Homeಮುಖಪುಟಮುಜಾಫರ್‌ನಗರ ಪ್ರಕರಣ: ಮುಸ್ಲಿಂ ಬಾಲಕನ ಗುರುತು ಬಹಿರಂಗಪಡಿಸಿದ ಆರೋಪದ ಮೇಲೆ ಪತ್ರಕರ್ತ ಜುಬೇರ್ ವಿರುದ್ಧ FIR

ಮುಜಾಫರ್‌ನಗರ ಪ್ರಕರಣ: ಮುಸ್ಲಿಂ ಬಾಲಕನ ಗುರುತು ಬಹಿರಂಗಪಡಿಸಿದ ಆರೋಪದ ಮೇಲೆ ಪತ್ರಕರ್ತ ಜುಬೇರ್ ವಿರುದ್ಧ FIR

- Advertisement -
- Advertisement -

ಉತ್ತರ ಪ್ರದೇಶದ ಮುಜಫರ್ ನಗರದ ಶಿಕ್ಷಕಿಯೊಬ್ಬರು ಏಳು ವರ್ಷದ ಮುಸ್ಲಿ ವಿದ್ಯಾರ್ಥಿಗೆ ಆತನ ಸಹಪಾಠಿಗಳಿಂದ ಕಪಾಳಮೋಕ್ಷ ಮಾಡಿದ ಘಟನೆ ದೇಶಾದ್ಯಂತ ಭಾರೀ ಸುದ್ದಿಯಾಗಿತ್ತು. ಈ ಪ್ರಕರಣದ ಸಂತ್ರಸ್ತ ಬಾಲಕನ ಗುರುತನ್ನು ಬಹಿರಂಗಪಡಿಸಿದ ಆರೋಪದ ಮೇಲೆ ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಮೊಹಮ್ಮದ್ ಜುಬೈರ್ ವಿರುದ್ಧ ಮುಜಫರ್ ನಗರ ಪೊಲೀಸರು ಸೋಮವಾರ ಪ್ರಕರಣ ದಾಖಲಿಸಿದ್ದಾರೆ.

ವಿಷ್ಣುದತ್ ಎಂಬ ವ್ಯಕ್ತಿ ನೀಡಿದ ದೂರಿನ ಮೇರೆಗೆ ಜುಬೈರ್ ವಿರುದ್ಧ ಬಾಲಾಪರಾಧಿ ಕಾಯ್ದೆಯ ಸೆಕ್ಷನ್ 74 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆ ಮಗುವಿನ ಗುರುತನ್ನು ಬಹಿರಂಗಪಡಿಸುವುದು ಕಾನೂನು ಶಿಕ್ಷಾರ್ಹಗೊಳಿಸುತ್ತದೆ. ತಪ್ಪಿತಸ್ಥರಿಗೆ ಆರು ತಿಂಗಳ ಜೈಲು ಶಿಕ್ಷೆ ಅಥವಾ ರೂ 2 ಲಕ್ಷದವರೆಗೆ ದಂಡವನ್ನು ಪಾವತಿಸಲು ಹೇಳಬಹುದು.

ಆಗಸ್ಟ್ 24ರಂದು ಮುಸ್ಲಿಂ ಬಾಲಕನಿಗೆ ಶಿಕ್ಷಕಿಯ ಆದೇಶದ ಮೇರೆಗೆ ಸಹಪಾಠಿಗಳು ಕಪಾಳಮೋಕ್ಷ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಮುಜಾಫರ್‌ನಗರದ ನೇಹಾ ಪಬ್ಲಿಕ್ ಸ್ಕೂಲ್‌ನಲ್ಲಿ ಈ ಘಟನೆ ನಡೆದಿದ್ದು, ವಿಡಿಯೋದಲ್ಲಿ ಕಾಣಿಸಿಕೊಂಡಿರುವ ಶಿಕ್ಷಕಿ ಬಾಲಕನ ಸಹಪಾಠಿಗಳಿಗೆ ಹೊಡೆಯುವಂತೆ ಹೇಳುತ್ತಾರೆ.

ಒಬ್ಬ ವಿದ್ಯಾರ್ಥಿ ಆತನ ಕಪಾಳಕ್ಕೆ ಹೊಡೆದ ನಂತರ, ಶಿಕ್ಷಕಿಯು ಇನ್ನೊಬ್ಬ ವಿದ್ಯಾರ್ಥಿಯನ್ನು ಕರೆದು, ”ನಾನು ಹೇಳುತ್ತಿದ್ದೇನೆ, ಈ ಮುಸ್ಲಿಂ ವಿದ್ಯಾರ್ಥಿಯ ಬೆನ್ನಿನ ಮೇಲೆ ಹೊಡೆಯಬೇಕು… ಮತ್ತೆ ಬೇರೆ ವಿಧ್ಯಾರ್ಥಿಗಳನ್ನು ಕರೆದು, ಅವನ ಸೊಂಟದ ಮೇಲೆ ಹೊಡೆಯಲು ಪ್ರಾರಂಭಿಸಿ… ಅವನ ಮುಖವು ಕೆಂಪಾಗುತ್ತಿದೆ, ಅವನ ಸೊಂಟದ ಮೇಲೆ ಎಲ್ಲರೂ ಹೊಡೆಯಿರಿ” ಎಂದು ಆದೇಶಿಸಿದ್ದಾರೆ.

