Homeಕರ್ನಾಟಕದಲಿತ ಯುವಕನಿಗೆ ಮೂತ್ರ ಕುಡಿಸಿದ ಗೋಣಿಬೀಡು PSI ಅರ್ಜುನ್ ವಿರುದ್ಧ FIR: ಅಮಾನತ್ತಿಗೆ ಆಗ್ರಹ

ದಲಿತ ಯುವಕನಿಗೆ ಮೂತ್ರ ಕುಡಿಸಿದ ಗೋಣಿಬೀಡು PSI ಅರ್ಜುನ್ ವಿರುದ್ಧ FIR: ಅಮಾನತ್ತಿಗೆ ಆಗ್ರಹ

ಈ ಅಮಾನವೀಯ ಕೃತ್ಯಕ್ಕೆ ಕೇವಲ ಎಫ್‌ಐಆರ್‌ ದಾಖಲಿಸಿದರೆ ಸಾಲುವುದಿಲ್ಲ, ಅವರನ್ನು ಅಮಾನತು ಮಾಡಬೇಕೆಂದು, ಕಠಿಣ ಶಿಕ್ಷೆ ನೀಡಬೇಕೆಂಬ ಒತ್ತಾಯಗಳು ಕೇಳಿಬಂದಿದೆ.

- Advertisement -
- Advertisement -

ಮೂಡಿಗೆರೆ ತಾಲೂಕಿನ ಕಿರುಗುಂದ ಗ್ರಾಮದ ದಲಿತ ಯುವಕನಿಗೆ ಮೂತ್ರ ಕುಡಿಸಿದ ಆರೋಪದ ಮೇಲೆ ಘಟನೆ ನಡೆದು 12 ದಿನಗಳ ನಂತರ ಗೋಣಿಬೀಡು PSI ಅರ್ಜುನ್ ವಿರುದ್ಧ ಎಫ್.ಐ.ಆರ್ ದಾಖಲಾಗಿದೆ.

ಗೋಣೀಬೀಡು ಠಾಣೆ ಪಿಎಸ್‌ಐ ತನ್ನ ಮೇಲೆ ವಿನಾಕಾರಣ ತೀವ್ರ ಹಲ್ಲೆ ನಡೆಸಿ, ಮೂತ್ರ ಕುಡಿಸಿ ಜಾತಿ ನಿಂದನೆ ಮಾಡಿದ್ದಾರೆ. ಅವರ ಮೇಲೆ ಕ್ರಮ ಕೈಗೊಳ್ಳಿ ಎಂದು ಹಿರಿಯ ಪೋಲೀಸ್ ಅಧಿಕಾರಿಗಳಿಗೆ ಸಂತ್ರಸ್ತ ಯುವಕ ಪುನೀತ್ ಮೇ 10 ರಂದೇ ದೂರು ನೀಡಿದ್ದರು.

ನನ್ನನ್ನು ವಿನಾಕಾರಣ ಠಾಣೆಗೆ ಕರೆದೊಯ್ದು ಬೆಳಗ್ಗಿನಿಂದ ರಾತ್ರಿವರೆಗೂ ಕ್ರೂರವಾಗಿ ದೌರ್ಜನ್ಯ ನಡೆಸಿ, ಮೂತ್ರ ಕುಡಿಸಿ, ಜಾತಿ ನಿಂದನೆಮಾಡಿದ ಪಿಎಸ್‌ಐ ಅರ್ಜುನ್ ವಿರುದ್ದ ಕಾನೂನು ಕ್ರಮ ಕೈಗೊಳ್ಳಬೇಕೆಂದು ರಾಜ್ಯ ಪೋಲೀಸ್ ಮಹಾ ನಿರ್ದೇಶಕರು, ಪಶ್ಚಿಮ ವಲಯ ಐಜಿಪಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಮತ್ತು ರಾಜ್ಯ ಮಾನವ ಹಕ್ಕು ಆಯೋಗಕ್ಕೆ ದೂರು ನೀಡಿದ್ದರು.

ಘಟನೆಯನ್ನು ಜಿಲ್ಲಾ ದಲಿತ ಸಂಘರ್ಷ ಸಮಿತಿ ಮುಖಂಡ ರತನ್ ಊರುಬಗೆ ಖಂಡಿಸಿದ್ದಲ್ಲದೆ,  ಕ್ಷೇತ್ರದ ಶಾಸಕ ಎಂ.ಪಿ ಕುಮಾರಸ್ವಾಮಿಯವರು ಈ ಹಿಂದೆಯೇ ಹಲವು ದೂರುಗಳಿರುವ ಪಿಎಸ್‌ಐ ಅನ್ನು ವರ್ಗಾವಣೆ ಮಾಡಲು ಹಿರಿಯ ಪೊಲೀಸ್ ಅಧಿಕಾರಿಗಳ ಮೇಲೆ ಒತ್ತಡ ತಂದಿದ್ದರು. ಅದರಂತೆ ಪಿಎಸ್‌ಐ ಅರ್ಜುನ್‌ರನ್ನು ವರ್ಗಾವಣೆ ಮಾಡಲಾಗಿತ್ತು. ಉಳಿದಂತೆ ಅವರ ಮೇಲೆ ಯಾವುದೇ ಕ್ರಮ ಕೈಗೊಂಡಿರಲಿಲ್ಲ.

