Homeಮುಖಪುಟಫೇಸ್‌ಬುಕ್‌ ಇಂಡಿಯಾದ ಮುಖ್ಯಸ್ಥೆ ಅಂಖಿ ದಾಸ್ ವಿರುದ್ಧ ಎಫ್‌ಐಆರ್!

ಫೇಸ್‌ಬುಕ್‌ ಇಂಡಿಯಾದ ಮುಖ್ಯಸ್ಥೆ ಅಂಖಿ ದಾಸ್ ವಿರುದ್ಧ ಎಫ್‌ಐಆರ್!

ಲೋಕಸಭಾ ಚುನಾವಣೆಗೆ ಮುಂಚಿತವಾಗಿ ಹಲವಾರು ದ್ವೇಷ ಭಾಷಣ ಪೋಸ್ಟ್‌ಗಳನ್ನು ನಿರ್ಬಂಧಿಸದಂತೆ ಅಂಖಿ ದಾಸ್ ತನ್ನ ನೌಕರರ ಮೇಲೆ ಒತ್ತಡ ಹೇರಿದ್ದಾರೆ” ಎಂದು ತಿವಾರಿ ಆರೋಪಿಸಿದ್ದಾರೆ.

- Advertisement -
- Advertisement -

ಆಗಸ್ಟ್ 17 ರಂದು ಪತ್ರಕರ್ತ ಅವೇಶ್ ತಿವಾರಿ ಸಲ್ಲಿಸಿರುವ ದೂರಿನ ಆಧಾರದಲ್ಲಿ ರಾಯ್‌ಪುರ ಪೊಲೀಸರು ಫೇಸ್‌ಬುಕ್‌ ನ ಸಾರ್ವಜನಿಕ ನೀತಿ ನಿರ್ದೇಶಕರಾದ ಅಂಖಿ ದಾಸ್ ವಿರುದ್ಧ ಭಾರತೀಯ ದಂಡ ಸಂಹಿತೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಛತ್ತೀಸ್‌ಗಢ ಮೂಲದ ಪತ್ರಕರ್ತ ಅವೇಶ್ ತಿವಾರಿ ಅವರು ಸಲ್ಲಿಸಿರುವ ದೂರಿನಲ್ಲಿ, “ಲೋಕಸಭಾ ಚುನಾವಣೆಗೆ ಮುಂಚಿತವಾಗಿ ಹಲವಾರು ದ್ವೇಷ ಭಾಷಣ ಪೋಸ್ಟ್‌ಗಳನ್ನು ನಿರ್ಬಂಧಿಸದಂತೆ ಅಂಖಿ ದಾಸ್ ತನ್ನ ನೌಕರರ ಮೇಲೆ ಒತ್ತಡ ಹೇರಿದ್ದಾರೆ” ಎಂದು ಆರೋಪಿಸಿದ್ದಾರೆ.

ಇದು ‘ಭಾರತೀಯ ಮಾರುಕಟ್ಟೆಯಲ್ಲಿ ರಾಜಕೀಯ ಲಾಭ ಗಳಿಸಲು’ ಮಾಡಲಾದ ಅಪರಾಧ ಎಂದು ತಿವಾರಿ ಆರೋಪಿಸಿದ್ದಾರೆ.

ನಿನ್ನೆಯೇ ತನಗೆ ಜೀವ ಬೆದರಿಕೆ ಇದೆ ಎಂದು ಆರೋಪಿಸಿ ಅಂಖಿ ದಾಸ್ ಅವರ ದೂರಿನ ಆಧಾರದ ಮೇಲೆ ದೆಹಲಿ ಪೊಲೀಸರು ಪ್ರತ್ಯೇಕ ಎಫ್‌ಐಆರ್ ದಾಖಲಿಸಿದ್ದಾರೆ.

