Homeಮುಖಪುಟಫೇಸ್‌ಬುಕ್‌ ಇಂಡಿಯಾದ ಮುಖ್ಯಸ್ಥೆ ಅಂಖಿ ದಾಸ್ ವಿರುದ್ಧ ಎಫ್‌ಐಆರ್!

ಫೇಸ್‌ಬುಕ್‌ ಇಂಡಿಯಾದ ಮುಖ್ಯಸ್ಥೆ ಅಂಖಿ ದಾಸ್ ವಿರುದ್ಧ ಎಫ್‌ಐಆರ್!

ಲೋಕಸಭಾ ಚುನಾವಣೆಗೆ ಮುಂಚಿತವಾಗಿ ಹಲವಾರು ದ್ವೇಷ ಭಾಷಣ ಪೋಸ್ಟ್‌ಗಳನ್ನು ನಿರ್ಬಂಧಿಸದಂತೆ ಅಂಖಿ ದಾಸ್ ತನ್ನ ನೌಕರರ ಮೇಲೆ ಒತ್ತಡ ಹೇರಿದ್ದಾರೆ” ಎಂದು ತಿವಾರಿ ಆರೋಪಿಸಿದ್ದಾರೆ.

- Advertisement -
- Advertisement -

ಆಗಸ್ಟ್ 17 ರಂದು ಪತ್ರಕರ್ತ ಅವೇಶ್ ತಿವಾರಿ ಸಲ್ಲಿಸಿರುವ ದೂರಿನ ಆಧಾರದಲ್ಲಿ ರಾಯ್‌ಪುರ ಪೊಲೀಸರು ಫೇಸ್‌ಬುಕ್‌ ನ ಸಾರ್ವಜನಿಕ ನೀತಿ ನಿರ್ದೇಶಕರಾದ ಅಂಖಿ ದಾಸ್ ವಿರುದ್ಧ ಭಾರತೀಯ ದಂಡ ಸಂಹಿತೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಛತ್ತೀಸ್‌ಗಢ ಮೂಲದ ಪತ್ರಕರ್ತ ಅವೇಶ್ ತಿವಾರಿ ಅವರು ಸಲ್ಲಿಸಿರುವ ದೂರಿನಲ್ಲಿ, “ಲೋಕಸಭಾ ಚುನಾವಣೆಗೆ ಮುಂಚಿತವಾಗಿ ಹಲವಾರು ದ್ವೇಷ ಭಾಷಣ ಪೋಸ್ಟ್‌ಗಳನ್ನು ನಿರ್ಬಂಧಿಸದಂತೆ ಅಂಖಿ ದಾಸ್ ತನ್ನ ನೌಕರರ ಮೇಲೆ ಒತ್ತಡ ಹೇರಿದ್ದಾರೆ” ಎಂದು ಆರೋಪಿಸಿದ್ದಾರೆ.

ಇದು ‘ಭಾರತೀಯ ಮಾರುಕಟ್ಟೆಯಲ್ಲಿ ರಾಜಕೀಯ ಲಾಭ ಗಳಿಸಲು’ ಮಾಡಲಾದ ಅಪರಾಧ ಎಂದು ತಿವಾರಿ ಆರೋಪಿಸಿದ್ದಾರೆ.

ನಿನ್ನೆಯೇ ತನಗೆ ಜೀವ ಬೆದರಿಕೆ ಇದೆ ಎಂದು ಆರೋಪಿಸಿ ಅಂಖಿ ದಾಸ್ ಅವರ ದೂರಿನ ಆಧಾರದ ಮೇಲೆ ದೆಹಲಿ ಪೊಲೀಸರು ಪ್ರತ್ಯೇಕ ಎಫ್‌ಐಆರ್ ದಾಖಲಿಸಿದ್ದಾರೆ.

