Homeಕರ್ನಾಟಕದಲಿತ ಯುವ ಹೋರಾಟಗಾರ ಸಂದೇಶ್ ವಿರುದ್ಧ ಎಫ್‌ಐಆರ್‌; ಬಂಧನ

ದಲಿತ ಯುವ ಹೋರಾಟಗಾರ ಸಂದೇಶ್ ವಿರುದ್ಧ ಎಫ್‌ಐಆರ್‌; ಬಂಧನ

- Advertisement -
- Advertisement -

ಕೋಲಾರ ಜಿಲ್ಲೆಯ ಯುವ ದಲಿತ ಹೋರಾಟಗಾರ, ಡಾ.ಅಂಬೇಡ್ಕರ್‌ ಸೇವಾ ಸಮಿತಿ ಕರ್ನಾಟಕ (ಎಎಸ್‌ಎಸ್‌ಕೆ) ಸಂಘಟನೆಯ ಅಧ್ಯಕ್ಷ ಕೆ.ಎಂ.ಸಂದೇಶ್ ಅವರ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ.

ಕೋಲಾರ ಜಿಲ್ಲೆಯಲ್ಲಿ ದಲಿತರ ಮೇಲಾಗುವ ದೌರ್ಜನ್ಯಗಳ ಸಂದರ್ಭದಲ್ಲಿ ಸ್ಥಳಕ್ಕೆ ಹಾಜರಾಗಿ ಸಂತ್ರಸ್ತರ ಪರ ನಿಲ್ಲುವ ಮೂಲಕ ಗಮನ ಸೆಳೆಯುತ್ತಿರುವ ಸಂದೇಶ್‌ ಅವರ ಮೇಲೆ ಬೇಕಂತಲೇ ಪ್ರಕರಣ ದಾಖಲಿಸಲಾಗಿದೆ ಎಂದು ಎಎಸ್‌ಎಸ್‌ಕೆ ಕಾರ್ಯಕರ್ತರು ದೂರಿದ್ದಾರೆ.

“ದಲಿತ ಹೆಣ್ಣುಮಗಳೊಬ್ಬಳಿಗೆ ಸವರ್ಣೀಯ ಜಾತಿಯ ಹುಡುಗ ಮೋಸ ಮಾಡಿದ್ದನ್ನು ಕೇಳಿ, ಆಕೆಯ ನೆರವಿಗೆ ಸಂದೇಶ್ ಧಾವಿಸಿದ್ದರು. ಮೋಸ ಮಾಡಿದ್ದ ಹುಡುಗನನ್ನು ಕರೆದುಕೊಂಡು ಬಂದು, ಸಂಧಾನ ನಡೆಸಿದ್ದರು. ಹುಡುಗ- ಹುಡುಗಿ ಇಬ್ಬರೂ ಮದುವೆಯಾಗುವುದಾಗಿ ಒಪ್ಪಿಕೊಂಡರು. ಆದರೆ ನಂತರದಲ್ಲಿ ಅಪಹರಣದ ಆರೋಪ ಹೊರಿಸಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ” ಎಂದು ಎಎಸ್‌ಎಸ್‌ಕೆಯ ಕಾರ್ಯಕರ್ತರೊಬ್ಬರು ‘ನಾನುಗೌರಿ.ಕಾಂ’ಗೆ ತಿಳಿಸಿದ್ದಾರೆ.

ದೊಡ್ಡ ಬಳ್ಳಾಪುರ ಸರ್ಕಲ್ ವ್ಯಾಪ್ತಿಯ ರಾಜಾನಕುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ನೊಂದ ದಲಿತರ ಪರವಾಗಿ ಹೋರಾಟ ಮಾಡುತ್ತಾ, ಸಂದೇಶ್ ಮುಂಚೂಣಿಯಲ್ಲಿದ್ದಾರೆ. ಹೀಗಾಗಿ ಅವರನ್ನು ತೊಂದರೆ ಸಿಲುಕಿಸಲಾಗಿದೆ ಎಂದು ಆರೋಪಿಸಲಾಗುತ್ತಿದೆ.

