Homeಮುಖಪುಟಮಾಜಿ ಸಿಎಂ ಸೂಚನೆ ಮೇರೆಗೆ ನನಗೆ ಚಿತ್ರಹಿಂಸೆ ನೀಡಲಾಗಿತ್ತು ಎಂದ ಟಿಡಿಪಿ ಶಾಸಕ: ಜಗನ್ ಮೋಹನ್...

ಮಾಜಿ ಸಿಎಂ ಸೂಚನೆ ಮೇರೆಗೆ ನನಗೆ ಚಿತ್ರಹಿಂಸೆ ನೀಡಲಾಗಿತ್ತು ಎಂದ ಟಿಡಿಪಿ ಶಾಸಕ: ಜಗನ್ ಮೋಹನ್ ರೆಡ್ಡಿ, ಇಬ್ಬರು ಐಪಿಎಸ್ ಅಧಿಕಾರಿಗಳ ವಿರುದ್ಧ ಎಫ್‌ಐಆರ್

- Advertisement -
- Advertisement -

ಟಿಡಿಪಿ ಶಾಸಕ ರಘು ರಾಮ ಕೃಷ್ಣಂ ರಾಜು ಅವರು ನೀಡಿದ ದೂರಿನ ಆಧಾರದ ಮೇಲೆ ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ವೈಎಸ್‌ಆರ್‌ ಕಾಂಗ್ರೆಸ್ ಅಧ್ಯಕ್ಷ ವೈಎಸ್ ಜಗನ್ ಮೋಹನ್ ರೆಡ್ಡಿ ಮತ್ತು ಇಬ್ಬರು ಐಪಿಎಸ್ ಅಧಿಕಾರಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಜಗನ್ ಮೋಹನ್ ರೆಡ್ಡಿ ಜೊತೆ ಭಿನ್ನಾಭಿಪ್ರಾಯ ಹೊಂದುವ ಮೊದಲು ರಾಜು ಅವರು ವೈಎಸ್‌ಆರ್‌ ಕಾಂಗ್ರೆಸ್ ಪಕ್ಷದಿಂದ ನರಸಪುರಂನ ಸಂಸದರಾಗಿದ್ದರು.

“ಜಗನ್ ಮೋಹನ್ ರೆಡ್ಡಿ ಸಿಎಂ ಆಗಿದ್ದಾಗ ಆಂಧ್ರ ಪ್ರದೇಶದ ಸಿಐಡಿ ಅಧಿಕಾರಿಗಳು ಹೈದರಾಬಾದ್‌ನಿಂದ ಅಕ್ರಮವಾಗಿ ನನ್ನನ್ನು ಬಂಧಿಸಿದ್ದರು. ಟ್ರಾನ್ಸಿಟ್ ಅರೆಸ್ಟ್ ವಾರೆಂಟ್ ಪಡೆಯಲು ಹೈದರಾಬಾದ್‌ನ ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸದೆ ನನ್ನನ್ನು ನೇರವಾಗಿ ಆಂಧ್ರಕ್ಕೆ ಕರೆ ತಂದಿದ್ದರು” ಎಂಬ ರಾಜು ಅವರ ದೂರಿನ ಆಧಾರದ ಮೇಲೆ ಗುಂಟೂರಿನ ನಗರಂಪಲೆಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೇ 14,2021 ರಂದು, ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಜಗನ್‌ ಮೋಹನ್ ರೆಡ್ಡಿಗೆ ನೀಡಲಾಗಿರುವ ಜಾಮೀನು ರದ್ದುಗೊಳಿಸಬೇಕು ಎಂದು ಹೈದರಾಬಾದ್‌ನ ಸಿಬಿಐ ವಿಶೇಷ ನ್ಯಾಯಾಲಯಕ್ಕೆ ರಾಜು ಮನವಿ ಸಲ್ಲಿಸಿದ್ದರು. ಆ ಬಳಿಕ ಅವರನ್ನು ದೇಶದ್ರೋಹದ ಆರೋಪದ ಮೇಲೆ ಆಂಧ್ರ ಪ್ರದೇಶದ ಸಿಐಡಿ  ಬಂಧಿಸಿತ್ತು.

