Homeಮುಖಪುಟಮುಜಾಫರ್‌ನಗರ ಪ್ರಕರಣ: ಮುಸ್ಲಿಂ ಬಾಲಕನ ಗುರುತು ಬಹಿರಂಗಪಡಿಸಿದ ಆರೋಪದ ಮೇಲೆ ಪತ್ರಕರ್ತ ಜುಬೇರ್ ವಿರುದ್ಧ FIR

ಮುಜಾಫರ್‌ನಗರ ಪ್ರಕರಣ: ಮುಸ್ಲಿಂ ಬಾಲಕನ ಗುರುತು ಬಹಿರಂಗಪಡಿಸಿದ ಆರೋಪದ ಮೇಲೆ ಪತ್ರಕರ್ತ ಜುಬೇರ್ ವಿರುದ್ಧ FIR

- Advertisement -
- Advertisement -

ಉತ್ತರ ಪ್ರದೇಶದ ಮುಜಫರ್ ನಗರದ ಶಿಕ್ಷಕಿಯೊಬ್ಬರು ಏಳು ವರ್ಷದ ಮುಸ್ಲಿ ವಿದ್ಯಾರ್ಥಿಗೆ ಆತನ ಸಹಪಾಠಿಗಳಿಂದ ಕಪಾಳಮೋಕ್ಷ ಮಾಡಿದ ಘಟನೆ ದೇಶಾದ್ಯಂತ ಭಾರೀ ಸುದ್ದಿಯಾಗಿತ್ತು. ಈ ಪ್ರಕರಣದ ಸಂತ್ರಸ್ತ ಬಾಲಕನ ಗುರುತನ್ನು ಬಹಿರಂಗಪಡಿಸಿದ ಆರೋಪದ ಮೇಲೆ ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಮೊಹಮ್ಮದ್ ಜುಬೈರ್ ವಿರುದ್ಧ ಮುಜಫರ್ ನಗರ ಪೊಲೀಸರು ಸೋಮವಾರ ಪ್ರಕರಣ ದಾಖಲಿಸಿದ್ದಾರೆ.

ವಿಷ್ಣುದತ್ ಎಂಬ ವ್ಯಕ್ತಿ ನೀಡಿದ ದೂರಿನ ಮೇರೆಗೆ ಜುಬೈರ್ ವಿರುದ್ಧ ಬಾಲಾಪರಾಧಿ ಕಾಯ್ದೆಯ ಸೆಕ್ಷನ್ 74 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆ ಮಗುವಿನ ಗುರುತನ್ನು ಬಹಿರಂಗಪಡಿಸುವುದು ಕಾನೂನು ಶಿಕ್ಷಾರ್ಹಗೊಳಿಸುತ್ತದೆ. ತಪ್ಪಿತಸ್ಥರಿಗೆ ಆರು ತಿಂಗಳ ಜೈಲು ಶಿಕ್ಷೆ ಅಥವಾ ರೂ 2 ಲಕ್ಷದವರೆಗೆ ದಂಡವನ್ನು ಪಾವತಿಸಲು ಹೇಳಬಹುದು.

ಆಗಸ್ಟ್ 24ರಂದು ಮುಸ್ಲಿಂ ಬಾಲಕನಿಗೆ ಶಿಕ್ಷಕಿಯ ಆದೇಶದ ಮೇರೆಗೆ ಸಹಪಾಠಿಗಳು ಕಪಾಳಮೋಕ್ಷ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಮುಜಾಫರ್‌ನಗರದ ನೇಹಾ ಪಬ್ಲಿಕ್ ಸ್ಕೂಲ್‌ನಲ್ಲಿ ಈ ಘಟನೆ ನಡೆದಿದ್ದು, ವಿಡಿಯೋದಲ್ಲಿ ಕಾಣಿಸಿಕೊಂಡಿರುವ ಶಿಕ್ಷಕಿ ಬಾಲಕನ ಸಹಪಾಠಿಗಳಿಗೆ ಹೊಡೆಯುವಂತೆ ಹೇಳುತ್ತಾರೆ.

ಒಬ್ಬ ವಿದ್ಯಾರ್ಥಿ ಆತನ ಕಪಾಳಕ್ಕೆ ಹೊಡೆದ ನಂತರ, ಶಿಕ್ಷಕಿಯು ಇನ್ನೊಬ್ಬ ವಿದ್ಯಾರ್ಥಿಯನ್ನು ಕರೆದು, ”ನಾನು ಹೇಳುತ್ತಿದ್ದೇನೆ, ಈ ಮುಸ್ಲಿಂ ವಿದ್ಯಾರ್ಥಿಯ ಬೆನ್ನಿನ ಮೇಲೆ ಹೊಡೆಯಬೇಕು… ಮತ್ತೆ ಬೇರೆ ವಿಧ್ಯಾರ್ಥಿಗಳನ್ನು ಕರೆದು, ಅವನ ಸೊಂಟದ ಮೇಲೆ ಹೊಡೆಯಲು ಪ್ರಾರಂಭಿಸಿ… ಅವನ ಮುಖವು ಕೆಂಪಾಗುತ್ತಿದೆ, ಅವನ ಸೊಂಟದ ಮೇಲೆ ಎಲ್ಲರೂ ಹೊಡೆಯಿರಿ” ಎಂದು ಆದೇಶಿಸಿದ್ದಾರೆ.