“ಹುಡುಗನನ್ನು ಅಪಹರಣ ಮಾಡಲಾಗಿದೆ ಎಂಬುದು ಸುಳ್ಳು. ದಲಿತ ಹೆಣ್ಣುಮಗಳಿಗೆ ನ್ಯಾಯ ದೊರಕಿಸಬೇಕೆಂದು ಸಂದೇಶ್‌ ಮುಂದಾಗಿದ್ದರು. ವಂಚನೆ ಮಾಡಲು ಯತ್ನಿಸಿದ್ದ ನವೀನ್‌ನನ್ನು ಯಲಹಂಕ ತಾಲ್ಲೂಕಿನ ರಾಜನಕುಂಟೆಯಿಂದ ಕರೆದುಕೊಂಡು ಬಂದಿದ್ದರು. ಸಮಸ್ಯೆಯನ್ನು ಬಗೆಹರಿಸಿಕೊಳ್ಳಲು ನವೀನ್‌ ಆಗಮಿಸಿದ್ದರು. ಆದರೆ ನವೀನ್ ಸ್ನೇಹಿತರು ದೂರು ನೀಡಿದ್ದಾರೆಂದು ಪೊಲೀಸರು ಎಫ್‌ಐಆರ್‌ ಮಾಡಿದ್ದಾರೆ. ನವೀನ್ ವಿಚಾರವಾಗಿ ಕರೆ ಮಾಡಿದಾಗ ಸಂದೇಶ್ ಸ್ವಲ್ಪ ಖಾರವಾಗಿ ಮಾತನಾಡಿದ್ದರು. ಇದರಿಂದ ಪೊಲೀಸರು ಸಿಟ್ಟಿಗೆಟ್ಟು ಈ ರೀತಿಯಲ್ಲಿ ಸಿಲುಕಿಸಿದ್ದಾರೆ” ಎಂದೂ ದೂರಲಾಗುತ್ತಿದೆ.

ದೂರಿನಲ್ಲಿ ಏನಿದೆ?

ದಿನಾಂಕ 13.02.2023 ರಂದು ಬೆಳಗಿನ ಜಾವ 4.00 ಗಂಟೆಗೆ ಮಲಪ್ಪ ಪೂಜಾರ್ ಎಂಬವರು ಠಾಣೆಗೆ ಹಾಜಾರಾಗಿ ದೂರು ನೀಡಿದ್ದು ಅದರನ್ವಯ ಸಂದೇಶ್ ಮತ್ತು ಇತರ ನಾಲ್ವರ ವಿರುದ್ಧ ಪ್ರಕರಣ ದಾಖಲಿಸಿರುವುದಾಗಿ ಎಫ್‌ಐಆರ್‌ನಲ್ಲಿ ತಿಳಿಸಲಾಗಿದೆ.

ಮಲ್ಲಪ್ಪ ಅವರು ರಘುನಾಥಪುರದಲ್ಲಿರುವ ಎಲ್ & ಟಿ ಕಂಪನಿಯಲ್ಲಿ ಕೆಲಸ ಮಾಡಿಕೊಂಡಿದ್ದಾರೆ. ಕಂಪನಿಯವರು ಕೊಟ್ಟಿರುವ ರೂಮ್‌ನಲ್ಲಿ ಮಲ್ಲಪ್ಪ ಪೂಜಾರ್‌, ಸಂತೋಷ, ರಾಮು, ವಾಸು ಹಾಗೂ ಶ್ರೀಶೈಲಾ ಒಟ್ಟಿಗೆ ವಾಸವಿದ್ದರು. ದಿನಾಂಕ 12/02/2023 ರಂದು ಭಾನುವಾರವಾಗಿದ್ದರಿಂದ ಕೆಲಸಕ್ಕೆ ರಜೆ ಇತ್ತು. ಮಲ್ಲಪ್ಪ ಮನೆಯಲ್ಲಿಯೇ ಇದ್ದರು. ಸಂತೋಷ, ರಾಮು, ವಾಸು ಹಾಗೂ ಶ್ರೀಶೈಲಾ ಅವರು ಸಂಜೆ 5-00 ಗಂಟೆಗೆ ರಾಜಾನುಕುಂಟೆಯ ಪಿ.ಕೆ. ಮೆನ್ಸ್‌ವೇರ್‌ನಲ್ಲಿ ಬಟ್ಟೆ ತೆಗೆದುಕೊಂಡು ಬರುವುದಾಗಿ ಹೇಳಿ ಹೋಗಿದ್ದರು.

