Homeದಲಿತ್ ಫೈಲ್ಸ್ಬೂಟು ನೆಕ್ಕುವಂತೆ ದಲಿತನನ್ನು ಒತ್ತಾಯಿಸಿ ಹಲ್ಲೆ ನಡೆಸಿದ ಪೊಲೀಸ್ ಅಧಿಕಾರಿ ವಿರುದ್ಧ ಎಫ್‌ಐಆರ್‌

ಬೂಟು ನೆಕ್ಕುವಂತೆ ದಲಿತನನ್ನು ಒತ್ತಾಯಿಸಿ ಹಲ್ಲೆ ನಡೆಸಿದ ಪೊಲೀಸ್ ಅಧಿಕಾರಿ ವಿರುದ್ಧ ಎಫ್‌ಐಆರ್‌

- Advertisement -
- Advertisement -

ನವಿ ಮುಂಬೈನ ಕಲಾಂಬೋಲಿ ಪೊಲೀಸ್ ಠಾಣೆಯಲ್ಲಿ ನಿಯೋಜಿಸಲಾದ ಸಹಾಯಕ ಪೊಲೀಸ್ ಇನ್ಸ್‌ಪೆಕ್ಟರ್ ಪೊಲೀಸ್ ಠಾಣೆ ಆವರಣದಲ್ಲಿ 28 ವರ್ಷದ ದಲಿತ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ್ದಕ್ಕಾಗಿ ಪ್ರಕರಣ ದಾಖಲಾಗಿದೆ.

ಸಂತ್ರಸ್ತ ವಿಕಾಸ್ ಉಜ್ಗರೆ ವಿರುದ್ಧ ಜಾತಿ ನಿಂದನೆ ಮಾಡಿದ ಆರೋಪದ ಮೇಲೆ ಅಧಿಕಾರಿ ದಿನೇಶ್ ಪಾಟೀಲ್ ವಿರುದ್ಧ ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಅಧಿಕಾರಿ ದಿನೇಶ್ ಪಾಟೀಲ್‌, ಉಜ್ಗರೆ ಅವರ ಮುಖದ ಮೇಲೆ ಉಗುಳಿದ್ದಾರೆ. ಪೊಲೀಸ್ ಠಾಣೆಯಲ್ಲಿ ಅವರ ಬೂಟುಗಳನ್ನು ನೆಕ್ಕುವಂತೆ ಒತ್ತಾಯಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಸೈಬರ್ ವಂಚನೆ ಸಂಬಂಧ ದೂರು ದಾಖಲಿಸಿಕೊಳ್ಳಲು ಕಲಂಬೋಳಿ ಠಾಣೆಯ ಅಧಿಕಾರಿಗಳು ಹಿಂದೇಟು ಹಾಕುತ್ತಿರುವ ಬಗ್ಗೆ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ದೂರು ನೀಡಿದ್ದ ಉಜ್ಗರೆ ವಿರುದ್ಧ ಪಾಟೀಲ್ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

‘ದಿ ಇಂಡಿಯನ್ ಎಕ್ಸ್‌ಪ್ರೆಸ್‌’ನೊಂದಿಗೆ ಮಾತನಾಡಿದ ಉಜ್ಗರೆ, “ಜನವರಿ 6ರಂದು ರಾತ್ರಿ 8 ಗಂಟೆಯ ಸುಮಾರಿಗೆ, ನಾನು ನನ್ನ ಸ್ನೇಹಿತನೊಂದಿಗೆ ಚೈನೀಸ್ ರೆಸ್ಟೋರೆಂಟ್‌ನಲ್ಲಿದ್ದೆ. ಅವರು ರೆಸ್ಟೋರೆಂಟ್ ಮಾಲೀಕರೊಂದಿಗೆ ಜಗಳವಾಡಿದರು. ಮಾಲೀಕರು ನಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ. ನಾನು ಪೊಲೀಸ್ ನಿಯಂತ್ರಣ ಕೊಠಡಿಗೆ ಕರೆ ಮಾಡಿದೆ. ಶೀಘ್ರದಲ್ಲೇ, ಕಲಾಂಬೋಲಿ ಪೊಲೀಸ್ ಠಾಣೆಯ ತಂಡವು ಸ್ಥಳಕ್ಕೆ ತಲುಪಿತು” ಎಂದು ವಿವರಿಸಿದ್ದಾರೆ.

