿದ್ದ ಹುಡುಗಿಯು ಇಬ್ಬರು ವ್ಯಕ್ತಿಗಳೊಂದಿಗೆ ಅಂದು ಸಂಜೆ 6-00 ಗಂಟೆ ಸಮಯದಲ್ಲಿ ರೂಮಿನ ಬಳಿಗೆ ಬಂದು ಸಂತೋಷ ಎಲ್ಲಿ ಎಂದು ಕೇಳಿದರು. ಅದಕ್ಕೆ ಮಲ್ಲಪ್ಪ “ಸಂತೋಷ ರಾಜಾನುಕುಂಟೆಗೆ ಬಟ್ಟೆ ತೆಗೆದುಕೊಂಡು ಬರಲು ಹೋಗಿದ್ದಾನೆ” ಎಂದು ತಿಳಿಸಿದರು.

ಆಗ ಅವರು ಸಂತೋಷನನ್ನು ತೋರಿಸು ಎಂದು ಮಲ್ಲಪ್ಪನವರನ್ನು ಕರೆದುಕೊಂಡು ತಾವು ಬಂದಿದೆ XUV 500 ಕಾರಿನಲ್ಲಿ ಹೋದರು. ರಘುನಾಥಪುರ ಸರ್ಕಲ್‌ಗೆ ಬಂದಾಗ ಮತ್ತೊಬ್ಬ ವ್ಯಕ್ತಿ ಕಾರಿನಲ್ಲಿ, ಹತ್ತಿಕೊಂಡರು. ನಂತರ ಮಲ್ಲಪ್ಪ ಸೇರಿದಂತೆ 5 ಜನರು ಸಂಜೆ 7-00 ಗಂಟೆಗೆ ರಾಜಾನುಕುಂಟೆಯ ಪಿಕೆ ಮೆನ್ಸ್ ವೇರ್ ಬಳಿ ಬಂದರು.

“ಬಟ್ಟೆ ಅಂಗಡಿಯಲ್ಲಿದ್ದ ಸಂತೋಷನನ್ನು ಅವರಿಗೆ ತೋರಿಸಿದೆ. ಅಲ್ಲಿಗೆ ಆಗಲೇ ಬಂದಿದ್ದ ಮತ್ತಿಬ್ಬರು ವ್ಯಕ್ತಿಗಳು ಸೇರಿ ನನಗೆ ನಾವು ದೊಡ್ಡಬಳ್ಳಾಪುರ ಪೊಲೀಸರು. ಸಂತೋಷನನ್ನು, ಯಾವುದೋ ಕೇಸಿನಲ್ಲಿ ವಿಚಾರಣೆ ಮಾಡಬೇಕಾಗಿದ್ದು, ಕರೆದುಕೊಂಡು ಹೋಗುತ್ತೇವೆ ಎಂದು ಸಂತೋಷನನ್ನು ಬಲವಂತವಾಗಿ ಕಾರಿನಲ್ಲಿ ಕೂರಿಸಿಕೊಂಡು ಹೊರಟು ಹೋದರು” ಎಂದು ಮಲ್ಲಪ್ಪ ಹೇಳಿರುವುದಾಗಿ ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

“ಅವರಲ್ಲಿದ್ದ ಒಬ್ಬ ವ್ಯಕ್ತಿಯ ಹೆಸರು ಸಂದೇಶ್ ಅಂತ ಗೊತ್ತಾಯಿತು. ನಾವು ಬೆಳಗಿನ ಜಾವ 1-00 ಗಂಟೆಯವರೆಗೆ ನನ್ನ ಸ್ನೇಹಿತ ಸಂತೋಷನ ಮೊಬೈಲ್ ಫೋನ್ ನಂಬರ್‌ಗೆ ಫೋನ್ ಮಾಡಿದೆವು. ಸಂತೋಷ್‌ ಪೋನ್ ತೆಗೆಯದ ಕಾರಣ ದೊಡ್ಡಬಳಾಪುರ ಪೊಲೀಸ್ ಠಾಣೆಗೆ ಹೋಗಿ ವಿಚಾರ ಮಾಡಿದೆವು. ಪೊಲೀಸಿನವರು ಸಂತೋಷನನ್ನು ಕರೆದುಕೊಂಡು ಬಂದಿರುವುದಿಲ್ಲ ಎಂದು ತಿಳಿಸಿ ರಾಜಾನುಕುಂಟೆ ಪೊಲೀಸ್ ಠಾಣೆಗೆ ಹೋಗಿ ದೂರು ನೀಡುವಂತೆ ತಿಳಿಸಿದರು. ಪೊಲೀಸರೆಂದು ಹೇಳಿಕೊಂಡು ನನ್ನ ಸ್ನೇಹಿತ ಸಂತೋಷನನ್ನು XUV 500 ಕಾರಿನಲ್ಲಿ ಅಪಹರಿಸಿಕೊಂಡು ಹೋಗಿರುವ ಸಂದೇಶ್‌ ಮತ್ತು ಇತರರ ವಿರುದ್ಧ ಕಾನೂನು ರೀತ್ಯಾ ಕ್ರಮ ಜರುಗಿಸಬೇಕು” ಎಂದು ಮಲ್ಲಪ್ಪ ಹೇಳಿದ್ದಾರೆಂಬುದು ಎಫ್‌ಐಆರ್‌ನ ಸಾರಾಂಶ. ದೂರಿನ ಅನ್ವಯ ಐಪಿಸಿ ಕಲಂ 419,363 ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ತಕ್ಷಣವೇ ಸಂದೇಶ್ ಅವರನ್ನು ಬಂಧಿಸಲಾಗಿದೆ.