ತನಗೆ ಮಾರಣಾಂತಿಕ ಬೆದರಿಕೆ ಮತ್ತು ಆನ್‌ಲೈನ್ ಕಿರುಕುಳ ನೀಡಲಾಗುತ್ತಿದೆ ಎಂದು ದಾಸ್ ತನ್ನ ದೂರಿನಲ್ಲಿ ಆರೋಪಿಸಿದ್ದಾರೆ. ಆವೇಶ್ ತಿವಾರಿಯವರ ಹೆಸರನ್ನು ದೂರಿನಲ್ಲಿ ಉಲ್ಲೇಖಿಸಿದ್ದ ಅವರು, ಆಗಸ್ಟ್ 16 ರಂದು ತಿವಾರಿ ಫೇಸ್‌ಬುಕ್‌ನಲ್ಲಿ ಬೆದರಿಕೆ ಹಾಕಿದ್ದಾರೆ ಎಂದು ಹೇಳಿದ್ದರು.

ಸುದ್ದಿ ಚಾನೆಲ್ ಸ್ವರಾಜ್ ಎಕ್ಸ್‌ಪ್ರೆಸ್‌ನ ರಾಜ್ಯ ಬ್ಯೂರೋ ಮುಖ್ಯಸ್ಥರಾಗಿರುವ ಛತ್ತೀಸ್‌ಗಢ ಮೂಲದ ಪತ್ರಕರ್ತ ತಿವಾರಿ ಈ ಆರೋಪಗಳನ್ನು ನಿರಾಕರಿಸಿದ್ದಾರೆ.

ಎರಡೂ ಎಫ್‌ಐಆರ್‌ಗಳು ಅಮೆರಿಕ ವಾಲ್‌ಸ್ಟ್ರೀಟ್‌ ಜರ್ನಲ್ ಪ್ರಕಟಿಸಿದ ಫೇಸ್‌ಬುಕ್‌ ಮತ್ತು ಬಿಜೆಪಿ ನಂಟು ವರದಿಯ ನಂತರದ ಬೆಳವಣಿಗೆಗಳಾಗಿವೆ.

ತಿವಾರಿ ದೂರಿನ ಎಫ್‌ಐಆರ್‌ನಲ್ಲಿ ಇತರ ಇಬ್ಬರು ಫೇಸ್‌ಬುಕ್ ಬಳಕೆದಾರರಾದ ಛತ್ತೀಸ್‌ಗಢ ನಿವಾಸಿ ವಿವೇಕ್ ಸಿನ್ಹಾ ಮತ್ತು ಇಂದೋರ್ ನಿವಾಸಿ ರಾಮ್ ಸಾಹು ಅವರನ್ನೂ ಹೆಸರಿಸಲಾಗಿದೆ. ಸಿನ್ಹಾ ಮತ್ತು ಸಾಹು ಸೇರಿದಂತೆ ಅಂಖಿ ದಾಸ್  “ಹಿಂದೂ ಮತ್ತು ಮುಸ್ಲಿಂ ಸಮುದಾಯಗಳ ನಡುವೆ ದ್ವೇಷವನ್ನು ಉಂಟುಮಾಡುವ ಉದ್ದೇಶದಿಂದ ವಿಷಯವನ್ನು ಪ್ರಕಟಿಸಲು ಮತ್ತು ಪ್ರಸಾರ ಮಾಡಲು ಫೇಸ್‌ಬುಕ್ ಅನ್ನು ಬಳಸಿದ್ದಾರೆ” ಎಂದು ತಿವಾರಿ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.

ಟಿ ರಾಜಾ ಸಿಂಗ್, ಅನಂತ್‌ಕುಮಾರ್ ಹೆಗ್ಡೆ ಮತ್ತು ಕಪಿಲ್ ಮಿಶ್ರಾ ಸೇರಿದಂತೆ ಹಲವಾರು ಬಿಜೆಪಿ ನಾಯಕರ ಮೇಲೆ ದ್ವೇಷ ಭಾಷಣ ನಿರ್ಬಂಧವನ್ನು ಅನ್ವಯಿಸದಂತೆ ಅಂಖಿ ದಾಸ್ ಫೇಸ್‌ಬುಕ್‌ನ್ನು ನಿರ್ಬಂಧಿಸಿದ್ದಾರೆ ಎಂದು ಅಮೇರಿಕದ ಪತ್ರಿಕೆ ವರದಿ ಮಾಡಿದ ನಂತರ ಎರಡೂ ಎಫ್‌ಐಆರ್‌ಗಳು ದಾಖಲಾಗಿವೆ.

