Homeಮುಖಪುಟದ್ವೇಷ ಭಾಷಣ ಹಿನ್ನೆಲೆ ರಾಮದೇವ್ ವಿರುದ್ಧ ಎಫ್ಐಆರ್

ದ್ವೇಷ ಭಾಷಣ ಹಿನ್ನೆಲೆ ರಾಮದೇವ್ ವಿರುದ್ಧ ಎಫ್ಐಆರ್

- Advertisement -
- Advertisement -

ರಾಜಸ್ಥಾನದಲ್ಲಿ ಫೆಬ್ರವರಿ 2ರಂದು ಯೋಗೋದ್ಯಮಿ ಬಾಬಾ ರಾಮ್‌ದೇವ್, ಮುಸ್ಲಿಮರ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಹೇಳಲಾಗಿದೆ. ಭಾನುವಾರ ಅವರ ವಿರುದ್ಧ ದ್ವೇಷ ಮತ್ತು ಅತಿರೇಕದ ಧಾರ್ಮಿಕ ಭಾವನೆಗಳನ್ನು ಉತ್ತೇಜಿಸಿದ ಆರೋಪದ ಮೇಲೆ ಪ್ರಕರಣ ದಾಖಲಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಪಥಾಯಿ ಖಾನ್ ಎನ್ನುವವರು ನೀಡಿದ ದೂರಿನ ಮೇರೆಗೆ ಬಾರ್ಮರ್‌ನಲ್ಲಿ ರಾಮ್‌ದೇವ್‌ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೋಲೀಸರು ಹೇಳಿದ್ದಾರೆ.

ಫೆಬ್ರವರಿ 2 ರಂದು ರಾಮ್‌ದೇವ್ ಬಾರ್ಮರ್‌ನಲ್ಲಿ ದಾರ್ಶನಿಕರ ಸಭೆಗೆ ಹಾಜರಾಗಿದ್ದರು. ಈ ವೇಳೆ ಅವರು, ”ಮುಸ್ಲಿಮರು ಪ್ರಾರ್ಥನೆ ಸಲ್ಲಿಸುವುದರಿಂದ ಎಲ್ಲಾ ಪಾಪಗಳಿಂದ ವಿಮೋಚನೆಯಾಗುತ್ತದೆ ಎಂದು ನಂಬುತ್ತಾರೆ ಮತ್ತು ಇದು ಭಯೋತ್ಪಾದನೆ ಹಾಗೂ ಅಪರಾಧ ಕೃತ್ಯ ನಡೆಸಲು ಕಾರಣವಾಗುತ್ತದೆ. ಕೇವಲ ಪ್ರಾರ್ಥನೆ ಮಾಡಿ, ನೀವು ಏನು ಮಾಡಬೇಕೆಂದು ಬಯಸುತ್ತೀರೋ ಅದನ್ನು ಮಾಡಿ ಎಂದು ಅವರಿಗೆ ಕಲಿಸಲಾಗಿದೆ. ಹಾಗಾಗಿ ಅವರು ಭಯೋತ್ಪಾದಕರಾಗುತ್ತಿದ್ದಾರೆ, ಮತ್ತು ಅವರಲ್ಲಿ ಬಹಳಷ್ಟು ಜನರು ಅಪರಾಧಿಗಳಾಗುತ್ತಿದ್ದಾರೆ” ಎಂದು ಮುಸ್ಲಿಮರ ಬಗ್ಗೆ ರಾಮ್‌ದೇವ್ ದ್ವೇಷದ ಮಾತುಗಳನ್ನಾಡಿದ್ದಾರೆ.

”ನಿಮ್ಮ ಧರ್ಮ ಏನು ಹೇಳುತ್ತದೆ ಎಂದು ಮುಸಲ್ಮಾನರನ್ನು ಕೇಳಿ, ಅವರು ಐದು ಬಾರಿ [ದಿನಕ್ಕೆ] ನಮಾಜ್ ಮಾಡಿ, ನಂತರ ಮನಸ್ಸಿಗೆ ಬಂದದ್ದನ್ನು ಮಾಡಿ ಎಂದು ಹೇಳುತ್ತಾರೆ. ನೀವು ಹಿಂದೂ ಹುಡುಗಿಯರನ್ನು ಅಪಹರಿಸಲಿ, ನೀವು ಮಾಡಬೇಕಾದ ಪಾಪವನ್ನೆಲ್ಲಾ ಮಾಡಿ” ಎಂದು ರಾಮ್‌ದೇವ್ ಮುಸ್ಲಿಂ ಧರ್ಮದ ವಿರುದ್ಧ ಮಾತನಾಡಿದ್ದಾರೆ.

ಇದೇ ವೇಳೆ ಕ್ರಿಶ್ಚಿಯನ್ನರ ಬಗ್ಗೆಯೂ ಮಾತನಾಡಿದ ರಾಮದೇವ್, ”ಚರ್ಚ್‌ಗೆ ಹಾಜರಾಗುವ ಮೂಲಕ ಮತ್ತು ಮೇಣದಬತ್ತಿಗಳನ್ನು ಬೆಳಗಿಸುವ ಮೂಲಕ ಅವರು ತಮ್ಮ ಎಲ್ಲಾ ಪಾಪಗಳಿಗೆ ಕ್ಷಮೆಯನ್ನು ಪಡೆಯುತ್ತಾರೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮುಸ್ಲಿಮರು, ಕ್ರಿಶ್ಚಿಯನ್ನರಿಗೆ ಮತಾಂತರದ ಗೀಳಿದೆ: ಯೋಗೋದ್ಯಮಿ ರಾಮ್‌ದೇವ್ ಹೇಳಿಕೆ

