Homeಮುಖಪುಟಫೇಸ್‌ಬುಕ್‌ ಇಂಡಿಯಾದ ಮುಖ್ಯಸ್ಥೆ ಅಂಖಿ ದಾಸ್ ವಿರುದ್ಧ ಎಫ್‌ಐಆರ್!

ಫೇಸ್‌ಬುಕ್‌ ಇಂಡಿಯಾದ ಮುಖ್ಯಸ್ಥೆ ಅಂಖಿ ದಾಸ್ ವಿರುದ್ಧ ಎಫ್‌ಐಆರ್!

ಲೋಕಸಭಾ ಚುನಾವಣೆಗೆ ಮುಂಚಿತವಾಗಿ ಹಲವಾರು ದ್ವೇಷ ಭಾಷಣ ಪೋಸ್ಟ್‌ಗಳನ್ನು ನಿರ್ಬಂಧಿಸದಂತೆ ಅಂಖಿ ದಾಸ್ ತನ್ನ ನೌಕರರ ಮೇಲೆ ಒತ್ತಡ ಹೇರಿದ್ದಾರೆ” ಎಂದು ತಿವಾರಿ ಆರೋಪಿಸಿದ್ದಾರೆ.

- Advertisement -
- Advertisement -

ಆಗಸ್ಟ್ 17 ರಂದು ಪತ್ರಕರ್ತ ಅವೇಶ್ ತಿವಾರಿ ಸಲ್ಲಿಸಿರುವ ದೂರಿನ ಆಧಾರದಲ್ಲಿ ರಾಯ್‌ಪುರ ಪೊಲೀಸರು ಫೇಸ್‌ಬುಕ್‌ ನ ಸಾರ್ವಜನಿಕ ನೀತಿ ನಿರ್ದೇಶಕರಾದ ಅಂಖಿ ದಾಸ್ ವಿರುದ್ಧ ಭಾರತೀಯ ದಂಡ ಸಂಹಿತೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಛತ್ತೀಸ್‌ಗಢ ಮೂಲದ ಪತ್ರಕರ್ತ ಅವೇಶ್ ತಿವಾರಿ ಅವರು ಸಲ್ಲಿಸಿರುವ ದೂರಿನಲ್ಲಿ, “ಲೋಕಸಭಾ ಚುನಾವಣೆಗೆ ಮುಂಚಿತವಾಗಿ ಹಲವಾರು ದ್ವೇಷ ಭಾಷಣ ಪೋಸ್ಟ್‌ಗಳನ್ನು ನಿರ್ಬಂಧಿಸದಂತೆ ಅಂಖಿ ದಾಸ್ ತನ್ನ ನೌಕರರ ಮೇಲೆ ಒತ್ತಡ ಹೇರಿದ್ದಾರೆ” ಎಂದು ಆರೋಪಿಸಿದ್ದಾರೆ.

ಇದು ‘ಭಾರತೀಯ ಮಾರುಕಟ್ಟೆಯಲ್ಲಿ ರಾಜಕೀಯ ಲಾಭ ಗಳಿಸಲು’ ಮಾಡಲಾದ ಅಪರಾಧ ಎಂದು ತಿವಾರಿ ಆರೋಪಿಸಿದ್ದಾರೆ.

ನಿನ್ನೆಯೇ ತನಗೆ ಜೀವ ಬೆದರಿಕೆ ಇದೆ ಎಂದು ಆರೋಪಿಸಿ ಅಂಖಿ ದಾಸ್ ಅವರ ದೂರಿನ ಆಧಾರದ ಮೇಲೆ ದೆಹಲಿ ಪೊಲೀಸರು ಪ್ರತ್ಯೇಕ ಎಫ್‌ಐಆರ್ ದಾಖಲಿಸಿದ್ದಾರೆ.