ತನಗೆ ಮಾರಣಾಂತಿಕ ಬೆದರಿಕೆ ಮತ್ತು ಆನ್‌ಲೈನ್ ಕಿರುಕುಳ ನೀಡಲಾಗುತ್ತಿದೆ ಎಂದು ದಾಸ್ ತನ್ನ ದೂರಿನಲ್ಲಿ ಆರೋಪಿಸಿದ್ದಾರೆ. ಆವೇಶ್ ತಿವಾರಿಯವರ ಹೆಸರನ್ನು ದೂರಿನಲ್ಲಿ ಉಲ್ಲೇಖಿಸಿದ್ದ ಅವರು, ಆಗಸ್ಟ್ 16 ರಂದು ತಿವಾರಿ ಫೇಸ್‌ಬುಕ್‌ನಲ್ಲಿ ಬೆದರಿಕೆ ಹಾಕಿದ್ದಾರೆ ಎಂದು ಹೇಳಿದ್ದರು.

ಸುದ್ದಿ ಚಾನೆಲ್ ಸ್ವರಾಜ್ ಎಕ್ಸ್‌ಪ್ರೆಸ್‌ನ ರಾಜ್ಯ ಬ್ಯೂರೋ ಮುಖ್ಯಸ್ಥರಾಗಿರುವ ಛತ್ತೀಸ್‌ಗಢ ಮೂಲದ ಪತ್ರಕರ್ತ ತಿವಾರಿ ಈ ಆರೋಪಗಳನ್ನು ನಿರಾಕರಿಸಿದ್ದಾರೆ.

ಎರಡೂ ಎಫ್‌ಐಆರ್‌ಗಳು ಅಮೆರಿಕ ವಾಲ್‌ಸ್ಟ್ರೀಟ್‌ ಜರ್ನಲ್ ಪ್ರಕಟಿಸಿದ ಫೇಸ್‌ಬುಕ್‌ ಮತ್ತು ಬಿಜೆಪಿ ನಂಟು ವರದಿಯ ನಂತರದ ಬೆಳವಣಿಗೆಗಳಾಗಿವೆ.

ತಿವಾರಿ ದೂರಿನ ಎಫ್‌ಐಆರ್‌ನಲ್ಲಿ ಇತರ ಇಬ್ಬರು ಫೇಸ್‌ಬುಕ್ ಬಳಕೆದಾರರಾದ ಛತ್ತೀಸ್‌ಗಢ ನಿವಾಸಿ ವಿವೇಕ್ ಸಿನ್ಹಾ ಮತ್ತು ಇಂದೋರ್ ನಿವಾಸಿ ರಾಮ್ ಸಾಹು ಅವರನ್ನೂ ಹೆಸರಿಸಲಾಗಿದೆ. ಸಿನ್ಹಾ ಮತ್ತು ಸಾಹು ಸೇರಿದಂತೆ ಅಂಖಿ ದಾಸ್  “ಹಿಂದೂ ಮತ್ತು ಮುಸ್ಲಿಂ ಸಮುದಾಯಗಳ ನಡುವೆ ದ್ವೇಷವನ್ನು ಉಂಟುಮಾಡುವ ಉದ್ದೇಶದಿಂದ ವಿಷಯವನ್ನು ಪ್ರಕಟಿಸಲು ಮತ್ತು ಪ್ರಸಾರ ಮಾಡಲು ಫೇಸ್‌ಬುಕ್ ಅನ್ನು ಬಳಸಿದ್ದಾರೆ” ಎಂದು ತಿವಾರಿ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.

ಟಿ ರಾಜಾ ಸಿಂಗ್, ಅನಂತ್‌ಕುಮಾರ್ ಹೆಗ್ಡೆ ಮತ್ತು ಕಪಿಲ್ ಮಿಶ್ರಾ ಸೇರಿದಂತೆ ಹಲವಾರು ಬಿಜೆಪಿ ನಾಯಕರ ಮೇಲೆ ದ್ವೇಷ ಭಾಷಣ ನಿರ್ಬಂಧವನ್ನು ಅನ್ವಯಿಸದಂತೆ ಅಂಖಿ ದಾಸ್ ಫೇಸ್‌ಬುಕ್‌ನ್ನು ನಿರ್ಬಂಧಿಸಿದ್ದಾರೆ ಎಂದು ಅಮೇರಿಕದ ಪತ್ರಿಕೆ ವರದಿ ಮಾಡಿದ ನಂತರ ಎರಡೂ ಎಫ್‌ಐಆರ್‌ಗಳು ದಾಖಲಾಗಿವೆ.

