ಮೂಡಿಗೆರೆ ತಾಲೂಕಿನ ಕಿರುಗುಂದ ಗ್ರಾಮದ ದಲಿತ ಯುವಕನಿಗೆ ಮೂತ್ರ ಕುಡಿಸಿದ ಆರೋಪದ ಮೇಲೆ ಘಟನೆ ನಡೆದು 12 ದಿನಗಳ ನಂತರ ಗೋಣಿಬೀಡು PSI ಅರ್ಜುನ್ ವಿರುದ್ಧ ಎಫ್.ಐ.ಆರ್ ದಾಖಲಾಗಿದೆ.
ಗೋಣೀಬೀಡು ಠಾಣೆ ಪಿಎಸ್ಐ ತನ್ನ ಮೇಲೆ ವಿನಾಕಾರಣ ತೀವ್ರ ಹಲ್ಲೆ ನಡೆಸಿ, ಮೂತ್ರ ಕುಡಿಸಿ ಜಾತಿ ನಿಂದನೆ ಮಾಡಿದ್ದಾರೆ. ಅವರ ಮೇಲೆ ಕ್ರಮ ಕೈಗೊಳ್ಳಿ ಎಂದು ಹಿರಿಯ ಪೋಲೀಸ್ ಅಧಿಕಾರಿಗಳಿಗೆ ಸಂತ್ರಸ್ತ ಯುವಕ ಪುನೀತ್ ಮೇ 10 ರಂದೇ ದೂರು ನೀಡಿದ್ದರು.
ನನ್ನನ್ನು ವಿನಾಕಾರಣ ಠಾಣೆಗೆ ಕರೆದೊಯ್ದು ಬೆಳಗ್ಗಿನಿಂದ ರಾತ್ರಿವರೆಗೂ ಕ್ರೂರವಾಗಿ ದೌರ್ಜನ್ಯ ನಡೆಸಿ, ಮೂತ್ರ ಕುಡಿಸಿ, ಜಾತಿ ನಿಂದನೆಮಾಡಿದ ಪಿಎಸ್ಐ ಅರ್ಜುನ್ ವಿರುದ್ದ ಕಾನೂನು ಕ್ರಮ ಕೈಗೊಳ್ಳಬೇಕೆಂದು ರಾಜ್ಯ ಪೋಲೀಸ್ ಮಹಾ ನಿರ್ದೇಶಕರು, ಪಶ್ಚಿಮ ವಲಯ ಐಜಿಪಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಮತ್ತು ರಾಜ್ಯ ಮಾನವ ಹಕ್ಕು ಆಯೋಗಕ್ಕೆ ದೂರು ನೀಡಿದ್ದರು.
ಘಟನೆಯನ್ನು ಜಿಲ್ಲಾ ದಲಿತ ಸಂಘರ್ಷ ಸಮಿತಿ ಮುಖಂಡ ರತನ್ ಊರುಬಗೆ ಖಂಡಿಸಿದ್ದಲ್ಲದೆ, ಕ್ಷೇತ್ರದ ಶಾಸಕ ಎಂ.ಪಿ ಕುಮಾರಸ್ವಾಮಿಯವರು ಈ ಹಿಂದೆಯೇ ಹಲವು ದೂರುಗಳಿರುವ ಪಿಎಸ್ಐ ಅನ್ನು ವರ್ಗಾವಣೆ ಮಾಡಲು ಹಿರಿಯ ಪೊಲೀಸ್ ಅಧಿಕಾರಿಗಳ ಮೇಲೆ ಒತ್ತಡ ತಂದಿದ್ದರು. ಅದರಂತೆ ಪಿಎಸ್ಐ ಅರ್ಜುನ್ರನ್ನು ವರ್ಗಾವಣೆ ಮಾಡಲಾಗಿತ್ತು. ಉಳಿದಂತೆ ಅವರ ಮೇಲೆ ಯಾವುದೇ ಕ್ರಮ ಕೈಗೊಂಡಿರಲಿಲ್ಲ.
ಆದರೆ ಮೇ 22 ರಂದು ಹಲವು ಪತ್ರಿಕೆಗಳಲ್ಲಿ ಮತ್ತು ಇಂಗ್ಲಿಷ್ ಮಾಧ್ಯಮಗಳಲ್ಲಿ ಈ ಘಟನೆ ವರದಿಯಾಗಿತ್ತು. ನಂತರ ಸಾಮಾಜಿಕ ಜಾಲತಾಣಗಳಲ್ಲಿಯೂ ವೈರಲ್ ಆಗಿ ತೀವ್ರ ಖಂಡನೆ, ಆಕ್ರೋಶ ವ್ಯಕ್ತವಾಗಿತ್ತು. ಈ ಕುರಿತು ಸ್ಪಷ್ಟನೆಗಾಗಿ ಹತ್ತಾರು ಮಾಧ್ಯಮಗಳು ಮತ್ತು ಸಾಮಾಜಿಕ ಕಾರ್ಯಕರ್ತರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಫೋನ್ ಮಾಡಿದ್ದರು. ಈ ಎಲ್ಲಾ ಒತ್ತಡಗಳಿಂದ ಕೊನೆಗೂ ಗೋಣಿಬೀಡು PSI ಅರ್ಜುನ್ ವಿರುದ್ಧ ಐಪಿಸಿ ಸೆಕ್ಷನ್ 342/323/504/506/330/348 ಹಾಗೂ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ದೌರ್ಜನ್ಯ ತಡೆ ಕಾಯ್ದೆ ಅಡಿ ಕೇಸು ದಾಖಲಾಗಿದೆ.