ಸಂತೋಷ ಲವ್ ಮಾಡುತ್ತಿದ್ದ ಹುಡುಗಿಯು ಇಬ್ಬರು ವ್ಯಕ್ತಿಗಳೊಂದಿಗೆ ಅಂದು ಸಂಜೆ 6-00 ಗಂಟೆ ಸಮಯದಲ್ಲಿ ರೂಮಿನ ಬಳಿಗೆ ಬಂದು ಸಂತೋಷ ಎಲ್ಲಿ ಎಂದು ಕೇಳಿದರು. ಅದಕ್ಕೆ ಮಲ್ಲಪ್ಪ “ಸಂತೋಷ ರಾಜಾನುಕುಂಟೆಗೆ ಬಟ್ಟೆ ತೆಗೆದುಕೊಂಡು ಬರಲು ಹೋಗಿದ್ದಾನೆ” ಎಂದು ತಿಳಿಸಿದರು.

ಆಗ ಅವರು ಸಂತೋಷನನ್ನು ತೋರಿಸು ಎಂದು ಮಲ್ಲಪ್ಪನವರನ್ನು ಕರೆದುಕೊಂಡು ತಾವು ಬಂದಿದೆ XUV 500 ಕಾರಿನಲ್ಲಿ ಹೋದರು. ರಘುನಾಥಪುರ ಸರ್ಕಲ್‌ಗೆ ಬಂದಾಗ ಮತ್ತೊಬ್ಬ ವ್ಯಕ್ತಿ ಕಾರಿನಲ್ಲಿ, ಹತ್ತಿಕೊಂಡರು. ನಂತರ ಮಲ್ಲಪ್ಪ ಸೇರಿದಂತೆ 5 ಜನರು ಸಂಜೆ 7-00 ಗಂಟೆಗೆ ರಾಜಾನುಕುಂಟೆಯ ಪಿಕೆ ಮೆನ್ಸ್ ವೇರ್ ಬಳಿ ಬಂದರು.

“ಬಟ್ಟೆ ಅಂಗಡಿಯಲ್ಲಿದ್ದ ಸಂತೋಷನನ್ನು ಅವರಿಗೆ ತೋರಿಸಿದೆ. ಅಲ್ಲಿಗೆ ಆಗಲೇ ಬಂದಿದ್ದ ಮತ್ತಿಬ್ಬರು ವ್ಯಕ್ತಿಗಳು ಸೇರಿ ನನಗೆ ನಾವು ದೊಡ್ಡಬಳ್ಳಾಪುರ ಪೊಲೀಸರು. ಸಂತೋಷನನ್ನು, ಯಾವುದೋ ಕೇಸಿನಲ್ಲಿ ವಿಚಾರಣೆ ಮಾಡಬೇಕಾಗಿದ್ದು, ಕರೆದುಕೊಂಡು ಹೋಗುತ್ತೇವೆ ಎಂದು ಸಂತೋಷನನ್ನು ಬಲವಂತವಾಗಿ ಕಾರಿನಲ್ಲಿ ಕೂರಿಸಿಕೊಂಡು ಹೊರಟು ಹೋದರು” ಎಂದು ಮಲ್ಲಪ್ಪ ಹೇಳಿರುವುದಾಗಿ ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

“ಅವರಲ್ಲಿದ್ದ ಒಬ್ಬ ವ್ಯಕ್ತಿಯ ಹೆಸರು ಸಂದೇಶ್ ಅಂತ ಗೊತ್ತಾಯಿತು. ನಾವು ಬೆಳಗಿನ ಜಾವ 1-00 ಗಂಟೆಯವರೆಗೆ ನನ್ನ ಸ್ನೇಹಿತ ಸಂತೋಷನ ಮೊಬೈಲ್ ಫೋನ್ ನಂಬರ್‌ಗೆ ಫೋನ್ ಮಾಡಿದೆವು. ಸಂತೋಷ್‌ ಪೋನ್ ತೆಗೆಯದ ಕಾರಣ ದೊಡ್ಡಬಳಾಪುರ ಪೊಲೀಸ್ ಠಾಣೆಗೆ ಹೋಗಿ ವಿಚಾರ ಮಾಡಿದೆವು. ಪೊಲೀಸಿನವರು ಸಂತೋಷನನ್ನು ಕರೆದುಕೊಂಡು ಬಂದಿರುವುದಿಲ್ಲ ಎಂದು ತಿಳಿಸಿ ರಾಜಾನುಕುಂಟೆ ಪೊಲೀಸ್ ಠಾಣೆಗೆ ಹೋಗಿ ದೂರು ನೀಡುವಂತೆ ತಿಳಿಸಿದರು. ಪೊಲೀಸರೆಂದು ಹೇಳಿಕೊಂಡು ನನ್ನ ಸ್ನೇಹಿತ ಸಂತೋಷನನ್ನು XUV 500 ಕಾರಿನಲ್ಲಿ ಅಪಹರಿಸಿಕೊಂಡು ಹೋಗಿರುವ ಸಂದೇಶ್‌ ಮತ್ತು ಇತರರ ವಿರುದ್ಧ ಕಾನೂನು ರೀತ್ಯಾ ಕ್ರಮ ಜರುಗಿಸಬೇಕು” ಎಂದು ಮಲ್ಲಪ್ಪ ಹೇಳಿದ್ದಾರೆಂಬುದು ಎಫ್‌ಐಆರ್‌ನ ಸಾರಾಂಶ. ದೂರಿನ ಅನ್ವಯ ಐಪಿಸಿ ಕಲಂ 419,363 ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ತಕ್ಷಣವೇ ಸಂದೇಶ್ ಅವರನ್ನು ಬಂಧಿಸಲಾಗಿದೆ.