ಇಸ್ಲಾಂ ಧರ್ಮದ ವಿರುದ್ಧ ದ್ವೇಷ ಮತ್ತು ದ್ವೇಷದ ಭಾವನೆ ಮೂಡಿಸಲು ಉದ್ದೇಶಪೂರ್ವಕವಾಗಿ ರಾಮ್‌ದೇವ್ ಈ ಹೇಳಿಕೆ ನೀಡಿದ್ದಾರೆ ಎಂದು ಖಾನ್ ತಮ್ಮ ದೂರಿನಲ್ಲಿ ಹೇಳಿದ್ದಾರೆ. ಈ ಹೇಳಿಕೆಗಳು ಮುಸ್ಲಿಮರ ಭಾವನೆಗಳಿಗೆ ಧಕ್ಕೆ ತಂದಿವೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಭಾನುವಾರ, ರಾಜಸ್ಥಾನ ಪೊಲೀಸರು ರಾಮ್‌ದೇವ್ ವಿರುದ್ಧ ಸೆಕ್ಷನ್ 153 (ಧರ್ಮದ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು), 295 ಎ (ಉದ್ದೇಶಪೂರ್ವಕ ಮತ್ತು ದುರುದ್ದೇಶಪೂರಿತ ಕೃತ್ಯಗಳು, ಯಾವುದೇ ವರ್ಗದ ಧರ್ಮ ಅಥವಾ ಧಾರ್ಮಿಕ ನಂಬಿಕೆಗಳನ್ನು ಅವಮಾನಿಸುವ ಮೂಲಕ ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಉದ್ದೇಶದಿಂದ ಪ್ರಕರಣ ದಾಖಲಿಸಲಾಗಿದೆ. ) ಮತ್ತು ಭಾರತೀಯ ದಂಡ ಸಂಹಿತೆಯ 298 (ಯಾವುದೇ ವ್ಯಕ್ತಿಯ ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸುವ ಉದ್ದೇಶಪೂರ್ವಕ ಉದ್ದೇಶದಿಂದ ಹೇಳುವುದು, ಪದಗಳು, ಇತ್ಯಾದಿ) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈ ಹಿಂದೆಯೂ ರಾಮ್‌ದೇವ್ ಇಂತಹ ವಿವಾದಗಳನ್ನು ಹುಟ್ಟುಹಾಕಿದ್ದರು. ಮಹಾರಾಷ್ಟ್ರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ (ನವೆಂಬರ್‌) ರಾಮ್‌ದೇವ್ ಅವರು ಸೆಕ್ಸಿಸ್ಟ್ ಟೀಕೆಗಳನ್ನು ಮಾಡಿದ್ದರು.

”ಮಹಿಳೆಯರು ಯಾವುದೇ ಬಟ್ಟೆಯಲ್ಲಿಯೂ ಉತ್ತಮವಾಗಿ ಕಾಣುತ್ತಾರೆ ಮತ್ತು ಅವರು ಏನನ್ನೂ ಧರಿಸದಿದ್ದರೂ ಸಹ ಉತ್ತಮವಾಗಿ ಕಾಣುತ್ತಾರೆ” ಎಂದು ಬಹಳ ಕೀಳು ಮನಸ್ಥಿತಿಯಲ್ಲಿ ರಾಮ್‌ದೇವ್‌ ಮಾತನಾಡಿದ್ದರು.

ಅಲೋಪತಿ ಮತ್ತು ವೈದ್ಯಕೀಯ ಪದ್ಧತಿಯನ್ನು ಅಭ್ಯಾಸ ಮಾಡುವ ವೈದ್ಯರ ಬಗ್ಗೆ ಅವಹೇಳನಕಾರಿ ಹೇಳಿಕೆಗಳಿಗಾಗಿ ಯೋಗ ಗುರು ಸುಪ್ರೀಂ ಕೋರ್ಟ್‌ನಲ್ಲಿ ಪ್ರಕರಣವನ್ನೂ ಎದುರಿಸುತ್ತಿದ್ದಾರೆ.

ಅಲೋಪತಿ ಒಂದು ”ಅವಿವೇಕಿ ವಿಜ್ಞಾನ ಮತ್ತು ಔಷಧಿಗಳು ನಿಷ್ಪ್ರಯೋಜಕ, ಅಲೋಪತಿ ಔಷಧಿಗಳನ್ನು ತೆಗೆದುಕೊಂಡ ನಂತರ ಲಕ್ಷಾಂತರ ರೋಗಿಗಳು ಸಾವನ್ನಪ್ಪಿದ್ದಾರೆ” ಎಂದು ರಾಮ್‌ದೇವ್‌ ಕೊರೊನಾ ನಿರ್ವಹಣೆಗೆ ಸೆಣಸುತ್ತಿರುವ ವೈದ್ಯ ಸಮೂಹವನ್ನು ಮೇ 2021 ರಲ್ಲಿ ಅವಮಾನಿಸಿದ್ದರು.

ಮತ್ತೊಂದು ವೀಡಿಯೊದಲ್ಲಿ, ”ಎರಡು ಡೋಸ್ ಕರೋನಾವೈರಸ್ ಲಸಿಕೆ ಪಡೆದ ನಂತರವೂ 1,000 ವೈದ್ಯರು ಸಾವನ್ನಪ್ಪಿದ್ದಾರೆ” ಎಂದು ಸುಳ್ಳು ಹೇಳಿದ್ದರು. ನಂತರ, ಮಾಜಿ ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಅವರು ತಮ್ಮ ಹೇಳಿಕೆಗಳನ್ನು ಹಿಂತೆಗೆದುಕೊಳ್ಳುವಂತೆ ಕೇಳಿಕೊಂಡರು ಆಗ ರಾಮ್‌ದೇವ್‌ ಕ್ಷಮೆಯಾಚಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...