“ಸ್ನೇಹಿತ ಗಾಯಗೊಂಡಿದ್ದರಿಂದ ಆತನನ್ನು ಆಸ್ಪತ್ರೆಗೆ ಕರೆದೊಯ್ಯಲು ಪೊಲೀಸ್ ಅಧಿಕಾರಿಗಳಲ್ಲಿ ಕೋರಿದೆ. ಆದರೆ ಅವರು ನಿರಾಕರಿಸಿದರು. ಸಾಕಷ್ಟು ಮನವಿ ಮಾಡಿದ ನಂತರ, ಅಧಿಕಾರಿಗಳು ನನ್ನನ್ನು ಪನ್ವೇಲ್‌ನ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದರು. ಬೇರೆ ಆಸ್ಪತ್ರೆಗೆ ಕರೆದುಕೊಂಡು ಹೋಗುವಂತೆ ವೈದ್ಯರು ಪೊಲೀಸರಿಗೆ ಸೂಚಿಸಿದರು. ಆದರೆ, ಅಧಿಕಾರಿಗಳು ನನ್ನನ್ನು ಕಾಲಂಬೋಲಿ ಪೊಲೀಸ್ ಠಾಣೆಗೆ ಕರೆದೊಯ್ದರು. ಅಲ್ಲಿ ನಾನು ನೆಲದ ಮೇಲೆ ಕುಳಿತುಕೊಳ್ಳುವಂತೆ ಒತ್ತಾಯಿಸಲಾಯಿತು. ಆಗ ಪಾಟೀಲ ಬಂದು ನನಗೆ ಕಪಾಳಕ್ಕೆ ಹೊಡೆದರು” ಎಂದು ಹೇಳಿದರು.

“ಪೊಲೀಸರ ವಿರುದ್ಧವೇ ದೂರು ನೀಡಿದ ವ್ಯಕ್ತಿ ಈತನೆಂದು ಪೊಲೀಸರು ಗುರುತಿಸಿದ್ದಾರೆ” ಎಂದು ಉಜ್ಗರೆ ಹೇಳಿದ್ದಾರೆ.

“ಅಸಮಾಧಾನದಿಂದ ಪಾಟೀಲ್ ನನ್ನ ಮುಖ ಮತ್ತು ಕುತ್ತಿಗೆಗೆ ಹೊಡೆಯಲು ಪ್ರಾರಂಭಿಸಿದರು. ನಂತರ ಅವರು ನನ್ನನ್ನು ಕೋಣೆಯೊಂದಕ್ಕೆ ಎಳೆದೊಯ್ದರು, ಅಲ್ಲಿ ನನ್ನ ಮೇಲೆ ಕ್ರೂರವಾಗಿ ಹಲ್ಲೆ ನಡೆಸಲಾಯಿತು. ನಂತರ ನನ್ನ ಜಾತಿಯ ಬಗ್ಗೆ ಕೇಳಿದರು. ನಾನು ದಲಿತ ಎಂದು ಹೇಳಿದಾಗ, ಆತ ನನ್ನ ಜಾತಿಯನ್ನು ನಿಂದಿಸಿದರು. ಕೆಳ ಜಾತಿಗೆ ಸೇರಿದವನೆಂದು ನನ್ನ ಮೇಲೆ ಉಗುಳಿದರು. ಪಾಟೀಲ್ ತನ್ನ ಬೂಟುಗಳನ್ನು ನೆಕ್ಕುವಂತೆ ಒತ್ತಾಯಿಸಿದರು” ಎಂದು ಆರೋಪಿಸಿದ್ದಾರೆ.

