Homeಮುಖಪುಟಫೇಸ್‌ಬುಕ್‌ ಇಂಡಿಯಾದ ಮುಖ್ಯಸ್ಥೆ ಅಂಖಿ ದಾಸ್ ವಿರುದ್ಧ ಎಫ್‌ಐಆರ್!

ಫೇಸ್‌ಬುಕ್‌ ಇಂಡಿಯಾದ ಮುಖ್ಯಸ್ಥೆ ಅಂಖಿ ದಾಸ್ ವಿರುದ್ಧ ಎಫ್‌ಐಆರ್!

ಲೋಕಸಭಾ ಚುನಾವಣೆಗೆ ಮುಂಚಿತವಾಗಿ ಹಲವಾರು ದ್ವೇಷ ಭಾಷಣ ಪೋಸ್ಟ್‌ಗಳನ್ನು ನಿರ್ಬಂಧಿಸದಂತೆ ಅಂಖಿ ದಾಸ್ ತನ್ನ ನೌಕರರ ಮೇಲೆ ಒತ್ತಡ ಹೇರಿದ್ದಾರೆ” ಎಂದು ತಿವಾರಿ ಆರೋಪಿಸಿದ್ದಾರೆ.

- Advertisement -
- Advertisement -

ಆಗಸ್ಟ್ 17 ರಂದು ಪತ್ರಕರ್ತ ಅವೇಶ್ ತಿವಾರಿ ಸಲ್ಲಿಸಿರುವ ದೂರಿನ ಆಧಾರದಲ್ಲಿ ರಾಯ್‌ಪುರ ಪೊಲೀಸರು ಫೇಸ್‌ಬುಕ್‌ ನ ಸಾರ್ವಜನಿಕ ನೀತಿ ನಿರ್ದೇಶಕರಾದ ಅಂಖಿ ದಾಸ್ ವಿರುದ್ಧ ಭಾರತೀಯ ದಂಡ ಸಂಹಿತೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಛತ್ತೀಸ್‌ಗಢ ಮೂಲದ ಪತ್ರಕರ್ತ ಅವೇಶ್ ತಿವಾರಿ ಅವರು ಸಲ್ಲಿಸಿರುವ ದೂರಿನಲ್ಲಿ, “ಲೋಕಸಭಾ ಚುನಾವಣೆಗೆ ಮುಂಚಿತವಾಗಿ ಹಲವಾರು ದ್ವೇಷ ಭಾಷಣ ಪೋಸ್ಟ್‌ಗಳನ್ನು ನಿರ್ಬಂಧಿಸದಂತೆ ಅಂಖಿ ದಾಸ್ ತನ್ನ ನೌಕರರ ಮೇಲೆ ಒತ್ತಡ ಹೇರಿದ್ದಾರೆ” ಎಂದು ಆರೋಪಿಸಿದ್ದಾರೆ.

ಇದು ‘ಭಾರತೀಯ ಮಾರುಕಟ್ಟೆಯಲ್ಲಿ ರಾಜಕೀಯ ಲಾಭ ಗಳಿಸಲು’ ಮಾಡಲಾದ ಅಪರಾಧ ಎಂದು ತಿವಾರಿ ಆರೋಪಿಸಿದ್ದಾರೆ.

ನಿನ್ನೆಯೇ ತನಗೆ ಜೀವ ಬೆದರಿಕೆ ಇದೆ ಎಂದು ಆರೋಪಿಸಿ ಅಂಖಿ ದಾಸ್ ಅವರ ದೂರಿನ ಆಧಾರದ ಮೇಲೆ ದೆಹಲಿ ಪೊಲೀಸರು ಪ್ರತ್ಯೇಕ ಎಫ್‌ಐಆರ್ ದಾಖಲಿಸಿದ್ದಾರೆ.

ತನಗೆ ಮಾರಣಾಂತಿಕ ಬೆದರಿಕೆ ಮತ್ತು ಆನ್‌ಲೈನ್ ಕಿರುಕುಳ ನೀಡಲಾಗುತ್ತಿದೆ ಎಂದು ದಾಸ್ ತನ್ನ ದೂರಿನಲ್ಲಿ ಆರೋಪಿಸಿದ್ದಾರೆ. ಆವೇಶ್ ತಿವಾರಿಯವರ ಹೆಸರನ್ನು ದೂರಿನಲ್ಲಿ ಉಲ್ಲೇಖಿಸಿದ್ದ ಅವರು, ಆಗಸ್ಟ್ 16 ರಂದು ತಿವಾರಿ ಫೇಸ್‌ಬುಕ್‌ನಲ್ಲಿ ಬೆದರಿಕೆ ಹಾಕಿದ್ದಾರೆ ಎಂದು ಹೇಳಿದ್ದರು.