ನಿರಂತರದ ಹೋರಾಟದಲ್ಲಿ ಸಂದೇಶ್ ಭಾಗಿ

ದಲಿತರ ಮೇಲೆ ಹಲ್ಲೆ, ದೌರ್ಜನ್ಯಗಳಾದಾಗ ಅಲ್ಲಿ ಹಾಜರಾಗುವ ಮೂಲಕ ಸಂದೇಶ್ ಗಮನ ಸೆಳೆಯುತ್ತಿದ್ದಾರೆ. ಅವರ ಫೇಸ್‌ಬುಕ್‌ ಖಾತೆಯನ್ನು ಪರಿಶೀಲಿಸಿದರೆ ಇಂತಹ ಸಾಕಷ್ಟು ಹೋರಾಟಗಳಲ್ಲಿ ಸಂದೇಶ್‌ ಮುಂಚೂಣಿಯಲ್ಲಿರುವುದು ತಿಳಿಯುತ್ತದೆ.

ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನ ಉಳ್ಳೇರಹಳ್ಳಿಯಲ್ಲಿ ಗ್ರಾಮದೇವತೆ ಭೂತಮ್ಮನ ಮೆರವಣಿಗೆಯ ವೇಳೆ ದಲಿತ ಬಾಲಕ ದೇವರಿಗೆ ಸಂಬಂಧಿಸಿದ ಗುಜ್ಜಕೋಲನ್ನು ಮುಟ್ಟಿದನೆಂದು ಆರೋಪಿಸಿ ಸವರ್ಣೀಯರು ಸಾಮಾಜಿಕ ಬಹಿಷ್ಕಾರ ಹಾಕಿದ ಘಟನೆ ಚರ್ಚೆಗೆ ಗ್ರಾಸವಾಗಿತ್ತು. ಈ ಪ್ರಕರಣ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಲು ಸಂದೇಶ್ ಕಾರಣವಾಗಿದ್ದರು.

ಘಟನೆಯ ಬಳಿಕ ಸ್ಥಳಕ್ಕೆ ಧಾವಿಸಿದ ಅಂಬೇಡ್ಕರ್‌ ಸೇವಾ ಸಮಿತಿ ಕರ್ನಾಟಕ (ಎಎಸ್‌ಎಸ್‌ಕೆ) ಸಂಘಟನೆಯ  ಯುವಕರು, ಕುಟುಂಬಕ್ಕೆ ಅರಿವು ಮೂಡಿಸಿದ್ದರು. “ನಿಮ್ಮ ಮನೆಯಲ್ಲಿ ಇರಬೇಕಾದದ್ದು ಈ ದೇವರ ಫೋಟೋಗಳಲ್ಲ. ನಿಮಗೆ ನ್ಯಾಯ ದೊರಕಿಸಿಕೊಟ್ಟ ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಫೋಟೋ” ಎಂದು ಹೇಳಿದ್ದರು. ಮನೆಯಲ್ಲಿದ್ದ ವೆಂಕಟೇಶ್ವರನ ಫೋಟೋಗಳನ್ನು ತೆಗೆದ ಶೋಭಾ ದಂಪತಿ, ಬಾಬಾ ಸಾಹೇಬ್‌ ಅಂಬೇಡ್ಕರ್‌ರವರ ಭಾವಚಿತ್ರ ಇಟ್ಟರು. ಜೊತೆಗೆ ಬುದ್ಧನ ವಿಗ್ರಹವನ್ನು ಪಕ್ಕದಲ್ಲಿ ಇರಿಸಿದ್ದರು. ಫೋಟೋ ತೆರವಿನ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಭಾರೀ ವೈರಲ್ ಆಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...