ಜನವರಿ 7 ರಂದು ಮುಂಜಾನೆ 3 ಗಂಟೆಯ ಸುಮಾರಿಗೆ ಕಾಲಂಬೋಲಿ ಪೊಲೀಸರು ಕಾಮೋಥೆಯಲ್ಲಿರುವ ಎಂಜಿಎಂ ಆಸ್ಪತ್ರೆಗೆ ಕರೆದೊಯ್ದು, ಅಲ್ಲಿಯೇ ಬಿಟ್ಟು ಹೋಗಿದ್ದಾರೆ ಎಂದು ಉಜ್ಗರೆ ಮಾಹಿತಿ ನೀಡಿದ್ದಾರೆ.

ಗಾಯಗೊಂಡಿದ್ದ ಉಜ್ಗರೆ ಅವರು ಮೂರು ದಿನಗಳ ಕಾಲ ಎಂಜಿಎಂ ಆಸ್ಪತ್ರೆಯಲ್ಲಿದ್ದರು. “ನನ್ನನ್ನು ಬಿಡುಗಡೆ ಮಾಡಿದ ನಂತರ, ನಾನು ವಕೀಲರನ್ನು ನೇಮಿಸಿ ದೂರು ಸಲ್ಲಿಸಿದೆ. ನನ್ನ ಹೇಳಿಕೆಯನ್ನು ಜನವರಿ 14 ರಂದು ವಲಯ ಉಪ ಆಯುಕ್ತರು ಮತ್ತು ಸಹಾಯಕ ಪೊಲೀಸ್ ಆಯುಕ್ತರು ದಾಖಲಿಸಿಕೊಂಡಿದ್ದಾರೆ” ಎಂದು ಉಜ್ಗರೆ ಹೇಳಿದ್ದಾರೆ.

ಆದರೆ ಎಫ್‌ಐಆರ್‌ ದಾಖಲಿಸಲು ವಿಳಂಬವಾದ ಕಾರಣ ಉಜ್ಗರೆ ಅವರು ನವಿ ಮುಂಬೈ ಪೊಲೀಸ್‌ ಆಯುಕ್ತರನ್ನು ಸಂಪರ್ಕಿಸಿದ್ದು, ಗುರುವಾರ ತಡರಾತ್ರಿ ಪ್ರಕರಣ ದಾಖಲಾಗಿದೆ.

ಕಲಂಬೋಲಿ ಪೊಲೀಸ್ ಠಾಣೆಯ ಹಿರಿಯ ಇನ್ಸ್‌ಪೆಕ್ಟರ್ ಸಂಜಯ್ ಪಾಟೀಲ್ ಅವರನ್ನು ಸಂಪರ್ಕಿಸಿದಾಗ, ದಿನೇಶ್ ಪಾಟೀಲ್ ಅನಾರೋಗ್ಯದ ರಜೆಯಲ್ಲಿದ್ದಾರೆ ಎಂದು ಹೇಳಿದ್ದಾರೆ. “ನಾವು ಪೊಲೀಸ್ ಅಧಿಕಾರಿಯ ವಿರುದ್ಧ ಎಫ್‌ಐಆರ್ ದಾಖಲಿಸಿದ್ದೇವೆ. ಸಹಾಯಕ ಆಯುಕ್ತರು ತನಿಖೆ ನಡೆಸುತ್ತಿದ್ದಾರೆ” ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...

ಎಸ್‌ಐಆರ್‌ನಿಂದ ಹೊರಗಿಡಲಾದ ಜನರಿಗೆ ಪಡಿತರ ನಿರಾಕರಣೆ ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಕಲ್ಕತ್ತಾ ಹೈಕೋರ್ಟ್‌ಗೆ ಹೋಗಲು ಸೂಚನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ವ್ಯಕ್ತಿಗಳಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಪಡಿತರ ಸೌಲಭ್ಯ ಸೇರಿದಂತೆ ಇತರೆ ಕಲ್ಯಾಣ ಯೋಜನೆಗಳನ್ನು ನಿರಾಕರಿಸುತ್ತಿರುವ ಪಶ್ಚಿಮ ಬಂಗಾಳ...

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...