ಶಿಕ್ಷಕಿ ತ್ರಿಪ್ತಾ ತ್ಯಾಗಿ ವಿರುದ್ಧ ಐಪಿಸಿ ಸೆಕ್ಷನ್ 323 (ಸ್ವಯಂಪ್ರೇರಿತವಾಗಿ ನೋವುಂಟು ಮಾಡಿದ್ದಕ್ಕಾಗಿ ಶಿಕ್ಷೆ) ಮತ್ತು 504 (ಶಾಂತಿ ಭಂಗವನ್ನು ಪ್ರಚೋದಿಸುವ ಉದ್ದೇಶದಿಂದ ಉದ್ದೇಶಪೂರ್ವಕ ಅವಮಾನ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆದರೆ, ಆಕೆಯ ವಿರುದ್ಧ ನಾನ್ ಕಾಗ್ನೈಸಬಲ್ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ. ಅಂದರೆ ವಾರಂಟ್ ಇಲ್ಲದೆ ಪೊಲೀಸರು ಆಕೆಯನ್ನು ಬಂಧಿಸುವಂತಿಲ್ಲ. ತನಿಖೆ ಆರಂಭಿಸಲು ಪೊಲೀಸರಿಗೆ ನ್ಯಾಯಾಲಯದ ಅನುಮತಿಯೂ ಬೇಕು.

ಘಟನೆಯ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳುವ ಮೂಲಕ ಪತ್ರಕರ್ತ ಮೊಹಮ್ಮದ್ ಜುಬೈರ್ ಅವರು ಬಾಲಕನ ಗುರುತನ್ನು ಬಹಿರಂಗಪಡಿಸಿದ್ದಾರೆ ಎಂದು ಎಫ್‌ಐಆರ್ ದಾಖಲಿಸಲಾಗಿದೆ.

ಈ ಬಗ್ಗೆ ಮಾತನಾಡಿರುವ ಜುಬೈರ್, ”ಇದರಲ್ಲಿ ತನ್ನನ್ನು ಗುರಿಯಾಗಿಸಿದ್ದಾರೆ. ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ರಾಷ್ಟ್ರೀಯ ಆಯೋಗದ ಮುಖ್ಯಸ್ಥ ಪ್ರಿಯಾಂಕ್ ಕನೂಂಗೊ ಅವರು ಕ್ಲಿಪ್ಪಿಂಗ್‌ನ್ನು ಹಂಚಿಕೊಳ್ಳದಂತೆ ಸಾಮಾಜಿಕ ಮಾಧ್ಯಮ ಬಳಕೆದಾರರನ್ನು ಕೇಳಿಕೊಂಡ ನಂತರ ವೀಡಿಯೊವನ್ನು ಡಿಲೀಟ್ ಮಾಡಿದ್ದೇನೆ” ಎಂದು ಅವರು ಹೇಳಿದ್ದಾರೆ.

”ಮಾಧ್ಯಮಗಳು ಸೇರಿದಂತೆ ಅನೇಕರು ವೀಡಿಯೊವನ್ನು ಪೋಸ್ಟ್ ಮಾಡಿದರೂ ಸಹ ಎಫ್‌ಐಆರ್‌ನಲ್ಲಿ ನನ್ನ ಹೆಸರು ಮಾತ್ರ ಇದೆ. ವಾಸ್ತವವಾಗಿ ಮಗುವಿನ ಗುರುತನ್ನು ಬಹಿರಂಗಪಡಿಸುವ ಇತರ ವೀಡಿಯೊಗಳಿವೆ.. ಘಟನೆಯ ವಿವಾದದ ಬಳಿಕ ಆ ಮಗು ತನ್ನ ಸಹಪಾಠಿಗಳನ್ನು ತಬ್ಬಿಕೊಳ್ಳುತ್ತಿರುವ ವೀಡಿಯೊ ಕೂಡ ಸಾಕಷ್ಟು ಹಂಚಿಕೊಳ್ಳಲಾಗಿದೆ” ಎಂದು ಜುಬೈರ್ ಹೇಳಿದ್ದಾರೆ.

ಈ ಬಗ್ಗೆ ಪೊಲೀಸರು ಇನ್ನೂ ತನ್ನನ್ನು ಸಂಪರ್ಕಿಸಿಲ್ಲ ಎಂದು ಜುಬೇರ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...