Homeದಲಿತ್ ಫೈಲ್ಸ್ಬೂಟು ನೆಕ್ಕುವಂತೆ ದಲಿತನನ್ನು ಒತ್ತಾಯಿಸಿ ಹಲ್ಲೆ ನಡೆಸಿದ ಪೊಲೀಸ್ ಅಧಿಕಾರಿ ವಿರುದ್ಧ ಎಫ್‌ಐಆರ್‌

ಬೂಟು ನೆಕ್ಕುವಂತೆ ದಲಿತನನ್ನು ಒತ್ತಾಯಿಸಿ ಹಲ್ಲೆ ನಡೆಸಿದ ಪೊಲೀಸ್ ಅಧಿಕಾರಿ ವಿರುದ್ಧ ಎಫ್‌ಐಆರ್‌

- Advertisement -
- Advertisement -

ನವಿ ಮುಂಬೈನ ಕಲಾಂಬೋಲಿ ಪೊಲೀಸ್ ಠಾಣೆಯಲ್ಲಿ ನಿಯೋಜಿಸಲಾದ ಸಹಾಯಕ ಪೊಲೀಸ್ ಇನ್ಸ್‌ಪೆಕ್ಟರ್ ಪೊಲೀಸ್ ಠಾಣೆ ಆವರಣದಲ್ಲಿ 28 ವರ್ಷದ ದಲಿತ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ್ದಕ್ಕಾಗಿ ಪ್ರಕರಣ ದಾಖಲಾಗಿದೆ.

ಸಂತ್ರಸ್ತ ವಿಕಾಸ್ ಉಜ್ಗರೆ ವಿರುದ್ಧ ಜಾತಿ ನಿಂದನೆ ಮಾಡಿದ ಆರೋಪದ ಮೇಲೆ ಅಧಿಕಾರಿ ದಿನೇಶ್ ಪಾಟೀಲ್ ವಿರುದ್ಧ ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಅಧಿಕಾರಿ ದಿನೇಶ್ ಪಾಟೀಲ್‌, ಉಜ್ಗರೆ ಅವರ ಮುಖದ ಮೇಲೆ ಉಗುಳಿದ್ದಾರೆ. ಪೊಲೀಸ್ ಠಾಣೆಯಲ್ಲಿ ಅವರ ಬೂಟುಗಳನ್ನು ನೆಕ್ಕುವಂತೆ ಒತ್ತಾಯಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಸೈಬರ್ ವಂಚನೆ ಸಂಬಂಧ ದೂರು ದಾಖಲಿಸಿಕೊಳ್ಳಲು ಕಲಂಬೋಳಿ ಠಾಣೆಯ ಅಧಿಕಾರಿಗಳು ಹಿಂದೇಟು ಹಾಕುತ್ತಿರುವ ಬಗ್ಗೆ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ದೂರು ನೀಡಿದ್ದ ಉಜ್ಗರೆ ವಿರುದ್ಧ ಪಾಟೀಲ್ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

‘ದಿ ಇಂಡಿಯನ್ ಎಕ್ಸ್‌ಪ್ರೆಸ್‌’ನೊಂದಿಗೆ ಮಾತನಾಡಿದ ಉಜ್ಗರೆ, “ಜನವರಿ 6ರಂದು ರಾತ್ರಿ 8 ಗಂಟೆಯ ಸುಮಾರಿಗೆ, ನಾನು ನನ್ನ ಸ್ನೇಹಿತನೊಂದಿಗೆ ಚೈನೀಸ್ ರೆಸ್ಟೋರೆಂಟ್‌ನಲ್ಲಿದ್ದೆ. ಅವರು ರೆಸ್ಟೋರೆಂಟ್ ಮಾಲೀಕರೊಂದಿಗೆ ಜಗಳವಾಡಿದರು. ಮಾಲೀಕರು ನಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ. ನಾನು ಪೊಲೀಸ್ ನಿಯಂತ್ರಣ ಕೊಠಡಿಗೆ ಕರೆ ಮಾಡಿದೆ. ಶೀಘ್ರದಲ್ಲೇ, ಕಲಾಂಬೋಲಿ ಪೊಲೀಸ್ ಠಾಣೆಯ ತಂಡವು ಸ್ಥಳಕ್ಕೆ ತಲುಪಿತು” ಎಂದು ವಿವರಿಸಿದ್ದಾರೆ.

“ಸ್ನೇಹಿತ ಗಾಯಗೊಂಡಿದ್ದರಿಂದ ಆತನನ್ನು ಆಸ್ಪತ್ರೆಗೆ ಕರೆದೊಯ್ಯಲು ಪೊಲೀಸ್ ಅಧಿಕಾರಿಗಳಲ್ಲಿ ಕೋರಿದೆ. ಆದರೆ ಅವರು ನಿರಾಕರಿಸಿದರು. ಸಾಕಷ್ಟು ಮನವಿ ಮಾಡಿದ ನಂತರ, ಅಧಿಕಾರಿಗಳು ನನ್ನನ್ನು ಪನ್ವೇಲ್‌ನ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದರು. ಬೇರೆ ಆಸ್ಪತ್ರೆಗೆ ಕರೆದುಕೊಂಡು ಹೋಗುವಂತೆ ವೈದ್ಯರು ಪೊಲೀಸರಿಗೆ ಸೂಚಿಸಿದರು. ಆದರೆ, ಅಧಿಕಾರಿಗಳು ನನ್ನನ್ನು ಕಾಲಂಬೋಲಿ ಪೊಲೀಸ್ ಠಾಣೆಗೆ ಕರೆದೊಯ್ದರು. ಅಲ್ಲಿ ನಾನು ನೆಲದ ಮೇಲೆ ಕುಳಿತುಕೊಳ್ಳುವಂತೆ ಒತ್ತಾಯಿಸಲಾಯಿತು. ಆಗ ಪಾಟೀಲ ಬಂದು ನನಗೆ ಕಪಾಳಕ್ಕೆ ಹೊಡೆದರು” ಎಂದು ಹೇಳಿದರು.