ಐಪಿಸಿ ಸೆಕ್ಷನ್ 124 ಎ (ದೇಶದ್ರೋಹ), 153 ಎ (ವಿವಿಧ ಗುಂಪುಗಳ ನಡುವೆ ದ್ವೇಷ ಉತ್ತೇಜಿಸುವುದು), ಮತ್ತು 505 (ಸಾರ್ವಜನಿಕ ದುರ್ವರ್ತನೆ) ಅಡಿಯಲ್ಲಿ ನೋಟಿಸ್ ನೀಡಿದ ನಂತರ ಸಿಐಡಿ ಅಧಿಕಾರಿಗಳು ರಾಜು ಅವರನ್ನು ವಶಕ್ಕೆ ತೆಗೆದುಕೊಂಡಿದ್ದರು. ಬಳಿಕ, ಅವರು ಸುಪ್ರೀಂ ಕೋರ್ಟ್‌ನಿಂದ ಜಾಮೀನು ಪಡೆದಿದ್ದರು.

“ತನ್ನನ್ನು ಸಿಐಡಿ ಕಚೇರಿಗೆ ಕರೆದೊಯ್ದ ನಂತರ ಸಿಐಡಿ ಮಾಜಿ ಮುಖ್ಯಸ್ಥ ಪಿ ವಿ ಸುನೀಲ್ ಕುಮಾರ್ ಮತ್ತು ಮಾಜಿ ಗುಪ್ತಚರ ಐಜಿ ಪಿಎಸ್ಆರ್ ಆಂಜನೇಯುಲು ಮತ್ತು ಇತರ ಅಧಿಕಾರಿಗಳು ಹಲ್ಲೆ ನಡೆಸಿದ್ದರು. ಬೆಲ್ಟ್ ಮತ್ತು ಲಾಠಿಯಿಂದ ಥಳಿಸಿದ್ದರು. ಹೃದಯ ಸಂಬಂಧಿ ಖಾಯಿಲೆಯ ಔಷಧ ತೆಗೆದುಕೊಳ್ಳದಂತೆ ತಡೆದಿದ್ದರು” ಎಂದು ರಾಜು ದೂರಿನಲ್ಲಿ ಆರೋಪಿಸಿದ್ದಾರೆ. ನಾಲ್ಕು ತಿಂಗಳ ಹಿಂದೆ ಅವರು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು.

“ಅಂದಿನ ಸಿಎಂ ಜಗನ್‌ ಅವರ ಮಾತಿಗೆ ತಕ್ಕಂತೆ ಅಧಿಕಾರಿಗಳು ನಡೆದುಕೊಳ್ಳುತ್ತಿದ್ದರು. ನನ್ನ ಮೊಬೈಲ್ ಪಾಸ್‌ವರ್ಡ್ ಹೇಳುವವರೆಗೆ ಯಾರೋ ಒಬ್ಬರು ನನ್ನ ಎದೆ ಮೇಲೆ ಕುಳಿತಿದ್ದರು. ಜಗನ್ ಅವರನ್ನು ಟೀಕಿಸಲು ಮುಂದಾದರೆ ಭೀಕರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಬೆದರಿಕೆ ಹಾಕಿದ್ದರು” ಎಂದು ರಾಜು ಆರೋಪಿಸಿದ್ದಾರೆ.

ರಾಜು ನೀಡಿರುವ ದೂರಿನ ಆಧಾರದ ಮೇಲೆ ಪೊಲೀಸರು ಮಾಜಿ ಸಿಎಂ ಜಗನ್ ಮೋಹನ್ ರೆಡ್ಡಿ ಮತ್ತು ಇಬ್ಬರು ಸಿಐಡಿ ಅಧಿಕಾರಿಗಳ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.

ಇದನ್ನೂ ಓದಿ : ‘ವಿವಾದಾತ್ಮಕ ಭಾಗವನ್ನು ಪಠ್ಯದಲ್ಲಿ ಸೇರಿಸುವ ಪ್ರಶ್ನೆಯೇ ಇಲ್ಲ..’; ಮನುಸ್ಮೃತಿ ವಿವಾದದಕ್ಕೆ ಪ್ರಧಾನ್ ಪ್ರತಿಕ್ರಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...