Homeಕರ್ನಾಟಕದಲಿತ ಯುವ ಹೋರಾಟಗಾರ ಸಂದೇಶ್ ವಿರುದ್ಧ ಎಫ್‌ಐಆರ್‌; ಬಂಧನ

ದಲಿತ ಯುವ ಹೋರಾಟಗಾರ ಸಂದೇಶ್ ವಿರುದ್ಧ ಎಫ್‌ಐಆರ್‌; ಬಂಧನ

- Advertisement -
- Advertisement -

ಕೋಲಾರ ಜಿಲ್ಲೆಯ ಯುವ ದಲಿತ ಹೋರಾಟಗಾರ, ಡಾ.ಅಂಬೇಡ್ಕರ್‌ ಸೇವಾ ಸಮಿತಿ ಕರ್ನಾಟಕ (ಎಎಸ್‌ಎಸ್‌ಕೆ) ಸಂಘಟನೆಯ ಅಧ್ಯಕ್ಷ ಕೆ.ಎಂ.ಸಂದೇಶ್ ಅವರ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ.

ಕೋಲಾರ ಜಿಲ್ಲೆಯಲ್ಲಿ ದಲಿತರ ಮೇಲಾಗುವ ದೌರ್ಜನ್ಯಗಳ ಸಂದರ್ಭದಲ್ಲಿ ಸ್ಥಳಕ್ಕೆ ಹಾಜರಾಗಿ ಸಂತ್ರಸ್ತರ ಪರ ನಿಲ್ಲುವ ಮೂಲಕ ಗಮನ ಸೆಳೆಯುತ್ತಿರುವ ಸಂದೇಶ್‌ ಅವರ ಮೇಲೆ ಬೇಕಂತಲೇ ಪ್ರಕರಣ ದಾಖಲಿಸಲಾಗಿದೆ ಎಂದು ಎಎಸ್‌ಎಸ್‌ಕೆ ಕಾರ್ಯಕರ್ತರು ದೂರಿದ್ದಾರೆ.

“ದಲಿತ ಹೆಣ್ಣುಮಗಳೊಬ್ಬಳಿಗೆ ಸವರ್ಣೀಯ ಜಾತಿಯ ಹುಡುಗ ಮೋಸ ಮಾಡಿದ್ದನ್ನು ಕೇಳಿ, ಆಕೆಯ ನೆರವಿಗೆ ಸಂದೇಶ್ ಧಾವಿಸಿದ್ದರು. ಮೋಸ ಮಾಡಿದ್ದ ಹುಡುಗನನ್ನು ಕರೆದುಕೊಂಡು ಬಂದು, ಸಂಧಾನ ನಡೆಸಿದ್ದರು. ಹುಡುಗ- ಹುಡುಗಿ ಇಬ್ಬರೂ ಮದುವೆಯಾಗುವುದಾಗಿ ಒಪ್ಪಿಕೊಂಡರು. ಆದರೆ ನಂತರದಲ್ಲಿ ಅಪಹರಣದ ಆರೋಪ ಹೊರಿಸಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ” ಎಂದು ಎಎಸ್‌ಎಸ್‌ಕೆಯ ಕಾರ್ಯಕರ್ತರೊಬ್ಬರು ‘ನಾನುಗೌರಿ.ಕಾಂ’ಗೆ ತಿಳಿಸಿದ್ದಾರೆ.

ದೊಡ್ಡ ಬಳ್ಳಾಪುರ ಸರ್ಕಲ್ ವ್ಯಾಪ್ತಿಯ ರಾಜಾನಕುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ನೊಂದ ದಲಿತರ ಪರವಾಗಿ ಹೋರಾಟ ಮಾಡುತ್ತಾ, ಸಂದೇಶ್ ಮುಂಚೂಣಿಯಲ್ಲಿದ್ದಾರೆ. ಹೀಗಾಗಿ ಅವರನ್ನು ತೊಂದರೆ ಸಿಲುಕಿಸಲಾಗಿದೆ ಎಂದು ಆರೋಪಿಸಲಾಗುತ್ತಿದೆ.

