Homeಮುಖಪುಟಮುಜಾಫರ್‌ನಗರ ಪ್ರಕರಣ: ಮುಸ್ಲಿಂ ಬಾಲಕನ ಗುರುತು ಬಹಿರಂಗಪಡಿಸಿದ ಆರೋಪದ ಮೇಲೆ ಪತ್ರಕರ್ತ ಜುಬೇರ್ ವಿರುದ್ಧ FIR

ಮುಜಾಫರ್‌ನಗರ ಪ್ರಕರಣ: ಮುಸ್ಲಿಂ ಬಾಲಕನ ಗುರುತು ಬಹಿರಂಗಪಡಿಸಿದ ಆರೋಪದ ಮೇಲೆ ಪತ್ರಕರ್ತ ಜುಬೇರ್ ವಿರುದ್ಧ FIR

- Advertisement -
- Advertisement -

ಉತ್ತರ ಪ್ರದೇಶದ ಮುಜಫರ್ ನಗರದ ಶಿಕ್ಷಕಿಯೊಬ್ಬರು ಏಳು ವರ್ಷದ ಮುಸ್ಲಿ ವಿದ್ಯಾರ್ಥಿಗೆ ಆತನ ಸಹಪಾಠಿಗಳಿಂದ ಕಪಾಳಮೋಕ್ಷ ಮಾಡಿದ ಘಟನೆ ದೇಶಾದ್ಯಂತ ಭಾರೀ ಸುದ್ದಿಯಾಗಿತ್ತು. ಈ ಪ್ರಕರಣದ ಸಂತ್ರಸ್ತ ಬಾಲಕನ ಗುರುತನ್ನು ಬಹಿರಂಗಪಡಿಸಿದ ಆರೋಪದ ಮೇಲೆ ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಮೊಹಮ್ಮದ್ ಜುಬೈರ್ ವಿರುದ್ಧ ಮುಜಫರ್ ನಗರ ಪೊಲೀಸರು ಸೋಮವಾರ ಪ್ರಕರಣ ದಾಖಲಿಸಿದ್ದಾರೆ.

ವಿಷ್ಣುದತ್ ಎಂಬ ವ್ಯಕ್ತಿ ನೀಡಿದ ದೂರಿನ ಮೇರೆಗೆ ಜುಬೈರ್ ವಿರುದ್ಧ ಬಾಲಾಪರಾಧಿ ಕಾಯ್ದೆಯ ಸೆಕ್ಷನ್ 74 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆ ಮಗುವಿನ ಗುರುತನ್ನು ಬಹಿರಂಗಪಡಿಸುವುದು ಕಾನೂನು ಶಿಕ್ಷಾರ್ಹಗೊಳಿಸುತ್ತದೆ. ತಪ್ಪಿತಸ್ಥರಿಗೆ ಆರು ತಿಂಗಳ ಜೈಲು ಶಿಕ್ಷೆ ಅಥವಾ ರೂ 2 ಲಕ್ಷದವರೆಗೆ ದಂಡವನ್ನು ಪಾವತಿಸಲು ಹೇಳಬಹುದು.

ಆಗಸ್ಟ್ 24ರಂದು ಮುಸ್ಲಿಂ ಬಾಲಕನಿಗೆ ಶಿಕ್ಷಕಿಯ ಆದೇಶದ ಮೇರೆಗೆ ಸಹಪಾಠಿಗಳು ಕಪಾಳಮೋಕ್ಷ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಮುಜಾಫರ್‌ನಗರದ ನೇಹಾ ಪಬ್ಲಿಕ್ ಸ್ಕೂಲ್‌ನಲ್ಲಿ ಈ ಘಟನೆ ನಡೆದಿದ್ದು, ವಿಡಿಯೋದಲ್ಲಿ ಕಾಣಿಸಿಕೊಂಡಿರುವ ಶಿಕ್ಷಕಿ ಬಾಲಕನ ಸಹಪಾಠಿಗಳಿಗೆ ಹೊಡೆಯುವಂತೆ ಹೇಳುತ್ತಾರೆ.

ಒಬ್ಬ ವಿದ್ಯಾರ್ಥಿ ಆತನ ಕಪಾಳಕ್ಕೆ ಹೊಡೆದ ನಂತರ, ಶಿಕ್ಷಕಿಯು ಇನ್ನೊಬ್ಬ ವಿದ್ಯಾರ್ಥಿಯನ್ನು ಕರೆದು, ”ನಾನು ಹೇಳುತ್ತಿದ್ದೇನೆ, ಈ ಮುಸ್ಲಿಂ ವಿದ್ಯಾರ್ಥಿಯ ಬೆನ್ನಿನ ಮೇಲೆ ಹೊಡೆಯಬೇಕು… ಮತ್ತೆ ಬೇರೆ ವಿಧ್ಯಾರ್ಥಿಗಳನ್ನು ಕರೆದು, ಅವನ ಸೊಂಟದ ಮೇಲೆ ಹೊಡೆಯಲು ಪ್ರಾರಂಭಿಸಿ… ಅವನ ಮುಖವು ಕೆಂಪಾಗುತ್ತಿದೆ, ಅವನ ಸೊಂಟದ ಮೇಲೆ ಎಲ್ಲರೂ ಹೊಡೆಯಿರಿ” ಎಂದು ಆದೇಶಿಸಿದ್ದಾರೆ.