ತನಗೆ ಮಾರಣಾಂತಿಕ ಬೆದರಿಕೆ ಮತ್ತು ಆನ್‌ಲೈನ್ ಕಿರುಕುಳ ನೀಡಲಾಗುತ್ತಿದೆ ಎಂದು ದಾಸ್ ತನ್ನ ದೂರಿನಲ್ಲಿ ಆರೋಪಿಸಿದ್ದಾರೆ. ಆವೇಶ್ ತಿವಾರಿಯವರ ಹೆಸರನ್ನು ದೂರಿನಲ್ಲಿ ಉಲ್ಲೇಖಿಸಿದ್ದ ಅವರು, ಆಗಸ್ಟ್ 16 ರಂದು ತಿವಾರಿ ಫೇಸ್‌ಬುಕ್‌ನಲ್ಲಿ ಬೆದರಿಕೆ ಹಾಕಿದ್ದಾರೆ ಎಂದು ಹೇಳಿದ್ದರು.

ಸುದ್ದಿ ಚಾನೆಲ್ ಸ್ವರಾಜ್ ಎಕ್ಸ್‌ಪ್ರೆಸ್‌ನ ರಾಜ್ಯ ಬ್ಯೂರೋ ಮುಖ್ಯಸ್ಥರಾಗಿರುವ ಛತ್ತೀಸ್‌ಗಢ ಮೂಲದ ಪತ್ರಕರ್ತ ತಿವಾರಿ ಈ ಆರೋಪಗಳನ್ನು ನಿರಾಕರಿಸಿದ್ದಾರೆ.

ಎರಡೂ ಎಫ್‌ಐಆರ್‌ಗಳು ಅಮೆರಿಕ ವಾಲ್‌ಸ್ಟ್ರೀಟ್‌ ಜರ್ನಲ್ ಪ್ರಕಟಿಸಿದ ಫೇಸ್‌ಬುಕ್‌ ಮತ್ತು ಬಿಜೆಪಿ ನಂಟು ವರದಿಯ ನಂತರದ ಬೆಳವಣಿಗೆಗಳಾಗಿವೆ.

ತಿವಾರಿ ದೂರಿನ ಎಫ್‌ಐಆರ್‌ನಲ್ಲಿ ಇತರ ಇಬ್ಬರು ಫೇಸ್‌ಬುಕ್ ಬಳಕೆದಾರರಾದ ಛತ್ತೀಸ್‌ಗಢ ನಿವಾಸಿ ವಿವೇಕ್ ಸಿನ್ಹಾ ಮತ್ತು ಇಂದೋರ್ ನಿವಾಸಿ ರಾಮ್ ಸಾಹು ಅವರನ್ನೂ ಹೆಸರಿಸಲಾಗಿದೆ. ಸಿನ್ಹಾ ಮತ್ತು ಸಾಹು ಸೇರಿದಂತೆ ಅಂಖಿ ದಾಸ್  “ಹಿಂದೂ ಮತ್ತು ಮುಸ್ಲಿಂ ಸಮುದಾಯಗಳ ನಡುವೆ ದ್ವೇಷವನ್ನು ಉಂಟುಮಾಡುವ ಉದ್ದೇಶದಿಂದ ವಿಷಯವನ್ನು ಪ್ರಕಟಿಸಲು ಮತ್ತು ಪ್ರಸಾರ ಮಾಡಲು ಫೇಸ್‌ಬುಕ್ ಅನ್ನು ಬಳಸಿದ್ದಾರೆ” ಎಂದು ತಿವಾರಿ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.

ಟಿ ರಾಜಾ ಸಿಂಗ್, ಅನಂತ್‌ಕುಮಾರ್ ಹೆಗ್ಡೆ ಮತ್ತು ಕಪಿಲ್ ಮಿಶ್ರಾ ಸೇರಿದಂತೆ ಹಲವಾರು ಬಿಜೆಪಿ ನಾಯಕರ ಮೇಲೆ ದ್ವೇಷ ಭಾಷಣ ನಿರ್ಬಂಧವನ್ನು ಅನ್ವಯಿಸದಂತೆ ಅಂಖಿ ದಾಸ್ ಫೇಸ್‌ಬುಕ್‌ನ್ನು ನಿರ್ಬಂಧಿಸಿದ್ದಾರೆ ಎಂದು ಅಮೇರಿಕದ ಪತ್ರಿಕೆ ವರದಿ ಮಾಡಿದ ನಂತರ ಎರಡೂ ಎಫ್‌ಐಆರ್‌ಗಳು ದಾಖಲಾಗಿವೆ.

