Homeಕರ್ನಾಟಕಪ್ರಚೋದನಾಕಾರಿ ಹೇಳಿಕೆ: ಈಶ್ವರಪ್ಪ ವಿರುದ್ಧ ದಾವಣಗೆರೆ, ಬೆಂಗಳೂರಿನಲ್ಲಿ ಪ್ರಕರಣ ದಾಖಲು

ಪ್ರಚೋದನಾಕಾರಿ ಹೇಳಿಕೆ: ಈಶ್ವರಪ್ಪ ವಿರುದ್ಧ ದಾವಣಗೆರೆ, ಬೆಂಗಳೂರಿನಲ್ಲಿ ಪ್ರಕರಣ ದಾಖಲು

- Advertisement -
- Advertisement -

ಸಂಸದ ಡಿಕೆ ಸುರೇಶ್‌ ಮತ್ತು ವಿನಯ್‌ ಕುಲಕರ್ಣಿ ವಿರುದ್ಧ ಪ್ರಚೋದನಾಕಾರಿಯಾಗಿ ಹೇಳಿಕೆ ನೀಡಿದ್ದ ಬಿಜೆಪಿ ನಾಯಕ, ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ವಿರುದ್ಧ ದಾವಣಗೆರೆ ಮತ್ತು ಬೆಂಗಳೂರಿನಲ್ಲಿ ಪ್ರಕರಣ ದಾಖಲಿಸಲಾಗಿದೆ.

ಕೆ.ಎಸ್.ಈಶ್ವರಪ್ಪ ಅವರು ಗುರುವಾರ ನಡೆದ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ನೀಡಿರುವ ಹೇಳಿಕೆಯಿಂದ ಜನ, ಸಮುದಾಯ, ಗುಂಪುಗಳ ನಡುವೆ ದ್ವೇಷ ಭಾವನೆಯನ್ನು ಉಂಟು ಮಾಡುತ್ತದೆ. ಗಲಭೆ ಉಂಟಾಗಬಹುದು ಎಂದು ಗೊತ್ತಿದ್ದರೂ ಪ್ರಚೋದನಕಾರಿ ಹೇಳಿಕೆ ನೀಡಿದ್ದು, ಜನರ ಮಧ್ಯೆ ಗಲಭೆಗಳಾಗಿ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಸಂಭವವಿದೆ. ಇವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ನಿಜಲಿಂಗಪ್ಪ ಬಡಾವಣೆಯ ಹನುಮಂತ ಎಂಬುವರು ನೀಡಿದ ದೂರನ್ನು ಆಧರಿಸಿ ಐಪಿಸಿ 505(1)(ಸಿ), 505(2) ಮತ್ತು 506 ಅಡಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಬೆಂಗಳೂರಿನಲ್ಲಿ ಕೇಸ್ ದಾಖಲು:

ಪ್ರಚೋದನಾಕಾರಿಯಾಗಿ ಹೇಳಿಕೆ ನೀಡಿದ್ದ ಈಶ್ವರಪ್ಪ ವಿರುದ್ಧ ಯಶವಂತಪುರ ಕ್ಷೇತ್ರದ ಯೂತ್ ಕಾಂಗ್ರೆಸ್ ಅಧ್ಯಕ್ಷ ಶಶಾಂಕ್ ಎಸ್ ಗೌಡ ಯಶವಂತಪುರ ಪೊಲೀಸ್ ಠಾಣೆಗೆ ದೂರನ್ನು ನೀಡಿದ್ದಾರೆ. ದಾವಣಗೆರೆಯ ಜಿಲ್ಲಾಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸಂಸದರಾದ ಡಿಕೆ ಸುರೇಶ್ ಹಾಗೂ ಧಾರವಾಡ ವಿಧಾನಸಭಾ ಕ್ಷೇತ್ರದ ಶಾಸಕರಾದ ವಿನಯ್ ಕುಲಕರ್ಣಿ ಅವರನ್ನು ಗುಂಡಿಕ್ಕಿ ಕೊಲ್ಲಬೇಕು ಎಂದು ಬಹಿರಂಗವಾಗಿ ಭಾಷಣದ ಮೂಲಕ ಭಯೋತ್ಪಾದನೆಗೆ ಪ್ರಚೋದಿಸಿರುವ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪನ ವಿರುದ್ಧ ಭಯೋತ್ಪಾದನೆ ನಿಗ್ರಹ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಿ ಬಂಧಿಸಬೇಕು ಮತ್ತು ಸಂಸದ ಡಿಕೆ ಸುರೇಶ್ ಅವರಿಗೆ ಪೊಲೀಸ್ ಭದ್ರತೆ ನೀಡಬೇಕು ಎಂದು ದೂರು ದಾಖಲಿಸಿದ್ದಾರೆ.

ಈಶ್ವರಪ್ಪ ಹೇಳಿಕೆಯಲ್ಲೇನಿದೆ?

