Homeಮುಖಪುಟದ್ವೇಷ ಭಾಷಣ ಹಿನ್ನೆಲೆ ರಾಮದೇವ್ ವಿರುದ್ಧ ಎಫ್ಐಆರ್

ದ್ವೇಷ ಭಾಷಣ ಹಿನ್ನೆಲೆ ರಾಮದೇವ್ ವಿರುದ್ಧ ಎಫ್ಐಆರ್

- Advertisement -
- Advertisement -

ರಾಜಸ್ಥಾನದಲ್ಲಿ ಫೆಬ್ರವರಿ 2ರಂದು ಯೋಗೋದ್ಯಮಿ ಬಾಬಾ ರಾಮ್‌ದೇವ್, ಮುಸ್ಲಿಮರ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಹೇಳಲಾಗಿದೆ. ಭಾನುವಾರ ಅವರ ವಿರುದ್ಧ ದ್ವೇಷ ಮತ್ತು ಅತಿರೇಕದ ಧಾರ್ಮಿಕ ಭಾವನೆಗಳನ್ನು ಉತ್ತೇಜಿಸಿದ ಆರೋಪದ ಮೇಲೆ ಪ್ರಕರಣ ದಾಖಲಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಪಥಾಯಿ ಖಾನ್ ಎನ್ನುವವರು ನೀಡಿದ ದೂರಿನ ಮೇರೆಗೆ ಬಾರ್ಮರ್‌ನಲ್ಲಿ ರಾಮ್‌ದೇವ್‌ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೋಲೀಸರು ಹೇಳಿದ್ದಾರೆ.

ಫೆಬ್ರವರಿ 2 ರಂದು ರಾಮ್‌ದೇವ್ ಬಾರ್ಮರ್‌ನಲ್ಲಿ ದಾರ್ಶನಿಕರ ಸಭೆಗೆ ಹಾಜರಾಗಿದ್ದರು. ಈ ವೇಳೆ ಅವರು, ”ಮುಸ್ಲಿಮರು ಪ್ರಾರ್ಥನೆ ಸಲ್ಲಿಸುವುದರಿಂದ ಎಲ್ಲಾ ಪಾಪಗಳಿಂದ ವಿಮೋಚನೆಯಾಗುತ್ತದೆ ಎಂದು ನಂಬುತ್ತಾರೆ ಮತ್ತು ಇದು ಭಯೋತ್ಪಾದನೆ ಹಾಗೂ ಅಪರಾಧ ಕೃತ್ಯ ನಡೆಸಲು ಕಾರಣವಾಗುತ್ತದೆ. ಕೇವಲ ಪ್ರಾರ್ಥನೆ ಮಾಡಿ, ನೀವು ಏನು ಮಾಡಬೇಕೆಂದು ಬಯಸುತ್ತೀರೋ ಅದನ್ನು ಮಾಡಿ ಎಂದು ಅವರಿಗೆ ಕಲಿಸಲಾಗಿದೆ. ಹಾಗಾಗಿ ಅವರು ಭಯೋತ್ಪಾದಕರಾಗುತ್ತಿದ್ದಾರೆ, ಮತ್ತು ಅವರಲ್ಲಿ ಬಹಳಷ್ಟು ಜನರು ಅಪರಾಧಿಗಳಾಗುತ್ತಿದ್ದಾರೆ” ಎಂದು ಮುಸ್ಲಿಮರ ಬಗ್ಗೆ ರಾಮ್‌ದೇವ್ ದ್ವೇಷದ ಮಾತುಗಳನ್ನಾಡಿದ್ದಾರೆ.

”ನಿಮ್ಮ ಧರ್ಮ ಏನು ಹೇಳುತ್ತದೆ ಎಂದು ಮುಸಲ್ಮಾನರನ್ನು ಕೇಳಿ, ಅವರು ಐದು ಬಾರಿ [ದಿನಕ್ಕೆ] ನಮಾಜ್ ಮಾಡಿ, ನಂತರ ಮನಸ್ಸಿಗೆ ಬಂದದ್ದನ್ನು ಮಾಡಿ ಎಂದು ಹೇಳುತ್ತಾರೆ. ನೀವು ಹಿಂದೂ ಹುಡುಗಿಯರನ್ನು ಅಪಹರಿಸಲಿ, ನೀವು ಮಾಡಬೇಕಾದ ಪಾಪವನ್ನೆಲ್ಲಾ ಮಾಡಿ” ಎಂದು ರಾಮ್‌ದೇವ್ ಮುಸ್ಲಿಂ ಧರ್ಮದ ವಿರುದ್ಧ ಮಾತನಾಡಿದ್ದಾರೆ.

ಇದೇ ವೇಳೆ ಕ್ರಿಶ್ಚಿಯನ್ನರ ಬಗ್ಗೆಯೂ ಮಾತನಾಡಿದ ರಾಮದೇವ್, ”ಚರ್ಚ್‌ಗೆ ಹಾಜರಾಗುವ ಮೂಲಕ ಮತ್ತು ಮೇಣದಬತ್ತಿಗಳನ್ನು ಬೆಳಗಿಸುವ ಮೂಲಕ ಅವರು ತಮ್ಮ ಎಲ್ಲಾ ಪಾಪಗಳಿಗೆ ಕ್ಷಮೆಯನ್ನು ಪಡೆಯುತ್ತಾರೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮುಸ್ಲಿಮರು, ಕ್ರಿಶ್ಚಿಯನ್ನರಿಗೆ ಮತಾಂತರದ ಗೀಳಿದೆ: ಯೋಗೋದ್ಯಮಿ ರಾಮ್‌ದೇವ್ ಹೇಳಿಕೆ

