Homeಕರ್ನಾಟಕದಲಿತ ಯುವ ಹೋರಾಟಗಾರ ಸಂದೇಶ್ ವಿರುದ್ಧ ಎಫ್‌ಐಆರ್‌; ಬಂಧನ

ದಲಿತ ಯುವ ಹೋರಾಟಗಾರ ಸಂದೇಶ್ ವಿರುದ್ಧ ಎಫ್‌ಐಆರ್‌; ಬಂಧನ

- Advertisement -
- Advertisement -

ಕೋಲಾರ ಜಿಲ್ಲೆಯ ಯುವ ದಲಿತ ಹೋರಾಟಗಾರ, ಡಾ.ಅಂಬೇಡ್ಕರ್‌ ಸೇವಾ ಸಮಿತಿ ಕರ್ನಾಟಕ (ಎಎಸ್‌ಎಸ್‌ಕೆ) ಸಂಘಟನೆಯ ಅಧ್ಯಕ್ಷ ಕೆ.ಎಂ.ಸಂದೇಶ್ ಅವರ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ.

ಕೋಲಾರ ಜಿಲ್ಲೆಯಲ್ಲಿ ದಲಿತರ ಮೇಲಾಗುವ ದೌರ್ಜನ್ಯಗಳ ಸಂದರ್ಭದಲ್ಲಿ ಸ್ಥಳಕ್ಕೆ ಹಾಜರಾಗಿ ಸಂತ್ರಸ್ತರ ಪರ ನಿಲ್ಲುವ ಮೂಲಕ ಗಮನ ಸೆಳೆಯುತ್ತಿರುವ ಸಂದೇಶ್‌ ಅವರ ಮೇಲೆ ಬೇಕಂತಲೇ ಪ್ರಕರಣ ದಾಖಲಿಸಲಾಗಿದೆ ಎಂದು ಎಎಸ್‌ಎಸ್‌ಕೆ ಕಾರ್ಯಕರ್ತರು ದೂರಿದ್ದಾರೆ.

“ದಲಿತ ಹೆಣ್ಣುಮಗಳೊಬ್ಬಳಿಗೆ ಸವರ್ಣೀಯ ಜಾತಿಯ ಹುಡುಗ ಮೋಸ ಮಾಡಿದ್ದನ್ನು ಕೇಳಿ, ಆಕೆಯ ನೆರವಿಗೆ ಸಂದೇಶ್ ಧಾವಿಸಿದ್ದರು. ಮೋಸ ಮಾಡಿದ್ದ ಹುಡುಗನನ್ನು ಕರೆದುಕೊಂಡು ಬಂದು, ಸಂಧಾನ ನಡೆಸಿದ್ದರು. ಹುಡುಗ- ಹುಡುಗಿ ಇಬ್ಬರೂ ಮದುವೆಯಾಗುವುದಾಗಿ ಒಪ್ಪಿಕೊಂಡರು. ಆದರೆ ನಂತರದಲ್ಲಿ ಅಪಹರಣದ ಆರೋಪ ಹೊರಿಸಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ” ಎಂದು ಎಎಸ್‌ಎಸ್‌ಕೆಯ ಕಾರ್ಯಕರ್ತರೊಬ್ಬರು ‘ನಾನುಗೌರಿ.ಕಾಂ’ಗೆ ತಿಳಿಸಿದ್ದಾರೆ.

ದೊಡ್ಡ ಬಳ್ಳಾಪುರ ಸರ್ಕಲ್ ವ್ಯಾಪ್ತಿಯ ರಾಜಾನಕುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ನೊಂದ ದಲಿತರ ಪರವಾಗಿ ಹೋರಾಟ ಮಾಡುತ್ತಾ, ಸಂದೇಶ್ ಮುಂಚೂಣಿಯಲ್ಲಿದ್ದಾರೆ. ಹೀಗಾಗಿ ಅವರನ್ನು ತೊಂದರೆ ಸಿಲುಕಿಸಲಾಗಿದೆ ಎಂದು ಆರೋಪಿಸಲಾಗುತ್ತಿದೆ.

