Homeಮುಖಪುಟ"ಪ್ರತಿಭಟನೆಯ ವರದಿ ಮಾಡುವುದು ಅಪರಾಧವಲ್ಲ": ಪತ್ರಕರ್ತೆ ವಿರುದ್ಧ ಎಫ್‌ಐಆರ್‌ಗೆ ಎಡಿಟರ್ಸ್ ಗಿಲ್ಡ್ ಖಂಡನೆ

“ಪ್ರತಿಭಟನೆಯ ವರದಿ ಮಾಡುವುದು ಅಪರಾಧವಲ್ಲ”: ಪತ್ರಕರ್ತೆ ವಿರುದ್ಧ ಎಫ್‌ಐಆರ್‌ಗೆ ಎಡಿಟರ್ಸ್ ಗಿಲ್ಡ್ ಖಂಡನೆ

- Advertisement -
- Advertisement -

ಎರ್ನಾಕುಲಂ ಜಿಲ್ಲೆಯ ಒಡಕ್ಕಲಿ ಗ್ರಾಮದ ಬಳಿ ಡಿಸೆಂಬರ್ 10ರಂದು ನಡೆದ ವಿದ್ಯಾರ್ಥಿ ಸಂಘಟದ ಪ್ರತಿಭಟನೆಗೆ ಸಂಬಂಧಿಸಿದಂತೆ ಕೇರಳದ ದೂರದರ್ಶನ ಸುದ್ದಿ ವಾಹಿನಿ 24 ನ್ಯೂಸ್‌ನ ವರದಿಗಾರ್ತಿ ವಿರುದ್ಧದ ಪೊಲೀಸ್ ಕ್ರಮವನ್ನು ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ ಶುಕ್ರವಾರ ಖಂಡಿಸಿದೆ.

ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮತ್ತು ಅವರ ಸಂಪುಟದ ಕೆಲವು ಸದಸ್ಯರು ಪ್ರಯಾಣಿಸುತ್ತಿದ್ದ ಬಸ್‌ಗೆ ಶೂ ಎಸೆದ ಆರೋಪದ ಮೇಲೆ ಕಾಂಗ್ರೆಸ್‌ನ ವಿದ್ಯಾರ್ಥಿ ಘಟಕವಾದ ಕೇರಳ ವಿದ್ಯಾರ್ಥಿ ಸಂಘದ ಕೆಲ ಸದಸ್ಯರು ಮತ್ತು ವರದಿಗಾರ್ತಿ ವಿನಿತಾ ವಿಜಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ವಿನಿತಾ ವಿರುದ್ಧ ಕ್ರಿಮಿನಲ್ ಪಿತೂರಿ ಪ್ರಕರಣ ದಾಖಲಿಸಲಾಗಿದ್ದು, ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ ಎಂದು ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

“ಹಿಂಸಾಚಾರವನ್ನು ಒಪ್ಪುವುದಿಲ್ಲ. ಆದರೆ, ವರದಿಗಾರ್ತಿ ವಿರುದ್ಧದ ಪೊಲೀಸ್ ಕ್ರಮವನ್ನು ಬಲವಾಗಿ ಖಂಡಿಸುತ್ತದೆ. ಪ್ರತಿಭಟನೆಗಳ ಕುರಿತು ಸುದ್ದಿ ಮಾಡುವುದು ಮಾಧ್ಯಮದ ಜವಾಬ್ದಾರಿ. ಅದು ಅಪರಾಧವಲ್ಲ. ಪ್ರತಿಭಟನಾ ಸ್ಥಳದಲ್ಲಿ ವರದಿಗಾರರು ಇದ್ದರೂ ಎಂಬ ಕಾರಣಕ್ಕೆ ಅಹಿತಕರ ಘಟನೆಗೆ ಅವರು ಸಹಭಾಗಿ ಎನ್ನಲು ಸಾಧ್ಯವಿಲ್ಲ” ಎಂದು ಎಡಿಟರ್ಸ್ ಗಿಲ್ಡ್ ಹೇಳಿದೆ.

“ತನ್ನ ವೃತ್ತಿಪರ ಕರ್ತವ್ಯವನ್ನು ನಿರ್ವಹಿಸಿ ವರದಿಗಾರ್ತಿ ವಿರುದ್ದ ಕ್ರಮ ಕೈಗೊಳ್ಳಬಾರದು. ಅವರ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ಹಿಂಪಡೆದು ಪತ್ರಿಕಾ ಸ್ವಾತಂತ್ರ್ಯವನ್ನು ಎತ್ತಿ ಹಿಡಿಯಬೇಕು” ಎಂದು ಆಗ್ರಹಿಸಿದೆ.

ಕೇರಳದ ಸರ್ಕಾರದ ‘ನವ ಕೇರಳ ಸದಸ್’ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸಿಎಂ ಪಿಣರಾಯಿ ವಿಜಯನ್ ನೇತೃತ್ವದ ಸಚಿವರ ತಂಡ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಶೂ ಎಸೆಯಲಾಗಿತ್ತು. ಒಂದು ಶೂ ಸಿಎಂ ಮತ್ತು ಸಚಿವರು ಇದ್ದ ಬಸ್‌ ಮೇಲೆ ಬಿದ್ದರೆ, ಮತ್ತೊಂದು ಬೆಂಗಾವಲು ವಾಹನ ವಿಂಡ್ ಶೀಲ್ಡ್‌ಗೆ ಬಿದ್ದಿತ್ತು ಎಂದು ದಿ ಹಿಂದೂ ವರದಿ ಮಾಡಿದೆ.

ಸಿಎಂ ಮತ್ತು ಸಚಿವರು ಇದ್ದ ಬಸ್‌ ಮೇಲೆ ಶೂ ಎಸೆಯುವ ಬಗ್ಗೆ ವರದಿಗಾರ್ತಿಗೆ ಮೊದಲೇ ಗೊತ್ತಿತ್ತು. ಆದರೂ ಆಕೆ ಆ ಬಗ್ಗೆ ಪೊಲೀಸರಿಗೆ ತಿಳಿಸಿಲ್ಲ ಎಂದು ಆರೋಪಿಸಿ ಪ್ರಕರಣ ದಾಖಲಿಸಲಾಗಿದೆ.

ಪತ್ರಕರ್ತೆ ಸೇರಿದಂತೆ ಹೋರಟಗಾರರ ವಿರುದ್ದ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 283, 353, 34, 308ಗಳಡಿ ಪ್ರಕರಣ ದಾಖಲಾಗಿದೆ. ಪ್ರಸ್ತುತ ಪೆರುಂಬವೂರ್‌ನ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಆರೋಪಿಗಳಿಗೆ ಜಾಮೀನು ನಿಡಿದೆ. ಆದರೆ, ಸೆಕ್ಷನ್ 308 ನ್ನು ಯಾಕೆ ಹಾಕಲಾಗಿದೆ ಎಂದು ಪೊಲೀಸರುನ್ನು ಪ್ರಶ್ನಿಸಿದೆ ಎಂದು ದಿ ಹಿಂದೂ ವರದಿ ತಿಳಿಸಿದೆ.

ಇದನ್ನೂ ಓದಿ: ಕೇರಳ ವಿವಿ ಸೆನೆಟ್‌ಗೆ ರಾಜ್ಯಪಾಲರಿಂದ ನಾಮನಿರ್ದೇಶನಗೊಂಡಿದ್ದ ABVP ಕಾರ್ಯಕರ್ತ ಕೊಲೆ ಯತ್ನ ಕೇಸ್‌ನಲ್ಲಿ ಅರೆಸ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...