“ಪೊಲೀಸರ ವಿರುದ್ಧವೇ ದೂರು ನೀಡಿದ ವ್ಯಕ್ತಿ ಈತನೆಂದು ಪೊಲೀಸರು ಗುರುತಿಸಿದ್ದಾರೆ” ಎಂದು ಉಜ್ಗರೆ ಹೇಳಿದ್ದಾರೆ.

“ಅಸಮಾಧಾನದಿಂದ ಪಾಟೀಲ್ ನನ್ನ ಮುಖ ಮತ್ತು ಕುತ್ತಿಗೆಗೆ ಹೊಡೆಯಲು ಪ್ರಾರಂಭಿಸಿದರು. ನಂತರ ಅವರು ನನ್ನನ್ನು ಕೋಣೆಯೊಂದಕ್ಕೆ ಎಳೆದೊಯ್ದರು, ಅಲ್ಲಿ ನನ್ನ ಮೇಲೆ ಕ್ರೂರವಾಗಿ ಹಲ್ಲೆ ನಡೆಸಲಾಯಿತು. ನಂತರ ನನ್ನ ಜಾತಿಯ ಬಗ್ಗೆ ಕೇಳಿದರು. ನಾನು ದಲಿತ ಎಂದು ಹೇಳಿದಾಗ, ಆತ ನನ್ನ ಜಾತಿಯನ್ನು ನಿಂದಿಸಿದರು. ಕೆಳ ಜಾತಿಗೆ ಸೇರಿದವನೆಂದು ನನ್ನ ಮೇಲೆ ಉಗುಳಿದರು. ಪಾಟೀಲ್ ತನ್ನ ಬೂಟುಗಳನ್ನು ನೆಕ್ಕುವಂತೆ ಒತ್ತಾಯಿಸಿದರು” ಎಂದು ಆರೋಪಿಸಿದ್ದಾರೆ.

ಜನವರಿ 7 ರಂದು ಮುಂಜಾನೆ 3 ಗಂಟೆಯ ಸುಮಾರಿಗೆ ಕಾಲಂಬೋಲಿ ಪೊಲೀಸರು ಕಾಮೋಥೆಯಲ್ಲಿರುವ ಎಂಜಿಎಂ ಆಸ್ಪತ್ರೆಗೆ ಕರೆದೊಯ್ದು, ಅಲ್ಲಿಯೇ ಬಿಟ್ಟು ಹೋಗಿದ್ದಾರೆ ಎಂದು ಉಜ್ಗರೆ ಮಾಹಿತಿ ನೀಡಿದ್ದಾರೆ.

ಗಾಯಗೊಂಡಿದ್ದ ಉಜ್ಗರೆ ಅವರು ಮೂರು ದಿನಗಳ ಕಾಲ ಎಂಜಿಎಂ ಆಸ್ಪತ್ರೆಯಲ್ಲಿದ್ದರು. “ನನ್ನನ್ನು ಬಿಡುಗಡೆ ಮಾಡಿದ ನಂತರ, ನಾನು ವಕೀಲರನ್ನು ನೇಮಿಸಿ ದೂರು ಸಲ್ಲಿಸಿದೆ. ನನ್ನ ಹೇಳಿಕೆಯನ್ನು ಜನವರಿ 14 ರಂದು ವಲಯ ಉಪ ಆಯುಕ್ತರು ಮತ್ತು ಸಹಾಯಕ ಪೊಲೀಸ್ ಆಯುಕ್ತರು ದಾಖಲಿಸಿಕೊಂಡಿದ್ದಾರೆ” ಎಂದು ಉಜ್ಗರೆ ಹೇಳಿದ್ದಾರೆ.

ಆದರೆ ಎಫ್‌ಐಆರ್‌ ದಾಖಲಿಸಲು ವಿಳಂಬವಾದ ಕಾರಣ ಉಜ್ಗರೆ ಅವರು ನವಿ ಮುಂಬೈ ಪೊಲೀಸ್‌ ಆಯುಕ್ತರನ್ನು ಸಂಪರ್ಕಿಸಿದ್ದು, ಗುರುವಾರ ತಡರಾತ್ರಿ ಪ್ರಕರಣ ದಾಖಲಾಗಿದೆ.

ಕಲಂಬೋಲಿ ಪೊಲೀಸ್ ಠಾಣೆಯ ಹಿರಿಯ ಇನ್ಸ್‌ಪೆಕ್ಟರ್ ಸಂಜಯ್ ಪಾಟೀಲ್ ಅವರನ್ನು ಸಂಪರ್ಕಿಸಿದಾಗ, ದಿನೇಶ್ ಪಾಟೀಲ್ ಅನಾರೋಗ್ಯದ ರಜೆಯಲ್ಲಿದ್ದಾರೆ ಎಂದು ಹೇಳಿದ್ದಾರೆ. “ನಾವು ಪೊಲೀಸ್ ಅಧಿಕಾರಿಯ ವಿರುದ್ಧ ಎಫ್‌ಐಆರ್ ದಾಖಲಿಸಿದ್ದೇವೆ. ಸಹಾಯಕ ಆಯುಕ್ತರು ತನಿಖೆ ನಡೆಸುತ್ತಿದ್ದಾರೆ” ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...