“ಹುಡುಗನನ್ನು ಅಪಹರಣ ಮಾಡಲಾಗಿದೆ ಎಂಬುದು ಸುಳ್ಳು. ದಲಿತ ಹೆಣ್ಣುಮಗಳಿಗೆ ನ್ಯಾಯ ದೊರಕಿಸಬೇಕೆಂದು ಸಂದೇಶ್‌ ಮುಂದಾಗಿದ್ದರು. ವಂಚನೆ ಮಾಡಲು ಯತ್ನಿಸಿದ್ದ ನವೀನ್‌ನನ್ನು ಯಲಹಂಕ ತಾಲ್ಲೂಕಿನ ರಾಜನಕುಂಟೆಯಿಂದ ಕರೆದುಕೊಂಡು ಬಂದಿದ್ದರು. ಸಮಸ್ಯೆಯನ್ನು ಬಗೆಹರಿಸಿಕೊಳ್ಳಲು ನವೀನ್‌ ಆಗಮಿಸಿದ್ದರು. ಆದರೆ ನವೀನ್ ಸ್ನೇಹಿತರು ದೂರು ನೀಡಿದ್ದಾರೆಂದು ಪೊಲೀಸರು ಎಫ್‌ಐಆರ್‌ ಮಾಡಿದ್ದಾರೆ. ನವೀನ್ ವಿಚಾರವಾಗಿ ಕರೆ ಮಾಡಿದಾಗ ಸಂದೇಶ್ ಸ್ವಲ್ಪ ಖಾರವಾಗಿ ಮಾತನಾಡಿದ್ದರು. ಇದರಿಂದ ಪೊಲೀಸರು ಸಿಟ್ಟಿಗೆಟ್ಟು ಈ ರೀತಿಯಲ್ಲಿ ಸಿಲುಕಿಸಿದ್ದಾರೆ” ಎಂದೂ ದೂರಲಾಗುತ್ತಿದೆ.

ದೂರಿನಲ್ಲಿ ಏನಿದೆ?

ದಿನಾಂಕ 13.02.2023 ರಂದು ಬೆಳಗಿನ ಜಾವ 4.00 ಗಂಟೆಗೆ ಮಲಪ್ಪ ಪೂಜಾರ್ ಎಂಬವರು ಠಾಣೆಗೆ ಹಾಜಾರಾಗಿ ದೂರು ನೀಡಿದ್ದು ಅದರನ್ವಯ ಸಂದೇಶ್ ಮತ್ತು ಇತರ ನಾಲ್ವರ ವಿರುದ್ಧ ಪ್ರಕರಣ ದಾಖಲಿಸಿರುವುದಾಗಿ ಎಫ್‌ಐಆರ್‌ನಲ್ಲಿ ತಿಳಿಸಲಾಗಿದೆ.

ಮಲ್ಲಪ್ಪ ಅವರು ರಘುನಾಥಪುರದಲ್ಲಿರುವ ಎಲ್ & ಟಿ ಕಂಪನಿಯಲ್ಲಿ ಕೆಲಸ ಮಾಡಿಕೊಂಡಿದ್ದಾರೆ. ಕಂಪನಿಯವರು ಕೊಟ್ಟಿರುವ ರೂಮ್‌ನಲ್ಲಿ ಮಲ್ಲಪ್ಪ ಪೂಜಾರ್‌, ಸಂತೋಷ, ರಾಮು, ವಾಸು ಹಾಗೂ ಶ್ರೀಶೈಲಾ ಒಟ್ಟಿಗೆ ವಾಸವಿದ್ದರು. ದಿನಾಂಕ 12/02/2023 ರಂದು ಭಾನುವಾರವಾಗಿದ್ದರಿಂದ ಕೆಲಸಕ್ಕೆ ರಜೆ ಇತ್ತು. ಮಲ್ಲಪ್ಪ ಮನೆಯಲ್ಲಿಯೇ ಇದ್ದರು. ಸಂತೋಷ, ರಾಮು, ವಾಸು ಹಾಗೂ ಶ್ರೀಶೈಲಾ ಅವರು ಸಂಜೆ 5-00 ಗಂಟೆಗೆ ರಾಜಾನುಕುಂಟೆಯ ಪಿ.ಕೆ. ಮೆನ್ಸ್‌ವೇರ್‌ನಲ್ಲಿ ಬಟ್ಟೆ ತೆಗೆದುಕೊಂಡು ಬರುವುದಾಗಿ ಹೇಳಿ ಹೋಗಿದ್ದರು.