“ಹುಡುಗನನ್ನು ಅಪಹರಣ ಮಾಡಲಾಗಿದೆ ಎಂಬುದು ಸುಳ್ಳು. ದಲಿತ ಹೆಣ್ಣುಮಗಳಿಗೆ ನ್ಯಾಯ ದೊರಕಿಸಬೇಕೆಂದು ಸಂದೇಶ್‌ ಮುಂದಾಗಿದ್ದರು. ವಂಚನೆ ಮಾಡಲು ಯತ್ನಿಸಿದ್ದ ನವೀನ್‌ನನ್ನು ಯಲಹಂಕ ತಾಲ್ಲೂಕಿನ ರಾಜನಕುಂಟೆಯಿಂದ ಕರೆದುಕೊಂಡು ಬಂದಿದ್ದರು. ಸಮಸ್ಯೆಯನ್ನು ಬಗೆಹರಿಸಿಕೊಳ್ಳಲು ನವೀನ್‌ ಆಗಮಿಸಿದ್ದರು. ಆದರೆ ನವೀನ್ ಸ್ನೇಹಿತರು ದೂರು ನೀಡಿದ್ದಾರೆಂದು ಪೊಲೀಸರು ಎಫ್‌ಐಆರ್‌ ಮಾಡಿದ್ದಾರೆ. ನವೀನ್ ವಿಚಾರವಾಗಿ ಕರೆ ಮಾಡಿದಾಗ ಸಂದೇಶ್ ಸ್ವಲ್ಪ ಖಾರವಾಗಿ ಮಾತನಾಡಿದ್ದರು. ಇದರಿಂದ ಪೊಲೀಸರು ಸಿಟ್ಟಿಗೆಟ್ಟು ಈ ರೀತಿಯಲ್ಲಿ ಸಿಲುಕಿಸಿದ್ದಾರೆ” ಎಂದೂ ದೂರಲಾಗುತ್ತಿದೆ.

ದೂರಿನಲ್ಲಿ ಏನಿದೆ?

ದಿನಾಂಕ 13.02.2023 ರಂದು ಬೆಳಗಿನ ಜಾವ 4.00 ಗಂಟೆಗೆ ಮಲಪ್ಪ ಪೂಜಾರ್ ಎಂಬವರು ಠಾಣೆಗೆ ಹಾಜಾರಾಗಿ ದೂರು ನೀಡಿದ್ದು ಅದರನ್ವಯ ಸಂದೇಶ್ ಮತ್ತು ಇತರ ನಾಲ್ವರ ವಿರುದ್ಧ ಪ್ರಕರಣ ದಾಖಲಿಸಿರುವುದಾಗಿ ಎಫ್‌ಐಆರ್‌ನಲ್ಲಿ ತಿಳಿಸಲಾಗಿದೆ.

ಮಲ್ಲಪ್ಪ ಅವರು ರಘುನಾಥಪುರದಲ್ಲಿರುವ ಎಲ್ & ಟಿ ಕಂಪನಿಯಲ್ಲಿ ಕೆಲಸ ಮಾಡಿಕೊಂಡಿದ್ದಾರೆ. ಕಂಪನಿಯವರು ಕೊಟ್ಟಿರುವ ರೂಮ್‌ನಲ್ಲಿ ಮಲ್ಲಪ್ಪ ಪೂಜಾರ್‌, ಸಂತೋಷ, ರಾಮು, ವಾಸು ಹಾಗೂ ಶ್ರೀಶೈಲಾ ಒಟ್ಟಿಗೆ ವಾಸವಿದ್ದರು. ದಿನಾಂಕ 12/02/2023 ರಂದು ಭಾನುವಾರವಾಗಿದ್ದರಿಂದ ಕೆಲಸಕ್ಕೆ ರಜೆ ಇತ್ತು. ಮಲ್ಲಪ್ಪ ಮನೆಯಲ್ಲಿಯೇ ಇದ್ದರು. ಸಂತೋಷ, ರಾಮು, ವಾಸು ಹಾಗೂ ಶ್ರೀಶೈಲಾ ಅವರು ಸಂಜೆ 5-00 ಗಂಟೆಗೆ ರಾಜಾನುಕುಂಟೆಯ ಪಿ.ಕೆ. ಮೆನ್ಸ್‌ವೇರ್‌ನಲ್ಲಿ ಬಟ್ಟೆ ತೆಗೆದುಕೊಂಡು ಬರುವುದಾಗಿ ಹೇಳಿ ಹೋಗಿದ್ದರು.