ನಿರಂತರದ ಹೋರಾಟದಲ್ಲಿ ಸಂದೇಶ್ ಭಾಗಿ

ದಲಿತರ ಮೇಲೆ ಹಲ್ಲೆ, ದೌರ್ಜನ್ಯಗಳಾದಾಗ ಅಲ್ಲಿ ಹಾಜರಾಗುವ ಮೂಲಕ ಸಂದೇಶ್ ಗಮನ ಸೆಳೆಯುತ್ತಿದ್ದಾರೆ. ಅವರ ಫೇಸ್‌ಬುಕ್‌ ಖಾತೆಯನ್ನು ಪರಿಶೀಲಿಸಿದರೆ ಇಂತಹ ಸಾಕಷ್ಟು ಹೋರಾಟಗಳಲ್ಲಿ ಸಂದೇಶ್‌ ಮುಂಚೂಣಿಯಲ್ಲಿರುವುದು ತಿಳಿಯುತ್ತದೆ.

ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನ ಉಳ್ಳೇರಹಳ್ಳಿಯಲ್ಲಿ ಗ್ರಾಮದೇವತೆ ಭೂತಮ್ಮನ ಮೆರವಣಿಗೆಯ ವೇಳೆ ದಲಿತ ಬಾಲಕ ದೇವರಿಗೆ ಸಂಬಂಧಿಸಿದ ಗುಜ್ಜಕೋಲನ್ನು ಮುಟ್ಟಿದನೆಂದು ಆರೋಪಿಸಿ ಸವರ್ಣೀಯರು ಸಾಮಾಜಿಕ ಬಹಿಷ್ಕಾರ ಹಾಕಿದ ಘಟನೆ ಚರ್ಚೆಗೆ ಗ್ರಾಸವಾಗಿತ್ತು. ಈ ಪ್ರಕರಣ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಲು ಸಂದೇಶ್ ಕಾರಣವಾಗಿದ್ದರು.

ಘಟನೆಯ ಬಳಿಕ ಸ್ಥಳಕ್ಕೆ ಧಾವಿಸಿದ ಅಂಬೇಡ್ಕರ್‌ ಸೇವಾ ಸಮಿತಿ ಕರ್ನಾಟಕ (ಎಎಸ್‌ಎಸ್‌ಕೆ) ಸಂಘಟನೆಯ  ಯುವಕರು, ಕುಟುಂಬಕ್ಕೆ ಅರಿವು ಮೂಡಿಸಿದ್ದರು. “ನಿಮ್ಮ ಮನೆಯಲ್ಲಿ ಇರಬೇಕಾದದ್ದು ಈ ದೇವರ ಫೋಟೋಗಳಲ್ಲ. ನಿಮಗೆ ನ್ಯಾಯ ದೊರಕಿಸಿಕೊಟ್ಟ ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಫೋಟೋ” ಎಂದು ಹೇಳಿದ್ದರು. ಮನೆಯಲ್ಲಿದ್ದ ವೆಂಕಟೇಶ್ವರನ ಫೋಟೋಗಳನ್ನು ತೆಗೆದ ಶೋಭಾ ದಂಪತಿ, ಬಾಬಾ ಸಾಹೇಬ್‌ ಅಂಬೇಡ್ಕರ್‌ರವರ ಭಾವಚಿತ್ರ ಇಟ್ಟರು. ಜೊತೆಗೆ ಬುದ್ಧನ ವಿಗ್ರಹವನ್ನು ಪಕ್ಕದಲ್ಲಿ ಇರಿಸಿದ್ದರು. ಫೋಟೋ ತೆರವಿನ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಭಾರೀ ವೈರಲ್ ಆಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...

