Homeದಲಿತ್ ಫೈಲ್ಸ್ಬೂಟು ನೆಕ್ಕುವಂತೆ ದಲಿತನನ್ನು ಒತ್ತಾಯಿಸಿ ಹಲ್ಲೆ ನಡೆಸಿದ ಪೊಲೀಸ್ ಅಧಿಕಾರಿ ವಿರುದ್ಧ ಎಫ್‌ಐಆರ್‌

ಬೂಟು ನೆಕ್ಕುವಂತೆ ದಲಿತನನ್ನು ಒತ್ತಾಯಿಸಿ ಹಲ್ಲೆ ನಡೆಸಿದ ಪೊಲೀಸ್ ಅಧಿಕಾರಿ ವಿರುದ್ಧ ಎಫ್‌ಐಆರ್‌

- Advertisement -
- Advertisement -

ನವಿ ಮುಂಬೈನ ಕಲಾಂಬೋಲಿ ಪೊಲೀಸ್ ಠಾಣೆಯಲ್ಲಿ ನಿಯೋಜಿಸಲಾದ ಸಹಾಯಕ ಪೊಲೀಸ್ ಇನ್ಸ್‌ಪೆಕ್ಟರ್ ಪೊಲೀಸ್ ಠಾಣೆ ಆವರಣದಲ್ಲಿ 28 ವರ್ಷದ ದಲಿತ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ್ದಕ್ಕಾಗಿ ಪ್ರಕರಣ ದಾಖಲಾಗಿದೆ.

ಸಂತ್ರಸ್ತ ವಿಕಾಸ್ ಉಜ್ಗರೆ ವಿರುದ್ಧ ಜಾತಿ ನಿಂದನೆ ಮಾಡಿದ ಆರೋಪದ ಮೇಲೆ ಅಧಿಕಾರಿ ದಿನೇಶ್ ಪಾಟೀಲ್ ವಿರುದ್ಧ ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಅಧಿಕಾರಿ ದಿನೇಶ್ ಪಾಟೀಲ್‌, ಉಜ್ಗರೆ ಅವರ ಮುಖದ ಮೇಲೆ ಉಗುಳಿದ್ದಾರೆ. ಪೊಲೀಸ್ ಠಾಣೆಯಲ್ಲಿ ಅವರ ಬೂಟುಗಳನ್ನು ನೆಕ್ಕುವಂತೆ ಒತ್ತಾಯಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಸೈಬರ್ ವಂಚನೆ ಸಂಬಂಧ ದೂರು ದಾಖಲಿಸಿಕೊಳ್ಳಲು ಕಲಂಬೋಳಿ ಠಾಣೆಯ ಅಧಿಕಾರಿಗಳು ಹಿಂದೇಟು ಹಾಕುತ್ತಿರುವ ಬಗ್ಗೆ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ದೂರು ನೀಡಿದ್ದ ಉಜ್ಗರೆ ವಿರುದ್ಧ ಪಾಟೀಲ್ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

‘ದಿ ಇಂಡಿಯನ್ ಎಕ್ಸ್‌ಪ್ರೆಸ್‌’ನೊಂದಿಗೆ ಮಾತನಾಡಿದ ಉಜ್ಗರೆ, “ಜನವರಿ 6ರಂದು ರಾತ್ರಿ 8 ಗಂಟೆಯ ಸುಮಾರಿಗೆ, ನಾನು ನನ್ನ ಸ್ನೇಹಿತನೊಂದಿಗೆ ಚೈನೀಸ್ ರೆಸ್ಟೋರೆಂಟ್‌ನಲ್ಲಿದ್ದೆ. ಅವರು ರೆಸ್ಟೋರೆಂಟ್ ಮಾಲೀಕರೊಂದಿಗೆ ಜಗಳವಾಡಿದರು. ಮಾಲೀಕರು ನಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ. ನಾನು ಪೊಲೀಸ್ ನಿಯಂತ್ರಣ ಕೊಠಡಿಗೆ ಕರೆ ಮಾಡಿದೆ. ಶೀಘ್ರದಲ್ಲೇ, ಕಲಾಂಬೋಲಿ ಪೊಲೀಸ್ ಠಾಣೆಯ ತಂಡವು ಸ್ಥಳಕ್ಕೆ ತಲುಪಿತು” ಎಂದು ವಿವರಿಸಿದ್ದಾರೆ.

“ಸ್ನೇಹಿತ ಗಾಯಗೊಂಡಿದ್ದರಿಂದ ಆತನನ್ನು ಆಸ್ಪತ್ರೆಗೆ ಕರೆದೊಯ್ಯಲು ಪೊಲೀಸ್ ಅಧಿಕಾರಿಗಳಲ್ಲಿ ಕೋರಿದೆ. ಆದರೆ ಅವರು ನಿರಾಕರಿಸಿದರು. ಸಾಕಷ್ಟು ಮನವಿ ಮಾಡಿದ ನಂತರ, ಅಧಿಕಾರಿಗಳು ನನ್ನನ್ನು ಪನ್ವೇಲ್‌ನ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದರು. ಬೇರೆ ಆಸ್ಪತ್ರೆಗೆ ಕರೆದುಕೊಂಡು ಹೋಗುವಂತೆ ವೈದ್ಯರು ಪೊಲೀಸರಿಗೆ ಸೂಚಿಸಿದರು. ಆದರೆ, ಅಧಿಕಾರಿಗಳು ನನ್ನನ್ನು ಕಾಲಂಬೋಲಿ ಪೊಲೀಸ್ ಠಾಣೆಗೆ ಕರೆದೊಯ್ದರು. ಅಲ್ಲಿ ನಾನು ನೆಲದ ಮೇಲೆ ಕುಳಿತುಕೊಳ್ಳುವಂತೆ ಒತ್ತಾಯಿಸಲಾಯಿತು. ಆಗ ಪಾಟೀಲ ಬಂದು ನನಗೆ ಕಪಾಳಕ್ಕೆ ಹೊಡೆದರು” ಎಂದು ಹೇಳಿದರು.