ಸಂತೋಷ ಲವ್ ಮಾಡುತ್ತಿದ್ದ ಹುಡುಗಿಯು ಇಬ್ಬರು ವ್ಯಕ್ತಿಗಳೊಂದಿಗೆ ಅಂದು ಸಂಜೆ 6-00 ಗಂಟೆ ಸಮಯದಲ್ಲಿ ರೂಮಿನ ಬಳಿಗೆ ಬಂದು ಸಂತೋಷ ಎಲ್ಲಿ ಎಂದು ಕೇಳಿದರು. ಅದಕ್ಕೆ ಮಲ್ಲಪ್ಪ “ಸಂತೋಷ ರಾಜಾನುಕುಂಟೆಗೆ ಬಟ್ಟೆ ತೆಗೆದುಕೊಂಡು ಬರಲು ಹೋಗಿದ್ದಾನೆ” ಎಂದು ತಿಳಿಸಿದರು.

ಆಗ ಅವರು ಸಂತೋಷನನ್ನು ತೋರಿಸು ಎಂದು ಮಲ್ಲಪ್ಪನವರನ್ನು ಕರೆದುಕೊಂಡು ತಾವು ಬಂದಿದೆ XUV 500 ಕಾರಿನಲ್ಲಿ ಹೋದರು. ರಘುನಾಥಪುರ ಸರ್ಕಲ್‌ಗೆ ಬಂದಾಗ ಮತ್ತೊಬ್ಬ ವ್ಯಕ್ತಿ ಕಾರಿನಲ್ಲಿ, ಹತ್ತಿಕೊಂಡರು. ನಂತರ ಮಲ್ಲಪ್ಪ ಸೇರಿದಂತೆ 5 ಜನರು ಸಂಜೆ 7-00 ಗಂಟೆಗೆ ರಾಜಾನುಕುಂಟೆಯ ಪಿಕೆ ಮೆನ್ಸ್ ವೇರ್ ಬಳಿ ಬಂದರು.

“ಬಟ್ಟೆ ಅಂಗಡಿಯಲ್ಲಿದ್ದ ಸಂತೋಷನನ್ನು ಅವರಿಗೆ ತೋರಿಸಿದೆ. ಅಲ್ಲಿಗೆ ಆಗಲೇ ಬಂದಿದ್ದ ಮತ್ತಿಬ್ಬರು ವ್ಯಕ್ತಿಗಳು ಸೇರಿ ನನಗೆ ನಾವು ದೊಡ್ಡಬಳ್ಳಾಪುರ ಪೊಲೀಸರು. ಸಂತೋಷನನ್ನು, ಯಾವುದೋ ಕೇಸಿನಲ್ಲಿ ವಿಚಾರಣೆ ಮಾಡಬೇಕಾಗಿದ್ದು, ಕರೆದುಕೊಂಡು ಹೋಗುತ್ತೇವೆ ಎಂದು ಸಂತೋಷನನ್ನು ಬಲವಂತವಾಗಿ ಕಾರಿನಲ್ಲಿ ಕೂರಿಸಿಕೊಂಡು ಹೊರಟು ಹೋದರು” ಎಂದು ಮಲ್ಲಪ್ಪ ಹೇಳಿರುವುದಾಗಿ ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

“ಅವರಲ್ಲಿದ್ದ ಒಬ್ಬ ವ್ಯಕ್ತಿಯ ಹೆಸರು ಸಂದೇಶ್ ಅಂತ ಗೊತ್ತಾಯಿತು. ನಾವು ಬೆಳಗಿನ ಜಾವ 1-00 ಗಂಟೆಯವರೆಗೆ ನನ್ನ ಸ್ನೇಹಿತ ಸಂತೋಷನ ಮೊಬೈಲ್ ಫೋನ್ ನಂಬರ್‌ಗೆ ಫೋನ್ ಮಾಡಿದೆವು. ಸಂತೋಷ್‌ ಪೋನ್ ತೆಗೆಯದ ಕಾರಣ ದೊಡ್ಡಬಳಾಪುರ ಪೊಲೀಸ್ ಠಾಣೆಗೆ ಹೋಗಿ ವಿಚಾರ ಮಾಡಿದೆವು. ಪೊಲೀಸಿನವರು ಸಂತೋಷನನ್ನು ಕರೆದುಕೊಂಡು ಬಂದಿರುವುದಿಲ್ಲ ಎಂದು ತಿಳಿಸಿ ರಾಜಾನುಕುಂಟೆ ಪೊಲೀಸ್ ಠಾಣೆಗೆ ಹೋಗಿ ದೂರು ನೀಡುವಂತೆ ತಿಳಿಸಿದರು. ಪೊಲೀಸರೆಂದು ಹೇಳಿಕೊಂಡು ನನ್ನ ಸ್ನೇಹಿತ ಸಂತೋಷನನ್ನು XUV 500 ಕಾರಿನಲ್ಲಿ ಅಪಹರಿಸಿಕೊಂಡು ಹೋಗಿರುವ ಸಂದೇಶ್‌ ಮತ್ತು ಇತರರ ವಿರುದ್ಧ ಕಾನೂನು ರೀತ್ಯಾ ಕ್ರಮ ಜರುಗಿಸಬೇಕು” ಎಂದು ಮಲ್ಲಪ್ಪ ಹೇಳಿದ್ದಾರೆಂಬುದು ಎಫ್‌ಐಆರ್‌ನ ಸಾರಾಂಶ. ದೂರಿನ ಅನ್ವಯ ಐಪಿಸಿ ಕಲಂ 419,363 ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ತಕ್ಷಣವೇ ಸಂದೇಶ್ ಅವರನ್ನು ಬಂಧಿಸಲಾಗಿದೆ.