ಫೇಸ್‌ಬುಕ್‌ನ ಕಟೆಂಟ್‌ ಪಾಲಿಸಿ ನಿಯಮಗಳು ಆಡಳಿತರೂಢ ಬಿಜೆಪಿ ಪರವಾಗಿವೆ. ಬಿಜೆಪಿ ಮತ್ತು ಹಿಂದೂತ್ವ ನಾಯಕರು ದ್ವೇಷ ಭಾಷಣಗಳು ತನ್ನ ಸಂಸ್ಥೆಯ ನಿಯಮಗಳನ್ನು ಉಲ್ಲಂಘಿಸಿದರೂ ಕೂಡ ಫೇಸ್ ಬುಕ್ ಕ್ರಮ ತೆಗೆದುಕೊಳ್ಳುತ್ತಿಲ್ಲ. ಬಿಜೆಪಿ ಕಾರ್ಯಕರ್ತರ ನಿಯಮ ಉಲ್ಲಂಘನೆಗಳಿಗೆ ಶಿಕ್ಷೆ ನೀಡುವುದು ಅಥವಾ ಪ್ರಶ್ನಿಸುವುದು “ದೇಶದ ಕಂಪನಿಯ ವ್ಯವಹಾರ ಭವಿಷ್ಯವನ್ನು ಹಾನಿಗೊಳಿಸುತ್ತದೆ” ಎಂದು ಫೇಸ್‌ಬುಕ್‌ನ ಹಿರಿಯ ಅಧಿಕಾರಿಗಳ ಹೇಳಿಕೆ ಉಲ್ಲೇಖಿಸಿ ವಾಲ್‌ಸ್ಟ್ರೀಟ್‌ ಜರ್ನಲ್ ವಿಶೇಷ ವರದಿ ಮಾಡಿತ್ತು.

ನಾನು ಎಂದಿಗೂ ದಾಸ್‌ ಅವರನ್ನು ಸಂಪರ್ಕಿಸಿಲ್ಲ ಅಥವಾ ಸಂವಹನ ನಡೆಸಿಲ್ಲ: ತಿವಾರಿ

ನಾನು ಎಂದಿಗೂ ಅಂಖಿ ದಾಸ್‌ ಅವರನ್ನು ಸಂಪರ್ಕಿಸಿಲ್ಲ ಮತ್ತು ಅವರೊಂದಿಗೆ ಸಂವಹನ ನಡೆಸಿಲ್ಲ. ಅವರಿಗೆ ಬೆದರಿಕೆ ಹಾಕಿರುವುದು ಸುಳ್ಳು ಸುದ್ದಿ ಎಂದು ಪತ್ರಕರ್ತ ತಿವಾರಿ ತಿಳಿಸಿದ್ದಾರೆ. ದೂರಿನಲ್ಲಿ ನನ್ನನ್ನು ಏಕೆ ಹೆಸರಿಸಲಾಗಿದೆ ಎಂದು ನನಗೆ ತಿಳಿದಿಲ್ಲ. ನಾನು ಸಹೋದ್ಯೋಗಿಗಳಿಂದ ಇದರ ಬಗ್ಗೆ ತಿಳಿದುಕೊಂಡೆ. ಇದು ಬಹಳ ಮುಖ್ಯವಾದ ವಿಷಯವಾಗಿದೆ. ವಾಸ್ತವದಲ್ಲಿ ವಾಲ್‌ಸ್ಟ್ರೀಟ್ ಜರ್ನಲ್ ಪ್ರಕಟಿಸಿದ ವರದಿಯನ್ನು ನಾನು ಸರಳವಾಗಿ ಪೋಸ್ಟ್ ಮಾಡಿದ್ದೇನೆ ಎಂದು ತಿವಾರಿ ತಿಳಿಸಿದ್ದಾರೆ.