ಶಿಕ್ಷಕಿ ತ್ರಿಪ್ತಾ ತ್ಯಾಗಿ ವಿರುದ್ಧ ಐಪಿಸಿ ಸೆಕ್ಷನ್ 323 (ಸ್ವಯಂಪ್ರೇರಿತವಾಗಿ ನೋವುಂಟು ಮಾಡಿದ್ದಕ್ಕಾಗಿ ಶಿಕ್ಷೆ) ಮತ್ತು 504 (ಶಾಂತಿ ಭಂಗವನ್ನು ಪ್ರಚೋದಿಸುವ ಉದ್ದೇಶದಿಂದ ಉದ್ದೇಶಪೂರ್ವಕ ಅವಮಾನ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆದರೆ, ಆಕೆಯ ವಿರುದ್ಧ ನಾನ್ ಕಾಗ್ನೈಸಬಲ್ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ. ಅಂದರೆ ವಾರಂಟ್ ಇಲ್ಲದೆ ಪೊಲೀಸರು ಆಕೆಯನ್ನು ಬಂಧಿಸುವಂತಿಲ್ಲ. ತನಿಖೆ ಆರಂಭಿಸಲು ಪೊಲೀಸರಿಗೆ ನ್ಯಾಯಾಲಯದ ಅನುಮತಿಯೂ ಬೇಕು.

ಘಟನೆಯ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳುವ ಮೂಲಕ ಪತ್ರಕರ್ತ ಮೊಹಮ್ಮದ್ ಜುಬೈರ್ ಅವರು ಬಾಲಕನ ಗುರುತನ್ನು ಬಹಿರಂಗಪಡಿಸಿದ್ದಾರೆ ಎಂದು ಎಫ್‌ಐಆರ್ ದಾಖಲಿಸಲಾಗಿದೆ.

ಈ ಬಗ್ಗೆ ಮಾತನಾಡಿರುವ ಜುಬೈರ್, ”ಇದರಲ್ಲಿ ತನ್ನನ್ನು ಗುರಿಯಾಗಿಸಿದ್ದಾರೆ. ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ರಾಷ್ಟ್ರೀಯ ಆಯೋಗದ ಮುಖ್ಯಸ್ಥ ಪ್ರಿಯಾಂಕ್ ಕನೂಂಗೊ ಅವರು ಕ್ಲಿಪ್ಪಿಂಗ್‌ನ್ನು ಹಂಚಿಕೊಳ್ಳದಂತೆ ಸಾಮಾಜಿಕ ಮಾಧ್ಯಮ ಬಳಕೆದಾರರನ್ನು ಕೇಳಿಕೊಂಡ ನಂತರ ವೀಡಿಯೊವನ್ನು ಡಿಲೀಟ್ ಮಾಡಿದ್ದೇನೆ” ಎಂದು ಅವರು ಹೇಳಿದ್ದಾರೆ.

”ಮಾಧ್ಯಮಗಳು ಸೇರಿದಂತೆ ಅನೇಕರು ವೀಡಿಯೊವನ್ನು ಪೋಸ್ಟ್ ಮಾಡಿದರೂ ಸಹ ಎಫ್‌ಐಆರ್‌ನಲ್ಲಿ ನನ್ನ ಹೆಸರು ಮಾತ್ರ ಇದೆ. ವಾಸ್ತವವಾಗಿ ಮಗುವಿನ ಗುರುತನ್ನು ಬಹಿರಂಗಪಡಿಸುವ ಇತರ ವೀಡಿಯೊಗಳಿವೆ.. ಘಟನೆಯ ವಿವಾದದ ಬಳಿಕ ಆ ಮಗು ತನ್ನ ಸಹಪಾಠಿಗಳನ್ನು ತಬ್ಬಿಕೊಳ್ಳುತ್ತಿರುವ ವೀಡಿಯೊ ಕೂಡ ಸಾಕಷ್ಟು ಹಂಚಿಕೊಳ್ಳಲಾಗಿದೆ” ಎಂದು ಜುಬೈರ್ ಹೇಳಿದ್ದಾರೆ.

ಈ ಬಗ್ಗೆ ಪೊಲೀಸರು ಇನ್ನೂ ತನ್ನನ್ನು ಸಂಪರ್ಕಿಸಿಲ್ಲ ಎಂದು ಜುಬೇರ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...