ಆದರೆ ಮೇ 22 ರಂದು ಹಲವು ಪತ್ರಿಕೆಗಳಲ್ಲಿ ಮತ್ತು ಇಂಗ್ಲಿಷ್‌ ಮಾಧ್ಯಮಗಳಲ್ಲಿ ಈ ಘಟನೆ ವರದಿಯಾಗಿತ್ತು. ನಂತರ ಸಾಮಾಜಿಕ ಜಾಲತಾಣಗಳಲ್ಲಿಯೂ ವೈರಲ್ ಆಗಿ ತೀವ್ರ ಖಂಡನೆ, ಆಕ್ರೋಶ ವ್ಯಕ್ತವಾಗಿತ್ತು. ಈ ಕುರಿತು ಸ್ಪಷ್ಟನೆಗಾಗಿ ಹತ್ತಾರು ಮಾಧ್ಯಮಗಳು ಮತ್ತು ಸಾಮಾಜಿಕ ಕಾರ್ಯಕರ್ತರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಫೋನ್ ಮಾಡಿದ್ದರು. ಈ ಎಲ್ಲಾ ಒತ್ತಡಗಳಿಂದ ಕೊನೆಗೂ ಗೋಣಿಬೀಡು PSI ಅರ್ಜುನ್ ವಿರುದ್ಧ ಐಪಿಸಿ ಸೆಕ್ಷನ್ 342/323/504/506/330/348 ಹಾಗೂ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ದೌರ್ಜನ್ಯ ತಡೆ ಕಾಯ್ದೆ ಅಡಿ ಕೇಸು ದಾಖಲಾಗಿದೆ.

ಆದರೆ ಈ ಅಮಾನವೀಯ, ಹೇಯ ಕೃತ್ಯಕ್ಕೆ ಕೇವಲ ಎಫ್‌ಐಆರ್‌ ದಾಖಲಿಸಿದರೆ ಸಾಲುವುದಿಲ್ಲ, ಅವರನ್ನು ಅಮಾನತು ಮಾಡಬೇಕೆಂದು, ಅಷ್ಟು ಮಾತ್ರವಲ್ಲದೇ ಕಠಿಣ ಶಿಕ್ಷೆ ನೀಡಬೇಕೆಂಬ ಒತ್ತಾಯಗಳು ಸಾಮಾಜಿಕ ಮಾಧ್ಯಮಗಳಲ್ಲಿ ಕೇಳಿಬಂದಿದೆ.

ಇಂತಹ ಅಮಾನವೀಯ ಕೃತ್ಯವೆಸಗಿದ ಪೊಲೀಸ್ ಇನ್ಸ್ಪೆಕ್ಟರ್‌ನನ್ನು ಅಮಾನತುಗೊಳಿಸದೆ, ವಿರೋಧ ತಣಿಸಲು ಕೇವಲ ವರ್ಗಾವಣೆ ಮಾಡಿದ್ದು ಬಿಜೆಪಿಯ ದಲಿತ ವಿರೋಧಿ ನೀತಿಗೆ ಸಾಕ್ಷಿ. ಗೃಹ ಸಚಿವ ಬೊಮ್ಮಾಯಿರವರೆ ಕರ್ನಾಟಕಕ್ಕೆ ಈ ಯುಪಿ ಮಾಡೆಲ್ ಬೇಕಿಲ್ಲ. ಕೂಡಲೇ ಇನ್ಸ್ಪೆಕ್ಟರ್‌ನನ್ನು ಅಮಾನತುಗೊಳಿಸಿ ಉನ್ನತ ತನಿಖೆಗೆ ವಹಿಸಿ ಎಂದು ಕರ್ನಾಟಕ ಕಾಂಗ್ರೆಸ್ ಒತ್ತಾಯಿಸಿದೆ.

ಚಿಕ್ಕಮಗಳೂರು ಜಿಲ್ಲೆಯಲ್ಲಿ ದಲಿತ ಯುವಕನಿಗೆ ಪೊಲೀಸ್ ಇನ್ಸ್ಪೆಕ್ಟರ್ ಮೂತ್ರ ಕುಡಿಸಿದ್ದು ಅತ್ಯಂತ ಕ್ರೂರ ಹಾಗೂ ರಾಜ್ಯವೇ ತಲೆ ತಗ್ಗಿಸುವ ಘಟನೆ ಇಂತಹ ಪ್ರಕರಣಗಳು ಬಿಜೆಪಿ ಆಳ್ವಿಕೆಯ ಯುಪಿ, ಮಧ್ಯಪ್ರದೇಶ, ಬಿಹಾರದಂತಹ ರಾಜ್ಯಗಳಿಂದ ಕೇಳಿಬರುತ್ತಿತ್ತು, ಈಗ ಕರ್ನಾಟಕದಲ್ಲೂ ಘಟಿಸಿದ್ದಕ್ಕೆ ದಲಿತ ವಿರೋಧಿ ಬಿಜೆಪಿಯೇ ಕಾರಣ ಎಂದು ಕಾಂಗ್ರೆಸ್ ಆರೋಪಿಸಿದೆ.


ಇದನ್ನೂ ಓದಿ: ದಲಿತ ಯುವಕನಿಗೆ ಮೂತ್ರ ಕುಡಿಸಿ ದೌರ್ಜನ್ಯ: ಹೇಯ ಕೃತ್ಯ ಎಸಗಿದ ಪಿಎಸ್‌ಐ ಅಮಾನತ್ತಿಗೆ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...