ಅಂಖಿ ದಾಸ್ ಕುರಿತು ಮಾತನಾಡಿದ್ದಕ್ಕಾಗಿ, ಸಾಹು ಮತ್ತು ಸಿನ್ಹಾ ನನಗೆ ಮಾರಣಾಂತಿಕ ಬೆದರಿಕೆಗಳನ್ನು ಹಾಕಿದ್ದಾರೆ ಎಂದು ತಿವಾರಿ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.

ಪುಲ್ವಾಮಾ, ಸಿಎಎ-ಎನ್‌ಆರ್‌ಸಿ ಕುರಿತು ಫೇಸ್‌ಬುಕ್ ನನ್ನ ಪೋಸ್ಟ್‌ಗಳನ್ನು ನಿರ್ಬಂಧಿಸಿದೆ ಎಂದು ತಿವಾರಿ ಹೇಳಿದ್ದಾರೆ. ಫೆಬ್ರವರಿ 2019 ರಿಂದ ಸರ್ಕಾರದ ನೀತಿಗಳನ್ನು ಟೀಕಿಸುವ ಹಲವಾರು ಪೋಸ್ಟ್‌ಗಳನ್ನು ಸೂಕ್ತ ವಿವರಣೆಯಿಲ್ಲದೆ ಫೇಸ್‌ಬುಕ್ ತೆಗೆದುಹಾಕಿದೆ ಎಂದು ಅವರು ಆರೋಪಿಸಿದರು.

25 ವರ್ಷಗಳಿಂದ ಪತ್ರಕರ್ತನಾಗಿರುವ ನಾನು ಪ್ರಶ್ನೆಗಳನ್ನು ಕೇಳುವುದು ನನ್ನ ಕರ್ತವ್ಯ. ಆದರೆ ಪುಲ್ವಾಮಾ ದಾಳಿ, ಸಿಎಎ-ಎನ್‌ಆರ್‌ಸಿ ಮತ್ತು ಛತ್ತೀಸ್‌ಗಢದ ಬುಡಕಟ್ಟು ಸಮಸ್ಯೆಗಳು ಸೇರಿದಂತೆ ನನ್ನ ಹಲವಾರು ಪೋಸ್ಟ್‌ಗಳನ್ನು ಈ ಹಿಂದೆ ಫೇಸ್‌ಬುಕ್ ನಿರ್ಬಂಧಿಸಿದೆ ಎಂದು ತಿವಾರಿ ದೂರಿದ್ದಾರೆ.

ಭಿಲೈ ಅವರ ಬುಡಕಟ್ಟು ಆಂದೋಲನದ ಕುರಿತು ವೈರಲ್ ಆಗಿದ್ದ ನನ್ನ ಲೈವ್ ವೀಡಿಯೊ ಒಂದನ್ನು ಇದ್ದಕ್ಕಿದ್ದಂತೆ ನಿರ್ಬಂಧಿಸಲಾಗಿದೆ. ಇದು ಫೇಸ್‌ಬುಕ್ ಮಾರ್ಗಸೂಚಿಗಳಿಗೆ ವಿರುದ್ಧವಾಗಿದೆ ಎಂದು ನನಗೆ ತಿಳಿಯಿತು. ಆದರೆ ನಾನು ಏನು ತಪ್ಪು ಮಾಡಿದೆ ಎಂದು ಫೇಸ್‌ಬುಕ್ ಎಂದಿಗೂ ವಿವರಿಸಲಿಲ್ಲ ಎಂದು ತಿವಾರಿ ಆರೋಪಿಸಿದರು.


ಇದನ್ನೂ ಓದಿ: ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಫೇಸ್‌ಬುಕ್‌ ಅನ್ನು ನಿಯಂತ್ರಿಸುತ್ತಿದ್ದಾರೆ: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...