Homeಕರ್ನಾಟಕದಲಿತ ಯುವಕನಿಗೆ ಮೂತ್ರ ಕುಡಿಸಿದ ಗೋಣಿಬೀಡು PSI ಅರ್ಜುನ್ ವಿರುದ್ಧ FIR: ಅಮಾನತ್ತಿಗೆ ಆಗ್ರಹ

ದಲಿತ ಯುವಕನಿಗೆ ಮೂತ್ರ ಕುಡಿಸಿದ ಗೋಣಿಬೀಡು PSI ಅರ್ಜುನ್ ವಿರುದ್ಧ FIR: ಅಮಾನತ್ತಿಗೆ ಆಗ್ರಹ

ಈ ಅಮಾನವೀಯ ಕೃತ್ಯಕ್ಕೆ ಕೇವಲ ಎಫ್‌ಐಆರ್‌ ದಾಖಲಿಸಿದರೆ ಸಾಲುವುದಿಲ್ಲ, ಅವರನ್ನು ಅಮಾನತು ಮಾಡಬೇಕೆಂದು, ಕಠಿಣ ಶಿಕ್ಷೆ ನೀಡಬೇಕೆಂಬ ಒತ್ತಾಯಗಳು ಕೇಳಿಬಂದಿದೆ.

- Advertisement -
- Advertisement -

ಮೂಡಿಗೆರೆ ತಾಲೂಕಿನ ಕಿರುಗುಂದ ಗ್ರಾಮದ ದಲಿತ ಯುವಕನಿಗೆ ಮೂತ್ರ ಕುಡಿಸಿದ ಆರೋಪದ ಮೇಲೆ ಘಟನೆ ನಡೆದು 12 ದಿನಗಳ ನಂತರ ಗೋಣಿಬೀಡು PSI ಅರ್ಜುನ್ ವಿರುದ್ಧ ಎಫ್.ಐ.ಆರ್ ದಾಖಲಾಗಿದೆ.

ಗೋಣೀಬೀಡು ಠಾಣೆ ಪಿಎಸ್‌ಐ ತನ್ನ ಮೇಲೆ ವಿನಾಕಾರಣ ತೀವ್ರ ಹಲ್ಲೆ ನಡೆಸಿ, ಮೂತ್ರ ಕುಡಿಸಿ ಜಾತಿ ನಿಂದನೆ ಮಾಡಿದ್ದಾರೆ. ಅವರ ಮೇಲೆ ಕ್ರಮ ಕೈಗೊಳ್ಳಿ ಎಂದು ಹಿರಿಯ ಪೋಲೀಸ್ ಅಧಿಕಾರಿಗಳಿಗೆ ಸಂತ್ರಸ್ತ ಯುವಕ ಪುನೀತ್ ಮೇ 10 ರಂದೇ ದೂರು ನೀಡಿದ್ದರು.

ನನ್ನನ್ನು ವಿನಾಕಾರಣ ಠಾಣೆಗೆ ಕರೆದೊಯ್ದು ಬೆಳಗ್ಗಿನಿಂದ ರಾತ್ರಿವರೆಗೂ ಕ್ರೂರವಾಗಿ ದೌರ್ಜನ್ಯ ನಡೆಸಿ, ಮೂತ್ರ ಕುಡಿಸಿ, ಜಾತಿ ನಿಂದನೆಮಾಡಿದ ಪಿಎಸ್‌ಐ ಅರ್ಜುನ್ ವಿರುದ್ದ ಕಾನೂನು ಕ್ರಮ ಕೈಗೊಳ್ಳಬೇಕೆಂದು ರಾಜ್ಯ ಪೋಲೀಸ್ ಮಹಾ ನಿರ್ದೇಶಕರು, ಪಶ್ಚಿಮ ವಲಯ ಐಜಿಪಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಮತ್ತು ರಾಜ್ಯ ಮಾನವ ಹಕ್ಕು ಆಯೋಗಕ್ಕೆ ದೂರು ನೀಡಿದ್ದರು.

ಘಟನೆಯನ್ನು ಜಿಲ್ಲಾ ದಲಿತ ಸಂಘರ್ಷ ಸಮಿತಿ ಮುಖಂಡ ರತನ್ ಊರುಬಗೆ ಖಂಡಿಸಿದ್ದಲ್ಲದೆ,  ಕ್ಷೇತ್ರದ ಶಾಸಕ ಎಂ.ಪಿ ಕುಮಾರಸ್ವಾಮಿಯವರು ಈ ಹಿಂದೆಯೇ ಹಲವು ದೂರುಗಳಿರುವ ಪಿಎಸ್‌ಐ ಅನ್ನು ವರ್ಗಾವಣೆ ಮಾಡಲು ಹಿರಿಯ ಪೊಲೀಸ್ ಅಧಿಕಾರಿಗಳ ಮೇಲೆ ಒತ್ತಡ ತಂದಿದ್ದರು. ಅದರಂತೆ ಪಿಎಸ್‌ಐ ಅರ್ಜುನ್‌ರನ್ನು ವರ್ಗಾವಣೆ ಮಾಡಲಾಗಿತ್ತು. ಉಳಿದಂತೆ ಅವರ ಮೇಲೆ ಯಾವುದೇ ಕ್ರಮ ಕೈಗೊಂಡಿರಲಿಲ್ಲ.