ಸಂತೋಷ ಲವ್ ಮಾಡುತ್ತಿದ್ದ ಹುಡುಗಿಯು ಇಬ್ಬರು ವ್ಯಕ್ತಿಗಳೊಂದಿಗೆ ಅಂದು ಸಂಜೆ 6-00 ಗಂಟೆ ಸಮಯದಲ್ಲಿ ರೂಮಿನ ಬಳಿಗೆ ಬಂದು ಸಂತೋಷ ಎಲ್ಲಿ ಎಂದು ಕೇಳಿದರು. ಅದಕ್ಕೆ ಮಲ್ಲಪ್ಪ “ಸಂತೋಷ ರಾಜಾನುಕುಂಟೆಗೆ ಬಟ್ಟೆ ತೆಗೆದುಕೊಂಡು ಬರಲು ಹೋಗಿದ್ದಾನೆ” ಎಂದು ತಿಳಿಸಿದರು.

ಆಗ ಅವರು ಸಂತೋಷನನ್ನು ತೋರಿಸು ಎಂದು ಮಲ್ಲಪ್ಪನವರನ್ನು ಕರೆದುಕೊಂಡು ತಾವು ಬಂದಿದೆ XUV 500 ಕಾರಿನಲ್ಲಿ ಹೋದರು. ರಘುನಾಥಪುರ ಸರ್ಕಲ್‌ಗೆ ಬಂದಾಗ ಮತ್ತೊಬ್ಬ ವ್ಯಕ್ತಿ ಕಾರಿನಲ್ಲಿ, ಹತ್ತಿಕೊಂಡರು. ನಂತರ ಮಲ್ಲಪ್ಪ ಸೇರಿದಂತೆ 5 ಜನರು ಸಂಜೆ 7-00 ಗಂಟೆಗೆ ರಾಜಾನುಕುಂಟೆಯ ಪಿಕೆ ಮೆನ್ಸ್ ವೇರ್ ಬಳಿ ಬಂದರು.

“ಬಟ್ಟೆ ಅಂಗಡಿಯಲ್ಲಿದ್ದ ಸಂತೋಷನನ್ನು ಅವರಿಗೆ ತೋರಿಸಿದೆ. ಅಲ್ಲಿಗೆ ಆಗಲೇ ಬಂದಿದ್ದ ಮತ್ತಿಬ್ಬರು ವ್ಯಕ್ತಿಗಳು ಸೇರಿ ನನಗೆ ನಾವು ದೊಡ್ಡಬಳ್ಳಾಪುರ ಪೊಲೀಸರು. ಸಂತೋಷನನ್ನು, ಯಾವುದೋ ಕೇಸಿನಲ್ಲಿ ವಿಚಾರಣೆ ಮಾಡಬೇಕಾಗಿದ್ದು, ಕರೆದುಕೊಂಡು ಹೋಗುತ್ತೇವೆ ಎಂದು ಸಂತೋಷನನ್ನು ಬಲವಂತವಾಗಿ ಕಾರಿನಲ್ಲಿ ಕೂರಿಸಿಕೊಂಡು ಹೊರಟು ಹೋದರು” ಎಂದು ಮಲ್ಲಪ್ಪ ಹೇಳಿರುವುದಾಗಿ ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

“ಅವರಲ್ಲಿದ್ದ ಒಬ್ಬ ವ್ಯಕ್ತಿಯ ಹೆಸರು ಸಂದೇಶ್ ಅಂತ ಗೊತ್ತಾಯಿತು. ನಾವು ಬೆಳಗಿನ ಜಾವ 1-00 ಗಂಟೆಯವರೆಗೆ ನನ್ನ ಸ್ನೇಹಿತ ಸಂತೋಷನ ಮೊಬೈಲ್ ಫೋನ್ ನಂಬರ್‌ಗೆ ಫೋನ್ ಮಾಡಿದೆವು. ಸಂತೋಷ್‌ ಪೋನ್ ತೆಗೆಯದ ಕಾರಣ ದೊಡ್ಡಬಳಾಪುರ ಪೊಲೀಸ್ ಠಾಣೆಗೆ ಹೋಗಿ ವಿಚಾರ ಮಾಡಿದೆವು. ಪೊಲೀಸಿನವರು ಸಂತೋಷನನ್ನು ಕರೆದುಕೊಂಡು ಬಂದಿರುವುದಿಲ್ಲ ಎಂದು ತಿಳಿಸಿ ರಾಜಾನುಕುಂಟೆ ಪೊಲೀಸ್ ಠಾಣೆಗೆ ಹೋಗಿ ದೂರು ನೀಡುವಂತೆ ತಿಳಿಸಿದರು. ಪೊಲೀಸರೆಂದು ಹೇಳಿಕೊಂಡು ನನ್ನ ಸ್ನೇಹಿತ ಸಂತೋಷನನ್ನು XUV 500 ಕಾರಿನಲ್ಲಿ ಅಪಹರಿಸಿಕೊಂಡು ಹೋಗಿರುವ ಸಂದೇಶ್‌ ಮತ್ತು ಇತರರ ವಿರುದ್ಧ ಕಾನೂನು ರೀತ್ಯಾ ಕ್ರಮ ಜರುಗಿಸಬೇಕು” ಎಂದು ಮಲ್ಲಪ್ಪ ಹೇಳಿದ್ದಾರೆಂಬುದು ಎಫ್‌ಐಆರ್‌ನ ಸಾರಾಂಶ. ದೂರಿನ ಅನ್ವಯ ಐಪಿಸಿ ಕಲಂ 419,363 ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ತಕ್ಷಣವೇ ಸಂದೇಶ್ ಅವರನ್ನು ಬಂಧಿಸಲಾಗಿದೆ.