ನಿರಂತರದ ಹೋರಾಟದಲ್ಲಿ ಸಂದೇಶ್ ಭಾಗಿ

ದಲಿತರ ಮೇಲೆ ಹಲ್ಲೆ, ದೌರ್ಜನ್ಯಗಳಾದಾಗ ಅಲ್ಲಿ ಹಾಜರಾಗುವ ಮೂಲಕ ಸಂದೇಶ್ ಗಮನ ಸೆಳೆಯುತ್ತಿದ್ದಾರೆ. ಅವರ ಫೇಸ್‌ಬುಕ್‌ ಖಾತೆಯನ್ನು ಪರಿಶೀಲಿಸಿದರೆ ಇಂತಹ ಸಾಕಷ್ಟು ಹೋರಾಟಗಳಲ್ಲಿ ಸಂದೇಶ್‌ ಮುಂಚೂಣಿಯಲ್ಲಿರುವುದು ತಿಳಿಯುತ್ತದೆ.

ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನ ಉಳ್ಳೇರಹಳ್ಳಿಯಲ್ಲಿ ಗ್ರಾಮದೇವತೆ ಭೂತಮ್ಮನ ಮೆರವಣಿಗೆಯ ವೇಳೆ ದಲಿತ ಬಾಲಕ ದೇವರಿಗೆ ಸಂಬಂಧಿಸಿದ ಗುಜ್ಜಕೋಲನ್ನು ಮುಟ್ಟಿದನೆಂದು ಆರೋಪಿಸಿ ಸವರ್ಣೀಯರು ಸಾಮಾಜಿಕ ಬಹಿಷ್ಕಾರ ಹಾಕಿದ ಘಟನೆ ಚರ್ಚೆಗೆ ಗ್ರಾಸವಾಗಿತ್ತು. ಈ ಪ್ರಕರಣ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಲು ಸಂದೇಶ್ ಕಾರಣವಾಗಿದ್ದರು.

ಘಟನೆಯ ಬಳಿಕ ಸ್ಥಳಕ್ಕೆ ಧಾವಿಸಿದ ಅಂಬೇಡ್ಕರ್‌ ಸೇವಾ ಸಮಿತಿ ಕರ್ನಾಟಕ (ಎಎಸ್‌ಎಸ್‌ಕೆ) ಸಂಘಟನೆಯ  ಯುವಕರು, ಕುಟುಂಬಕ್ಕೆ ಅರಿವು ಮೂಡಿಸಿದ್ದರು. “ನಿಮ್ಮ ಮನೆಯಲ್ಲಿ ಇರಬೇಕಾದದ್ದು ಈ ದೇವರ ಫೋಟೋಗಳಲ್ಲ. ನಿಮಗೆ ನ್ಯಾಯ ದೊರಕಿಸಿಕೊಟ್ಟ ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಫೋಟೋ” ಎಂದು ಹೇಳಿದ್ದರು. ಮನೆಯಲ್ಲಿದ್ದ ವೆಂಕಟೇಶ್ವರನ ಫೋಟೋಗಳನ್ನು ತೆಗೆದ ಶೋಭಾ ದಂಪತಿ, ಬಾಬಾ ಸಾಹೇಬ್‌ ಅಂಬೇಡ್ಕರ್‌ರವರ ಭಾವಚಿತ್ರ ಇಟ್ಟರು. ಜೊತೆಗೆ ಬುದ್ಧನ ವಿಗ್ರಹವನ್ನು ಪಕ್ಕದಲ್ಲಿ ಇರಿಸಿದ್ದರು. ಫೋಟೋ ತೆರವಿನ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಭಾರೀ ವೈರಲ್ ಆಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...