ಫೇಸ್‌ಬುಕ್‌ನ ಕಟೆಂಟ್‌ ಪಾಲಿಸಿ ನಿಯಮಗಳು ಆಡಳಿತರೂಢ ಬಿಜೆಪಿ ಪರವಾಗಿವೆ. ಬಿಜೆಪಿ ಮತ್ತು ಹಿಂದೂತ್ವ ನಾಯಕರು ದ್ವೇಷ ಭಾಷಣಗಳು ತನ್ನ ಸಂಸ್ಥೆಯ ನಿಯಮಗಳನ್ನು ಉಲ್ಲಂಘಿಸಿದರೂ ಕೂಡ ಫೇಸ್ ಬುಕ್ ಕ್ರಮ ತೆಗೆದುಕೊಳ್ಳುತ್ತಿಲ್ಲ. ಬಿಜೆಪಿ ಕಾರ್ಯಕರ್ತರ ನಿಯಮ ಉಲ್ಲಂಘನೆಗಳಿಗೆ ಶಿಕ್ಷೆ ನೀಡುವುದು ಅಥವಾ ಪ್ರಶ್ನಿಸುವುದು “ದೇಶದ ಕಂಪನಿಯ ವ್ಯವಹಾರ ಭವಿಷ್ಯವನ್ನು ಹಾನಿಗೊಳಿಸುತ್ತದೆ” ಎಂದು ಫೇಸ್‌ಬುಕ್‌ನ ಹಿರಿಯ ಅಧಿಕಾರಿಗಳ ಹೇಳಿಕೆ ಉಲ್ಲೇಖಿಸಿ ವಾಲ್‌ಸ್ಟ್ರೀಟ್‌ ಜರ್ನಲ್ ವಿಶೇಷ ವರದಿ ಮಾಡಿತ್ತು.

ನಾನು ಎಂದಿಗೂ ದಾಸ್‌ ಅವರನ್ನು ಸಂಪರ್ಕಿಸಿಲ್ಲ ಅಥವಾ ಸಂವಹನ ನಡೆಸಿಲ್ಲ: ತಿವಾರಿ

ನಾನು ಎಂದಿಗೂ ಅಂಖಿ ದಾಸ್‌ ಅವರನ್ನು ಸಂಪರ್ಕಿಸಿಲ್ಲ ಮತ್ತು ಅವರೊಂದಿಗೆ ಸಂವಹನ ನಡೆಸಿಲ್ಲ. ಅವರಿಗೆ ಬೆದರಿಕೆ ಹಾಕಿರುವುದು ಸುಳ್ಳು ಸುದ್ದಿ ಎಂದು ಪತ್ರಕರ್ತ ತಿವಾರಿ ತಿಳಿಸಿದ್ದಾರೆ. ದೂರಿನಲ್ಲಿ ನನ್ನನ್ನು ಏಕೆ ಹೆಸರಿಸಲಾಗಿದೆ ಎಂದು ನನಗೆ ತಿಳಿದಿಲ್ಲ. ನಾನು ಸಹೋದ್ಯೋಗಿಗಳಿಂದ ಇದರ ಬಗ್ಗೆ ತಿಳಿದುಕೊಂಡೆ. ಇದು ಬಹಳ ಮುಖ್ಯವಾದ ವಿಷಯವಾಗಿದೆ. ವಾಸ್ತವದಲ್ಲಿ ವಾಲ್‌ಸ್ಟ್ರೀಟ್ ಜರ್ನಲ್ ಪ್ರಕಟಿಸಿದ ವರದಿಯನ್ನು ನಾನು ಸರಳವಾಗಿ ಪೋಸ್ಟ್ ಮಾಡಿದ್ದೇನೆ ಎಂದು ತಿವಾರಿ ತಿಳಿಸಿದ್ದಾರೆ.