ನಿರಂತರದ ಹೋರಾಟದಲ್ಲಿ ಸಂದೇಶ್ ಭಾಗಿ

ದಲಿತರ ಮೇಲೆ ಹಲ್ಲೆ, ದೌರ್ಜನ್ಯಗಳಾದಾಗ ಅಲ್ಲಿ ಹಾಜರಾಗುವ ಮೂಲಕ ಸಂದೇಶ್ ಗಮನ ಸೆಳೆಯುತ್ತಿದ್ದಾರೆ. ಅವರ ಫೇಸ್‌ಬುಕ್‌ ಖಾತೆಯನ್ನು ಪರಿಶೀಲಿಸಿದರೆ ಇಂತಹ ಸಾಕಷ್ಟು ಹೋರಾಟಗಳಲ್ಲಿ ಸಂದೇಶ್‌ ಮುಂಚೂಣಿಯಲ್ಲಿರುವುದು ತಿಳಿಯುತ್ತದೆ.

ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನ ಉಳ್ಳೇರಹಳ್ಳಿಯಲ್ಲಿ ಗ್ರಾಮದೇವತೆ ಭೂತಮ್ಮನ ಮೆರವಣಿಗೆಯ ವೇಳೆ ದಲಿತ ಬಾಲಕ ದೇವರಿಗೆ ಸಂಬಂಧಿಸಿದ ಗುಜ್ಜಕೋಲನ್ನು ಮುಟ್ಟಿದನೆಂದು ಆರೋಪಿಸಿ ಸವರ್ಣೀಯರು ಸಾಮಾಜಿಕ ಬಹಿಷ್ಕಾರ ಹಾಕಿದ ಘಟನೆ ಚರ್ಚೆಗೆ ಗ್ರಾಸವಾಗಿತ್ತು. ಈ ಪ್ರಕರಣ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಲು ಸಂದೇಶ್ ಕಾರಣವಾಗಿದ್ದರು.

ಘಟನೆಯ ಬಳಿಕ ಸ್ಥಳಕ್ಕೆ ಧಾವಿಸಿದ ಅಂಬೇಡ್ಕರ್‌ ಸೇವಾ ಸಮಿತಿ ಕರ್ನಾಟಕ (ಎಎಸ್‌ಎಸ್‌ಕೆ) ಸಂಘಟನೆಯ  ಯುವಕರು, ಕುಟುಂಬಕ್ಕೆ ಅರಿವು ಮೂಡಿಸಿದ್ದರು. “ನಿಮ್ಮ ಮನೆಯಲ್ಲಿ ಇರಬೇಕಾದದ್ದು ಈ ದೇವರ ಫೋಟೋಗಳಲ್ಲ. ನಿಮಗೆ ನ್ಯಾಯ ದೊರಕಿಸಿಕೊಟ್ಟ ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಫೋಟೋ” ಎಂದು ಹೇಳಿದ್ದರು. ಮನೆಯಲ್ಲಿದ್ದ ವೆಂಕಟೇಶ್ವರನ ಫೋಟೋಗಳನ್ನು ತೆಗೆದ ಶೋಭಾ ದಂಪತಿ, ಬಾಬಾ ಸಾಹೇಬ್‌ ಅಂಬೇಡ್ಕರ್‌ರವರ ಭಾವಚಿತ್ರ ಇಟ್ಟರು. ಜೊತೆಗೆ ಬುದ್ಧನ ವಿಗ್ರಹವನ್ನು ಪಕ್ಕದಲ್ಲಿ ಇರಿಸಿದ್ದರು. ಫೋಟೋ ತೆರವಿನ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಭಾರೀ ವೈರಲ್ ಆಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...