ಸುದ್ದಿ ಚಾನೆಲ್ ಸ್ವರಾಜ್ ಎಕ್ಸ್‌ಪ್ರೆಸ್‌ನ ರಾಜ್ಯ ಬ್ಯೂರೋ ಮುಖ್ಯಸ್ಥರಾಗಿರುವ ಛತ್ತೀಸ್‌ಗಢ ಮೂಲದ ಪತ್ರಕರ್ತ ತಿವಾರಿ ಈ ಆರೋಪಗಳನ್ನು ನಿರಾಕರಿಸಿದ್ದಾರೆ.

ಎರಡೂ ಎಫ್‌ಐಆರ್‌ಗಳು ಅಮೆರಿಕ ವಾಲ್‌ಸ್ಟ್ರೀಟ್‌ ಜರ್ನಲ್ ಪ್ರಕಟಿಸಿದ ಫೇಸ್‌ಬುಕ್‌ ಮತ್ತು ಬಿಜೆಪಿ ನಂಟು ವರದಿಯ ನಂತರದ ಬೆಳವಣಿಗೆಗಳಾಗಿವೆ.

ತಿವಾರಿ ದೂರಿನ ಎಫ್‌ಐಆರ್‌ನಲ್ಲಿ ಇತರ ಇಬ್ಬರು ಫೇಸ್‌ಬುಕ್ ಬಳಕೆದಾರರಾದ ಛತ್ತೀಸ್‌ಗಢ ನಿವಾಸಿ ವಿವೇಕ್ ಸಿನ್ಹಾ ಮತ್ತು ಇಂದೋರ್ ನಿವಾಸಿ ರಾಮ್ ಸಾಹು ಅವರನ್ನೂ ಹೆಸರಿಸಲಾಗಿದೆ. ಸಿನ್ಹಾ ಮತ್ತು ಸಾಹು ಸೇರಿದಂತೆ ಅಂಖಿ ದಾಸ್  “ಹಿಂದೂ ಮತ್ತು ಮುಸ್ಲಿಂ ಸಮುದಾಯಗಳ ನಡುವೆ ದ್ವೇಷವನ್ನು ಉಂಟುಮಾಡುವ ಉದ್ದೇಶದಿಂದ ವಿಷಯವನ್ನು ಪ್ರಕಟಿಸಲು ಮತ್ತು ಪ್ರಸಾರ ಮಾಡಲು ಫೇಸ್‌ಬುಕ್ ಅನ್ನು ಬಳಸಿದ್ದಾರೆ” ಎಂದು ತಿವಾರಿ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.

ಟಿ ರಾಜಾ ಸಿಂಗ್, ಅನಂತ್‌ಕುಮಾರ್ ಹೆಗ್ಡೆ ಮತ್ತು ಕಪಿಲ್ ಮಿಶ್ರಾ ಸೇರಿದಂತೆ ಹಲವಾರು ಬಿಜೆಪಿ ನಾಯಕರ ಮೇಲೆ ದ್ವೇಷ ಭಾಷಣ ನಿರ್ಬಂಧವನ್ನು ಅನ್ವಯಿಸದಂತೆ ಅಂಖಿ ದಾಸ್ ಫೇಸ್‌ಬುಕ್‌ನ್ನು ನಿರ್ಬಂಧಿಸಿದ್ದಾರೆ ಎಂದು ಅಮೇರಿಕದ ಪತ್ರಿಕೆ ವರದಿ ಮಾಡಿದ ನಂತರ ಎರಡೂ ಎಫ್‌ಐಆರ್‌ಗಳು ದಾಖಲಾಗಿವೆ.