ಅಂಖಿ ದಾಸ್ ಕುರಿತು ಮಾತನಾಡಿದ್ದಕ್ಕಾಗಿ, ಸಾಹು ಮತ್ತು ಸಿನ್ಹಾ ನನಗೆ ಮಾರಣಾಂತಿಕ ಬೆದರಿಕೆಗಳನ್ನು ಹಾಕಿದ್ದಾರೆ ಎಂದು ತಿವಾರಿ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.

ಪುಲ್ವಾಮಾ, ಸಿಎಎ-ಎನ್‌ಆರ್‌ಸಿ ಕುರಿತು ಫೇಸ್‌ಬುಕ್ ನನ್ನ ಪೋಸ್ಟ್‌ಗಳನ್ನು ನಿರ್ಬಂಧಿಸಿದೆ ಎಂದು ತಿವಾರಿ ಹೇಳಿದ್ದಾರೆ. ಫೆಬ್ರವರಿ 2019 ರಿಂದ ಸರ್ಕಾರದ ನೀತಿಗಳನ್ನು ಟೀಕಿಸುವ ಹಲವಾರು ಪೋಸ್ಟ್‌ಗಳನ್ನು ಸೂಕ್ತ ವಿವರಣೆಯಿಲ್ಲದೆ ಫೇಸ್‌ಬುಕ್ ತೆಗೆದುಹಾಕಿದೆ ಎಂದು ಅವರು ಆರೋಪಿಸಿದರು.

25 ವರ್ಷಗಳಿಂದ ಪತ್ರಕರ್ತನಾಗಿರುವ ನಾನು ಪ್ರಶ್ನೆಗಳನ್ನು ಕೇಳುವುದು ನನ್ನ ಕರ್ತವ್ಯ. ಆದರೆ ಪುಲ್ವಾಮಾ ದಾಳಿ, ಸಿಎಎ-ಎನ್‌ಆರ್‌ಸಿ ಮತ್ತು ಛತ್ತೀಸ್‌ಗಢದ ಬುಡಕಟ್ಟು ಸಮಸ್ಯೆಗಳು ಸೇರಿದಂತೆ ನನ್ನ ಹಲವಾರು ಪೋಸ್ಟ್‌ಗಳನ್ನು ಈ ಹಿಂದೆ ಫೇಸ್‌ಬುಕ್ ನಿರ್ಬಂಧಿಸಿದೆ ಎಂದು ತಿವಾರಿ ದೂರಿದ್ದಾರೆ.

ಭಿಲೈ ಅವರ ಬುಡಕಟ್ಟು ಆಂದೋಲನದ ಕುರಿತು ವೈರಲ್ ಆಗಿದ್ದ ನನ್ನ ಲೈವ್ ವೀಡಿಯೊ ಒಂದನ್ನು ಇದ್ದಕ್ಕಿದ್ದಂತೆ ನಿರ್ಬಂಧಿಸಲಾಗಿದೆ. ಇದು ಫೇಸ್‌ಬುಕ್ ಮಾರ್ಗಸೂಚಿಗಳಿಗೆ ವಿರುದ್ಧವಾಗಿದೆ ಎಂದು ನನಗೆ ತಿಳಿಯಿತು. ಆದರೆ ನಾನು ಏನು ತಪ್ಪು ಮಾಡಿದೆ ಎಂದು ಫೇಸ್‌ಬುಕ್ ಎಂದಿಗೂ ವಿವರಿಸಲಿಲ್ಲ ಎಂದು ತಿವಾರಿ ಆರೋಪಿಸಿದರು.


ಇದನ್ನೂ ಓದಿ: ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಫೇಸ್‌ಬುಕ್‌ ಅನ್ನು ನಿಯಂತ್ರಿಸುತ್ತಿದ್ದಾರೆ: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...