ಕರ್ನಾಟಕ ಎಸ್‌ಐಆರ್: ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಮಂಗಳೂರು: ಶೈಕ್ಷಣಿಕ ಕ್ಷೇತ್ರದಲ್ಲಿ ತಮ್ಮ ವಿಶಿಷ್ಟ ಸೇವೆಯ ಮೂಲಕ ದೇಶ-ವಿದೇಶಗಳಲ್ಲಿ ಗುರುತಿಸಿಕೊಂಡಿರುವ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರಿಗೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ...

SIR ಸೂತ್ರದಿಂದ ಬದಲಾಗುತ್ತಾ ಬೆಂಗಳೂರಿನ 28 ಕ್ಷೇತ್ರಗಳ ಗೆಲುವಿನ ಸಮೀಕರಣ?

ರಾಜ್ಯ ರಾಜಕೀಯದ ಶಕ್ತಿಕೇಂದ್ರವಾದ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ‘ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR)’ ಪ್ರಕ್ರಿಯೆಯು ಮಹತ್ವದ ರಾಜಕೀಯ ಮತ್ತು ಆಡಳಿತಾತ್ಮಕ ಚರ್ಚೆಯನ್ನು ಹುಟ್ಟುಹಾಕಿದೆ. ಎಸ್‌ಐಆರ್‌ಗೂ ಮುನ್ನ ನಗರದಲ್ಲಿದ್ದ ಸುಮಾರು 1.03...

ಮಣಿಪುರದಲ್ಲಿ ಹಿಂಸಾಚಾರಕ್ಕೆ 306 ಬಲಿ, 49 ಮಂದಿ ನಾಪತ್ತೆ: ವಿಧಾನಸಭೆಯಲ್ಲಿ ಗೃಹ ಸಚಿವರ ಸ್ಪಷ್ಟನೆ

ಇಂಫಾಲ್: ಮಣಿಪುರದಲ್ಲಿ 2023ರ ಮೇ ತಿಂಗಳಲ್ಲಿ ಭುಗಿಲೆದ್ದ ಜನಾಂಗೀಯ ಹಿಂಸಾಚಾರಕ್ಕೆ ಮೂರು ವರ್ಷಗಳಿಗೂ ಹೆಚ್ಚು ಕಾಲ ಕಳೆದಿದ್ದರೂ, ಅದರ ಪರಿಣಾಮದಿಂದ ರಾಜ್ಯ ಸಂಪೂರ್ಣವಾಗಿ ಹೊರಬಂದಿಲ್ಲ. ಹಿಂಸಾಚಾರ ಆರಂಭವಾದ ಬಳಿಕ ಇದುವರೆಗೆ ಕನಿಷ್ಠ 306...

ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ನಿಧಿ ದುರ್ಬಳಕೆ; ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷದ ಸಿ.ಸಿ. ರಸ್ತೆ ನಿರ್ಮಾಣ!

ಸಮಾಜ ಕಲ್ಯಾಣ ಇಲಾಖೆಯ 'ಪ್ರಗತಿ ಕಾಲೋನಿ' ಯೋಜನೆಯ ನಿಧಿ ದುರ್ಬಳಕೆಯಾಗಿರುವ ಆರೋಪ ಕೇಳಿಬಂದಿದ್ದು, ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣ ಮಾಡಿರುವ ಪ್ರಕರಣ ಬೆಂಗಳೂರು...

SIR: ‘ಚುನಾವಣಾ ಆಯೋಗದಿಂದ ನೋಟಿಸ್‌’ ಇಲ್ಲದಿರುವ ದಾಖಲೆಗಳನ್ನು ಎಲ್ಲಿಂದಾ ತರೋದು? ಸಾರ್ವಜನಿಕರ ಪ್ರಶ್ನೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗವು ಬಳಸುತ್ತಿರುವ 'Logical Discrepancy' (ತಾರ್ಕಿಕ ವ್ಯತ್ಯಾಸ) ಎಂಬ ಸಾಫ್ಟ್‌ವೇರ್ ಆಧಾರಿತ ಪರಿಶೀಲನೆಯು ತಾಂತ್ರಿಕವಾಗಿ ದೋಷರಹಿತವೆಂದು ತೋರಿದರೂ, ವಾಸ್ತವದಲ್ಲಿ ಲಕ್ಷಾಂತರ ನೈಜ...