ದಾವಣಗೆರೆ ನಗರದ ಪಾರ್ವತಮ್ಮ ಶಾಮನೂರು ಶಿವಶಂಕರಪ್ಪ ಕಲ್ಯಾಣ ಮಂಟಪದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಜಿಲ್ಲಾ ಬಿಜೆಪಿ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಮಾತನಾಡಿದ್ದ ಈಶ್ವರಪ್ಪ, ಡಿ.ಕೆ.ಸುರೇಶ್‌, ವಿನಯ್‌ ಕುಲಕರ್ಣಿ ಇಂತಹ ರಾಷ್ಟ್ರದ್ರೋಹಿಗಳು ದೇಶವನ್ನು ಛಿದ್ರಗೊಳಿಸಲು ಹೊರಡುತ್ತಾರಲ್ಲ, ಅವರನ್ನು ಗುಂಡಿಕ್ಕಿ ಕೊಲ್ಲುವ ಕಾನೂನು ಪ್ರಧಾನಿ ನರೇಂದ್ರ ಮೋದಿ ಜಾರಿಗೆ ತರಬೇಕು, ಇದು ನಮ್ಮ ಒತ್ತಾಯ, ಏನನ್ಕೊಂಡಿದ್ದೀರಿ ದೇಶ ಅಂದ್ರೆ, ಭಾರತಾಂಬೆಯ ಮಕ್ಕಳು ನಾವು, ದೇಶವನ್ನು ತುಂಡು ಮಾಡಲು ಹೊರಟಿರುವ ದೇಶದ್ರೋಹಿಗಳನ್ನು ಮೊದಲು ಕಿತ್ತಾಕಿ ಎಂದು ಹೇಳಿದ್ದಾರೆ.

ಈಶ್ವರಪ್ಪ ಹೇಳಿಕೆಗೆ ಕಾಂಗ್ರೆಸ್‌ ಖಂಡನೆ:

ಸಂಸದ ಡಿಕೆ ಸುರೇಶ್‌ ಕುರಿತು ಈಶ್ವರಪ್ಪ ನೀಡಿದ್ದ ಪ್ರಚೋದನಾಕರಿ ಹೇಳಿಕೆ ಬಗ್ಗೆ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿದ ಕರ್ನಾಟಕ ಕಾಂಗ್ರೆಸ್, ಮಹಾತ್ಮ ಗಾಂಧಿಯವರಿಗೆ ಗುಂಡಿಕ್ಕಿದ ಗೋಡ್ಸೆ ಸಂತತಿಯವರಾದ ಬಿಜೆಪಿ ನಾಯಕರ ಭಯೋತ್ಪಾದಕ ಮನಸ್ಥಿತಿ ಅನಾವರಣವಾಗಿದೆ ಎಂದು ವಾಗ್ದಾಳಿ ನಡೆಸಿದೆ. ಸಂಸದರಾದ ಡಿ. ಕೆ ಸುರೇಶ್ ಹಾಗೂ ಶಾಸಕರಾದ ವಿನಯ್ ಕುಲಕರ್ಣಿಯವರನ್ನು ಗುಂಡಿಕ್ಕಿ ಕೊಲ್ಲಬೇಕು ಎನ್ನುವ ಮೂಲಕ ಬಿಜೆಪಿಯ ಭಯೋತ್ಪಾದನೆಗೆ ಪ್ರಚೋದನೆ ನೀಡುವ ಹೇಳಿಕೆ ನೀಡಿದ್ದಾರೆ. ಈ ಗುಂಡು ಹಾಕುವ ವ್ಯಕ್ತಿಯ ಮೇಲೆ ಭಯೋತ್ಪಾದನೆ ನಿಗ್ರಹ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಿ ಬಂಧಿಸಬೇಕು ಎಂದು ಗೃಹ ಸಚಿವರಲ್ಲಿ ಮನವಿ ಮಾಡುತ್ತೇವೆ ಎಂದು ಪೋಸ್ಟ್ ಮಾಡಿದೆ.

ಗೃಹ ಸಚಿವ ಡಾ.ಜಿ.ಪರಮೇಶ್ವರ್ ಈ ಕುರಿತು ಪ್ರತಿಕ್ರಿಯಿಸಿದ್ದು, ಈಶ್ವರಪ್ಪ ಮೇಲೆ ಎಫ್‌ಐಆರ್ ದಾಖಲಾಗಿದೆ. ಅವರ ಮೇಲೆ ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಪತ್ರಕರ್ತ ನಿಖಿಲ್ ವಾಗ್ಲೆ ಕಾರಿನ ಮೇಲೆ ದಾಳಿ ನಡೆಸಿದ ಬಿಜೆಪಿ ಕಾರ್ಯಕರ್ತರು: ಪ್ರತಿಪಕ್ಷಗಳಿಂದ ಖಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...