ಫೇಸ್‌ಬುಕ್‌ನ ಕಟೆಂಟ್‌ ಪಾಲಿಸಿ ನಿಯಮಗಳು ಆಡಳಿತರೂಢ ಬಿಜೆಪಿ ಪರವಾಗಿವೆ. ಬಿಜೆಪಿ ಮತ್ತು ಹಿಂದೂತ್ವ ನಾಯಕರು ದ್ವೇಷ ಭಾಷಣಗಳು ತನ್ನ ಸಂಸ್ಥೆಯ ನಿಯಮಗಳನ್ನು ಉಲ್ಲಂಘಿಸಿದರೂ ಕೂಡ ಫೇಸ್ ಬುಕ್ ಕ್ರಮ ತೆಗೆದುಕೊಳ್ಳುತ್ತಿಲ್ಲ. ಬಿಜೆಪಿ ಕಾರ್ಯಕರ್ತರ ನಿಯಮ ಉಲ್ಲಂಘನೆಗಳಿಗೆ ಶಿಕ್ಷೆ ನೀಡುವುದು ಅಥವಾ ಪ್ರಶ್ನಿಸುವುದು “ದೇಶದ ಕಂಪನಿಯ ವ್ಯವಹಾರ ಭವಿಷ್ಯವನ್ನು ಹಾನಿಗೊಳಿಸುತ್ತದೆ” ಎಂದು ಫೇಸ್‌ಬುಕ್‌ನ ಹಿರಿಯ ಅಧಿಕಾರಿಗಳ ಹೇಳಿಕೆ ಉಲ್ಲೇಖಿಸಿ ವಾಲ್‌ಸ್ಟ್ರೀಟ್‌ ಜರ್ನಲ್ ವಿಶೇಷ ವರದಿ ಮಾಡಿತ್ತು.

ನಾನು ಎಂದಿಗೂ ದಾಸ್‌ ಅವರನ್ನು ಸಂಪರ್ಕಿಸಿಲ್ಲ ಅಥವಾ ಸಂವಹನ ನಡೆಸಿಲ್ಲ: ತಿವಾರಿ

ನಾನು ಎಂದಿಗೂ ಅಂಖಿ ದಾಸ್‌ ಅವರನ್ನು ಸಂಪರ್ಕಿಸಿಲ್ಲ ಮತ್ತು ಅವರೊಂದಿಗೆ ಸಂವಹನ ನಡೆಸಿಲ್ಲ. ಅವರಿಗೆ ಬೆದರಿಕೆ ಹಾಕಿರುವುದು ಸುಳ್ಳು ಸುದ್ದಿ ಎಂದು ಪತ್ರಕರ್ತ ತಿವಾರಿ ತಿಳಿಸಿದ್ದಾರೆ. ದೂರಿನಲ್ಲಿ ನನ್ನನ್ನು ಏಕೆ ಹೆಸರಿಸಲಾಗಿದೆ ಎಂದು ನನಗೆ ತಿಳಿದಿಲ್ಲ. ನಾನು ಸಹೋದ್ಯೋಗಿಗಳಿಂದ ಇದರ ಬಗ್ಗೆ ತಿಳಿದುಕೊಂಡೆ. ಇದು ಬಹಳ ಮುಖ್ಯವಾದ ವಿಷಯವಾಗಿದೆ. ವಾಸ್ತವದಲ್ಲಿ ವಾಲ್‌ಸ್ಟ್ರೀಟ್ ಜರ್ನಲ್ ಪ್ರಕಟಿಸಿದ ವರದಿಯನ್ನು ನಾನು ಸರಳವಾಗಿ ಪೋಸ್ಟ್ ಮಾಡಿದ್ದೇನೆ ಎಂದು ತಿವಾರಿ ತಿಳಿಸಿದ್ದಾರೆ.