SIR ರಗಳೆ: ಕೊನೆಗೂ 43.81 ಲಕ್ಷ ಮತದಾರರ ನೋಟಿಸ್ ಪಟ್ಟಿ ಬಹಿರಂಗಪಡಿಸಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಭಾರಿ ಸದ್ದು ಮಾಡುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗೆ ಗುರಿಯಾಗಿರುವ 43.81 ಲಕ್ಷ ಮತದಾರರ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಕೊನೆಗೂ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ...

‘ಆರ್‌ಎಸ್‌ಎಸ್‌ ಅಡಗಿಕೊಂಡಿದೆ’: ಮೋಹನ್ ಭಾಗವತ್‌ ಯುಕೆ ಭೇಟಿ ವಿರೋಧಿಸಿ ಲಂಡನ್‌ನಲ್ಲಿ ಪ್ರತಿಭಟನೆ

ಲಂಡನ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರ ಯುನೈಟೆಡ್ ಕಿಂಗ್‌ಡಮ್‌ ಭೇಟಿಯನ್ನು ವಿರೋಧಿಸಿ ಲಂಡನ್‌ನ ಪಾರ್ಲಿಮೆಂಟ್ ಸ್ಕ್ವೇರ್‌ನಲ್ಲಿ ನೂರಾರು ಜನರು ಪ್ರತಿಭಟನೆ ನಡೆಸಿದ್ದಾರೆ. ಭಾಗವತ್ ಅವರ ಯುಕೆ ಪ್ರವಾಸದ...

ಪಂಚಾಯಿತಿಯಲ್ಲಿ ಅಸ್ಪೃಶ್ಯತೆ ಆಚರಣೆ-ಪ್ರತ್ಯೇಕ ಟೀ ಲೋಟ; ಆತ್ಮಹತ್ಯೆಗೆ ಯತ್ನಿಸಿದ ಪೌರಕಾರ್ಮಿಕ ಮಹಿಳೆ

ಕೆಲಸದ ಸ್ಥಳದಲ್ಲಿ ನಡೆಯುತ್ತಿದ್ದ ಅಸ್ಪೃಶ್ಯತೆ ಆಚರಣೆಯಿಂದ ಮನನೊಂದ 37 ವರ್ಷದ ದಲಿತ ನೈರ್ಮಲ್ಯ ಕಾರ್ಮಿಕರೊಬ್ಬರು ಕ್ರಿಮಿನಾಶಕ ಸೇವಿಸಿ ಆತ್ಮತ್ಯೆಗೆ ಯತ್ನಿಸಿರುವ ಘಟನೆ ತಮಿಳುನಾಡಿನ ಮೇಲೂರು ಸಮೀಪದ ಕಂಬೂರ್ ಪಂಚಾಯತ್‌ನಲ್ಲಿ ಬೆಳಕಿಗೆ ಬಂದಿದೆ. ...

ಗೌರಿ, ಗಾಂಧಿಯನ್ನು ಕೊಂದದ್ದು ಬರೀ ಬುಲೆಟ್‌ಗಳಲ್ಲ, ಕೋಮುವಾದಿ ಸಿದ್ಧಾಂತ: ವಿದ್ಯಾರ್ಥಿ ನಾಯಕಿ ದಾನಿಶ್ ಅಲಿ

"ಗಾಂಧಿ, ಗೌರಿಯನ್ನು ಕೊಂದಿದ್ದು ಬರೀ ಬುಲೆಟ್‌ಗಳಲ್ಲ, ಅದು ಸಿದ್ಧಾಂತ ಎಂಬುದನ್ನು ನಾವು ನೆನಪಿಡಬೇಕು. ಈ ಸಿದ್ಧಾಂತಗಳ ವಿರುದ್ಧವಾಗಿ ನಾವು ಇಂದು ಹೋರಾಡಬೇಕಿದೆ” ಎಂದು ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (JNU) ವಿದ್ಯಾರ್ಥಿ ನಾಯಕಿ...