ಆದರೆ ಮೇ 22 ರಂದು ಹಲವು ಪತ್ರಿಕೆಗಳಲ್ಲಿ ಮತ್ತು ಇಂಗ್ಲಿಷ್‌ ಮಾಧ್ಯಮಗಳಲ್ಲಿ ಈ ಘಟನೆ ವರದಿಯಾಗಿತ್ತು. ನಂತರ ಸಾಮಾಜಿಕ ಜಾಲತಾಣಗಳಲ್ಲಿಯೂ ವೈರಲ್ ಆಗಿ ತೀವ್ರ ಖಂಡನೆ, ಆಕ್ರೋಶ ವ್ಯಕ್ತವಾಗಿತ್ತು. ಈ ಕುರಿತು ಸ್ಪಷ್ಟನೆಗಾಗಿ ಹತ್ತಾರು ಮಾಧ್ಯಮಗಳು ಮತ್ತು ಸಾಮಾಜಿಕ ಕಾರ್ಯಕರ್ತರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಫೋನ್ ಮಾಡಿದ್ದರು. ಈ ಎಲ್ಲಾ ಒತ್ತಡಗಳಿಂದ ಕೊನೆಗೂ ಗೋಣಿಬೀಡು PSI ಅರ್ಜುನ್ ವಿರುದ್ಧ ಐಪಿಸಿ ಸೆಕ್ಷನ್ 342/323/504/506/330/348 ಹಾಗೂ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ದೌರ್ಜನ್ಯ ತಡೆ ಕಾಯ್ದೆ ಅಡಿ ಕೇಸು ದಾಖಲಾಗಿದೆ.

ಆದರೆ ಈ ಅಮಾನವೀಯ, ಹೇಯ ಕೃತ್ಯಕ್ಕೆ ಕೇವಲ ಎಫ್‌ಐಆರ್‌ ದಾಖಲಿಸಿದರೆ ಸಾಲುವುದಿಲ್ಲ, ಅವರನ್ನು ಅಮಾನತು ಮಾಡಬೇಕೆಂದು, ಅಷ್ಟು ಮಾತ್ರವಲ್ಲದೇ ಕಠಿಣ ಶಿಕ್ಷೆ ನೀಡಬೇಕೆಂಬ ಒತ್ತಾಯಗಳು ಸಾಮಾಜಿಕ ಮಾಧ್ಯಮಗಳಲ್ಲಿ ಕೇಳಿಬಂದಿದೆ.

ಇಂತಹ ಅಮಾನವೀಯ ಕೃತ್ಯವೆಸಗಿದ ಪೊಲೀಸ್ ಇನ್ಸ್ಪೆಕ್ಟರ್‌ನನ್ನು ಅಮಾನತುಗೊಳಿಸದೆ, ವಿರೋಧ ತಣಿಸಲು ಕೇವಲ ವರ್ಗಾವಣೆ ಮಾಡಿದ್ದು ಬಿಜೆಪಿಯ ದಲಿತ ವಿರೋಧಿ ನೀತಿಗೆ ಸಾಕ್ಷಿ. ಗೃಹ ಸಚಿವ ಬೊಮ್ಮಾಯಿರವರೆ ಕರ್ನಾಟಕಕ್ಕೆ ಈ ಯುಪಿ ಮಾಡೆಲ್ ಬೇಕಿಲ್ಲ. ಕೂಡಲೇ ಇನ್ಸ್ಪೆಕ್ಟರ್‌ನನ್ನು ಅಮಾನತುಗೊಳಿಸಿ ಉನ್ನತ ತನಿಖೆಗೆ ವಹಿಸಿ ಎಂದು ಕರ್ನಾಟಕ ಕಾಂಗ್ರೆಸ್ ಒತ್ತಾಯಿಸಿದೆ.

ಚಿಕ್ಕಮಗಳೂರು ಜಿಲ್ಲೆಯಲ್ಲಿ ದಲಿತ ಯುವಕನಿಗೆ ಪೊಲೀಸ್ ಇನ್ಸ್ಪೆಕ್ಟರ್ ಮೂತ್ರ ಕುಡಿಸಿದ್ದು ಅತ್ಯಂತ ಕ್ರೂರ ಹಾಗೂ ರಾಜ್ಯವೇ ತಲೆ ತಗ್ಗಿಸುವ ಘಟನೆ ಇಂತಹ ಪ್ರಕರಣಗಳು ಬಿಜೆಪಿ ಆಳ್ವಿಕೆಯ ಯುಪಿ, ಮಧ್ಯಪ್ರದೇಶ, ಬಿಹಾರದಂತಹ ರಾಜ್ಯಗಳಿಂದ ಕೇಳಿಬರುತ್ತಿತ್ತು, ಈಗ ಕರ್ನಾಟಕದಲ್ಲೂ ಘಟಿಸಿದ್ದಕ್ಕೆ ದಲಿತ ವಿರೋಧಿ ಬಿಜೆಪಿಯೇ ಕಾರಣ ಎಂದು ಕಾಂಗ್ರೆಸ್ ಆರೋಪಿಸಿದೆ.


ಇದನ್ನೂ ಓದಿ: ದಲಿತ ಯುವಕನಿಗೆ ಮೂತ್ರ ಕುಡಿಸಿ ದೌರ್ಜನ್ಯ: ಹೇಯ ಕೃತ್ಯ ಎಸಗಿದ ಪಿಎಸ್‌ಐ ಅಮಾನತ್ತಿಗೆ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...