ಫೇಸ್‌ಬುಕ್‌ನ ಕಟೆಂಟ್‌ ಪಾಲಿಸಿ ನಿಯಮಗಳು ಆಡಳಿತರೂಢ ಬಿಜೆಪಿ ಪರವಾಗಿವೆ. ಬಿಜೆಪಿ ಮತ್ತು ಹಿಂದೂತ್ವ ನಾಯಕರು ದ್ವೇಷ ಭಾಷಣಗಳು ತನ್ನ ಸಂಸ್ಥೆಯ ನಿಯಮಗಳನ್ನು ಉಲ್ಲಂಘಿಸಿದರೂ ಕೂಡ ಫೇಸ್ ಬುಕ್ ಕ್ರಮ ತೆಗೆದುಕೊಳ್ಳುತ್ತಿಲ್ಲ. ಬಿಜೆಪಿ ಕಾರ್ಯಕರ್ತರ ನಿಯಮ ಉಲ್ಲಂಘನೆಗಳಿಗೆ ಶಿಕ್ಷೆ ನೀಡುವುದು ಅಥವಾ ಪ್ರಶ್ನಿಸುವುದು “ದೇಶದ ಕಂಪನಿಯ ವ್ಯವಹಾರ ಭವಿಷ್ಯವನ್ನು ಹಾನಿಗೊಳಿಸುತ್ತದೆ” ಎಂದು ಫೇಸ್‌ಬುಕ್‌ನ ಹಿರಿಯ ಅಧಿಕಾರಿಗಳ ಹೇಳಿಕೆ ಉಲ್ಲೇಖಿಸಿ ವಾಲ್‌ಸ್ಟ್ರೀಟ್‌ ಜರ್ನಲ್ ವಿಶೇಷ ವರದಿ ಮಾಡಿತ್ತು.

ನಾನು ಎಂದಿಗೂ ದಾಸ್‌ ಅವರನ್ನು ಸಂಪರ್ಕಿಸಿಲ್ಲ ಅಥವಾ ಸಂವಹನ ನಡೆಸಿಲ್ಲ: ತಿವಾರಿ

ನಾನು ಎಂದಿಗೂ ಅಂಖಿ ದಾಸ್‌ ಅವರನ್ನು ಸಂಪರ್ಕಿಸಿಲ್ಲ ಮತ್ತು ಅವರೊಂದಿಗೆ ಸಂವಹನ ನಡೆಸಿಲ್ಲ. ಅವರಿಗೆ ಬೆದರಿಕೆ ಹಾಕಿರುವುದು ಸುಳ್ಳು ಸುದ್ದಿ ಎಂದು ಪತ್ರಕರ್ತ ತಿವಾರಿ ತಿಳಿಸಿದ್ದಾರೆ. ದೂರಿನಲ್ಲಿ ನನ್ನನ್ನು ಏಕೆ ಹೆಸರಿಸಲಾಗಿದೆ ಎಂದು ನನಗೆ ತಿಳಿದಿಲ್ಲ. ನಾನು ಸಹೋದ್ಯೋಗಿಗಳಿಂದ ಇದರ ಬಗ್ಗೆ ತಿಳಿದುಕೊಂಡೆ. ಇದು ಬಹಳ ಮುಖ್ಯವಾದ ವಿಷಯವಾಗಿದೆ. ವಾಸ್ತವದಲ್ಲಿ ವಾಲ್‌ಸ್ಟ್ರೀಟ್ ಜರ್ನಲ್ ಪ್ರಕಟಿಸಿದ ವರದಿಯನ್ನು ನಾನು ಸರಳವಾಗಿ ಪೋಸ್ಟ್ ಮಾಡಿದ್ದೇನೆ ಎಂದು ತಿವಾರಿ ತಿಳಿಸಿದ್ದಾರೆ.

ಅಂಖಿ ದಾಸ್ ಕುರಿತು ಮಾತನಾಡಿದ್ದಕ್ಕಾಗಿ, ಸಾಹು ಮತ್ತು ಸಿನ್ಹಾ ನನಗೆ ಮಾರಣಾಂತಿಕ ಬೆದರಿಕೆಗಳನ್ನು ಹಾಕಿದ್ದಾರೆ ಎಂದು ತಿವಾರಿ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.

ಪುಲ್ವಾಮಾ, ಸಿಎಎ-ಎನ್‌ಆರ್‌ಸಿ ಕುರಿತು ಫೇಸ್‌ಬುಕ್ ನನ್ನ ಪೋಸ್ಟ್‌ಗಳನ್ನು ನಿರ್ಬಂಧಿಸಿದೆ ಎಂದು ತಿವಾರಿ ಹೇಳಿದ್ದಾರೆ. ಫೆಬ್ರವರಿ 2019 ರಿಂದ ಸರ್ಕಾರದ ನೀತಿಗಳನ್ನು ಟೀಕಿಸುವ ಹಲವಾರು ಪೋಸ್ಟ್‌ಗಳನ್ನು ಸೂಕ್ತ ವಿವರಣೆಯಿಲ್ಲದೆ ಫೇಸ್‌ಬುಕ್ ತೆಗೆದುಹಾಕಿದೆ ಎಂದು ಅವರು ಆರೋಪಿಸಿದರು.