ಅಂಖಿ ದಾಸ್ ಕುರಿತು ಮಾತನಾಡಿದ್ದಕ್ಕಾಗಿ, ಸಾಹು ಮತ್ತು ಸಿನ್ಹಾ ನನಗೆ ಮಾರಣಾಂತಿಕ ಬೆದರಿಕೆಗಳನ್ನು ಹಾಕಿದ್ದಾರೆ ಎಂದು ತಿವಾರಿ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.

ಪುಲ್ವಾಮಾ, ಸಿಎಎ-ಎನ್‌ಆರ್‌ಸಿ ಕುರಿತು ಫೇಸ್‌ಬುಕ್ ನನ್ನ ಪೋಸ್ಟ್‌ಗಳನ್ನು ನಿರ್ಬಂಧಿಸಿದೆ ಎಂದು ತಿವಾರಿ ಹೇಳಿದ್ದಾರೆ. ಫೆಬ್ರವರಿ 2019 ರಿಂದ ಸರ್ಕಾರದ ನೀತಿಗಳನ್ನು ಟೀಕಿಸುವ ಹಲವಾರು ಪೋಸ್ಟ್‌ಗಳನ್ನು ಸೂಕ್ತ ವಿವರಣೆಯಿಲ್ಲದೆ ಫೇಸ್‌ಬುಕ್ ತೆಗೆದುಹಾಕಿದೆ ಎಂದು ಅವರು ಆರೋಪಿಸಿದರು.

25 ವರ್ಷಗಳಿಂದ ಪತ್ರಕರ್ತನಾಗಿರುವ ನಾನು ಪ್ರಶ್ನೆಗಳನ್ನು ಕೇಳುವುದು ನನ್ನ ಕರ್ತವ್ಯ. ಆದರೆ ಪುಲ್ವಾಮಾ ದಾಳಿ, ಸಿಎಎ-ಎನ್‌ಆರ್‌ಸಿ ಮತ್ತು ಛತ್ತೀಸ್‌ಗಢದ ಬುಡಕಟ್ಟು ಸಮಸ್ಯೆಗಳು ಸೇರಿದಂತೆ ನನ್ನ ಹಲವಾರು ಪೋಸ್ಟ್‌ಗಳನ್ನು ಈ ಹಿಂದೆ ಫೇಸ್‌ಬುಕ್ ನಿರ್ಬಂಧಿಸಿದೆ ಎಂದು ತಿವಾರಿ ದೂರಿದ್ದಾರೆ.

ಭಿಲೈ ಅವರ ಬುಡಕಟ್ಟು ಆಂದೋಲನದ ಕುರಿತು ವೈರಲ್ ಆಗಿದ್ದ ನನ್ನ ಲೈವ್ ವೀಡಿಯೊ ಒಂದನ್ನು ಇದ್ದಕ್ಕಿದ್ದಂತೆ ನಿರ್ಬಂಧಿಸಲಾಗಿದೆ. ಇದು ಫೇಸ್‌ಬುಕ್ ಮಾರ್ಗಸೂಚಿಗಳಿಗೆ ವಿರುದ್ಧವಾಗಿದೆ ಎಂದು ನನಗೆ ತಿಳಿಯಿತು. ಆದರೆ ನಾನು ಏನು ತಪ್ಪು ಮಾಡಿದೆ ಎಂದು ಫೇಸ್‌ಬುಕ್ ಎಂದಿಗೂ ವಿವರಿಸಲಿಲ್ಲ ಎಂದು ತಿವಾರಿ ಆರೋಪಿಸಿದರು.


ಇದನ್ನೂ ಓದಿ: ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಫೇಸ್‌ಬುಕ್‌ ಅನ್ನು ನಿಯಂತ್ರಿಸುತ್ತಿದ್ದಾರೆ: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...