ಇಸ್ಲಾಂ ಧರ್ಮದ ವಿರುದ್ಧ ದ್ವೇಷ ಮತ್ತು ದ್ವೇಷದ ಭಾವನೆ ಮೂಡಿಸಲು ಉದ್ದೇಶಪೂರ್ವಕವಾಗಿ ರಾಮ್‌ದೇವ್ ಈ ಹೇಳಿಕೆ ನೀಡಿದ್ದಾರೆ ಎಂದು ಖಾನ್ ತಮ್ಮ ದೂರಿನಲ್ಲಿ ಹೇಳಿದ್ದಾರೆ. ಈ ಹೇಳಿಕೆಗಳು ಮುಸ್ಲಿಮರ ಭಾವನೆಗಳಿಗೆ ಧಕ್ಕೆ ತಂದಿವೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಭಾನುವಾರ, ರಾಜಸ್ಥಾನ ಪೊಲೀಸರು ರಾಮ್‌ದೇವ್ ವಿರುದ್ಧ ಸೆಕ್ಷನ್ 153 (ಧರ್ಮದ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು), 295 ಎ (ಉದ್ದೇಶಪೂರ್ವಕ ಮತ್ತು ದುರುದ್ದೇಶಪೂರಿತ ಕೃತ್ಯಗಳು, ಯಾವುದೇ ವರ್ಗದ ಧರ್ಮ ಅಥವಾ ಧಾರ್ಮಿಕ ನಂಬಿಕೆಗಳನ್ನು ಅವಮಾನಿಸುವ ಮೂಲಕ ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಉದ್ದೇಶದಿಂದ ಪ್ರಕರಣ ದಾಖಲಿಸಲಾಗಿದೆ. ) ಮತ್ತು ಭಾರತೀಯ ದಂಡ ಸಂಹಿತೆಯ 298 (ಯಾವುದೇ ವ್ಯಕ್ತಿಯ ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸುವ ಉದ್ದೇಶಪೂರ್ವಕ ಉದ್ದೇಶದಿಂದ ಹೇಳುವುದು, ಪದಗಳು, ಇತ್ಯಾದಿ) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈ ಹಿಂದೆಯೂ ರಾಮ್‌ದೇವ್ ಇಂತಹ ವಿವಾದಗಳನ್ನು ಹುಟ್ಟುಹಾಕಿದ್ದರು. ಮಹಾರಾಷ್ಟ್ರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ (ನವೆಂಬರ್‌) ರಾಮ್‌ದೇವ್ ಅವರು ಸೆಕ್ಸಿಸ್ಟ್ ಟೀಕೆಗಳನ್ನು ಮಾಡಿದ್ದರು.

”ಮಹಿಳೆಯರು ಯಾವುದೇ ಬಟ್ಟೆಯಲ್ಲಿಯೂ ಉತ್ತಮವಾಗಿ ಕಾಣುತ್ತಾರೆ ಮತ್ತು ಅವರು ಏನನ್ನೂ ಧರಿಸದಿದ್ದರೂ ಸಹ ಉತ್ತಮವಾಗಿ ಕಾಣುತ್ತಾರೆ” ಎಂದು ಬಹಳ ಕೀಳು ಮನಸ್ಥಿತಿಯಲ್ಲಿ ರಾಮ್‌ದೇವ್‌ ಮಾತನಾಡಿದ್ದರು.

ಅಲೋಪತಿ ಮತ್ತು ವೈದ್ಯಕೀಯ ಪದ್ಧತಿಯನ್ನು ಅಭ್ಯಾಸ ಮಾಡುವ ವೈದ್ಯರ ಬಗ್ಗೆ ಅವಹೇಳನಕಾರಿ ಹೇಳಿಕೆಗಳಿಗಾಗಿ ಯೋಗ ಗುರು ಸುಪ್ರೀಂ ಕೋರ್ಟ್‌ನಲ್ಲಿ ಪ್ರಕರಣವನ್ನೂ ಎದುರಿಸುತ್ತಿದ್ದಾರೆ.

ಅಲೋಪತಿ ಒಂದು ”ಅವಿವೇಕಿ ವಿಜ್ಞಾನ ಮತ್ತು ಔಷಧಿಗಳು ನಿಷ್ಪ್ರಯೋಜಕ, ಅಲೋಪತಿ ಔಷಧಿಗಳನ್ನು ತೆಗೆದುಕೊಂಡ ನಂತರ ಲಕ್ಷಾಂತರ ರೋಗಿಗಳು ಸಾವನ್ನಪ್ಪಿದ್ದಾರೆ” ಎಂದು ರಾಮ್‌ದೇವ್‌ ಕೊರೊನಾ ನಿರ್ವಹಣೆಗೆ ಸೆಣಸುತ್ತಿರುವ ವೈದ್ಯ ಸಮೂಹವನ್ನು ಮೇ 2021 ರಲ್ಲಿ ಅವಮಾನಿಸಿದ್ದರು.

ಮತ್ತೊಂದು ವೀಡಿಯೊದಲ್ಲಿ, ”ಎರಡು ಡೋಸ್ ಕರೋನಾವೈರಸ್ ಲಸಿಕೆ ಪಡೆದ ನಂತರವೂ 1,000 ವೈದ್ಯರು ಸಾವನ್ನಪ್ಪಿದ್ದಾರೆ” ಎಂದು ಸುಳ್ಳು ಹೇಳಿದ್ದರು. ನಂತರ, ಮಾಜಿ ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಅವರು ತಮ್ಮ ಹೇಳಿಕೆಗಳನ್ನು ಹಿಂತೆಗೆದುಕೊಳ್ಳುವಂತೆ ಕೇಳಿಕೊಂಡರು ಆಗ ರಾಮ್‌ದೇವ್‌ ಕ್ಷಮೆಯಾಚಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...