25 ವರ್ಷಗಳಿಂದ ಪತ್ರಕರ್ತನಾಗಿರುವ ನಾನು ಪ್ರಶ್ನೆಗಳನ್ನು ಕೇಳುವುದು ನನ್ನ ಕರ್ತವ್ಯ. ಆದರೆ ಪುಲ್ವಾಮಾ ದಾಳಿ, ಸಿಎಎ-ಎನ್‌ಆರ್‌ಸಿ ಮತ್ತು ಛತ್ತೀಸ್‌ಗಢದ ಬುಡಕಟ್ಟು ಸಮಸ್ಯೆಗಳು ಸೇರಿದಂತೆ ನನ್ನ ಹಲವಾರು ಪೋಸ್ಟ್‌ಗಳನ್ನು ಈ ಹಿಂದೆ ಫೇಸ್‌ಬುಕ್ ನಿರ್ಬಂಧಿಸಿದೆ ಎಂದು ತಿವಾರಿ ದೂರಿದ್ದಾರೆ.

ಭಿಲೈ ಅವರ ಬುಡಕಟ್ಟು ಆಂದೋಲನದ ಕುರಿತು ವೈರಲ್ ಆಗಿದ್ದ ನನ್ನ ಲೈವ್ ವೀಡಿಯೊ ಒಂದನ್ನು ಇದ್ದಕ್ಕಿದ್ದಂತೆ ನಿರ್ಬಂಧಿಸಲಾಗಿದೆ. ಇದು ಫೇಸ್‌ಬುಕ್ ಮಾರ್ಗಸೂಚಿಗಳಿಗೆ ವಿರುದ್ಧವಾಗಿದೆ ಎಂದು ನನಗೆ ತಿಳಿಯಿತು. ಆದರೆ ನಾನು ಏನು ತಪ್ಪು ಮಾಡಿದೆ ಎಂದು ಫೇಸ್‌ಬುಕ್ ಎಂದಿಗೂ ವಿವರಿಸಲಿಲ್ಲ ಎಂದು ತಿವಾರಿ ಆರೋಪಿಸಿದರು.


ಇದನ್ನೂ ಓದಿ: ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಫೇಸ್‌ಬುಕ್‌ ಅನ್ನು ನಿಯಂತ್ರಿಸುತ್ತಿದ್ದಾರೆ: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ ನಿಧನ

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ (82 ವರ್ಷ) ಅವರು ಬುಧವಾರ (ಜನವರಿ 7, 2026) ತಡರಾತ್ರಿ ಪುಣೆಯಲ್ಲಿರುವ ತಮ್ಮ ಮನೆಯಲ್ಲಿ ಅಲ್ಪಕಾಲದ ಅನಾರೋಗ್ಯದ ನಂತರ ನಿಧನರಾದರು. ಈ ಕುರಿತು ಗಾಡ್ಗೀಳ್ ಅವರ...

ಅಪರಾಧದ ಸ್ವರೂಪ ಏನೇ ಇರಲಿ, ತ್ವರಿತ ವಿಚಾರಣೆಯ ಹಕ್ಕು ಅನ್ವಯಿಸುತ್ತದೆ: ಸುಪ್ರೀಂ ಕೋರ್ಟ್

ಸಂವಿಧಾನದ 21 ನೇ ವಿಧಿಯ ಅಡಿಯಲ್ಲಿ ತ್ವರಿತ ವಿಚಾರಣೆಯ ಹಕ್ಕು ಅಪರಾಧದ ಗಂಭೀರತೆ ಅಥವಾ ಸ್ವರೂಪವನ್ನು ಲೆಕ್ಕಿಸದೆ ಅನ್ವಯಿಸುತ್ತದೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಪುನರುಚ್ಚರಿಸಿದೆ. 2002 ರ ಹಣ ವರ್ಗಾವಣೆ ತಡೆ ಕಾಯ್ದೆಯ...