ಶಿಕ್ಷಕಿ ತ್ರಿಪ್ತಾ ತ್ಯಾಗಿ ವಿರುದ್ಧ ಐಪಿಸಿ ಸೆಕ್ಷನ್ 323 (ಸ್ವಯಂಪ್ರೇರಿತವಾಗಿ ನೋವುಂಟು ಮಾಡಿದ್ದಕ್ಕಾಗಿ ಶಿಕ್ಷೆ) ಮತ್ತು 504 (ಶಾಂತಿ ಭಂಗವನ್ನು ಪ್ರಚೋದಿಸುವ ಉದ್ದೇಶದಿಂದ ಉದ್ದೇಶಪೂರ್ವಕ ಅವಮಾನ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆದರೆ, ಆಕೆಯ ವಿರುದ್ಧ ನಾನ್ ಕಾಗ್ನೈಸಬಲ್ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ. ಅಂದರೆ ವಾರಂಟ್ ಇಲ್ಲದೆ ಪೊಲೀಸರು ಆಕೆಯನ್ನು ಬಂಧಿಸುವಂತಿಲ್ಲ. ತನಿಖೆ ಆರಂಭಿಸಲು ಪೊಲೀಸರಿಗೆ ನ್ಯಾಯಾಲಯದ ಅನುಮತಿಯೂ ಬೇಕು.

ಘಟನೆಯ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳುವ ಮೂಲಕ ಪತ್ರಕರ್ತ ಮೊಹಮ್ಮದ್ ಜುಬೈರ್ ಅವರು ಬಾಲಕನ ಗುರುತನ್ನು ಬಹಿರಂಗಪಡಿಸಿದ್ದಾರೆ ಎಂದು ಎಫ್‌ಐಆರ್ ದಾಖಲಿಸಲಾಗಿದೆ.

ಈ ಬಗ್ಗೆ ಮಾತನಾಡಿರುವ ಜುಬೈರ್, ”ಇದರಲ್ಲಿ ತನ್ನನ್ನು ಗುರಿಯಾಗಿಸಿದ್ದಾರೆ. ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ರಾಷ್ಟ್ರೀಯ ಆಯೋಗದ ಮುಖ್ಯಸ್ಥ ಪ್ರಿಯಾಂಕ್ ಕನೂಂಗೊ ಅವರು ಕ್ಲಿಪ್ಪಿಂಗ್‌ನ್ನು ಹಂಚಿಕೊಳ್ಳದಂತೆ ಸಾಮಾಜಿಕ ಮಾಧ್ಯಮ ಬಳಕೆದಾರರನ್ನು ಕೇಳಿಕೊಂಡ ನಂತರ ವೀಡಿಯೊವನ್ನು ಡಿಲೀಟ್ ಮಾಡಿದ್ದೇನೆ” ಎಂದು ಅವರು ಹೇಳಿದ್ದಾರೆ.

”ಮಾಧ್ಯಮಗಳು ಸೇರಿದಂತೆ ಅನೇಕರು ವೀಡಿಯೊವನ್ನು ಪೋಸ್ಟ್ ಮಾಡಿದರೂ ಸಹ ಎಫ್‌ಐಆರ್‌ನಲ್ಲಿ ನನ್ನ ಹೆಸರು ಮಾತ್ರ ಇದೆ. ವಾಸ್ತವವಾಗಿ ಮಗುವಿನ ಗುರುತನ್ನು ಬಹಿರಂಗಪಡಿಸುವ ಇತರ ವೀಡಿಯೊಗಳಿವೆ.. ಘಟನೆಯ ವಿವಾದದ ಬಳಿಕ ಆ ಮಗು ತನ್ನ ಸಹಪಾಠಿಗಳನ್ನು ತಬ್ಬಿಕೊಳ್ಳುತ್ತಿರುವ ವೀಡಿಯೊ ಕೂಡ ಸಾಕಷ್ಟು ಹಂಚಿಕೊಳ್ಳಲಾಗಿದೆ” ಎಂದು ಜುಬೈರ್ ಹೇಳಿದ್ದಾರೆ.

ಈ ಬಗ್ಗೆ ಪೊಲೀಸರು ಇನ್ನೂ ತನ್ನನ್ನು ಸಂಪರ್ಕಿಸಿಲ್ಲ ಎಂದು ಜುಬೇರ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...