“ಪೊಲೀಸರ ವಿರುದ್ಧವೇ ದೂರು ನೀಡಿದ ವ್ಯಕ್ತಿ ಈತನೆಂದು ಪೊಲೀಸರು ಗುರುತಿಸಿದ್ದಾರೆ” ಎಂದು ಉಜ್ಗರೆ ಹೇಳಿದ್ದಾರೆ.

“ಅಸಮಾಧಾನದಿಂದ ಪಾಟೀಲ್ ನನ್ನ ಮುಖ ಮತ್ತು ಕುತ್ತಿಗೆಗೆ ಹೊಡೆಯಲು ಪ್ರಾರಂಭಿಸಿದರು. ನಂತರ ಅವರು ನನ್ನನ್ನು ಕೋಣೆಯೊಂದಕ್ಕೆ ಎಳೆದೊಯ್ದರು, ಅಲ್ಲಿ ನನ್ನ ಮೇಲೆ ಕ್ರೂರವಾಗಿ ಹಲ್ಲೆ ನಡೆಸಲಾಯಿತು. ನಂತರ ನನ್ನ ಜಾತಿಯ ಬಗ್ಗೆ ಕೇಳಿದರು. ನಾನು ದಲಿತ ಎಂದು ಹೇಳಿದಾಗ, ಆತ ನನ್ನ ಜಾತಿಯನ್ನು ನಿಂದಿಸಿದರು. ಕೆಳ ಜಾತಿಗೆ ಸೇರಿದವನೆಂದು ನನ್ನ ಮೇಲೆ ಉಗುಳಿದರು. ಪಾಟೀಲ್ ತನ್ನ ಬೂಟುಗಳನ್ನು ನೆಕ್ಕುವಂತೆ ಒತ್ತಾಯಿಸಿದರು” ಎಂದು ಆರೋಪಿಸಿದ್ದಾರೆ.

ಜನವರಿ 7 ರಂದು ಮುಂಜಾನೆ 3 ಗಂಟೆಯ ಸುಮಾರಿಗೆ ಕಾಲಂಬೋಲಿ ಪೊಲೀಸರು ಕಾಮೋಥೆಯಲ್ಲಿರುವ ಎಂಜಿಎಂ ಆಸ್ಪತ್ರೆಗೆ ಕರೆದೊಯ್ದು, ಅಲ್ಲಿಯೇ ಬಿಟ್ಟು ಹೋಗಿದ್ದಾರೆ ಎಂದು ಉಜ್ಗರೆ ಮಾಹಿತಿ ನೀಡಿದ್ದಾರೆ.

ಗಾಯಗೊಂಡಿದ್ದ ಉಜ್ಗರೆ ಅವರು ಮೂರು ದಿನಗಳ ಕಾಲ ಎಂಜಿಎಂ ಆಸ್ಪತ್ರೆಯಲ್ಲಿದ್ದರು. “ನನ್ನನ್ನು ಬಿಡುಗಡೆ ಮಾಡಿದ ನಂತರ, ನಾನು ವಕೀಲರನ್ನು ನೇಮಿಸಿ ದೂರು ಸಲ್ಲಿಸಿದೆ. ನನ್ನ ಹೇಳಿಕೆಯನ್ನು ಜನವರಿ 14 ರಂದು ವಲಯ ಉಪ ಆಯುಕ್ತರು ಮತ್ತು ಸಹಾಯಕ ಪೊಲೀಸ್ ಆಯುಕ್ತರು ದಾಖಲಿಸಿಕೊಂಡಿದ್ದಾರೆ” ಎಂದು ಉಜ್ಗರೆ ಹೇಳಿದ್ದಾರೆ.

ಆದರೆ ಎಫ್‌ಐಆರ್‌ ದಾಖಲಿಸಲು ವಿಳಂಬವಾದ ಕಾರಣ ಉಜ್ಗರೆ ಅವರು ನವಿ ಮುಂಬೈ ಪೊಲೀಸ್‌ ಆಯುಕ್ತರನ್ನು ಸಂಪರ್ಕಿಸಿದ್ದು, ಗುರುವಾರ ತಡರಾತ್ರಿ ಪ್ರಕರಣ ದಾಖಲಾಗಿದೆ.

ಕಲಂಬೋಲಿ ಪೊಲೀಸ್ ಠಾಣೆಯ ಹಿರಿಯ ಇನ್ಸ್‌ಪೆಕ್ಟರ್ ಸಂಜಯ್ ಪಾಟೀಲ್ ಅವರನ್ನು ಸಂಪರ್ಕಿಸಿದಾಗ, ದಿನೇಶ್ ಪಾಟೀಲ್ ಅನಾರೋಗ್ಯದ ರಜೆಯಲ್ಲಿದ್ದಾರೆ ಎಂದು ಹೇಳಿದ್ದಾರೆ. “ನಾವು ಪೊಲೀಸ್ ಅಧಿಕಾರಿಯ ವಿರುದ್ಧ ಎಫ್‌ಐಆರ್ ದಾಖಲಿಸಿದ್ದೇವೆ. ಸಹಾಯಕ ಆಯುಕ್ತರು ತನಿಖೆ ನಡೆಸುತ್ತಿದ್ದಾರೆ” ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...