ಚಿಕ್ಕಮಗಳೂರು ಜಿಲ್ಲೆಯಲ್ಲಿ ದಲಿತ ಯುವಕನಿಗೆ ಪೊಲೀಸ್ ಇನ್ಸ್ಪೆಕ್ಟರ್ ಮೂತ್ರ ಕುಡಿಸಿದ್ದು ಅತ್ಯಂತ ಕ್ರೂರ ಹಾಗೂ ರಾಜ್ಯವೇ ತಲೆ ತಗ್ಗಿಸುವ ಘಟನೆ
ಇಂತಹ ಪ್ರಕರಣಗಳು ಬಿಜೆಪಿ ಆಳ್ವಿಕೆಯ ಯುಪಿ, ಮಧ್ಯಪ್ರದೇಶ, ಬಿಹಾರದಂತಹ ರಾಜ್ಯಗಳಿಂದ ಕೇಳಿಬರುತ್ತಿತ್ತು, ಈಗ ಕರ್ನಾಟಕದಲ್ಲೂ ಘಟಿಸಿದ್ದಕ್ಕೆ ದಲಿತ ವಿರೋಧಿ ಬಿಜೆಪಿಯೇ ಕಾರಣ
1/1#AntiDalitBJP pic.twitter.com/zwjVX33Iwp— Karnataka Congress (@INCKarnataka) May 23, 2021
ಆದರೆ ಈ ಅಮಾನವೀಯ, ಹೇಯ ಕೃತ್ಯಕ್ಕೆ ಕೇವಲ ಎಫ್ಐಆರ್ ದಾಖಲಿಸಿದರೆ ಸಾಲುವುದಿಲ್ಲ, ಅವರನ್ನು ಅಮಾನತು ಮಾಡಬೇಕೆಂದು, ಅಷ್ಟು ಮಾತ್ರವಲ್ಲದೇ ಕಠಿಣ ಶಿಕ್ಷೆ ನೀಡಬೇಕೆಂಬ ಒತ್ತಾಯಗಳು ಸಾಮಾಜಿಕ ಮಾಧ್ಯಮಗಳಲ್ಲಿ ಕೇಳಿಬಂದಿದೆ.
ಇಂತಹ ಅಮಾನವೀಯ ಕೃತ್ಯವೆಸಗಿದ ಪೊಲೀಸ್ ಇನ್ಸ್ಪೆಕ್ಟರ್ನನ್ನು ಅಮಾನತುಗೊಳಿಸದೆ, ವಿರೋಧ ತಣಿಸಲು ಕೇವಲ ವರ್ಗಾವಣೆ ಮಾಡಿದ್ದು ಬಿಜೆಪಿಯ ದಲಿತ ವಿರೋಧಿ ನೀತಿಗೆ ಸಾಕ್ಷಿ. ಗೃಹ ಸಚಿವ ಬೊಮ್ಮಾಯಿರವರೆ ಕರ್ನಾಟಕಕ್ಕೆ ಈ ಯುಪಿ ಮಾಡೆಲ್ ಬೇಕಿಲ್ಲ. ಕೂಡಲೇ ಇನ್ಸ್ಪೆಕ್ಟರ್ನನ್ನು ಅಮಾನತುಗೊಳಿಸಿ ಉನ್ನತ ತನಿಖೆಗೆ ವಹಿಸಿ ಎಂದು ಕರ್ನಾಟಕ ಕಾಂಗ್ರೆಸ್ ಒತ್ತಾಯಿಸಿದೆ.
ಚಿಕ್ಕಮಗಳೂರು ಜಿಲ್ಲೆಯಲ್ಲಿ ದಲಿತ ಯುವಕನಿಗೆ ಪೊಲೀಸ್ ಇನ್ಸ್ಪೆಕ್ಟರ್ ಮೂತ್ರ ಕುಡಿಸಿದ್ದು ಅತ್ಯಂತ ಕ್ರೂರ ಹಾಗೂ ರಾಜ್ಯವೇ ತಲೆ ತಗ್ಗಿಸುವ ಘಟನೆ ಇಂತಹ ಪ್ರಕರಣಗಳು ಬಿಜೆಪಿ ಆಳ್ವಿಕೆಯ ಯುಪಿ, ಮಧ್ಯಪ್ರದೇಶ, ಬಿಹಾರದಂತಹ ರಾಜ್ಯಗಳಿಂದ ಕೇಳಿಬರುತ್ತಿತ್ತು, ಈಗ ಕರ್ನಾಟಕದಲ್ಲೂ ಘಟಿಸಿದ್ದಕ್ಕೆ ದಲಿತ ವಿರೋಧಿ ಬಿಜೆಪಿಯೇ ಕಾರಣ ಎಂದು ಕಾಂಗ್ರೆಸ್ ಆರೋಪಿಸಿದೆ.
ಇದನ್ನೂ ಓದಿ: ದಲಿತ ಯುವಕನಿಗೆ ಮೂತ್ರ ಕುಡಿಸಿ ದೌರ್ಜನ್ಯ: ಹೇಯ ಕೃತ್ಯ ಎಸಗಿದ ಪಿಎಸ್ಐ ಅಮಾನತ್ತಿಗೆ ಆಗ್ರಹ
ಅಯೋಗ್ಯ ಪಿ.ಎಸ್.ಐ. ಅರ್ಜುನನಿಗೆ ಕಟಿಣ ಶಿಕ್ಷೆ ಆಗಬೇಕು.
Sir FIR beda parvagila nama jannagala kaige kodi mikidu navu nodikolutivi.
Mundee magganige huuchhe kudidu kolutivi
Kick out Arjun the PSI Such people are not suitable for civilian society
Who is given rights to him please suspend him peramanently how can he treat human like this